Homeಮುಖಪುಟಉತ್ತರ ಪ್ರದೇಶ | ‘ಶಾಲೆಗೆ ಕೀರ್ತಿ ತರಲು’, ‘ನಿರ್ದೇಶಕರ ಸಮಸ್ಯೆ ಪರಿಹಾರಕ್ಕೆ' ವಾಮಾಚಾರ ಮಾಡಿ 9...

ಉತ್ತರ ಪ್ರದೇಶ | ‘ಶಾಲೆಗೆ ಕೀರ್ತಿ ತರಲು’, ‘ನಿರ್ದೇಶಕರ ಸಮಸ್ಯೆ ಪರಿಹಾರಕ್ಕೆ’ ವಾಮಾಚಾರ ಮಾಡಿ 9 ವರ್ಷದ ಬಾಲಕನ ಹತ್ಯೆ

- Advertisement -
- Advertisement -

“ಶಾಲೆಗೆ ಕೀರ್ತಿ ತರಲು” ಮತ್ತು “ಶಾಲಾ ನಿರ್ದೇಶಕರ ಕುಟುಂಬವು ಎದುರಿಸುತ್ತಿರುವ ಸಮಸ್ಯೆಗಳ ನಿವಾರಣೆಗಾಗಿ” ಖಾಸಗಿ ಶಾಲೆಯಲ್ಲಿ ಓದುತ್ತಿದ್ದ ಮತ್ತು ಅದರ ಹಾಸ್ಟೆಲ್‌ನಲ್ಲಿ ವಾಸಿಸುತ್ತಿದ್ದ 9 ವರ್ಷದ ಮಗುವನ್ನು ಮಾಟಮಂತ್ರದ ಅಚರಣೆಯ ಭಾಗವಾಗಿ ಕೊಂದಿರುವ ಘಟನೆ ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ನಡೆದಿದೆ ಎಂದು ವರದಿಯಾಗಿದೆ.ಉತ್ತರ ಪ್ರದೇಶ

ಸೆಪ್ಟೆಂಬರ್ 23 ರಂದು ಆಗ್ರಾದಿಂದ 35 ಕಿಮೀ ದೂರದಲ್ಲಿರುವ ಸದಾಬಾದ್ ಪ್ರದೇಶದ ಶಾಲಾ ನಿರ್ದೇಶಕರ ಕಾರಿನಲ್ಲಿ ಹತ್ರಾಸ್ ಪೊಲೀಸರು ಬಾಲಕನ ಶವವನ್ನು ಪತ್ತೆ ಮಾಡಿದಾಗ ಬಾಲಕನ ಸಾವು ಬೆಳಕಿಗೆ ಬಂದಿದೆ ಎಂದು ವರದಿಯು ಹೇಳಿದೆ. ಬಾಲಕನ ಸಾವಿಗೆ ಸಂಬಂಧಿಸಿದಂತೆ ಗುರುವಾರ ರಸ್‌ಗವಾನ್‌ನ ಶಾಲೆಯಲ್ಲಿ ನಿರ್ದೇಶಕ, ನಿರ್ದೇಶಕನ ತಂದೆ ಮತ್ತು ಮೂವರು ಶಿಕ್ಷಕರು ಸೇರಿದಂತೆ ಐವರನ್ನು ಬಂಧಿಸಲಾಗಿದೆ ಎಂದು ಹತ್ರಾಸ್ ಪೊಲೀಸರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ನಾವು ಶಾಲಾ ನಿರ್ದೇಶಕ ದಿನೇಶ್ ಬಾಘೆಲ್, ಅವರ ತಂದೆ ಜಸೋಧನ್ ಸಿಂಗ್ ಮತ್ತು ಮೂವರು ಶಾಲಾ ಶಿಕ್ಷಕರಾದ ರಾಮಪ್ರಕಾಶ್ ಸೋಲಂಕಿ, ವೀರಪಾಲ್ ಸಿಂಗ್ ಮತ್ತು ಲಕ್ಷ್ಮಣ್ ಸಿಂಗ್ ಅವರನ್ನು ಬಂಧಿಸಿದ್ದೇವೆ” ಎಂದು ಹತ್ರಾಸ್ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್ಪಿ) ಅಶೋಕ್ ಕುಮಾರ್ ತಿಳಿಸಿದ್ದಾರೆ. ಶಾಲೆಯ ಆವರಣದಲ್ಲಿರುವ ಕೊಠಡಿಯೊಂದರಿಂದ ಹಗ್ಗ, ಧಾರ್ಮಿಕ ಚಿತ್ರಗಳು ಮತ್ತು ಕೀ ಕೂಡ ಸಿಕ್ಕಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂಓದಿ:  ಪುಣೆ ಪೋರ್ಷೆ ಕಾರು ಅಪಘಾತ ಪ್ರಕರಣ: ಕುಡಿದ ಅಮಲಿನಲ್ಲೆ ಆಸ್ಪತ್ರೆಗೆ ಧಾವಿಸಿದ್ದ ಆರೋಪಿ ಕುಟುಂಬದ ಸದಸ್ಯರು

ಸೆಪ್ಟೆಂಬರ್ 22 ರಂದು ಬೆಳಿಗ್ಗೆ 12 ಗಂಟೆಗೆ ಶಾಲೆಯ ವಿದ್ಯಾರ್ಥಿಗಳು ಮಲಗಿದ್ದಾಗ ಶಾಲೆಯ ಶಿಕ್ಷಕಿ ಸೋಲಂಕಿ ಮಗುವನ್ನು ಹಾಸಿಗೆಯಿಂದ ಎತ್ತಿಕೊಂಡು ಹೊರಗೆ ಕರೆತಂದರು ಎಂದು ಅಶೋಕ್ ಕುಮಾರ್ ಹೇಳಿದ್ದಾರೆ. “ಅವರು ಮಗುವನ್ನು ಗೊತ್ತುಪಡಿಸಿದ ಕೋಣೆಯಲ್ಲಿ ಬಲಿಕೊಡಲು ಯೋಜಿಸಿದ್ದರು. ಆದರೆ ಈ ನಡುವೆ ಬಾಲಕ ಎಚ್ಚರಗೊಂಡು ಅಳಲು ಪ್ರಾರಂಭಿಸಿದ್ದರು. ಹಾಗಾಗಿ ಶಿಕ್ಷಕ ಸೋಲಂಕಿ ಮಗುವಿನ ಬಾಯಿಯನ್ನು ಮುಚ್ಚಿ ಹಾಸ್ಟೆಲ್‌ನ ನೆಲಮಹಡಿಗೆ ಕರೆತಂದು ಕತ್ತು ಹಿಸುಕಿದ್ದಾನೆ” ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ಅವರನ್ನು ಮೇಲ್ವಿಚಾರಣೆ ಮಾಡಲು ವೀರಪಾಲ್ ಮತ್ತು ಲಕ್ಷ್ಮಣ್ ಸಿಂಗ್ ನಿಂತಿದ್ದರು ಎಂದು ಅಶೋಕ್ ಕುಮಾರ್ ಹೇಳಿದ್ದಾರೆ. ಶಾಲಾ ನಿರ್ದೇಶಕರ ತಂದೆ ಜಸೋಧನ್ ಸಿಂಗ್ ಈಗಾಗಲೇ ತನ್ನ ಮಗ ದಿನೇಶ್ ಬಘೇಲ್‌ಗೆ ವಿಧಿ ವಿಧಾನದ ಬಗ್ಗೆ ತಿಳಿಸಿದ್ದು, ಅವರು ಶವವನ್ನು ಬಿಸಾಕಲು ಸಿದ್ಧರಾಗಿದ್ದರು. ಈ ವೇಳೆ ಬಾಘೆಲ್ ಸಿಕ್ಕಿಬಿದ್ದಿದ್ದಾನೆ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ಬಾಲಕನ ತಂದೆ ಸೆಪ್ಟೆಂಬರ್ 23 ರಂದು ಸಹ್ಪೌ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದು, ತನ್ನ ಮಗನ ಸಾವಿಗೆ ಶಾಲಾ ನಿರ್ದೇಶಕರನ್ನು ದೂಷಿಸಿದ್ದಾರೆ. “ಸೆಪ್ಟೆಂಬರ್ 23 ರಂದು ಬೆಳಿಗ್ಗೆ ನಮಗೆ ಕರೆ ಮಾಡಿದ ಬಾಘೆಲ್ ನನ್ನ ಮಗನಿಗೆ ಹುಷಾರಿಲ್ಲ ಮತ್ತು ತಕ್ಷಣದ ವೈದ್ಯಕೀಯ ಸಹಾಯಕ್ಕಾಗಿ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದೇವೆ ಎಂದು ಹೇಳಿದರು” ಎಂದು ಅವರು ಹೇಳಿದ್ದಾರೆ.

ನಾವು ಹಾಸ್ಟೆಲ್‌ಗೆ ಧಾವಿಸಿದೆವು ಆದರೆ ಅಲ್ಲಿ ಬಾಘೆಲ್ ಮತ್ತು ನಮ್ಮ ಮಗನನ್ನು ಕಂಡುಕೊಂಡೆವು ಎಂದು ಹೇಳಿದ್ದಾರೆ ನೋಡಿದ್ದೇವೆ. “ಹಾಸ್ಟೆಲ್ ತಲುಪಿ ನಾವು ಬಾಘೇಲ್ ಅವರನ್ನು ಸಂಪರ್ಕಿಸಿ ಮಗನ ಬಗ್ಗೆ ಕೇಳಿದಾಗ, ಅವರು ನನ್ನ ಮಗನ ಸ್ಥಿತಿ ಹದಗೆಟ್ಟಿದ್ದರಿಂದ ಆಗ್ರಾಕ್ಕೆ ಕರೆದುಕೊಂಡು ಹೋಗುತ್ತಿರುವುದಾಗಿ ತಿಳಿಸಿದ್ದರು. ನಮಗೆ ಅನುಮಾನ ಬಂದು ಆ ಪ್ರದೇಶದ ಪೊಲೀಸರಿಗೆ ಮಾಹಿತಿ ನೀಡಿದೆವು. ಬಾಘೇಲ್ ಅವರನ್ನು ದಾರಿಯಲ್ಲೆ ಕಾಯಲು ಹೇಳಿ, ನಂತರ ನಾವೂ ಅವರನ್ನು ಹಿಂಬಾಲಿಸಿದೆವು. ಈ ವೇಳೆ ಬಾಘೆಲ್‌ನನ್ನು ಪತ್ತೆಹಚ್ಚಿದಾಗ ನನ್ನ ಮಗ ಅವರ ಕಾರಿನಲ್ಲಿ ಶವವಾಗಿ ಬಿದ್ದಿರುವುದು ಕಂಡುಬಂದಿದೆ” ಎಂದು ತಂದೆ ಹೇಳಿದ್ದಾರೆ.

ಇದನ್ನೂಓದಿ: ತೆಲಂಗಾಣ: ಶವ ಸಂಸ್ಕಾರ ಮಾಡದಂತೆ ದಲಿತ ಕುಟುಂಬವನ್ನು ತಡೆದ ರಿಯಲ್ ಎಸ್ಟೇಟ್‌ ಏಜೆಂಟ್‌ಗಳು  

ಪೊಲೀಸರು ಅದೇ ದಿನ ದಿನೇಶ್ ಬಘೇಲ್‌ನನ್ನು ಬಂಧಿಸಿದ್ದರೂ, ಬಾಲಕನ ಕೊಲೆಯ ಹಿಂದಿನ ಉದ್ದೇಶವನ್ನು ಕಂಡುಹಿಡಿಯಲು ಸಾಧ್ಯವಾಗಿರಲಿಲ್ಲ. “ನಾವು ಬಾಘೇಲ್‌ನನ್ನು ಬಂಧಿಸಿದ ನಂತರ ನಮ್ಮ ತನಿಖೆಯನ್ನು ಪ್ರಾರಂಭಿಸಿದೆವು. ರಸ್ಗವಾ ಗ್ರಾಮದಲ್ಲಿ ಅವನ ಮತ್ತು ಅವನ ಕುಟುಂಬಕ್ಕೆ ಹತ್ತಿರವಿರುವ ಹಲವಾರು ಜನರೊಂದಿಗೆ ಮಾತನಾಡಿದ್ದೇವೆ. ಅವರ ತಂದೆ ಜಸೋಧನ್ ಸಿಂಗ್ ವಾಮಾಚಾರದಲ್ಲಿ ನಂಬಿಕೆ ಹೊಂದಿದ್ದಾಗಿ, ಎರಡು ತಿಂಗಳ ಹಿಂದೆ ಅಪ್ರಾಪ್ತ ಬಾಲಕನನ್ನು ಬಲಿಕೊಡುವಂತೆ ಮಗನಿಗೆ ಸಲಹೆ ನೀಡಿದ್ದರು ಎಂದು ತಿಳಿದು ಬಂದಿತ್ತು” ಎಂದು ಪೊಲೀಸರು ಹೇಳಿದ್ದಾರೆ.

“ವಾಮಾಚಾರ ಯೋಜನೆಯನ್ನು ಕಾರ್ಯಗತಗೊಳಿಸಲು ಜಸೋಧನ್‌ಗೆ ಸಾಧ್ಯವಾಗಿರಲಿಲ್ಲ. ನಾವು ಅವರ ತಂದೆಯನ್ನು ವಿಚಾರಣೆಗೆ ಒಳಪಡಿಸಿದಾ, ಘೋರ ಅಪರಾಧದ ಹಿಂದಿನ ಸತ್ಯವನ್ನು ಬಹಿರಂಗಪಡಿಸಿದರು” ಎಂದು ಅಶೋಕ್ ಕುಮಾರ್ ಹೇಳಿದ್ದಾರೆ.

ಇದರ ನಂತರ ಪೊಲೀಸರು ಮತ್ತೆ ಬಾಘೇಲ್‌ನನ್ನು ವಿಚಾರಣೆಗೆ ಒಳಪಡಿಸಿದ್ದು, ಅವರು ತಮ್ಮ ತಂದೆಯ ಸಲಹೆಯ ಮೇರೆಗೆ ರಾಮ್ ಪ್ರಕಾಶ್ ಸೋಲಂಕಿ ಅವರನ್ನು ಸೆಪ್ಟೆಂಬರ್ 22 ರ ರಾತ್ರಿ ತನ್ನ ಹಾಸ್ಟೆಲ್ ಕೋಣೆಯಿಂದ ಅಪ್ರಾಪ್ತರನ್ನು ಕರೆದುಕೊಂಡು ಬರುವಂತೆ ಹೇಳಿದ್ದಾರೆ.ಉತ್ತರ ಪ್ರದೇಶ

“ಬಾಘೇಲ್ ಆರಂಭದಲ್ಲಿ ಮಗುವಿಗೆ ಅನಾರೋಗ್ಯವಿದೆ ಎಂದು ನಮಗೆ ತಿಳಿಸಿದ್ದರು. ಆದ್ದರಿಂದ ಅವನು ಮೊದಲು ಅವನನ್ನು ಸದಾಬಾದ್‌ನ ಆಸ್ಪತ್ರೆಗೆ ಮತ್ತು ನಂತರ ಆಗ್ರಾಕ್ಕೆ ಕರೆದೊಯ್ದನು. ಅಲ್ಲಿ ವೈದ್ಯರು ಬಾಲಕ ಸತ್ತಿದ್ದಾರೆ ಎಂದು ಘೋಷಿಸಿದರು. ಆದ್ದರಿಂದ ಅವನು ಬಾಲಕನ ಶವವನ್ನು ಹತ್ರಾಸ್‌ನಲ್ಲಿರುವ ರಾಸ್‌ಗಾವಾನ್‌ಗೆ ಕರೆತರುತ್ತಿದ್ದೆನು ಎಂದು ಅವರು ಹೇಳಿದ್ದರು” ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು. ಆದರೆ, ಮರಣೋತ್ತರ ಪರೀಕ್ಷೆಯಲ್ಲಿ ಬಾಲಕನ್ನು ಕತ್ತು ಹಿಸುಕಿ ಕೊಲೆ ಮಾಡಿರುವುದು ಹಾಗೂ ಕತ್ತಿನ ಮೂಳೆಗಳು ಮುರಿದಿರುವುದು ದೃಢಪಟ್ಟಿದೆ.

ವಿಡಿಯೊ ನೋಡಿ: ಕಲಬುರಗಿ- ಗೌರಿಯದ್ದು ವೈಚಾರಿಕ ಕೊಲೆ: ಗೌರಿ ನೆನಪು ಕಾರ್ಯಕ್ರಮದಲ್ಲಿ ರಹಮತ್ ತರೀಕೆರೆ ಮಾತುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...