ಪೆಟ್ರೋಲ್ ಮತ್ತು ಡೀಸೆಲ್ ಅನ್ನು ಸರಕು ಮತ್ತು ಸೇವಾ ತೆರಿಗೆ(ಜಿಎಸ್ಟಿ) ವ್ಯಾಪ್ತಿಗೆ ತರುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಒಮ್ಮತ ಮೂಡಿಸಲು ಪ್ರಯತ್ನಿಸುತ್ತಿದೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಶುಕ್ರವಾರ ಹೇಳಿದ್ದಾರೆ. ಇಂಧನದ ಮೇಲಿನ ಜಿಎಸ್ಟಿ ಜಾರಿಯಲ್ಲಿನ ಪ್ರಮುಖ ಅಡಚಣೆಯನ್ನು ಕೇಂದ್ರ ಸಚಿವ ಹರ್ದೀಪ್ ಸಿಂಗ್ ಎತ್ತಿ ತೋರಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಪುಣೆ ಇಂಟರ್ನ್ಯಾಶನಲ್ ಸೆಂಟರ್ನ (ಪಿಐಸಿ) 14ನೇ ಸಂಸ್ಥಾಪನಾ ದಿನದ ಉಪನ್ಯಾಸದಲ್ಲಿ ಮಾತನಾಡಿದ ಅವರು, “ಮುಂಬರುವ ದಶಕದಲ್ಲಿ ಭಾರತದ ಇಂಧನ ಭದ್ರತೆಯನ್ನು ಹೆಚ್ಚಿಸುವ ತಂತ್ರ ಮತ್ತು ಕ್ರಮಗಳು” ಕುರಿತು ಉಪನ್ಯಾಸ ನೀಡಿದ ಪುರಿ, “ಪೆಟ್ರೋಲ್ ಮತ್ತು ಡೀಸೆಲ್ ಅನ್ನು ಜಿಎಸ್ಟಿ ವ್ಯಾಪ್ತಿಗೆ ತರಲು ನಾನು ಸಲಹೆಯನ್ನು ಕೇಳಿದ್ದೇನೆ. ಈಗ ಜಿಎಸ್ಟಿ ಅಡಿಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಅನ್ನು ತರಬೇಕು ಎಂದು ನಾನು ಬಹಳ ಸಮಯದಿಂದ ಪ್ರತಿಪಾದಿಸುತ್ತಾ ಬಂದಿದ್ದೇನೆ.” ಎಂದು ಹೇಳಿದ್ದಾರೆ.
“ಈಗ ನನ್ನ ಹಿರಿಯ ಸಹೋದ್ಯೋಗಿ, ಹಣಕಾಸು ಸಚಿವರು ಕೂಡ ಹಲವಾರು ಸಂದರ್ಭಗಳಲ್ಲಿ ಇಂಧನವನ್ನು ಜಿಎಸ್ಟಿ ಅಡಿಯಲ್ಲಿ ತರುವ ಬಗ್ಗೆ ಮಾತನಾಡಿದ್ದಾರೆ ಎಂದು ನನಗೆ ಖಚಿತವಾಗಿದೆ” ಎಂದು ಹೇಳಿದ್ದಾರೆ.
ಇಂಧನದ ಮೇಲಿನ ಜಿಎಸ್ಟಿಯನ್ನು ಪ್ರತಿಪಾದಿಸುವ ವೇಳೆ ಅದರ ಅನುಷ್ಠಾನದಲ್ಲಿನ ಪ್ರಮುಖ ಅಡಚಣೆಯನ್ನು ಸಹ ಎತ್ತಿ ಸಚಿವರು ತೋರಿಸಿದ್ದಾರೆ. ಇದಕ್ಕೆ ಎಲ್ಲಾ ರಾಜ್ಯಗಳ ಅನುಮೋದನೆಯ ಅಗತ್ಯವಿದೆ ಎಂದ ಅವರು, ಪೆಟ್ರೋಲ್ ಮತ್ತು ಡೀಸೆಲ್ ಅವರಿಗೆ ಗಮನಾರ್ಹ ಆದಾಯವನ್ನು ಉತ್ಪಾದಿಸುವ ಕಾರಣ ಇದು ತುಂಬಾ ಸವಾಲಿನ ಸಂಗತಿಯಾಗಿದೆ ಎಂದು ಅವರು ಹೇಳಿದ್ದಾರೆ.
ಮದ್ಯ ಮತ್ತು ಇಂಧನವು ಪ್ರಮುಖ ಆದಾಯದ ಮೂಲಗಳಾಗಿರುವುದರಿಂದ ರಾಜ್ಯಗಳು ಈ ಕ್ರಮವನ್ನು ಒಪ್ಪಿಕೊಳ್ಳುವ ಸಾಧ್ಯತೆಯಿಲ್ಲ ಎಂದು ಪುರಿ ಒಪ್ಪಿಕೊಂಡಿದ್ದಾರೆ. ಜಿಎಸ್ಟಿ ಕೌನ್ಸಿಲ್ನಲ್ಲಿ ಈ ವಿಷಯವನ್ನು ಚರ್ಚಿಸಲು ಕೇರಳ ಹೈಕೋರ್ಟ್ ಸೂಚಿಸಿದೆ, ಆದರೆ ಕೇರಳದ ಹಣಕಾಸು ಸಚಿವರು ಒಪ್ಪಲಿಲ್ಲ ಎಂದು ಅವರು ಹೇಳಿದ್ದಾರೆ. ಹೆಚ್ಚುವರಿ ವ್ಯಾಟ್ ಅನ್ನು ಬಿಟ್ಟುಕೊಡಲು ಬಿಜೆಪಿಯೇತರ ರಾಜ್ಯಗಳು ಸಿದ್ಧರಿಲ್ಲ ಎಂದು ಅವರು ಹೇಳಿದ್ದಾರೆ.
ವಿಡಿಯೊ ನೋಡಿ: ದಲಿತ ಸಮುದಾಯಗಳ ಒಡಕಿನಲ್ಲೂ ಒಗ್ಗಟ್ಟಿದೆ: ಅಗ್ರಹಾರ ಕೃಷ್ಣಮೂರ್ತಿ


