Homeಮುಖಪುಟಕಾಂಗ್ರೆಸ್ ಕೌನ್ಸಿಲರ್‌ಗಳಿಗೆ ಗೋಮೂತ್ರ ಕುಡಿಸಿ 'ಶುದ್ಧೀಕರಣ' ಮಾಡಿದ ಬಿಜೆಪಿ ಶಾಸಕ!

ಕಾಂಗ್ರೆಸ್ ಕೌನ್ಸಿಲರ್‌ಗಳಿಗೆ ಗೋಮೂತ್ರ ಕುಡಿಸಿ ‘ಶುದ್ಧೀಕರಣ’ ಮಾಡಿದ ಬಿಜೆಪಿ ಶಾಸಕ!

- Advertisement -
- Advertisement -

ಜೈಪುರ ಮುನ್ಸಿಪಲ್ ಕಾರ್ಪೊರೇಷನ್‌ನಲ್ಲಿ ತಮ್ಮ ಪಕ್ಷ ಅಧಿಕಾರ ಹಿಡಿಯಲು ಸಹಾಯ ಮಾಡಿದ ಕಾಂಗ್ರೆಸ್ ಪಕ್ಷದಿಂದ ಪಕ್ಷಾಂತರವಾದ ಕೌನ್ಸಿಲರ್‌ಗಳಿಗೆ ಗೋಮೂತ್ರ ಮತ್ತು ಗಂಗಾಜಲ ಕುಡಿಸಿ ‘ಶುದ್ಧೀಕರಣ ಸಮಾರಂಭ’ವನ್ನು ಬಿಜೆಪಿ ಶಾಸಕರೊಬ್ಬರು ನಡೆಸಿದ ಘಟನೆ ನಡೆದಿದೆ. ಜೈಪುರ ಮುನ್ಸಿಪಲ್ ಕಾರ್ಪೊರೇಷನ್ ಹೆರಿಟೇಜ್ (ಜೆಎಂಸಿಎಚ್) ನ ಹೊಸ ಮೇಯರ್ ಆಗಿ ಕುಸುಮ್ ಯಾದವ್ ಅವರು ಅಧಿಕಾರ ವಹಿಸಿದ್ದು, ಈ ವೇಳೆ ಘಟನೆ ನಡೆದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಗುರುವಾರದಂದು ಗಂಗಾಜಲ ಮತ್ತು ಗೋಮೂತ್ರವನ್ನು ಒಳಗೊಂಡ ಶುದ್ಧೀಕರಣ ಆಚರಣೆಯ ನಂತರ ಕುಸುಮ್ ಯಾದವ್ ಅಧಿಕೃತವಾಗಿ ಅಧಿಕಾರ ವಹಿಸಿಕೊಂಡರು. ಬಿಜೆಪಿ ಶಾಸಕ ಬಲ್ಮುಕುಂದ್ ಆಚಾರ್ಯ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನ ನಡೆಸಲಾಗಿತ್ತು.

ವೇದ ಮಂತ್ರಗಳೊಂದಿಗೆ ನಡೆದ ಶುದ್ಧೀಕರಣ ಸಮಾರಂಭವು ಹತೋಜ್ ಧಾಮ್ ದೇವಾಲಯದ ಪೂಜಾರಿ ಕೂಡಾ ಆಗಿರುವ ಬಲ್ಮುಕುಂದ್ ಆಚಾರ್ಯ ಅವರು ಕುಸುಮ್‌ ಯಾದವ್ ಮಾತ್ರವಲ್ಲದೆ ಬಿಜೆಪಿಯನ್ನು ಬೆಂಬಲಿಸಿ ಪಕ್ಷಾಂತರಗೊಂಡ ಕೆಲವು ಕಾಂಗ್ರೆಸ್ ಕೌನ್ಸಿಲರ್‌ಗಳನ್ನು ಕೂಡಾ ಸಾಂಕೇತಿಕವಾಗಿ ಶುದ್ಧೀಕರಿಸಿದ್ದಾರೆ.

‘ಶುದ್ಧೀಕರಣ ಪ್ರಕ್ರಿಯೆ’ಯ ಅಂಗವಾಗಿ ಕೌನ್ಸಿಲರ್‌ಗಳು ಮತ್ತು ಅಧಿಕಾರಿಗಳಿಗೆ ಸಾಂಕೇತಿಕವಾಗಿ ಗಂಗಾಜಲ ಮತ್ತು ಗೋಮೂತ್ರವನ್ನು ‘ಕುಡಿಯುವಂತೆ’ ಮಾಡಲಾಗಿತ್ತು ಎಂದು ವರದಿಯಾಗಿದೆ.

ಇದನ್ನೂಓದಿ: ‘ಧರ್ಮ ಘೋಷಿಸಿ’ | ಜಗನ್‌ಗೆ ಆಂಧ್ರ ಸಿಎಂ ಸವಾಲು; ತಿರುಪತಿ ಭೇಟಿ ರದ್ದು

ಭ್ರಷ್ಟಾಚಾರ ಆರೋಪದ ಕಾರಣದಿಂದ ಪದಚ್ಯುತಗೊಂಡಿದ್ದ ಕಾಂಗ್ರೆಸ್ ಮೇಯರ್ ಮುನೇಶ್ ಗುರ್ಜಾರ್ ಅವರನ್ನು ಪದಚ್ಯುತಗೊಳಿಸಿದ ಬೆನ್ನಲ್ಲೇ ಕುಸುಮ್ ಯಾದವ್ ಅವರನ್ನು ಮೇಯರ್ ಆಗಿ ನೇಮಕ ಮಾಡಲಾಗಿತ್ತು. ಕುಸುಮ್‌ ಯಾದವ್ ಅವರು ಏಳು ಕಾಂಗ್ರೆಸ್ ಕೌನ್ಸಿಲರ್‌ಗಳು ಮತ್ತು ಸ್ವತಂತ್ರ ಸದಸ್ಯರ ಬೆಂಬಲದೊಂದಿಗೆ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಂಡಿದ್ದರು. ಕೌನ್ಸಿಲರ್‌ಗಳಿಗೆ ಗೋಮೂತ್ರ

ಆಪಾದಿತ ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವವರನ್ನು ಶುದ್ಧೀಕರಿಸಲು ಶುದ್ಧೀಕರಣ ಸಮಾರಂಭ ಅಗತ್ಯ ಎಂದು ಬಿಜೆಪಿ ಶಾಸಕ ಬಲ್ಮುಕುಂದ್ ಆಚಾರ್ಯ ವಿವರಿಸಿದ್ದಾರೆ. “ನಾವು ಪಾಲಿಕೆಯನ್ನು ಗಂಗಾಜಲದಿಂದ ಶುದ್ಧೀಕರಿಸಿದ್ದೇವೆ, ಎಲ್ಲಾ ಕಲ್ಮಶಗಳನ್ನು ತೆಗೆದುಹಾಕಿದ್ದೇವೆ. ಈಗ ಬಿಜೆಪಿಯನ್ನು ಬೆಂಬಲಿಸಿದ ಕಾಂಗ್ರೆಸ್ ಕೌನ್ಸಿಲರ್‌ಗಳನ್ನು ‘ಸನಾತನಿ’ಗಳನ್ನಾಗಿ ಮಾಡಲಾಗಿದೆ” ಎಂದು ಅವರು ಹೇಳಿದ್ದಾರೆ.

ತನ್ನ ಮಹಾ ಶುದ್ಧೀಕರಣ ಸಮಾರಂಭದಿಂದಾಗಿ ಇಡೀ ಜೈಪುರ ಮುನ್ಸಿಪಲ್ ಕಾರ್ಪೊರೇಶನ್ ಅನ್ನು ‘ಭ್ರಷ್ಟಾಚಾರ ಮುಕ್ತ’ ಮಾಡಲಾಗಿದೆ ಎಂದು ಅವರು ಹೇಳಿಕೆಗಳನ್ನು ನೀಡಿದ್ದಾರೆ.

ಕಾಂಗ್ರೆಸ್ ನಾಯಕ ಪ್ರತಾಪ್ ಸಿಂಗ್ ಖಚರಿಯಾವಾಸ್ ಅವರು ಶಾಸಕ ಆಚಾರ್ಯ ಅವರ ಕೃತ್ಯಗಳನ್ನು ತೀವ್ರವಾಗಿ ಖಂಡಿಸಿದ್ದು, ಅವರ ಅಧಿಕಾರವನ್ನು ಪ್ರಶ್ನಿಸಿದ್ದಾರೆ. “ನೀವು ಶಾಸಕರಾಗಿದ್ದೀರಿ, ಆಧ್ಯಾತ್ಮಿಕ ನಾಯಕರಲ್ಲ. ಕಾಂಗ್ರೆಸ್ ಕೌನ್ಸಿಲರ್‌ಗಳು ಈಗ ಶುದ್ಧ ಮತ್ತು ಸನಾತನಿಗಳು ಎಂದು ನೀವು ಹೇಗೆ ಘೋಷಿಸುತ್ತೀರಿ? ಬಲ್ಮುಕುಂದ್ ಆಚಾರ್ಯ ಸನಾತನ ಧರ್ಮದ ಸ್ವಯಂ ಪ್ರೇರಿತ ರಕ್ಷಕರೆ?” ಎಂದು ಕೇಳಿದ್ದಾರೆ.

ವಿಡಿಯೊ ನೋಡಿ: ಅಟ್ರಾಸಿಟಿ ಕಾದಂಬರಿ ಚರ್ಚೆಯಲ್ಲಿ ವಿಕಾಸ್ ಮತ್ತು ಗುರುಪ್ರಸಾದ್ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...