Homeಮುಖಪುಟ'ಧರ್ಮ ಘೋಷಿಸಿ' | ಜಗನ್‌ಗೆ ಆಂಧ್ರ ಸಿಎಂ ಸವಾಲು; ತಿರುಪತಿ ಭೇಟಿ ರದ್ದು

‘ಧರ್ಮ ಘೋಷಿಸಿ’ | ಜಗನ್‌ಗೆ ಆಂಧ್ರ ಸಿಎಂ ಸವಾಲು; ತಿರುಪತಿ ಭೇಟಿ ರದ್ದು

- Advertisement -
- Advertisement -

ಆಂಧ್ರಪ್ರದೇಶದ ಪ್ರತಿಪಕ್ಷ ವೈಎಸ್‌ಆರ್‌ಸಿಪಿ ಮುಖ್ಯಸ್ಥ ವೈಎಸ್‌ ಜಗನ್‌ ಮೋಹನ್‌ ರೆಡ್ಡಿ ಅವರು ತಿರುಪತಿ ವೆಂಕಟೇಶ್ವರ ದೇವಸ್ಥಾನಕ್ಕೆ ಯೋಜಿಸಿದ್ದ ಪ್ರವಾಸವನ್ನು ರದ್ದುಗೊಳಿಸಿದ್ದಾರೆ ಎಂದು ಅವರ ಆಪ್ತ ಮೂಲಗಳು ಶುಕ್ರವಾರ ತಿಳಿಸಿವೆ. ‘ಧರ್ಮ ಘೋಷಿಸಿ’ ಎಂದು ಆಂಧ್ರಪ್ರದೇಶ ಆಡಳಿತರೂಢ ಪಕ್ಷವು ಜಗನ್‌ ಮೋಹನ್‌ ರೆಡ್ಡಿ ಅವರೊಂದಿಗೆ ಕೇಳಿಕೊಂಡಿದ್ದರಿಂದ ತಿರುಪತಿ ದೇವಸ್ಥಾನದ ಭೇಟಿಯನ್ನು ರದ್ದುಗೊಳಿಸಿದ್ದಾರೆ ಎಂದು TNIE ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ರೆಡ್ಡಿ ಅವರ ಆಪ್ತ ಮೂಲಗಳು ಬೆಟ್ಟದ ದೇಗುಲಕ್ಕೆ ಅವರ ಭೇಟಿಯನ್ನು ರದ್ದುಗೊಳಿಸಲಾಗಿದೆ ಎಂದು ಖಚಿತಪಡಿಸಿದ್ದಾರೆ. ಆದರೆ ಅವರು ದೇವಾಲಯದ ಪಟ್ಟಣಕ್ಕೆ ಹೊರಡುವ ಕೆಲವೇ ಗಂಟೆಗಳ ಮೊದಲು ಬಂದ ನಿರ್ಧಾರದ ಹಿಂದಿನ ಕಾರಣವನ್ನು ತಕ್ಷಣವೇ ಬಹಿರಂಗಪಡಿಸಲಿಲ್ಲ ಎಂದು ವರದಿಗಳು ಉಲ್ಲೇಖಿಸಿವೆ.

ಅದಾಗ್ಯೂ, ದೇವಸ್ಥಾನವನ್ನು ಪ್ರವೇಶಿಸುವ ಮೊದಲು ತಮ್ಮ ನಂಬಿಕೆಯನ್ನು ಘೋಷಿಸಬೇಕು ಎಂಬ ಪಿಡಿಪಿ ಬೇಡಿಕೆಯ ನಡುವೆ ಜಗನ್ ಅವರ ಭೇಟಿಯನ್ನು ರದ್ದುಗೊಳಿಸಲಾಯಿತು ಎಂದು ಹೇಳಿದೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜಗನ್ ಮೋಹನ್, ದೇಶದ ಪ್ರತಿಯೊಬ್ಬರಿಗೂ ನನ್ನ ಧರ್ಮ ತಿಳಿದಿದೆ. ನಾನು ಸಿಎಂ ಆಗುವ ಮೊದಲು ಹಲವಾರು ಬಾರಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿದ್ದೇನೆ. ನಾಲ್ಕು ಗೋಡೆಗಳ ಮಧ್ಯೆ ಬೈಬಲ್ ಓದಿದರೂ ಇಸ್ಲಾಂ, ಹಿಂದೂ ಮತ್ತು ಸಿಖ್ ಧರ್ಮವನ್ನು ಗೌರವಿಸುತ್ತೇನೆ ಎಂದು ಹೇಳಿದರು.

ತಮ್ಮ ನಾಯಕರು ದೇವಸ್ಥಾನಕ್ಕೆ ಹೋಗದಂತೆ ತಿರುಪತಿಯಲ್ಲಿ ಸಾವಿರಾರು ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ಟಿವಿಗಳು ತೋರಿಸುತ್ತಿವೆ ಎಂದು ಜಗನ್ ಹೇಳಿದ್ದಾರೆ. ಧರ್ಮ ಘೋಷಿಸಿ

ಇದನ್ನೂಓದಿ: ತಮ್ಮ ಬಗೆಗಿನ ಜನರ ಗ್ರಹಿಕೆಯನ್ನು ರಾಹುಲ್ ಗಾಂಧಿ ಬದಲಾಯಿಸಿದ್ದಾರೆ: ನಟ ಸೈಫ್ ಅಲಿ ಖಾನ್

“ತಮ್ಮ (ಚಂದ್ರಬಾಬು ನಾಯ್ಡು) 100 ದಿನಗಳ ಆಡಳಿತದ ವೈಫಲ್ಯವನ್ನು ಬೇರೆಡೆಗೆ ತಿರುಗಿಸಲು ಮತ್ತು ಗಮನವನ್ನು ಬೇರೆಡೆಗೆ ಸೆಳೆಯಲು ಚಂದ್ರಬಾಬು ನಾಯ್ಡು ಅವರು ಲಡ್ಡು ವಿಚಾರವನ್ನು ಮುಂದಿಟ್ಟರು. ಲಡ್ಡು ವಿಚಾರದಲ್ಲಿ ತಮ್ಮ ವೈಫಲ್ಯವನ್ನು ಮುಚ್ಚಿಹಾಕಲು ಅವರು ಉದ್ದೇಶಪೂರ್ವಕವಾಗಿ ಧರ್ಮದ ಘೋಷಣೆ ಮಾಡುವಂತೆ ಕೇಳುತ್ತಿದ್ದಾರೆ. ಲಡ್ಡು ಗುಣಮಟ್ಟದ ಬಗ್ಗೆ ಅನುಮಾನದ ಬೀಜಗಳನ್ನು ಬಿತ್ತಿದೆ” ಎಂದು ರೆಡ್ಡಿ ಹೇಳಿದ್ದಾರೆ.

ವೆಂಕಟೇಶ್ವರ ಸ್ವಾಮಿಗೆ ಐದು ವರ್ಷಗಳ ಕಾಲ (ಅವರು ಸಿಎಂ ಆಗಿದ್ದಾಗ) ರೇಷ್ಮೆ ವಸ್ತ್ರವನ್ನು ಅರ್ಪಿಸುವ ಅವಕಾಶ ನನಗೆ ಸಿಕ್ಕಿತ್ತು. ನಾನು ಅದನ್ನು ಅರ್ಥಮಾಡಿಕೊಳ್ಳಬಲ್ಲೆ. ಇದು ನನ್ನ ಮೊದಲ ಬಾರಿಯ ಭೇಟಿ ಅಲ್ಲ ಎಂದು ಅವರು ಹೇಳಿದ್ದಾರೆ. ಗುಣಮಟ್ಟದ ಕಾರಣಕ್ಕಾಗಿ ಟಿಟಿಡಿ ತಿರಸ್ಕರಿಸಿದ ತುಪ್ಪವನ್ನು ಲಡ್ಡು ಪ್ರಸಾದ ತಯಾರಿಸಲು ಎಂದಿಗೂ ಬಳಸಲಾಗುವುದಿಲ್ಲ ಎಂದು ಅವರು ಪುನರುಚ್ಚರಿಸಿದ್ದಾರೆ.

ಹಿಂದಿನ ವೈಎಸ್‌ಆರ್‌ಸಿಪಿ ಆಡಳಿತದಲ್ಲಿ ತಿರುಪತಿ ಲಡ್ಡುಗಳಲ್ಲಿ ಗುಣಮಟ್ಟವಿಲ್ಲದ ತುಪ್ಪದ ಬಳಕೆ ಮತ್ತು ಅದರಲ್ಲಿ ಪ್ರಾಣಿಗಳ ಕೊಬ್ಬು ಇರುವ ಬಗ್ಗೆ ಚಂದ್ರಬಾಬು ನಾಯ್ಡು ಕಳೆದ ವಾರ ಆರೋಪಿಸಿದ್ದರು.

ವಿಡಿಯೊ ನೋಡಿ: ದಲಿತ ಸಮುದಾಯಗಳ ಒಡಕಿನಲ್ಲೂ ಒಗ್ಗಟ್ಟಿದೆ: ಅಗ್ರಹಾರ ಕೃಷ್ಣಮೂರ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...