Homeಕರ್ನಾಟಕಬೆಂಗಳೂರು: 122 ಪ್ರಕರಣಗಳಿಗೆ ಬೇಕಾಗಿದ್ದ 10 ಸೈಬರ್ ವಂಚಕರ ಬಂಧನ

ಬೆಂಗಳೂರು: 122 ಪ್ರಕರಣಗಳಿಗೆ ಬೇಕಾಗಿದ್ದ 10 ಸೈಬರ್ ವಂಚಕರ ಬಂಧನ

- Advertisement -
- Advertisement -

ಭಾರತದಾದ್ಯಂತ ಸುಮಾರು 122 ಪ್ರಕರಣಗಳಲ್ಲಿ ಬೇಕಾಗಿದ್ದ 10 ಸೈಬರ್ ವಂಚಕರನ್ನು ಬೆಂಗಳೂರು ಉತ್ತರ ಸೆನ್‌ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಆನ್‌ಲೈನ್ ಟಾಸ್ಕ್ ಮೂಲಕ ಅಥವಾ ಆನ್‌ಲೈನ್ ಉದ್ಯೋಗ ವಂಚನೆಯ ಮೂಲಕ ಜನರನ್ನು ವಂಚಿಸುತ್ತಿದ್ದರು. ಪ್ರಕರಣದ ಕಿಂಗ್‌ಪಿನ್‌ಗಳು ಚೀನಾದಿಂದ ಕಾರ್ಯನಿರ್ವಹಿಸುತ್ತಿದ್ದಾರೆ ಎನ್ನಲಾಗಿದೆ.122 ಪ್ರಕರಣಗಳಿಗೆ ಬೇಕಾಗಿದ್ದ 10 ಸೈಬರ್ ವಂಚಕರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

10 ಆರೋಪಿಗಳ ಪೈಕಿ ಮೂವರನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲುಕ್ ಔಟ್ ಸುತ್ತೋಲೆ (ಎಲ್‌ಒಸಿ) ಮೂಲಕ ಬಂಧಿಸಲಾಗಿದೆ. ಆರೋಪಿಗಳು ಪೀಣ್ಯದ ನೆಲಗದರನಹಳ್ಳಿಯಲ್ಲಿರುವ ಕಚೇರಿ ಜಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದರು ಎಂದು ವರದಿಯಾಗಿದೆ. ಮಹಿಳೆಯೊಬ್ಬರು ಸುಮಾರು 25 ಲಕ್ಷ ರೂಪಾಯಿ ಕಳೆದುಕೊಂಡಿದ್ದರು. ಅವರು ಜುಲೈ 3, 2024 ರಂದು ಸೆನ್ ಪೊಲೀಸರಿಗೆ ದೂರು ನೀಡಿದ್ದು, ಈ ದೂರಿನ ಅನ್ವಯ ಆರೋಪಿಗಳ ಬಂಧನ ನಡೆದಿದೆ.

ಸೆನ್ ಪೊಲೀಸರು 72 ಮೊಬೈಲ್ ಫೋನ್‌ಗಳು, 182 ಡೆಬಿಟ್ ಕಾರ್ಡ್‌ಗಳು, ವಿವಿಧ ಟೆಲಿಕಾಂ ಆಪರೇಟರ್‌ಗಳ 133 ಸಿಮ್ ಕಾರ್ಡ್‌ಗಳು, 127 ಬ್ಯಾಂಕ್ ಪಾಸ್‌ಬುಕ್‌ಗಳು ಮತ್ತು 1.74 ಲಕ್ಷ ರೂ ನಗದು ಹಾಗೂ ಆರೋಪಿಗಳು ಸಂತ್ರಸ್ತರಿಗೆ ವಂಚಿಸಲು ಬಳಸಿದ ಖಾತೆಗಳಲ್ಲಿ 7.34 ಲಕ್ಷ ರೂ. ವಶಪಡಿಸಿಕೊಂಡಿದ್ದಾರೆ.

ಇದನ್ನೂಓದಿ: ಜಿಎಸ್‌ಟಿ ಅಡಿಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ತರಲು ರಾಜ್ಯಗಳು ಅಡ್ಡಿ: ಕೇಂದ್ರ ಸಚಿವ

ಆರೋಪಿಗಳನ್ನು ಓಂ ಪ್ರಕಾಶ್, ಸೈಯದ್ ಯಾಹ್ಯಾ, ತೇಜಸ್, ಉಮರ್ ಫಾರೂಕ್, ಚೇತನ್, ಮೊಹಮ್ಮದ್ ಮಾಹೀನ್, ಮೊಹಮ್ಮದ್ ಮುಝಮ್ಮಿಲ್, ವಾಸಿಂ, ಸೈಯದ್ ಜೈದ್ ಮತ್ತು ಸಾಹಿ ಅಬ್ದುಲ್ ಅನನ್ ಎಂದು ಗುರುತಿಸಲಾಗಿದೆ. ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್‌ಸಿಆರ್‌ಬಿ) ಅಂಕಿಅಂಶಗಳ ಪ್ರಕಾರ, ಆರೋಪಿಗಳು 122 ಪ್ರಕರಣಗಳಲ್ಲಿ ಬೇಕಾಗಿದ್ದಾರೆ.

ಆರೋಪಿಗಳು ಸಾಮಾಜಿಕ ಮಾಧ್ಯಮದ ಮೂಲಕ ಸಂತ್ರಸ್ತರನ್ನು ಸಂಪರ್ಕಿಸಿ, ಆನ್‌ಲೈನ್‌ನಲ್ಲಿ ನೀಡಿದ ಕೆಲಸವನ್ನು ಪೂರ್ಣಗೊಳಿಸಲು ಹೇಳಿ ಪಾವತಿ ಮಾಡುವುದಾಗಿ ಆಮಿಷವೊಡ್ಡುತ್ತಿದ್ದರು. ಆಸಕ್ತರಾದ ಸಂತ್ರಸ್ತರನ್ನು ಆರೋಪಿಗಳು ರಚಿಸಿದ ಟೆಲಿಗ್ರಾಂ ಗುಂಪುಗಳಿಗೆ ಸೇರಿಸಲಾಗುತ್ತಿತ್ತು.

ಆರೋಪಿಗಳು ಮೊದಲು ಐಷಾರಾಮಿ ಹೋಟೆಲ್‌ಗಳ ರಿವೀವ್ ಬರೆಯುವಂತೆ ಮತ್ತು ಅದಕ್ಕಾಗಿ 150 ರಿಂದ 200 ರೂಪಾಯಿಗಳನ್ನು ನೀಡುವ ಮೂಲಕ ಸಂತ್ರಸ್ತರ ವಿಶ್ವಾಸವನ್ನು ಗಳಿಸುತ್ತಿದ್ದರು. ಸಂತ್ರಸ್ತರನ್ನು ಬಲೆಗೆ ಬೀಳಿಸಲು ಹೆಚ್ಚುವರಿ ಬೋನಸ್‌ಗಳನ್ನು ಸಹ ನೀಡಲಾಗುತ್ತಿತ್ತು.

ಇದನ್ನೂಓದಿ:  ವಿಶ್ವಸಂಸ್ಥೆ ಅಧಿವೇಶನ : ಇಸ್ರೇಲ್ ಪ್ರಧಾನಿ ಭಾಷಣ ಆರಂಭಿಸುತ್ತಿದ್ದಂತೆ ಎದ್ದು ಹೊರ ನಡೆದ ವಿವಿಧ ರಾಷ್ಟ್ರಗಳ ಪ್ರತಿನಿಧಿಗಳು

ಅವರ ವಿಶ್ವಾಸವನ್ನು ಗಳಿಸಿದ ನಂತರ, ಹೆಚ್ಚಿನ ಲಾಭಕ್ಕಾಗಿ ಕ್ರಿಪ್ಟೋಕರೆನ್ಸಿ ವ್ಯಾಪಾರದಲ್ಲಿ ಹೂಡಿಕೆ ಮಾಡಲು ಸಂತ್ರಸ್ತರನ್ನು ಕೇಳಲಾಗುತ್ತಿತ್ತು. ಅದರಂತೆ ಬಾಗಲಗುಂಟೆಯ ಟಿ ದಾಸರಹಳ್ಳಿ ನಿವಾಸಿ ಮಹಿಳೆ 25 ಲಕ್ಷ ರೂಪಾಯಿ ಕಳೆದುಕೊಂಡಿದ್ದು, ಪ್ರಕರಣ ದಾಖಲಿಸಿದ್ದರು.122 ಪ್ರಕರಣಗಳಿಗೆ ಬೇಕಾಗಿದ್ದ 10 ಸೈಬರ್ ವಂಚಕರ ಬಂಧನ

ಬೆಂಗಳೂರಿನಲ್ಲಿ ಬ್ಯಾಂಕ್ ಖಾತೆಗಳ ಮೂಲಕ ವಹಿವಾಟು ನಡೆದಿರುವುದನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಈ ಖಾತೆಗಳ ವಿವರಗಳನ್ನು ಆಧರಿಸಿ, ಏಳು ಆರೋಪಿಗಳನ್ನು ಮೊದಲು ಆರ್‌ಟಿ ನಗರ ಬಳಿ ಬಂಧಿಸಲಾಯಿತು. ಅವರು ಚೀನಾದ ಕಿಂಗ್‌ಪಿನ್‌ಗಳ ಆಜ್ಞೆಯ ಮೇರೆಗೆ ಕಾರ್ಯನಿರ್ವಹಿಸುತ್ತಿದ್ದರು. ಚೀನಾಕ್ಕೆ ತೆರಳಿದ್ದ ಇತರ ಮೂವರು ಆರೋಪಿಗಳು ಸೆ.15ರಂದು ವಾಪಸ್ ಬಂದಾಗ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದ್ದು, ಪೊಲೀಸರು ಎಲ್ಲ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

ಪೀಣ್ಯದಲ್ಲಿರುವ ಅವರ ಕಚೇರಿ ಮೇಲೂ ಪೊಲೀಸರು ದಾಳಿ ನಡೆಸಿ ಕೆಲ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳ ಪೈಕಿ ಮೂವರು ಸಂಪಿಗೆಹಳ್ಳಿಯ ಪಿಜಿ ಸೌಲಭ್ಯದಲ್ಲಿ ತಂಗಿದ್ದು, ದಾಳಿ ನಡೆಸಲಾಗಿದೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈ ತಂಡದ ವಿರುದ್ಧ ಆಂಧ್ರಪ್ರದೇಶ, ಒಡಿಶಾ, ದೆಹಲಿ, ಗುಜರಾತ್, ತಮಿಳುನಾಡು ಮತ್ತಿತರ ರಾಜ್ಯಗಳಲ್ಲಿ ಪ್ರಕರಣಗಳು ದಾಖಲಾಗಿವೆ ಎಂದು ವರದಿಯಾಗಿದೆ.

ವಿಡಿಯೊ ನೋಡಿ: ದಲಿತರಿಗೆ ಅಧಿಕಾರ ಸಿಕ್ಕಾಗ ಕೇಳುವಷ್ಟು ಪ್ರಶ್ನೆಗಳನ್ನು ಬೇರೆಯವರಿಗೆ ಸಿಕ್ಕಾಗ ಕೇಳಲ್ಲ: ಹೆಚ್.ಡಿ. ಉಮಾಶಂಕರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...