Homeಮುಖಪುಟಕೇರಳ | ಆಂಬ್ಯುಲೆನ್ಸ್‌ಗಳಿಗೆ ಪ್ರಮಾಣಿತ ದರ ಪರಿಚಯ; ದೇಶದಲ್ಲೆ ಮೊದಲು!

ಕೇರಳ | ಆಂಬ್ಯುಲೆನ್ಸ್‌ಗಳಿಗೆ ಪ್ರಮಾಣಿತ ದರ ಪರಿಚಯ; ದೇಶದಲ್ಲೆ ಮೊದಲು!

- Advertisement -
- Advertisement -

ಕೇರಳ ಸಾರಿಗೆ ಇಲಾಖೆಯು ರಾಜ್ಯದಾದ್ಯಂತ ಆಂಬ್ಯುಲೆನ್ಸ್‌ಗಳಿಗೆ ಪ್ರಮಾಣಿತ ಸುಂಕ ಮತ್ತು ದರಗಳನ್ನು ತಂದಿದ್ದು, ಮಿತಿಮೀರಿದ ಶುಲ್ಕಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸುವ ಪ್ರಯತ್ನ ಮಾಡಿದೆ. ಐದು ವರ್ಗದ ಆಂಬ್ಯುಲೆನ್ಸ್‌ಗಳಿಗೆ ಕನಿಷ್ಠ 20 ಕಿ.ಮೀ (ರಿಟರ್ನ್ ದೂರವನ್ನು ಒಳಗೊಂಡಂತೆ) ದರವನ್ನು ನಿಗದಿಪಡಿಸಲಾಗಿದೆ. ಈ ವರ್ಗಗಳಲ್ಲಿ ಮೂಲ ದರವು 600 ರೂ. ಗಳಿಂದ 2,500 ರೂ.ಗಳ ವರೆಗೆ ಇರುತ್ತದೆ.

ಹೊಸ ದರವನ್ನು ವಾಹನದ ಒಳಗೆ ಪ್ರದರ್ಶಿಸಬೇಕು ಎಂದು ಸರ್ಕಾರ ಹೇಳಿದ್ದು, ರಾಜ್ಯವೊಂದು ಆಂಬ್ಯುಲೆನ್ಸ್ ದರವನ್ನು ನಿಗದಿಪಡಿಸುತ್ತಿರುವುದು ದೇಶದಲ್ಲಿ ಇದೇ ಮೊದಲು ಎಂದು ಕೇರಳದ ಸಾರಿಗೆ ಸಚಿವ ಕೆ ಬಿ ಗಣೇಶ್ ಕುಮಾರ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಅಪಘಾತಕ್ಕೀಡಾದವರನ್ನು ಹತ್ತಿರದ ಆಸ್ಪತ್ರೆಗೆ ಉಚಿತವಾಗಿ ಸಾಗಿಸಲು ಆಂಬ್ಯುಲೆನ್ಸ್ ಮಾಲೀಕರ ಸಂಘಗಳು ಒಪ್ಪಿಕೊಂಡಿವೆ ಮತ್ತು ಎಲ್ಲಾ ಕ್ಯಾನ್ಸರ್ ರೋಗಿಗಳಿಗೆ ಮತ್ತು 12 ವರ್ಷದೊಳಗಿನವರಿಗೆ ಪ್ರತಿ ಕಿ.ಮೀಗೆ 2% ರಿಯಾಯಿತಿಯನ್ನು ನೀಡುತ್ತವೆ ಎಂದು ಸಚಿವರು ಹೇಳಿದ್ದಾರೆ.

ಫೋಟೊ ಕೃಪೆ: TNIE

BPL ಕಾರ್ಡ್ ಹೊಂದಿರುವವರು ಒಟ್ಟು ಪ್ರಯಾಣದ ಬಿಲ್‌ನಲ್ಲಿ 20% ರಿಯಾಯಿತಿಯನ್ನು ಪಡೆಯಲಿದ್ದಾರೆ. ಅಲ್ಲದೆ, ಮೊದಲ ಗಂಟೆಗೆ ಯಾವುದೇ ವೇಟಿಂಗ್ ಚಾರ್ಜ್ ಇರುವುದಿಲ್ಲ. ಆಂಬ್ಯುಲೆನ್ಸ್‌ಗಳ ದುರ್ಬಳಕೆ ತಡೆಯಲು ಸಾರಿಗೆ ಇಲಾಖೆಯು ಆಂಬ್ಯುಲೆನ್ಸ್ ಚಾಲಕರಿಗೆ ಐಡಿ ಕಾರ್ಡ್ ಮತ್ತು ನೇವಿ ಬ್ಲೂ ಶರ್ಟ್ ಮತ್ತು ಕಪ್ಪು ಪ್ಯಾಂಟ್ ಅನ್ನು ಸಮವಸ್ತ್ರವಾಗಿ ಪರಿಚಯಿಸಿದೆ.

ಇದನ್ನೂ ಓದಿ: ವಿಶ್ವಸಂಸ್ಥೆ ಅಧಿವೇಶನ : ಇಸ್ರೇಲ್ ಪ್ರಧಾನಿ ಭಾಷಣ ಆರಂಭಿಸುತ್ತಿದ್ದಂತೆ ಎದ್ದು ಹೊರ ನಡೆದ ವಿವಿಧ ರಾಷ್ಟ್ರಗಳ ಪ್ರತಿನಿಧಿಗಳು

ಜಾರಿ ಅಧಿಕಾರಿಗಳಿಂದ ಯಾದೃಚ್ಛಿಕ ತಪಾಸಣೆಯ ಜೊತೆಗೆ ವಾಹನದ ಚಲನೆಯನ್ನು ಪತ್ತೆಹಚ್ಚಲು ವಾಹನದೊಳಗೆ ಲಾಗ್ ಬುಕ್ ಅನ್ನು ಇರಿಸಲಾಗುತ್ತದೆ. ಈ ಕುರಿತು ಸಾರಿಗೆ ಆಯುಕ್ತರು ಶೀಘ್ರದಲ್ಲೇ ಆದೇಶ ಹೊರಡಿಸಲಿದ್ದಾರೆ ಎಂದು ವರದಿಯಾಗಿದೆ.

ಮೋಟಾರು ವಾಹನ ಇಲಾಖೆಯು ಎರ್ನಾಕುಲಂ, ಎಡಪ್ಪಲ್ ಮತ್ತು ತಿರುವನನ್-ತಪುರಂನಲ್ಲಿರುವ ತನ್ನ ಕೇಂದ್ರಗಳಲ್ಲಿ ಸುರಕ್ಷಿತ ಚಾಲನೆಯ ಕುರಿತು ಆಂಬ್ಯುಲೆನ್ಸ್ ಚಾಲಕರಿಗೆ ತರಬೇತಿ ನೀಡುತ್ತದೆ.

ಸಾರ್ವಜನಿಕರಿಗೆ ಹತ್ತಿರದ ಲಭ್ಯವಿರುವ ಆಂಬ್ಯುಲೆನ್ಸ್ ಅನ್ನು ಪತ್ತೆಹಚ್ಚಲು ಇಲಾಖೆಯು ವ್ಯವಸ್ಥೆಯನ್ನು ಪರಿಚಯಿಸಲಿದ್ದು, ಸಾರ್ವಜನಿಕರ ದೂರುಗಳನ್ನು ದಾಖಲಿಸಲು ಟೋಲ್ ಫ್ರೀ ಸಂಖ್ಯೆ 9188961100 ಯನ್ನು ಪರಿಚಯಿಸಲಾಗಿದೆ. ಆಂಬ್ಯುಲೆನ್ಸ್‌ಗಳಿಗೆ ಸಂಬಂಧಿಸಿದ ದೂರುಗಳನ್ನು ದಾಖಲಿಸಲು ಪ್ರತ್ಯೇಕವಾಗಿ ವಾಟ್ಸಾಪ್ ಸಂಖ್ಯೆಯನ್ನು ಪರಿಚಯಿಸಲು ಇಲಾಖೆ ಯೋಜಿಸಿದೆ.

ಮೊದಲ ಬಾರಿಗೆ ಕೇರಳವು ರಾಜ್ಯದಲ್ಲಿ ಆಂಬ್ಯುಲೆನ್ಸ್ ಸೇವೆಗಳಿಗೆ ಪ್ರಮಾಣಿತ ದರಗಳನ್ನು ಪರಿಚಯಿಸಿದೆ. ಅಪಘಾತಕ್ಕೊಳಗಾದವರನ್ನು ಹತ್ತಿರದ ಆಸ್ಪತ್ರೆಗೆ ಉಚಿತವಾಗಿ ಸಾಗಿಸಲಾಗುತ್ತದೆ ಮತ್ತು ಕ್ಯಾನ್ಸರ್ ರೋಗಿಗಳು, ಮಕ್ಕಳು ಮತ್ತು ಬಿಪಿಎಲ್ ಕುಟುಂಬಗಳಿಗೆ ರಿಯಾಯಿತಿ ನೀಡಲಾಗುತ್ತದೆ. ಸಾರ್ವಜನಿಕ ವ್ಯವಸ್ಥೆಯಲ್ಲಿ ಆಂಬ್ಯುಲೆನ್ಸ್‌ಗಳನ್ನು ಟ್ರ್ಯಾಕ್ ಮಾಡಬಹುದು” ಎಂದು ಮಾಜಿ ಸಚಿವ ಥೋಮಸ್ ಐಸಾಕ್ ಅವರು ಟ್ವಿಟರ್‌ನಲ್ಲಿ ಹೇಳಿದ್ದಾರೆ.ಕೇರಳ

ವಿಡಿಯೊ ನೋಡಿ: ಅಟ್ರಾಸಿಟಿ ಕಾದಂಬರಿ ಚರ್ಚೆಯಲ್ಲಿ ವಿಕಾಸ್ ಮತ್ತು ಗುರುಪ್ರಸಾದ್ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...