Homeಮುಖಪುಟಕೇರಳ ಮನಿ ಹೈಸ್ಟ್ | ಕಂಟೈನರ್ ಟ್ರಕ್‌ನಲ್ಲಿ ಪರಾರಿಯಾಗುತ್ತಿದ್ದ ಕಳ್ಳರ ಬಂಧನ; ಒಬ್ಬ ಸಾವು!

ಕೇರಳ ಮನಿ ಹೈಸ್ಟ್ | ಕಂಟೈನರ್ ಟ್ರಕ್‌ನಲ್ಲಿ ಪರಾರಿಯಾಗುತ್ತಿದ್ದ ಕಳ್ಳರ ಬಂಧನ; ಒಬ್ಬ ಸಾವು!

- Advertisement -
- Advertisement -

ಕೇರಳದ ತ್ರಿಶೂರ್ ಜಿಲ್ಲೆಯಲ್ಲಿ ಮೂರು ಬಾರಿ ಎಟಿಎಂ ಮುರಿದು ಕಂಟೈನರ್ ಟ್ರಕ್‌ನಲ್ಲಿ ಪರಾರಿಯಾಗಿದ್ದ ತಂಡವನ್ನು ಶುಕ್ರವಾರ ಬೆಳಗ್ಗೆ ತಮಿಳುನಾಡು ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡು ಮತ್ತು ಕೇರಳ ಪೊಲೀಸರಿಗೆ ತಲೆ ನೋವಾಗಿ ಪರಿಣಮಿಸಿದ್ದ ಆರು ಜನರಿದ್ದ ಕಳ್ಳರ ಗ್ಯಾಂಗ್ ಕೊನೆಗೂ ಸಿಕ್ಕಿಬಿದ್ದಿವೆ.ಮನಿ ಹೈಸ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ವೇಗವಾಗಿ ಬಂದ ಕಂಟೈನರ್ ಲಾರಿಯಲ್ಲಿ ಪರಾರಿಯಾಗುತ್ತಿದ್ದ ಕಳ್ಳರನ್ನು ಪೊಲೀಸರು ಬೆನ್ನಟ್ಟಿದ್ದು, ಕೊನೆಗೆ ಶೂಟೌಟ್‌ನಲ್ಲಿ ಅದು ಕೊನೆಗೊಂಡಿದೆ. ಈ ಶೂಟೌಟ್‌ನಲ್ಲಿ ಶಂಕಿತ ಕಳ್ಳನೊಬ್ಬ ಸಾವನ್ನಪ್ಪಿದ್ದು, ಇನ್ನೊಬ್ಬ ಗಾಯಗೊಂಡಿದ್ದಾನೆ. ಇದೇ ವೇಳೆ ದರೋಡೆಕೋರರ ಗುಂಡಿಗೆ ಇಬ್ಬರು ಪೊಲೀಸರು ಗಾಯಗೊಂಡಿದ್ದಾಗಿ ವರದಿಯಾಗಿದೆ.

ನಾಮಕ್ಕಲ್ ಜಿಲ್ಲೆಯ ಕುಮಾರಪಾಳ್ಯಂ ಬಳಿಯ ಸೇಲಂ-ಕೊಚ್ಚಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿನಿಮಾ ಶೈಲಿಯಲ್ಲಿ ಸುಮಾರು ಐದು ಕಿಲೋಮೀಟರ್ ದೂರ ಬೆನ್ನೆಟ್ಟಲಾಗಿತ್ತು ಎಂದು ವರದಿಯಾಗಿದೆ. ಈ ಸಂದರ್ಭದಲ್ಲಿ ಶಂಕಿತರು ನುಣುಚಿಕೊಳ್ಳಲು ಪ್ರಯತ್ನಿಸಿದ್ದು, ಗುಂಡಿನ ಚಕಮಕಿ ನಡೆದಿದೆ ಎಂದು ವರದಿ ಹೇಳಿದೆ.ಮನಿ ಹೈಸ್ಟ್

ಕಾರ್ಯಾಚರಣೆಯು ಶೂಟೌಟ್‌ನಲ್ಲಿ ಕೊನೆಗೊಂಡಿದ್ದು, ಪರಿಣಾಮವಾಗಿ ಒಬ್ಬ ಶಂಕಿತ ಕಳ್ಳ ಸಾವಿಗೀಡಾಗಿದ್ದಾರೆ. ಮತ್ತೊಬ್ಬ ಆರೋಪಿ ಮತ್ತು ಇಬ್ಬರು ಪೊಲೀಸರು ಕೂಡಾ ಈ ವೇಳೆ ಗಾಯಗೊಂಡಿದ್ದಾರೆ.

ಇದನ್ನೂಓದಿ: ತೆಲಂಗಾಣ: ಶವ ಸಂಸ್ಕಾರ ಮಾಡದಂತೆ ದಲಿತ ಕುಟುಂಬವನ್ನು ತಡೆದ ರಿಯಲ್ ಎಸ್ಟೇಟ್‌ ಏಜೆಂಟ್‌ಗಳು

“ಇಬ್ಬರು ಪೊಲೀಸರಿಗೆ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಪ್ರಕರಣದ ಬಗ್ಗೆ ವಿಚಾರಣೆಯ ನಂತರ ಮಾತನಾಡುತ್ತೇವೆ” ಎಂದು ಸೇಲಂ ವಲಯದ ಡಿಐಜಿ ಇಎಸ್ ಉಮಾ ಘಟನಾ ಸ್ಥಳಕ್ಕೆ ಭೇಟಿ ನೀಡಿದ ನಂತರ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ದರೋಡೆಕೋರರ ತಂಡವು ಮೂರು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಎಟಿಎಂಗಳಿಂದ ಸುಮಾರು 65 ಲಕ್ಷ ರೂ. ದೂಚಿದ್ದಾರೆ ಎಂದು ಪೊಲೀಸ್ ಮೂಲಗಳನ್ನು ಉಲ್ಲೇಖಿಸಿ TNIE ವರದಿ ಹೇಳಿದೆ. ಶುಕ್ರವಾರ ಮುಂಜಾನೆ 2 ರಿಂದ 4 ಗಂಟೆಯ ನಡುವೆ ತ್ರಿಶೂರ್ ನಗರ ವ್ಯಾಪ್ತಿಯ ಸಿಟಿ ಈಸ್ಟ್ ಮತ್ತು ವಿಯ್ಯೂರ್ ಮತ್ತು ತ್ರಿಶೂರ್ ಗ್ರಾಮಾಂತರದ ಇರಿಂಜಲಕುಡದಲ್ಲಿ ಕಳ್ಳತನ ನಡೆದಿದೆ.

ಸೆಕ್ಯುರಿಟಿ ಇಲ್ಲದ ಆಲರಾಂ ವ್ಯವಸ್ಥೆ ಹೊಂದಿರುವ ಎಟಿಎಂಗಳನ್ನು ಗುರಿಯಾಗಿಟ್ಟುಕೊಂಡು ಗ್ಯಾಂಗ್ ದರೋಡೆ ಮಾಡಿದೆ ಎಂದು ವರದಿ ಹೇಳಿದೆ. ಕಳ್ಳರ ಗ್ಯಾಂಗ್ ಸಿಸಿಟಿವಿ ಕ್ಯಾಮೆರಾಗಳಿಗೆ ಬಣ್ಣ ಎರಚಿದ್ದು, ನಂತರ ಎಟಿಎಂನ ನಗದು ಪಡೆಯಲು ಗ್ಯಾಸ್ ಕಟ್ಟರ್‌ಗಳನ್ನು ಬಳಸುತ್ತಿದ್ದರು ಎಂದು ತಿಳಿದು ಬಂದಿದೆ.

ಕಳ್ಳತನದ ನಂತರ, ಕಳ್ಳರ ಗ್ಯಾಂಗ್ ಆರಂಭದಲ್ಲಿ ಪೊಲೀಸರಿಂದ ತಪ್ಪಿಸಿಕೊಳ್ಳಲು ಮೊದಲಿಗೆ ಕಾರಿನಲ್ಲಿ ಪರಾರಿಯಾಗಿತ್ತು. ನಂತರ ಕಂಟೈನರ್ ಟ್ರಕ್‌ ಮೂಲಕ ಪರಾರಿಯಾಗಿದ್ದಾರೆ. ಈ ವಾಹನವು ನಕಲಿ ನಂಬರ್ ಪ್ಲೇಟ್ ಅನ್ನು ಹೊಂದಿದ್ದರಿಂದ ಅದನ್ನು ಪತ್ತೆಹಚ್ಚಲು ಕೇರಳ ಪೊಲೀಸರು ರಸ್ತೆಯಲ್ಲಿ ಕಂಟೈನರ್ ಟ್ರಕ್‌ಗಳನ್ನು ಮೇಲ್ವಿಚಾರಣೆ ಮಾಡಲು ತಮಿಳುನಾಡು ಪೊಲೀಸರಿಗೆ ಕೇಳಿಕೊಂಡಿದ್ದಾರೆ.

ಇದನ್ನೂಓದಿ: ಪುಣೆ ಪೋರ್ಷೆ ಕಾರು ಅಪಘಾತ ಪ್ರಕರಣ: ಕುಡಿದ ಅಮಲಿನಲ್ಲೆ ಆಸ್ಪತ್ರೆಗೆ ಧಾವಿಸಿದ್ದ ಆರೋಪಿ ಕುಟುಂಬದ ಸದಸ್ಯರು

ಈ ಗುಪ್ತಚರ ಮಾಹಿತಿ ಮೇರೆಗೆ ತಮಿಳುನಾಡು ಪೊಲೀಸರು ಸೇಲಂ-ಕೊಚ್ಚಿ ರಾಷ್ಟ್ರೀಯ ಹೆದ್ದಾರಿಯಲ್ಲಿ ತಪಾಸಣೆಯನ್ನು ತೀವ್ರಗೊಳಿಸಿದ್ದು, ಅಂತಿಮವಾಗಿ ನಾಮಕ್ಕಲ್‌ನಲ್ಲಿ ಶಂಕಿತರ ಬಂಧನ ನಡೆದಿದೆ. ಟ್ರಕ್ ಪಚ್ಚಪಾಳ್ಯಂ ಪ್ರದೇಶವನ್ನು ತಲುಪಿದಾಗ, ಪೊಲೀಸರು ಅದನ್ನು ತಡೆಯಲು ಪ್ರಯತ್ನಿಸಿದರು; ಈ ವೇಳೆ ಕಳ್ಳರ ಗ್ಯಾಂಗ್ ಪ್ರತಿದಾಳಿ ನಡೆಸಿದ್ದು, ಹಾಗಾಗಿ ಗುಂಡಿನ ದಾಳಿ ಮಾಡಲಾಗಿದೆ ಎಂದು ವರದಿ ಹೇಳಿದೆ.

ಇದರ ನಂತರ, ಗ್ಯಾಂಗ್‌ನ ಐದು ಸದಸ್ಯರನ್ನು ಬಂಧಿಸಲಾಗಿದ್ದು, ಮೃತ ಶಂಕಿತ ಕಳ್ಳನ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸೇಲಂ ಸರ್ಕಾರಿ ಆಸ್ಪತ್ರೆಗೆ ಕಳುಹಿಸಲಾಗಿದೆ. ಈ ಗ್ಯಾಂಗ್ ರಾಜಸ್ಥಾನ ಮತ್ತು ಹರಿಯಾಣ ಮೂಲದ್ದಾಗಿದೆ ಎಂದು ನಂಬಲಾಗಿದೆ. ಇವರು ಇತರ ರೀತಿಯ ಅಪರಾಧಗಳಿಗೆ ಸಂಬಂಧಿಸಿದಂತೆ ಬೇಕಾಗಿದ್ದರು ಎಂದು ಪೊಲೀಸ್ ಮೂಲಗಳು ಸೂಚಿಸಿವೆ.

2021 ರಲ್ಲಿ, ಕೇರಳ ಪೊಲೀಸರು ಇದೇ ರೀತಿಯ ಕಾರ್ಯಾಚರಣೆ ನಡೆಸಿ ಕಳ್ಳತನ ಪ್ರಕರಣವನ್ನು ಯಶಸ್ವಿಯಾಗಿ ಭೇದಿಸಿದ್ದರು. ಪ್ರಸ್ತತ ಬಂಧನಕ್ಕೊಳಗಾಗಿರುವ ಗ್ಯಾಂಗ್‌ನ ಚಟುವಟಿಕೆಗಳು ಮತ್ತು ಸಂಪರ್ಕಗಳ ಕುರಿತು ಹೆಚ್ಚಿನ ವಿವರಗಳ ಬಗ್ಗೆ ತನಿಖೆ ನಡೆಯುತ್ತಿದ್ದು, ತಮಿಳುನಾಡಿನ ಪಶ್ಚಿಮ ವಲಯದ ಪೊಲೀಸ್ ಅಧಿಕಾರಿಗಳು ಪ್ರಕರಣದ ಕುರಿತು ಇನ್ನೂ ಪ್ರತಿಕ್ರಿಯಿಸಿಲ್ಲ.

ವಿಡಿಯೊ ನೋಡಿ: ಅಟ್ರಾಸಿಟಿ ಕಾದಂಬರಿ ಚರ್ಚೆಯಲ್ಲಿ ವಿಕಾಸ್ ಮತ್ತು ಗುರುಪ್ರಸಾದ್ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...