ಕೇರಳದ ತ್ರಿಶೂರ್ ಜಿಲ್ಲೆಯಲ್ಲಿ ಮೂರು ಬಾರಿ ಎಟಿಎಂ ಮುರಿದು ಕಂಟೈನರ್ ಟ್ರಕ್ನಲ್ಲಿ ಪರಾರಿಯಾಗಿದ್ದ ತಂಡವನ್ನು ಶುಕ್ರವಾರ ಬೆಳಗ್ಗೆ ತಮಿಳುನಾಡು ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡು ಮತ್ತು ಕೇರಳ ಪೊಲೀಸರಿಗೆ ತಲೆ ನೋವಾಗಿ ಪರಿಣಮಿಸಿದ್ದ ಆರು ಜನರಿದ್ದ ಕಳ್ಳರ ಗ್ಯಾಂಗ್ ಕೊನೆಗೂ ಸಿಕ್ಕಿಬಿದ್ದಿವೆ.ಮನಿ ಹೈಸ್ಟ್
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ವೇಗವಾಗಿ ಬಂದ ಕಂಟೈನರ್ ಲಾರಿಯಲ್ಲಿ ಪರಾರಿಯಾಗುತ್ತಿದ್ದ ಕಳ್ಳರನ್ನು ಪೊಲೀಸರು ಬೆನ್ನಟ್ಟಿದ್ದು, ಕೊನೆಗೆ ಶೂಟೌಟ್ನಲ್ಲಿ ಅದು ಕೊನೆಗೊಂಡಿದೆ. ಈ ಶೂಟೌಟ್ನಲ್ಲಿ ಶಂಕಿತ ಕಳ್ಳನೊಬ್ಬ ಸಾವನ್ನಪ್ಪಿದ್ದು, ಇನ್ನೊಬ್ಬ ಗಾಯಗೊಂಡಿದ್ದಾನೆ. ಇದೇ ವೇಳೆ ದರೋಡೆಕೋರರ ಗುಂಡಿಗೆ ಇಬ್ಬರು ಪೊಲೀಸರು ಗಾಯಗೊಂಡಿದ್ದಾಗಿ ವರದಿಯಾಗಿದೆ.
ನಾಮಕ್ಕಲ್ ಜಿಲ್ಲೆಯ ಕುಮಾರಪಾಳ್ಯಂ ಬಳಿಯ ಸೇಲಂ-ಕೊಚ್ಚಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿನಿಮಾ ಶೈಲಿಯಲ್ಲಿ ಸುಮಾರು ಐದು ಕಿಲೋಮೀಟರ್ ದೂರ ಬೆನ್ನೆಟ್ಟಲಾಗಿತ್ತು ಎಂದು ವರದಿಯಾಗಿದೆ. ಈ ಸಂದರ್ಭದಲ್ಲಿ ಶಂಕಿತರು ನುಣುಚಿಕೊಳ್ಳಲು ಪ್ರಯತ್ನಿಸಿದ್ದು, ಗುಂಡಿನ ಚಕಮಕಿ ನಡೆದಿದೆ ಎಂದು ವರದಿ ಹೇಳಿದೆ.ಮನಿ ಹೈಸ್ಟ್
ಕಾರ್ಯಾಚರಣೆಯು ಶೂಟೌಟ್ನಲ್ಲಿ ಕೊನೆಗೊಂಡಿದ್ದು, ಪರಿಣಾಮವಾಗಿ ಒಬ್ಬ ಶಂಕಿತ ಕಳ್ಳ ಸಾವಿಗೀಡಾಗಿದ್ದಾರೆ. ಮತ್ತೊಬ್ಬ ಆರೋಪಿ ಮತ್ತು ಇಬ್ಬರು ಪೊಲೀಸರು ಕೂಡಾ ಈ ವೇಳೆ ಗಾಯಗೊಂಡಿದ್ದಾರೆ.
ಇದನ್ನೂಓದಿ: ತೆಲಂಗಾಣ: ಶವ ಸಂಸ್ಕಾರ ಮಾಡದಂತೆ ದಲಿತ ಕುಟುಂಬವನ್ನು ತಡೆದ ರಿಯಲ್ ಎಸ್ಟೇಟ್ ಏಜೆಂಟ್ಗಳು
“ಇಬ್ಬರು ಪೊಲೀಸರಿಗೆ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಪ್ರಕರಣದ ಬಗ್ಗೆ ವಿಚಾರಣೆಯ ನಂತರ ಮಾತನಾಡುತ್ತೇವೆ” ಎಂದು ಸೇಲಂ ವಲಯದ ಡಿಐಜಿ ಇಎಸ್ ಉಮಾ ಘಟನಾ ಸ್ಥಳಕ್ಕೆ ಭೇಟಿ ನೀಡಿದ ನಂತರ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ದರೋಡೆಕೋರರ ತಂಡವು ಮೂರು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಎಟಿಎಂಗಳಿಂದ ಸುಮಾರು 65 ಲಕ್ಷ ರೂ. ದೂಚಿದ್ದಾರೆ ಎಂದು ಪೊಲೀಸ್ ಮೂಲಗಳನ್ನು ಉಲ್ಲೇಖಿಸಿ TNIE ವರದಿ ಹೇಳಿದೆ. ಶುಕ್ರವಾರ ಮುಂಜಾನೆ 2 ರಿಂದ 4 ಗಂಟೆಯ ನಡುವೆ ತ್ರಿಶೂರ್ ನಗರ ವ್ಯಾಪ್ತಿಯ ಸಿಟಿ ಈಸ್ಟ್ ಮತ್ತು ವಿಯ್ಯೂರ್ ಮತ್ತು ತ್ರಿಶೂರ್ ಗ್ರಾಮಾಂತರದ ಇರಿಂಜಲಕುಡದಲ್ಲಿ ಕಳ್ಳತನ ನಡೆದಿದೆ.
ಸೆಕ್ಯುರಿಟಿ ಇಲ್ಲದ ಆಲರಾಂ ವ್ಯವಸ್ಥೆ ಹೊಂದಿರುವ ಎಟಿಎಂಗಳನ್ನು ಗುರಿಯಾಗಿಟ್ಟುಕೊಂಡು ಗ್ಯಾಂಗ್ ದರೋಡೆ ಮಾಡಿದೆ ಎಂದು ವರದಿ ಹೇಳಿದೆ. ಕಳ್ಳರ ಗ್ಯಾಂಗ್ ಸಿಸಿಟಿವಿ ಕ್ಯಾಮೆರಾಗಳಿಗೆ ಬಣ್ಣ ಎರಚಿದ್ದು, ನಂತರ ಎಟಿಎಂನ ನಗದು ಪಡೆಯಲು ಗ್ಯಾಸ್ ಕಟ್ಟರ್ಗಳನ್ನು ಬಳಸುತ್ತಿದ್ದರು ಎಂದು ತಿಳಿದು ಬಂದಿದೆ.
ಕಳ್ಳತನದ ನಂತರ, ಕಳ್ಳರ ಗ್ಯಾಂಗ್ ಆರಂಭದಲ್ಲಿ ಪೊಲೀಸರಿಂದ ತಪ್ಪಿಸಿಕೊಳ್ಳಲು ಮೊದಲಿಗೆ ಕಾರಿನಲ್ಲಿ ಪರಾರಿಯಾಗಿತ್ತು. ನಂತರ ಕಂಟೈನರ್ ಟ್ರಕ್ ಮೂಲಕ ಪರಾರಿಯಾಗಿದ್ದಾರೆ. ಈ ವಾಹನವು ನಕಲಿ ನಂಬರ್ ಪ್ಲೇಟ್ ಅನ್ನು ಹೊಂದಿದ್ದರಿಂದ ಅದನ್ನು ಪತ್ತೆಹಚ್ಚಲು ಕೇರಳ ಪೊಲೀಸರು ರಸ್ತೆಯಲ್ಲಿ ಕಂಟೈನರ್ ಟ್ರಕ್ಗಳನ್ನು ಮೇಲ್ವಿಚಾರಣೆ ಮಾಡಲು ತಮಿಳುನಾಡು ಪೊಲೀಸರಿಗೆ ಕೇಳಿಕೊಂಡಿದ್ದಾರೆ.
ಇದನ್ನೂಓದಿ: ಪುಣೆ ಪೋರ್ಷೆ ಕಾರು ಅಪಘಾತ ಪ್ರಕರಣ: ಕುಡಿದ ಅಮಲಿನಲ್ಲೆ ಆಸ್ಪತ್ರೆಗೆ ಧಾವಿಸಿದ್ದ ಆರೋಪಿ ಕುಟುಂಬದ ಸದಸ್ಯರು
ಈ ಗುಪ್ತಚರ ಮಾಹಿತಿ ಮೇರೆಗೆ ತಮಿಳುನಾಡು ಪೊಲೀಸರು ಸೇಲಂ-ಕೊಚ್ಚಿ ರಾಷ್ಟ್ರೀಯ ಹೆದ್ದಾರಿಯಲ್ಲಿ ತಪಾಸಣೆಯನ್ನು ತೀವ್ರಗೊಳಿಸಿದ್ದು, ಅಂತಿಮವಾಗಿ ನಾಮಕ್ಕಲ್ನಲ್ಲಿ ಶಂಕಿತರ ಬಂಧನ ನಡೆದಿದೆ. ಟ್ರಕ್ ಪಚ್ಚಪಾಳ್ಯಂ ಪ್ರದೇಶವನ್ನು ತಲುಪಿದಾಗ, ಪೊಲೀಸರು ಅದನ್ನು ತಡೆಯಲು ಪ್ರಯತ್ನಿಸಿದರು; ಈ ವೇಳೆ ಕಳ್ಳರ ಗ್ಯಾಂಗ್ ಪ್ರತಿದಾಳಿ ನಡೆಸಿದ್ದು, ಹಾಗಾಗಿ ಗುಂಡಿನ ದಾಳಿ ಮಾಡಲಾಗಿದೆ ಎಂದು ವರದಿ ಹೇಳಿದೆ.
ಇದರ ನಂತರ, ಗ್ಯಾಂಗ್ನ ಐದು ಸದಸ್ಯರನ್ನು ಬಂಧಿಸಲಾಗಿದ್ದು, ಮೃತ ಶಂಕಿತ ಕಳ್ಳನ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸೇಲಂ ಸರ್ಕಾರಿ ಆಸ್ಪತ್ರೆಗೆ ಕಳುಹಿಸಲಾಗಿದೆ. ಈ ಗ್ಯಾಂಗ್ ರಾಜಸ್ಥಾನ ಮತ್ತು ಹರಿಯಾಣ ಮೂಲದ್ದಾಗಿದೆ ಎಂದು ನಂಬಲಾಗಿದೆ. ಇವರು ಇತರ ರೀತಿಯ ಅಪರಾಧಗಳಿಗೆ ಸಂಬಂಧಿಸಿದಂತೆ ಬೇಕಾಗಿದ್ದರು ಎಂದು ಪೊಲೀಸ್ ಮೂಲಗಳು ಸೂಚಿಸಿವೆ.
2021 ರಲ್ಲಿ, ಕೇರಳ ಪೊಲೀಸರು ಇದೇ ರೀತಿಯ ಕಾರ್ಯಾಚರಣೆ ನಡೆಸಿ ಕಳ್ಳತನ ಪ್ರಕರಣವನ್ನು ಯಶಸ್ವಿಯಾಗಿ ಭೇದಿಸಿದ್ದರು. ಪ್ರಸ್ತತ ಬಂಧನಕ್ಕೊಳಗಾಗಿರುವ ಗ್ಯಾಂಗ್ನ ಚಟುವಟಿಕೆಗಳು ಮತ್ತು ಸಂಪರ್ಕಗಳ ಕುರಿತು ಹೆಚ್ಚಿನ ವಿವರಗಳ ಬಗ್ಗೆ ತನಿಖೆ ನಡೆಯುತ್ತಿದ್ದು, ತಮಿಳುನಾಡಿನ ಪಶ್ಚಿಮ ವಲಯದ ಪೊಲೀಸ್ ಅಧಿಕಾರಿಗಳು ಪ್ರಕರಣದ ಕುರಿತು ಇನ್ನೂ ಪ್ರತಿಕ್ರಿಯಿಸಿಲ್ಲ.
ವಿಡಿಯೊ ನೋಡಿ: ಅಟ್ರಾಸಿಟಿ ಕಾದಂಬರಿ ಚರ್ಚೆಯಲ್ಲಿ ವಿಕಾಸ್ ಮತ್ತು ಗುರುಪ್ರಸಾದ್ ಪ್ರತಿಕ್ರಿಯೆ


