Homeಮುಖಪುಟಕಾಂಗ್ರೆಸ್ ಕೌನ್ಸಿಲರ್‌ಗಳಿಗೆ ಗೋಮೂತ್ರ ಕುಡಿಸಿ 'ಶುದ್ಧೀಕರಣ' ಮಾಡಿದ ಬಿಜೆಪಿ ಶಾಸಕ!

ಕಾಂಗ್ರೆಸ್ ಕೌನ್ಸಿಲರ್‌ಗಳಿಗೆ ಗೋಮೂತ್ರ ಕುಡಿಸಿ ‘ಶುದ್ಧೀಕರಣ’ ಮಾಡಿದ ಬಿಜೆಪಿ ಶಾಸಕ!

- Advertisement -
- Advertisement -

ಜೈಪುರ ಮುನ್ಸಿಪಲ್ ಕಾರ್ಪೊರೇಷನ್‌ನಲ್ಲಿ ತಮ್ಮ ಪಕ್ಷ ಅಧಿಕಾರ ಹಿಡಿಯಲು ಸಹಾಯ ಮಾಡಿದ ಕಾಂಗ್ರೆಸ್ ಪಕ್ಷದಿಂದ ಪಕ್ಷಾಂತರವಾದ ಕೌನ್ಸಿಲರ್‌ಗಳಿಗೆ ಗೋಮೂತ್ರ ಮತ್ತು ಗಂಗಾಜಲ ಕುಡಿಸಿ ‘ಶುದ್ಧೀಕರಣ ಸಮಾರಂಭ’ವನ್ನು ಬಿಜೆಪಿ ಶಾಸಕರೊಬ್ಬರು ನಡೆಸಿದ ಘಟನೆ ನಡೆದಿದೆ. ಜೈಪುರ ಮುನ್ಸಿಪಲ್ ಕಾರ್ಪೊರೇಷನ್ ಹೆರಿಟೇಜ್ (ಜೆಎಂಸಿಎಚ್) ನ ಹೊಸ ಮೇಯರ್ ಆಗಿ ಕುಸುಮ್ ಯಾದವ್ ಅವರು ಅಧಿಕಾರ ವಹಿಸಿದ್ದು, ಈ ವೇಳೆ ಘಟನೆ ನಡೆದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಗುರುವಾರದಂದು ಗಂಗಾಜಲ ಮತ್ತು ಗೋಮೂತ್ರವನ್ನು ಒಳಗೊಂಡ ಶುದ್ಧೀಕರಣ ಆಚರಣೆಯ ನಂತರ ಕುಸುಮ್ ಯಾದವ್ ಅಧಿಕೃತವಾಗಿ ಅಧಿಕಾರ ವಹಿಸಿಕೊಂಡರು. ಬಿಜೆಪಿ ಶಾಸಕ ಬಲ್ಮುಕುಂದ್ ಆಚಾರ್ಯ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನ ನಡೆಸಲಾಗಿತ್ತು.

ವೇದ ಮಂತ್ರಗಳೊಂದಿಗೆ ನಡೆದ ಶುದ್ಧೀಕರಣ ಸಮಾರಂಭವು ಹತೋಜ್ ಧಾಮ್ ದೇವಾಲಯದ ಪೂಜಾರಿ ಕೂಡಾ ಆಗಿರುವ ಬಲ್ಮುಕುಂದ್ ಆಚಾರ್ಯ ಅವರು ಕುಸುಮ್‌ ಯಾದವ್ ಮಾತ್ರವಲ್ಲದೆ ಬಿಜೆಪಿಯನ್ನು ಬೆಂಬಲಿಸಿ ಪಕ್ಷಾಂತರಗೊಂಡ ಕೆಲವು ಕಾಂಗ್ರೆಸ್ ಕೌನ್ಸಿಲರ್‌ಗಳನ್ನು ಕೂಡಾ ಸಾಂಕೇತಿಕವಾಗಿ ಶುದ್ಧೀಕರಿಸಿದ್ದಾರೆ.

‘ಶುದ್ಧೀಕರಣ ಪ್ರಕ್ರಿಯೆ’ಯ ಅಂಗವಾಗಿ ಕೌನ್ಸಿಲರ್‌ಗಳು ಮತ್ತು ಅಧಿಕಾರಿಗಳಿಗೆ ಸಾಂಕೇತಿಕವಾಗಿ ಗಂಗಾಜಲ ಮತ್ತು ಗೋಮೂತ್ರವನ್ನು ‘ಕುಡಿಯುವಂತೆ’ ಮಾಡಲಾಗಿತ್ತು ಎಂದು ವರದಿಯಾಗಿದೆ.

ಇದನ್ನೂಓದಿ: ‘ಧರ್ಮ ಘೋಷಿಸಿ’ | ಜಗನ್‌ಗೆ ಆಂಧ್ರ ಸಿಎಂ ಸವಾಲು; ತಿರುಪತಿ ಭೇಟಿ ರದ್ದು

ಭ್ರಷ್ಟಾಚಾರ ಆರೋಪದ ಕಾರಣದಿಂದ ಪದಚ್ಯುತಗೊಂಡಿದ್ದ ಕಾಂಗ್ರೆಸ್ ಮೇಯರ್ ಮುನೇಶ್ ಗುರ್ಜಾರ್ ಅವರನ್ನು ಪದಚ್ಯುತಗೊಳಿಸಿದ ಬೆನ್ನಲ್ಲೇ ಕುಸುಮ್ ಯಾದವ್ ಅವರನ್ನು ಮೇಯರ್ ಆಗಿ ನೇಮಕ ಮಾಡಲಾಗಿತ್ತು. ಕುಸುಮ್‌ ಯಾದವ್ ಅವರು ಏಳು ಕಾಂಗ್ರೆಸ್ ಕೌನ್ಸಿಲರ್‌ಗಳು ಮತ್ತು ಸ್ವತಂತ್ರ ಸದಸ್ಯರ ಬೆಂಬಲದೊಂದಿಗೆ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಂಡಿದ್ದರು. ಕೌನ್ಸಿಲರ್‌ಗಳಿಗೆ ಗೋಮೂತ್ರ

ಆಪಾದಿತ ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವವರನ್ನು ಶುದ್ಧೀಕರಿಸಲು ಶುದ್ಧೀಕರಣ ಸಮಾರಂಭ ಅಗತ್ಯ ಎಂದು ಬಿಜೆಪಿ ಶಾಸಕ ಬಲ್ಮುಕುಂದ್ ಆಚಾರ್ಯ ವಿವರಿಸಿದ್ದಾರೆ. “ನಾವು ಪಾಲಿಕೆಯನ್ನು ಗಂಗಾಜಲದಿಂದ ಶುದ್ಧೀಕರಿಸಿದ್ದೇವೆ, ಎಲ್ಲಾ ಕಲ್ಮಶಗಳನ್ನು ತೆಗೆದುಹಾಕಿದ್ದೇವೆ. ಈಗ ಬಿಜೆಪಿಯನ್ನು ಬೆಂಬಲಿಸಿದ ಕಾಂಗ್ರೆಸ್ ಕೌನ್ಸಿಲರ್‌ಗಳನ್ನು ‘ಸನಾತನಿ’ಗಳನ್ನಾಗಿ ಮಾಡಲಾಗಿದೆ” ಎಂದು ಅವರು ಹೇಳಿದ್ದಾರೆ.

ತನ್ನ ಮಹಾ ಶುದ್ಧೀಕರಣ ಸಮಾರಂಭದಿಂದಾಗಿ ಇಡೀ ಜೈಪುರ ಮುನ್ಸಿಪಲ್ ಕಾರ್ಪೊರೇಶನ್ ಅನ್ನು ‘ಭ್ರಷ್ಟಾಚಾರ ಮುಕ್ತ’ ಮಾಡಲಾಗಿದೆ ಎಂದು ಅವರು ಹೇಳಿಕೆಗಳನ್ನು ನೀಡಿದ್ದಾರೆ.

ಕಾಂಗ್ರೆಸ್ ನಾಯಕ ಪ್ರತಾಪ್ ಸಿಂಗ್ ಖಚರಿಯಾವಾಸ್ ಅವರು ಶಾಸಕ ಆಚಾರ್ಯ ಅವರ ಕೃತ್ಯಗಳನ್ನು ತೀವ್ರವಾಗಿ ಖಂಡಿಸಿದ್ದು, ಅವರ ಅಧಿಕಾರವನ್ನು ಪ್ರಶ್ನಿಸಿದ್ದಾರೆ. “ನೀವು ಶಾಸಕರಾಗಿದ್ದೀರಿ, ಆಧ್ಯಾತ್ಮಿಕ ನಾಯಕರಲ್ಲ. ಕಾಂಗ್ರೆಸ್ ಕೌನ್ಸಿಲರ್‌ಗಳು ಈಗ ಶುದ್ಧ ಮತ್ತು ಸನಾತನಿಗಳು ಎಂದು ನೀವು ಹೇಗೆ ಘೋಷಿಸುತ್ತೀರಿ? ಬಲ್ಮುಕುಂದ್ ಆಚಾರ್ಯ ಸನಾತನ ಧರ್ಮದ ಸ್ವಯಂ ಪ್ರೇರಿತ ರಕ್ಷಕರೆ?” ಎಂದು ಕೇಳಿದ್ದಾರೆ.

ವಿಡಿಯೊ ನೋಡಿ: ಅಟ್ರಾಸಿಟಿ ಕಾದಂಬರಿ ಚರ್ಚೆಯಲ್ಲಿ ವಿಕಾಸ್ ಮತ್ತು ಗುರುಪ್ರಸಾದ್ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...