Homeಮುಖಪುಟಕೇರಳ ಮನಿ ಹೈಸ್ಟ್ | ಕಂಟೈನರ್ ಟ್ರಕ್‌ನಲ್ಲಿ ಪರಾರಿಯಾಗುತ್ತಿದ್ದ ಕಳ್ಳರ ಬಂಧನ; ಒಬ್ಬ ಸಾವು!

ಕೇರಳ ಮನಿ ಹೈಸ್ಟ್ | ಕಂಟೈನರ್ ಟ್ರಕ್‌ನಲ್ಲಿ ಪರಾರಿಯಾಗುತ್ತಿದ್ದ ಕಳ್ಳರ ಬಂಧನ; ಒಬ್ಬ ಸಾವು!

- Advertisement -
- Advertisement -

ಕೇರಳದ ತ್ರಿಶೂರ್ ಜಿಲ್ಲೆಯಲ್ಲಿ ಮೂರು ಬಾರಿ ಎಟಿಎಂ ಮುರಿದು ಕಂಟೈನರ್ ಟ್ರಕ್‌ನಲ್ಲಿ ಪರಾರಿಯಾಗಿದ್ದ ತಂಡವನ್ನು ಶುಕ್ರವಾರ ಬೆಳಗ್ಗೆ ತಮಿಳುನಾಡು ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡು ಮತ್ತು ಕೇರಳ ಪೊಲೀಸರಿಗೆ ತಲೆ ನೋವಾಗಿ ಪರಿಣಮಿಸಿದ್ದ ಆರು ಜನರಿದ್ದ ಕಳ್ಳರ ಗ್ಯಾಂಗ್ ಕೊನೆಗೂ ಸಿಕ್ಕಿಬಿದ್ದಿವೆ.ಮನಿ ಹೈಸ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ವೇಗವಾಗಿ ಬಂದ ಕಂಟೈನರ್ ಲಾರಿಯಲ್ಲಿ ಪರಾರಿಯಾಗುತ್ತಿದ್ದ ಕಳ್ಳರನ್ನು ಪೊಲೀಸರು ಬೆನ್ನಟ್ಟಿದ್ದು, ಕೊನೆಗೆ ಶೂಟೌಟ್‌ನಲ್ಲಿ ಅದು ಕೊನೆಗೊಂಡಿದೆ. ಈ ಶೂಟೌಟ್‌ನಲ್ಲಿ ಶಂಕಿತ ಕಳ್ಳನೊಬ್ಬ ಸಾವನ್ನಪ್ಪಿದ್ದು, ಇನ್ನೊಬ್ಬ ಗಾಯಗೊಂಡಿದ್ದಾನೆ. ಇದೇ ವೇಳೆ ದರೋಡೆಕೋರರ ಗುಂಡಿಗೆ ಇಬ್ಬರು ಪೊಲೀಸರು ಗಾಯಗೊಂಡಿದ್ದಾಗಿ ವರದಿಯಾಗಿದೆ.

ನಾಮಕ್ಕಲ್ ಜಿಲ್ಲೆಯ ಕುಮಾರಪಾಳ್ಯಂ ಬಳಿಯ ಸೇಲಂ-ಕೊಚ್ಚಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿನಿಮಾ ಶೈಲಿಯಲ್ಲಿ ಸುಮಾರು ಐದು ಕಿಲೋಮೀಟರ್ ದೂರ ಬೆನ್ನೆಟ್ಟಲಾಗಿತ್ತು ಎಂದು ವರದಿಯಾಗಿದೆ. ಈ ಸಂದರ್ಭದಲ್ಲಿ ಶಂಕಿತರು ನುಣುಚಿಕೊಳ್ಳಲು ಪ್ರಯತ್ನಿಸಿದ್ದು, ಗುಂಡಿನ ಚಕಮಕಿ ನಡೆದಿದೆ ಎಂದು ವರದಿ ಹೇಳಿದೆ.ಮನಿ ಹೈಸ್ಟ್

ಕಾರ್ಯಾಚರಣೆಯು ಶೂಟೌಟ್‌ನಲ್ಲಿ ಕೊನೆಗೊಂಡಿದ್ದು, ಪರಿಣಾಮವಾಗಿ ಒಬ್ಬ ಶಂಕಿತ ಕಳ್ಳ ಸಾವಿಗೀಡಾಗಿದ್ದಾರೆ. ಮತ್ತೊಬ್ಬ ಆರೋಪಿ ಮತ್ತು ಇಬ್ಬರು ಪೊಲೀಸರು ಕೂಡಾ ಈ ವೇಳೆ ಗಾಯಗೊಂಡಿದ್ದಾರೆ.

ಇದನ್ನೂಓದಿ: ತೆಲಂಗಾಣ: ಶವ ಸಂಸ್ಕಾರ ಮಾಡದಂತೆ ದಲಿತ ಕುಟುಂಬವನ್ನು ತಡೆದ ರಿಯಲ್ ಎಸ್ಟೇಟ್‌ ಏಜೆಂಟ್‌ಗಳು

“ಇಬ್ಬರು ಪೊಲೀಸರಿಗೆ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಪ್ರಕರಣದ ಬಗ್ಗೆ ವಿಚಾರಣೆಯ ನಂತರ ಮಾತನಾಡುತ್ತೇವೆ” ಎಂದು ಸೇಲಂ ವಲಯದ ಡಿಐಜಿ ಇಎಸ್ ಉಮಾ ಘಟನಾ ಸ್ಥಳಕ್ಕೆ ಭೇಟಿ ನೀಡಿದ ನಂತರ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ದರೋಡೆಕೋರರ ತಂಡವು ಮೂರು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಎಟಿಎಂಗಳಿಂದ ಸುಮಾರು 65 ಲಕ್ಷ ರೂ. ದೂಚಿದ್ದಾರೆ ಎಂದು ಪೊಲೀಸ್ ಮೂಲಗಳನ್ನು ಉಲ್ಲೇಖಿಸಿ TNIE ವರದಿ ಹೇಳಿದೆ. ಶುಕ್ರವಾರ ಮುಂಜಾನೆ 2 ರಿಂದ 4 ಗಂಟೆಯ ನಡುವೆ ತ್ರಿಶೂರ್ ನಗರ ವ್ಯಾಪ್ತಿಯ ಸಿಟಿ ಈಸ್ಟ್ ಮತ್ತು ವಿಯ್ಯೂರ್ ಮತ್ತು ತ್ರಿಶೂರ್ ಗ್ರಾಮಾಂತರದ ಇರಿಂಜಲಕುಡದಲ್ಲಿ ಕಳ್ಳತನ ನಡೆದಿದೆ.

ಸೆಕ್ಯುರಿಟಿ ಇಲ್ಲದ ಆಲರಾಂ ವ್ಯವಸ್ಥೆ ಹೊಂದಿರುವ ಎಟಿಎಂಗಳನ್ನು ಗುರಿಯಾಗಿಟ್ಟುಕೊಂಡು ಗ್ಯಾಂಗ್ ದರೋಡೆ ಮಾಡಿದೆ ಎಂದು ವರದಿ ಹೇಳಿದೆ. ಕಳ್ಳರ ಗ್ಯಾಂಗ್ ಸಿಸಿಟಿವಿ ಕ್ಯಾಮೆರಾಗಳಿಗೆ ಬಣ್ಣ ಎರಚಿದ್ದು, ನಂತರ ಎಟಿಎಂನ ನಗದು ಪಡೆಯಲು ಗ್ಯಾಸ್ ಕಟ್ಟರ್‌ಗಳನ್ನು ಬಳಸುತ್ತಿದ್ದರು ಎಂದು ತಿಳಿದು ಬಂದಿದೆ.

ಕಳ್ಳತನದ ನಂತರ, ಕಳ್ಳರ ಗ್ಯಾಂಗ್ ಆರಂಭದಲ್ಲಿ ಪೊಲೀಸರಿಂದ ತಪ್ಪಿಸಿಕೊಳ್ಳಲು ಮೊದಲಿಗೆ ಕಾರಿನಲ್ಲಿ ಪರಾರಿಯಾಗಿತ್ತು. ನಂತರ ಕಂಟೈನರ್ ಟ್ರಕ್‌ ಮೂಲಕ ಪರಾರಿಯಾಗಿದ್ದಾರೆ. ಈ ವಾಹನವು ನಕಲಿ ನಂಬರ್ ಪ್ಲೇಟ್ ಅನ್ನು ಹೊಂದಿದ್ದರಿಂದ ಅದನ್ನು ಪತ್ತೆಹಚ್ಚಲು ಕೇರಳ ಪೊಲೀಸರು ರಸ್ತೆಯಲ್ಲಿ ಕಂಟೈನರ್ ಟ್ರಕ್‌ಗಳನ್ನು ಮೇಲ್ವಿಚಾರಣೆ ಮಾಡಲು ತಮಿಳುನಾಡು ಪೊಲೀಸರಿಗೆ ಕೇಳಿಕೊಂಡಿದ್ದಾರೆ.

ಇದನ್ನೂಓದಿ: ಪುಣೆ ಪೋರ್ಷೆ ಕಾರು ಅಪಘಾತ ಪ್ರಕರಣ: ಕುಡಿದ ಅಮಲಿನಲ್ಲೆ ಆಸ್ಪತ್ರೆಗೆ ಧಾವಿಸಿದ್ದ ಆರೋಪಿ ಕುಟುಂಬದ ಸದಸ್ಯರು

ಈ ಗುಪ್ತಚರ ಮಾಹಿತಿ ಮೇರೆಗೆ ತಮಿಳುನಾಡು ಪೊಲೀಸರು ಸೇಲಂ-ಕೊಚ್ಚಿ ರಾಷ್ಟ್ರೀಯ ಹೆದ್ದಾರಿಯಲ್ಲಿ ತಪಾಸಣೆಯನ್ನು ತೀವ್ರಗೊಳಿಸಿದ್ದು, ಅಂತಿಮವಾಗಿ ನಾಮಕ್ಕಲ್‌ನಲ್ಲಿ ಶಂಕಿತರ ಬಂಧನ ನಡೆದಿದೆ. ಟ್ರಕ್ ಪಚ್ಚಪಾಳ್ಯಂ ಪ್ರದೇಶವನ್ನು ತಲುಪಿದಾಗ, ಪೊಲೀಸರು ಅದನ್ನು ತಡೆಯಲು ಪ್ರಯತ್ನಿಸಿದರು; ಈ ವೇಳೆ ಕಳ್ಳರ ಗ್ಯಾಂಗ್ ಪ್ರತಿದಾಳಿ ನಡೆಸಿದ್ದು, ಹಾಗಾಗಿ ಗುಂಡಿನ ದಾಳಿ ಮಾಡಲಾಗಿದೆ ಎಂದು ವರದಿ ಹೇಳಿದೆ.

ಇದರ ನಂತರ, ಗ್ಯಾಂಗ್‌ನ ಐದು ಸದಸ್ಯರನ್ನು ಬಂಧಿಸಲಾಗಿದ್ದು, ಮೃತ ಶಂಕಿತ ಕಳ್ಳನ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸೇಲಂ ಸರ್ಕಾರಿ ಆಸ್ಪತ್ರೆಗೆ ಕಳುಹಿಸಲಾಗಿದೆ. ಈ ಗ್ಯಾಂಗ್ ರಾಜಸ್ಥಾನ ಮತ್ತು ಹರಿಯಾಣ ಮೂಲದ್ದಾಗಿದೆ ಎಂದು ನಂಬಲಾಗಿದೆ. ಇವರು ಇತರ ರೀತಿಯ ಅಪರಾಧಗಳಿಗೆ ಸಂಬಂಧಿಸಿದಂತೆ ಬೇಕಾಗಿದ್ದರು ಎಂದು ಪೊಲೀಸ್ ಮೂಲಗಳು ಸೂಚಿಸಿವೆ.

2021 ರಲ್ಲಿ, ಕೇರಳ ಪೊಲೀಸರು ಇದೇ ರೀತಿಯ ಕಾರ್ಯಾಚರಣೆ ನಡೆಸಿ ಕಳ್ಳತನ ಪ್ರಕರಣವನ್ನು ಯಶಸ್ವಿಯಾಗಿ ಭೇದಿಸಿದ್ದರು. ಪ್ರಸ್ತತ ಬಂಧನಕ್ಕೊಳಗಾಗಿರುವ ಗ್ಯಾಂಗ್‌ನ ಚಟುವಟಿಕೆಗಳು ಮತ್ತು ಸಂಪರ್ಕಗಳ ಕುರಿತು ಹೆಚ್ಚಿನ ವಿವರಗಳ ಬಗ್ಗೆ ತನಿಖೆ ನಡೆಯುತ್ತಿದ್ದು, ತಮಿಳುನಾಡಿನ ಪಶ್ಚಿಮ ವಲಯದ ಪೊಲೀಸ್ ಅಧಿಕಾರಿಗಳು ಪ್ರಕರಣದ ಕುರಿತು ಇನ್ನೂ ಪ್ರತಿಕ್ರಿಯಿಸಿಲ್ಲ.

ವಿಡಿಯೊ ನೋಡಿ: ಅಟ್ರಾಸಿಟಿ ಕಾದಂಬರಿ ಚರ್ಚೆಯಲ್ಲಿ ವಿಕಾಸ್ ಮತ್ತು ಗುರುಪ್ರಸಾದ್ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...