Homeಫ್ಯಾಕ್ಟ್‌ಚೆಕ್FACT CHECK : ಉತ್ತರ ಪ್ರದೇಶದಲ್ಲಿ ವೃದ್ದನ ಮುಖಕ್ಕೆ ಸ್ಪ್ರೇ ಮಾಡಿದವರು ಮುಸ್ಲಿಮರು ಎಂಬುವುದು ಸುಳ್ಳು

FACT CHECK : ಉತ್ತರ ಪ್ರದೇಶದಲ್ಲಿ ವೃದ್ದನ ಮುಖಕ್ಕೆ ಸ್ಪ್ರೇ ಮಾಡಿದವರು ಮುಸ್ಲಿಮರು ಎಂಬುವುದು ಸುಳ್ಳು

- Advertisement -
- Advertisement -

ಸೈಕಲ್‌ನಲ್ಲಿ ಹೋಗುತ್ತಿದ್ದ ವೃದ್ದರೊಬ್ಬರ ಮುಖಕ್ಕೆ ಬೈಕ್‌ನಲ್ಲಿ ಹೋಗುತ್ತಿದ್ದ ಯುವಕನೋರ್ವ ಸ್ನೋ ಫೋಮ್ ಸ್ಪ್ರೇ ಮಾಡಿದ ವಿಡಿಯೋವೊಂದು ಕಳೆದ ಕೆಲ ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಉತ್ತರ ಪ್ರದೇಶದ ಝಾನ್ಸಿಯಲ್ಲಿ ಈ ಘಟನೆ ನಡೆದಿದ್ದು, ಝಾನ್ಸಿಯ ನವಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಓರ್ವ ಆರೋಪಿಯನ್ನೂ ಬಂಧಿಸಲಾಗಿದೆ. ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಬಂಧಿತ ಆರೋಪಿ ಮುಸ್ಲಿಂ ಎಂದು ಪ್ರಕರಣಕ್ಕೆ ಕೋಮು ಬಣ್ಣ ಹಚ್ಚಲಾಗಿದೆ.

ನಾಗೇಶ್ ಪ್ರೀತಮ್ ಎಂಬವರು ಸೆಪ್ಟೆಂಬರ್ 24ರಂದು ತನ್ನ ಫೇಸ್‌ಬುಕ್ ಖಾತೆಯಲ್ಲಿ ವಿಡಿಯೋ ಹಂಚಿಕೊಂಡು ” ಸೈಕಲ್‌ ಅಲ್ಲಿ ಹೋಗುತ್ತಿದ್ದ ಅಮಾಯಕ ವೃದ್ದನಿಗೆ ಮುಸ್ಲಿಂ ಯುವಕ ಅನುಚಿತ ವರ್ತನೆ ಯುಪಿ ಪೊಲೀಸರಿಗೆ ಭರ್ಜರಿ ಬ್ಯಾಟಿಂಗ್” ಎಂದು ಬರೆದುಕೊಂಡಿದ್ದರು.

ಅರುಣ್ ಕುಮಾರ್ ಹಿಂದೂ ಎಂಬ ಎಕ್ಸ್‌ ಖಾತೆಯಲ್ಲೂ ಸೆಪ್ಟೆಂಬರ್ 26ರಂದು ವಿಡಿಯೋ ಹಂಚಿಕೊಂಡು ” ತನ್ನ ಪಾಡಿಗೆ ಹೋಗುತ್ತಿದ್ದ ಅಮಾಯಕ ವೃದ್ಧನಿಗೆ ಪುಂಡ ಮುಸ್ಲಿಂ ಯುವಕರಿಂದ ಅನುಚಿತ ವರ್ತನೆ. ಆದರೆ ನಂತರ ನಡೆದಿದ್ದು ಯುಪಿ ಪೊಲೀಸರ ಕಾರ್ಯಾಚರಣೆ. ಈ ರೀತಿ ಕರ್ನಾಟಕದಲ್ಲೂ ಆಗಬೇಕು. ಆಗ ಈ ವೀಲಿಂಗ್ ಮಾಡುವ ಮುಸ್ಲಿಂ ಯುವಕರಿಗೆ ಬಿಸಿ ಮುಟ್ಟುತ್ತದೆ” ಎಂದು ಬರೆದುಕೊಂಡಿದ್ದರು.

ಫ್ಯಾಕ್ಟ್‌ಚೆಕ್ : ಮುಸ್ಲಿಂ ಯುವಕ ವೃದ್ದನಿಗೆ ಮುಖಕ್ಕೆ ಸ್ಪ್ರೇ ಮಾಡಿದ್ದಾನೆ ಎಂಬ ವಿಡಿಯೋ ಕುರಿತು ನಾವು ಸತ್ಯಾಸತ್ಯತೆ ಪರಿಶೀಲನೆ ನಡೆಸಿದ್ದೇವೆ.

ಪ್ರಕರಣದ ಕುರಿತು ನಾವು ಮಾಹಿತಿ ಹುಡುಕಿದಾಗ ಅದಕ್ಕೆ ಸಂಬಂಧಿಸಿದಂತೆ ಅನೇಕ ವರದಿಗಳು ನಮಗೆ ಲಭ್ಯವಾಗಿದೆ.

ಸೆಪ್ಟೆಂಬರ್ 24,2024ರಂದು ನ್ಯೂಸ್‌ 18 ಈ ಕುರಿತು ವರದಿ ಪ್ರಕಟಿಸಿತ್ತು. ವರದಿಯಲ್ಲಿ “ಝಾನ್ಸಿಯ ನವಾಬಾದ್ ಪ್ರದೇಶದ ಎಲೈಟ್ -ಚಿತ್ರಾ ರಸ್ತೆಯ ಮೇಲ್ಸೇತುವೆ ಬಳಿ ಇಬ್ಬರು ಬೈಕ್ ಸವಾರರು ವೃದ್ದರೊಬ್ಬರ ಮುಖಕ್ಕೆ ನೊರೆ ಎರಚಿ ತಮ್ಮ ಮೊಬೈಲ್‌ನಲ್ಲಿ ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದಾರೆ. ಅದನ್ನು ಲೈಕ್ಸ್‌ಗೋಸ್ಕರ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋ ವೈರಲ್ ಆಗಿ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾದ ಬಳಿಕ ಪೊಲೀಸರು ವಿನಯ್ ಯಾದವ್ ಎಂಬ ಆರೋಪಿಯನ್ನು ಬಂಧಿಸಿದ್ದಾರೆ. ಆತ ಯೂಟ್ಯೂಬರ್” ಎಂದು ಪೊಲೀಸರು ತಿಳಿಸಿರುವುದಾಗಿ ಹೇಳಲಾಗಿತ್ತು.

ಸೆಪ್ಟೆಂಬರ್ 24ರಂದು ಹಿಂದುಸ್ತಾನ್ ಟೈಮ್ಸ್ ಕೂಡ ವಿಡಿಯೋ ಕುರಿತು ವರದಿ ಪ್ರಕಟಿಸಿತ್ತು. ಅದರಲ್ಲಿ ವೃದ್ದನ ಮುಖಕ್ಕೆ ಫೋಮ್ ಸ್ಪ್ರೇ ಮಾಡಿ ವಿಕೃತಿ ಮೆರೆದ ಯೂಟ್ಯೂಬರ್ ವಿನಯ್ ಯಾದವ್‌ನನ್ನು ಪೊಲೀಸರು ಬಂಧಿಸಿದ್ದಾರೆ” ಎಂದು ಹೇಳಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಝಾನ್ಸಿ ಪೊಲೀಸರ ಅಧಿಕೃತ ಎಕ್ಸ್‌ ಖಾತೆಯಲ್ಲಿ ಪೊಲೀಸ್ ಅಧೀಕ್ಷರ ಸ್ಪಷ್ಟನೆಯ ವಿಡಿಯೋ ಕೂಡ ಅಪ್ಲೋಡ್ ಮಾಡಲಾಗಿತ್ತು. ವಿಡಿಯೋದಲ್ಲಿ ಪೊಲೀಸ್ ಅಧೀಕ್ಷರು ಆರೋಪಿ ವಿನಯ್ ಯಾದವ್ ಎಂದು ಹೇಳಿದ್ದಾರೆ.

ಸೆಪ್ಟೆಂಬರ್ 24ರಂದು ನವಭಾರತ್ ಟೈಮ್ಸ್ ಪ್ರಕಟಿಸಿದ ವರದಿಯಲ್ಲಿ ” ನಂದನಪುರ ನಿವಾಸಿ ಕಾನ್ಶಿರಾಂ ಪ್ರಜಾಪತಿ ಎಂಬವರ ದೂರು ಆಧರಿಸಿ ಪ್ರಕರಣ ದಾಖಲಾಗಿದೆ. ಒಟ್ಟು ಮೂವರು ಆರೋಪಿಗಳಾದ ಖೋಡಾನ್ ಗ್ರಾಮದ ವಿನಯ್ ಯಾದವ್, ಪಾಲಿ ಪಹಾರಿ ಗ್ರಾಮದ ರಿತೇಶ್ ಕೇವತ್ ಮತ್ತು ಡೈಲಿ ಗ್ರಾಮದ ಆರ್ಯನ್ ಶ್ರೀವಾಸ್ತವ್ ವಿರುದ್ಧ ಪ್ರಕರಣ ದಾಖಲಿಸಿರುವ ಪೊಲೀಸರು, ಓರ್ವ ಆರೋಪಿ ವಿನಯ್ ಯಾದವ್‌ನನ್ನು ಬಂಧಿಸಿದ್ದಾರೆ. ಉಳಿದವರ ಬಂಧನಕ್ಕೆ ಶೋಧ ನಡೆಸುತ್ತಿದ್ದಾರೆ” ಎಂದು ಹೇಳಲಾಗಿದೆ.

ಒಟ್ಟಿನಲ್ಲಿ ಸೈಕಲ್‌ನಲ್ಲಿ ಹೋಗುತ್ತಿದ್ದ ವೃದ್ದನ ಮುಖಕ್ಕೆ ಸ್ಪ್ರೇ ಮಾಡಿದ ಆರೋಪಿಗಳು ಮುಸ್ಲಿಮರಲ್ಲ ಎಂಬುವುದು ವರದಿಗಳಿಂದ ತಿಳಿದು ಬಂದಿದೆ.

ಈ ಫ್ಯಾಕ್ಟ್‌ಚೆಕ್ ಮೂಲಕ ಆರೋಪಿಗಳನ್ನು ಧರ್ಮದ ಆಧಾರದಲ್ಲಿ ಗುರುತಿಸುವ ಪ್ರಯತ್ನ ನಮ್ಮದಲ್ಲ. ಕೆಲವರು ಪ್ರಕರಣಕ್ಕೆ ಕೋಮು ಬಣ್ಣ ಬಳಿದ ಕಾರಣ ಜನರಿಗೆ ಸತ್ಯ ತಿಳಿಸುವ ಪ್ರಯತ್ನ ಮಾಡಿದ್ದೇವೆ.

ಇದನ್ನೂ ಓದಿ : FACT CHECK | ಮಹಾಲಕ್ಷ್ಮಿ ಕೊಲೆ : ಅಶ್ರಫ್‌ನನ್ನು ಕಟಕಟೆಯಲ್ಲಿ ನಿಲ್ಲಿಸಿದ ಸುಳ್ಳು ಸುದ್ದಿ ಜಾಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...