Homeಕರ್ನಾಟಕಬೆಂಗಳೂರು: 122 ಪ್ರಕರಣಗಳಿಗೆ ಬೇಕಾಗಿದ್ದ 10 ಸೈಬರ್ ವಂಚಕರ ಬಂಧನ

ಬೆಂಗಳೂರು: 122 ಪ್ರಕರಣಗಳಿಗೆ ಬೇಕಾಗಿದ್ದ 10 ಸೈಬರ್ ವಂಚಕರ ಬಂಧನ

- Advertisement -
- Advertisement -

ಭಾರತದಾದ್ಯಂತ ಸುಮಾರು 122 ಪ್ರಕರಣಗಳಲ್ಲಿ ಬೇಕಾಗಿದ್ದ 10 ಸೈಬರ್ ವಂಚಕರನ್ನು ಬೆಂಗಳೂರು ಉತ್ತರ ಸೆನ್‌ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಆನ್‌ಲೈನ್ ಟಾಸ್ಕ್ ಮೂಲಕ ಅಥವಾ ಆನ್‌ಲೈನ್ ಉದ್ಯೋಗ ವಂಚನೆಯ ಮೂಲಕ ಜನರನ್ನು ವಂಚಿಸುತ್ತಿದ್ದರು. ಪ್ರಕರಣದ ಕಿಂಗ್‌ಪಿನ್‌ಗಳು ಚೀನಾದಿಂದ ಕಾರ್ಯನಿರ್ವಹಿಸುತ್ತಿದ್ದಾರೆ ಎನ್ನಲಾಗಿದೆ.122 ಪ್ರಕರಣಗಳಿಗೆ ಬೇಕಾಗಿದ್ದ 10 ಸೈಬರ್ ವಂಚಕರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

10 ಆರೋಪಿಗಳ ಪೈಕಿ ಮೂವರನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲುಕ್ ಔಟ್ ಸುತ್ತೋಲೆ (ಎಲ್‌ಒಸಿ) ಮೂಲಕ ಬಂಧಿಸಲಾಗಿದೆ. ಆರೋಪಿಗಳು ಪೀಣ್ಯದ ನೆಲಗದರನಹಳ್ಳಿಯಲ್ಲಿರುವ ಕಚೇರಿ ಜಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದರು ಎಂದು ವರದಿಯಾಗಿದೆ. ಮಹಿಳೆಯೊಬ್ಬರು ಸುಮಾರು 25 ಲಕ್ಷ ರೂಪಾಯಿ ಕಳೆದುಕೊಂಡಿದ್ದರು. ಅವರು ಜುಲೈ 3, 2024 ರಂದು ಸೆನ್ ಪೊಲೀಸರಿಗೆ ದೂರು ನೀಡಿದ್ದು, ಈ ದೂರಿನ ಅನ್ವಯ ಆರೋಪಿಗಳ ಬಂಧನ ನಡೆದಿದೆ.

ಸೆನ್ ಪೊಲೀಸರು 72 ಮೊಬೈಲ್ ಫೋನ್‌ಗಳು, 182 ಡೆಬಿಟ್ ಕಾರ್ಡ್‌ಗಳು, ವಿವಿಧ ಟೆಲಿಕಾಂ ಆಪರೇಟರ್‌ಗಳ 133 ಸಿಮ್ ಕಾರ್ಡ್‌ಗಳು, 127 ಬ್ಯಾಂಕ್ ಪಾಸ್‌ಬುಕ್‌ಗಳು ಮತ್ತು 1.74 ಲಕ್ಷ ರೂ ನಗದು ಹಾಗೂ ಆರೋಪಿಗಳು ಸಂತ್ರಸ್ತರಿಗೆ ವಂಚಿಸಲು ಬಳಸಿದ ಖಾತೆಗಳಲ್ಲಿ 7.34 ಲಕ್ಷ ರೂ. ವಶಪಡಿಸಿಕೊಂಡಿದ್ದಾರೆ.

ಇದನ್ನೂಓದಿ: ಜಿಎಸ್‌ಟಿ ಅಡಿಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ತರಲು ರಾಜ್ಯಗಳು ಅಡ್ಡಿ: ಕೇಂದ್ರ ಸಚಿವ

ಆರೋಪಿಗಳನ್ನು ಓಂ ಪ್ರಕಾಶ್, ಸೈಯದ್ ಯಾಹ್ಯಾ, ತೇಜಸ್, ಉಮರ್ ಫಾರೂಕ್, ಚೇತನ್, ಮೊಹಮ್ಮದ್ ಮಾಹೀನ್, ಮೊಹಮ್ಮದ್ ಮುಝಮ್ಮಿಲ್, ವಾಸಿಂ, ಸೈಯದ್ ಜೈದ್ ಮತ್ತು ಸಾಹಿ ಅಬ್ದುಲ್ ಅನನ್ ಎಂದು ಗುರುತಿಸಲಾಗಿದೆ. ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್‌ಸಿಆರ್‌ಬಿ) ಅಂಕಿಅಂಶಗಳ ಪ್ರಕಾರ, ಆರೋಪಿಗಳು 122 ಪ್ರಕರಣಗಳಲ್ಲಿ ಬೇಕಾಗಿದ್ದಾರೆ.

ಆರೋಪಿಗಳು ಸಾಮಾಜಿಕ ಮಾಧ್ಯಮದ ಮೂಲಕ ಸಂತ್ರಸ್ತರನ್ನು ಸಂಪರ್ಕಿಸಿ, ಆನ್‌ಲೈನ್‌ನಲ್ಲಿ ನೀಡಿದ ಕೆಲಸವನ್ನು ಪೂರ್ಣಗೊಳಿಸಲು ಹೇಳಿ ಪಾವತಿ ಮಾಡುವುದಾಗಿ ಆಮಿಷವೊಡ್ಡುತ್ತಿದ್ದರು. ಆಸಕ್ತರಾದ ಸಂತ್ರಸ್ತರನ್ನು ಆರೋಪಿಗಳು ರಚಿಸಿದ ಟೆಲಿಗ್ರಾಂ ಗುಂಪುಗಳಿಗೆ ಸೇರಿಸಲಾಗುತ್ತಿತ್ತು.

ಆರೋಪಿಗಳು ಮೊದಲು ಐಷಾರಾಮಿ ಹೋಟೆಲ್‌ಗಳ ರಿವೀವ್ ಬರೆಯುವಂತೆ ಮತ್ತು ಅದಕ್ಕಾಗಿ 150 ರಿಂದ 200 ರೂಪಾಯಿಗಳನ್ನು ನೀಡುವ ಮೂಲಕ ಸಂತ್ರಸ್ತರ ವಿಶ್ವಾಸವನ್ನು ಗಳಿಸುತ್ತಿದ್ದರು. ಸಂತ್ರಸ್ತರನ್ನು ಬಲೆಗೆ ಬೀಳಿಸಲು ಹೆಚ್ಚುವರಿ ಬೋನಸ್‌ಗಳನ್ನು ಸಹ ನೀಡಲಾಗುತ್ತಿತ್ತು.

ಇದನ್ನೂಓದಿ:  ವಿಶ್ವಸಂಸ್ಥೆ ಅಧಿವೇಶನ : ಇಸ್ರೇಲ್ ಪ್ರಧಾನಿ ಭಾಷಣ ಆರಂಭಿಸುತ್ತಿದ್ದಂತೆ ಎದ್ದು ಹೊರ ನಡೆದ ವಿವಿಧ ರಾಷ್ಟ್ರಗಳ ಪ್ರತಿನಿಧಿಗಳು

ಅವರ ವಿಶ್ವಾಸವನ್ನು ಗಳಿಸಿದ ನಂತರ, ಹೆಚ್ಚಿನ ಲಾಭಕ್ಕಾಗಿ ಕ್ರಿಪ್ಟೋಕರೆನ್ಸಿ ವ್ಯಾಪಾರದಲ್ಲಿ ಹೂಡಿಕೆ ಮಾಡಲು ಸಂತ್ರಸ್ತರನ್ನು ಕೇಳಲಾಗುತ್ತಿತ್ತು. ಅದರಂತೆ ಬಾಗಲಗುಂಟೆಯ ಟಿ ದಾಸರಹಳ್ಳಿ ನಿವಾಸಿ ಮಹಿಳೆ 25 ಲಕ್ಷ ರೂಪಾಯಿ ಕಳೆದುಕೊಂಡಿದ್ದು, ಪ್ರಕರಣ ದಾಖಲಿಸಿದ್ದರು.122 ಪ್ರಕರಣಗಳಿಗೆ ಬೇಕಾಗಿದ್ದ 10 ಸೈಬರ್ ವಂಚಕರ ಬಂಧನ

ಬೆಂಗಳೂರಿನಲ್ಲಿ ಬ್ಯಾಂಕ್ ಖಾತೆಗಳ ಮೂಲಕ ವಹಿವಾಟು ನಡೆದಿರುವುದನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಈ ಖಾತೆಗಳ ವಿವರಗಳನ್ನು ಆಧರಿಸಿ, ಏಳು ಆರೋಪಿಗಳನ್ನು ಮೊದಲು ಆರ್‌ಟಿ ನಗರ ಬಳಿ ಬಂಧಿಸಲಾಯಿತು. ಅವರು ಚೀನಾದ ಕಿಂಗ್‌ಪಿನ್‌ಗಳ ಆಜ್ಞೆಯ ಮೇರೆಗೆ ಕಾರ್ಯನಿರ್ವಹಿಸುತ್ತಿದ್ದರು. ಚೀನಾಕ್ಕೆ ತೆರಳಿದ್ದ ಇತರ ಮೂವರು ಆರೋಪಿಗಳು ಸೆ.15ರಂದು ವಾಪಸ್ ಬಂದಾಗ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದ್ದು, ಪೊಲೀಸರು ಎಲ್ಲ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

ಪೀಣ್ಯದಲ್ಲಿರುವ ಅವರ ಕಚೇರಿ ಮೇಲೂ ಪೊಲೀಸರು ದಾಳಿ ನಡೆಸಿ ಕೆಲ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳ ಪೈಕಿ ಮೂವರು ಸಂಪಿಗೆಹಳ್ಳಿಯ ಪಿಜಿ ಸೌಲಭ್ಯದಲ್ಲಿ ತಂಗಿದ್ದು, ದಾಳಿ ನಡೆಸಲಾಗಿದೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈ ತಂಡದ ವಿರುದ್ಧ ಆಂಧ್ರಪ್ರದೇಶ, ಒಡಿಶಾ, ದೆಹಲಿ, ಗುಜರಾತ್, ತಮಿಳುನಾಡು ಮತ್ತಿತರ ರಾಜ್ಯಗಳಲ್ಲಿ ಪ್ರಕರಣಗಳು ದಾಖಲಾಗಿವೆ ಎಂದು ವರದಿಯಾಗಿದೆ.

ವಿಡಿಯೊ ನೋಡಿ: ದಲಿತರಿಗೆ ಅಧಿಕಾರ ಸಿಕ್ಕಾಗ ಕೇಳುವಷ್ಟು ಪ್ರಶ್ನೆಗಳನ್ನು ಬೇರೆಯವರಿಗೆ ಸಿಕ್ಕಾಗ ಕೇಳಲ್ಲ: ಹೆಚ್.ಡಿ. ಉಮಾಶಂಕರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...