Homeಫ್ಯಾಕ್ಟ್‌ಚೆಕ್FACT CHECK : ಉತ್ತರ ಪ್ರದೇಶದಲ್ಲಿ ವೃದ್ದನ ಮುಖಕ್ಕೆ ಸ್ಪ್ರೇ ಮಾಡಿದವರು ಮುಸ್ಲಿಮರು ಎಂಬುವುದು ಸುಳ್ಳು

FACT CHECK : ಉತ್ತರ ಪ್ರದೇಶದಲ್ಲಿ ವೃದ್ದನ ಮುಖಕ್ಕೆ ಸ್ಪ್ರೇ ಮಾಡಿದವರು ಮುಸ್ಲಿಮರು ಎಂಬುವುದು ಸುಳ್ಳು

- Advertisement -
- Advertisement -

ಸೈಕಲ್‌ನಲ್ಲಿ ಹೋಗುತ್ತಿದ್ದ ವೃದ್ದರೊಬ್ಬರ ಮುಖಕ್ಕೆ ಬೈಕ್‌ನಲ್ಲಿ ಹೋಗುತ್ತಿದ್ದ ಯುವಕನೋರ್ವ ಸ್ನೋ ಫೋಮ್ ಸ್ಪ್ರೇ ಮಾಡಿದ ವಿಡಿಯೋವೊಂದು ಕಳೆದ ಕೆಲ ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಉತ್ತರ ಪ್ರದೇಶದ ಝಾನ್ಸಿಯಲ್ಲಿ ಈ ಘಟನೆ ನಡೆದಿದ್ದು, ಝಾನ್ಸಿಯ ನವಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಓರ್ವ ಆರೋಪಿಯನ್ನೂ ಬಂಧಿಸಲಾಗಿದೆ. ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಬಂಧಿತ ಆರೋಪಿ ಮುಸ್ಲಿಂ ಎಂದು ಪ್ರಕರಣಕ್ಕೆ ಕೋಮು ಬಣ್ಣ ಹಚ್ಚಲಾಗಿದೆ.

ನಾಗೇಶ್ ಪ್ರೀತಮ್ ಎಂಬವರು ಸೆಪ್ಟೆಂಬರ್ 24ರಂದು ತನ್ನ ಫೇಸ್‌ಬುಕ್ ಖಾತೆಯಲ್ಲಿ ವಿಡಿಯೋ ಹಂಚಿಕೊಂಡು ” ಸೈಕಲ್‌ ಅಲ್ಲಿ ಹೋಗುತ್ತಿದ್ದ ಅಮಾಯಕ ವೃದ್ದನಿಗೆ ಮುಸ್ಲಿಂ ಯುವಕ ಅನುಚಿತ ವರ್ತನೆ ಯುಪಿ ಪೊಲೀಸರಿಗೆ ಭರ್ಜರಿ ಬ್ಯಾಟಿಂಗ್” ಎಂದು ಬರೆದುಕೊಂಡಿದ್ದರು.

ಅರುಣ್ ಕುಮಾರ್ ಹಿಂದೂ ಎಂಬ ಎಕ್ಸ್‌ ಖಾತೆಯಲ್ಲೂ ಸೆಪ್ಟೆಂಬರ್ 26ರಂದು ವಿಡಿಯೋ ಹಂಚಿಕೊಂಡು ” ತನ್ನ ಪಾಡಿಗೆ ಹೋಗುತ್ತಿದ್ದ ಅಮಾಯಕ ವೃದ್ಧನಿಗೆ ಪುಂಡ ಮುಸ್ಲಿಂ ಯುವಕರಿಂದ ಅನುಚಿತ ವರ್ತನೆ. ಆದರೆ ನಂತರ ನಡೆದಿದ್ದು ಯುಪಿ ಪೊಲೀಸರ ಕಾರ್ಯಾಚರಣೆ. ಈ ರೀತಿ ಕರ್ನಾಟಕದಲ್ಲೂ ಆಗಬೇಕು. ಆಗ ಈ ವೀಲಿಂಗ್ ಮಾಡುವ ಮುಸ್ಲಿಂ ಯುವಕರಿಗೆ ಬಿಸಿ ಮುಟ್ಟುತ್ತದೆ” ಎಂದು ಬರೆದುಕೊಂಡಿದ್ದರು.

ಫ್ಯಾಕ್ಟ್‌ಚೆಕ್ : ಮುಸ್ಲಿಂ ಯುವಕ ವೃದ್ದನಿಗೆ ಮುಖಕ್ಕೆ ಸ್ಪ್ರೇ ಮಾಡಿದ್ದಾನೆ ಎಂಬ ವಿಡಿಯೋ ಕುರಿತು ನಾವು ಸತ್ಯಾಸತ್ಯತೆ ಪರಿಶೀಲನೆ ನಡೆಸಿದ್ದೇವೆ.

ಪ್ರಕರಣದ ಕುರಿತು ನಾವು ಮಾಹಿತಿ ಹುಡುಕಿದಾಗ ಅದಕ್ಕೆ ಸಂಬಂಧಿಸಿದಂತೆ ಅನೇಕ ವರದಿಗಳು ನಮಗೆ ಲಭ್ಯವಾಗಿದೆ.

ಸೆಪ್ಟೆಂಬರ್ 24,2024ರಂದು ನ್ಯೂಸ್‌ 18 ಈ ಕುರಿತು ವರದಿ ಪ್ರಕಟಿಸಿತ್ತು. ವರದಿಯಲ್ಲಿ “ಝಾನ್ಸಿಯ ನವಾಬಾದ್ ಪ್ರದೇಶದ ಎಲೈಟ್ -ಚಿತ್ರಾ ರಸ್ತೆಯ ಮೇಲ್ಸೇತುವೆ ಬಳಿ ಇಬ್ಬರು ಬೈಕ್ ಸವಾರರು ವೃದ್ದರೊಬ್ಬರ ಮುಖಕ್ಕೆ ನೊರೆ ಎರಚಿ ತಮ್ಮ ಮೊಬೈಲ್‌ನಲ್ಲಿ ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದಾರೆ. ಅದನ್ನು ಲೈಕ್ಸ್‌ಗೋಸ್ಕರ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋ ವೈರಲ್ ಆಗಿ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾದ ಬಳಿಕ ಪೊಲೀಸರು ವಿನಯ್ ಯಾದವ್ ಎಂಬ ಆರೋಪಿಯನ್ನು ಬಂಧಿಸಿದ್ದಾರೆ. ಆತ ಯೂಟ್ಯೂಬರ್” ಎಂದು ಪೊಲೀಸರು ತಿಳಿಸಿರುವುದಾಗಿ ಹೇಳಲಾಗಿತ್ತು.

ಸೆಪ್ಟೆಂಬರ್ 24ರಂದು ಹಿಂದುಸ್ತಾನ್ ಟೈಮ್ಸ್ ಕೂಡ ವಿಡಿಯೋ ಕುರಿತು ವರದಿ ಪ್ರಕಟಿಸಿತ್ತು. ಅದರಲ್ಲಿ ವೃದ್ದನ ಮುಖಕ್ಕೆ ಫೋಮ್ ಸ್ಪ್ರೇ ಮಾಡಿ ವಿಕೃತಿ ಮೆರೆದ ಯೂಟ್ಯೂಬರ್ ವಿನಯ್ ಯಾದವ್‌ನನ್ನು ಪೊಲೀಸರು ಬಂಧಿಸಿದ್ದಾರೆ” ಎಂದು ಹೇಳಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಝಾನ್ಸಿ ಪೊಲೀಸರ ಅಧಿಕೃತ ಎಕ್ಸ್‌ ಖಾತೆಯಲ್ಲಿ ಪೊಲೀಸ್ ಅಧೀಕ್ಷರ ಸ್ಪಷ್ಟನೆಯ ವಿಡಿಯೋ ಕೂಡ ಅಪ್ಲೋಡ್ ಮಾಡಲಾಗಿತ್ತು. ವಿಡಿಯೋದಲ್ಲಿ ಪೊಲೀಸ್ ಅಧೀಕ್ಷರು ಆರೋಪಿ ವಿನಯ್ ಯಾದವ್ ಎಂದು ಹೇಳಿದ್ದಾರೆ.

ಸೆಪ್ಟೆಂಬರ್ 24ರಂದು ನವಭಾರತ್ ಟೈಮ್ಸ್ ಪ್ರಕಟಿಸಿದ ವರದಿಯಲ್ಲಿ ” ನಂದನಪುರ ನಿವಾಸಿ ಕಾನ್ಶಿರಾಂ ಪ್ರಜಾಪತಿ ಎಂಬವರ ದೂರು ಆಧರಿಸಿ ಪ್ರಕರಣ ದಾಖಲಾಗಿದೆ. ಒಟ್ಟು ಮೂವರು ಆರೋಪಿಗಳಾದ ಖೋಡಾನ್ ಗ್ರಾಮದ ವಿನಯ್ ಯಾದವ್, ಪಾಲಿ ಪಹಾರಿ ಗ್ರಾಮದ ರಿತೇಶ್ ಕೇವತ್ ಮತ್ತು ಡೈಲಿ ಗ್ರಾಮದ ಆರ್ಯನ್ ಶ್ರೀವಾಸ್ತವ್ ವಿರುದ್ಧ ಪ್ರಕರಣ ದಾಖಲಿಸಿರುವ ಪೊಲೀಸರು, ಓರ್ವ ಆರೋಪಿ ವಿನಯ್ ಯಾದವ್‌ನನ್ನು ಬಂಧಿಸಿದ್ದಾರೆ. ಉಳಿದವರ ಬಂಧನಕ್ಕೆ ಶೋಧ ನಡೆಸುತ್ತಿದ್ದಾರೆ” ಎಂದು ಹೇಳಲಾಗಿದೆ.

ಒಟ್ಟಿನಲ್ಲಿ ಸೈಕಲ್‌ನಲ್ಲಿ ಹೋಗುತ್ತಿದ್ದ ವೃದ್ದನ ಮುಖಕ್ಕೆ ಸ್ಪ್ರೇ ಮಾಡಿದ ಆರೋಪಿಗಳು ಮುಸ್ಲಿಮರಲ್ಲ ಎಂಬುವುದು ವರದಿಗಳಿಂದ ತಿಳಿದು ಬಂದಿದೆ.

ಈ ಫ್ಯಾಕ್ಟ್‌ಚೆಕ್ ಮೂಲಕ ಆರೋಪಿಗಳನ್ನು ಧರ್ಮದ ಆಧಾರದಲ್ಲಿ ಗುರುತಿಸುವ ಪ್ರಯತ್ನ ನಮ್ಮದಲ್ಲ. ಕೆಲವರು ಪ್ರಕರಣಕ್ಕೆ ಕೋಮು ಬಣ್ಣ ಬಳಿದ ಕಾರಣ ಜನರಿಗೆ ಸತ್ಯ ತಿಳಿಸುವ ಪ್ರಯತ್ನ ಮಾಡಿದ್ದೇವೆ.

ಇದನ್ನೂ ಓದಿ : FACT CHECK | ಮಹಾಲಕ್ಷ್ಮಿ ಕೊಲೆ : ಅಶ್ರಫ್‌ನನ್ನು ಕಟಕಟೆಯಲ್ಲಿ ನಿಲ್ಲಿಸಿದ ಸುಳ್ಳು ಸುದ್ದಿ ಜಾಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...