Homeಮುಖಪುಟಕೇರಳ | ಆಂಬ್ಯುಲೆನ್ಸ್‌ಗಳಿಗೆ ಪ್ರಮಾಣಿತ ದರ ಪರಿಚಯ; ದೇಶದಲ್ಲೆ ಮೊದಲು!

ಕೇರಳ | ಆಂಬ್ಯುಲೆನ್ಸ್‌ಗಳಿಗೆ ಪ್ರಮಾಣಿತ ದರ ಪರಿಚಯ; ದೇಶದಲ್ಲೆ ಮೊದಲು!

- Advertisement -
- Advertisement -

ಕೇರಳ ಸಾರಿಗೆ ಇಲಾಖೆಯು ರಾಜ್ಯದಾದ್ಯಂತ ಆಂಬ್ಯುಲೆನ್ಸ್‌ಗಳಿಗೆ ಪ್ರಮಾಣಿತ ಸುಂಕ ಮತ್ತು ದರಗಳನ್ನು ತಂದಿದ್ದು, ಮಿತಿಮೀರಿದ ಶುಲ್ಕಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸುವ ಪ್ರಯತ್ನ ಮಾಡಿದೆ. ಐದು ವರ್ಗದ ಆಂಬ್ಯುಲೆನ್ಸ್‌ಗಳಿಗೆ ಕನಿಷ್ಠ 20 ಕಿ.ಮೀ (ರಿಟರ್ನ್ ದೂರವನ್ನು ಒಳಗೊಂಡಂತೆ) ದರವನ್ನು ನಿಗದಿಪಡಿಸಲಾಗಿದೆ. ಈ ವರ್ಗಗಳಲ್ಲಿ ಮೂಲ ದರವು 600 ರೂ. ಗಳಿಂದ 2,500 ರೂ.ಗಳ ವರೆಗೆ ಇರುತ್ತದೆ.

ಹೊಸ ದರವನ್ನು ವಾಹನದ ಒಳಗೆ ಪ್ರದರ್ಶಿಸಬೇಕು ಎಂದು ಸರ್ಕಾರ ಹೇಳಿದ್ದು, ರಾಜ್ಯವೊಂದು ಆಂಬ್ಯುಲೆನ್ಸ್ ದರವನ್ನು ನಿಗದಿಪಡಿಸುತ್ತಿರುವುದು ದೇಶದಲ್ಲಿ ಇದೇ ಮೊದಲು ಎಂದು ಕೇರಳದ ಸಾರಿಗೆ ಸಚಿವ ಕೆ ಬಿ ಗಣೇಶ್ ಕುಮಾರ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಅಪಘಾತಕ್ಕೀಡಾದವರನ್ನು ಹತ್ತಿರದ ಆಸ್ಪತ್ರೆಗೆ ಉಚಿತವಾಗಿ ಸಾಗಿಸಲು ಆಂಬ್ಯುಲೆನ್ಸ್ ಮಾಲೀಕರ ಸಂಘಗಳು ಒಪ್ಪಿಕೊಂಡಿವೆ ಮತ್ತು ಎಲ್ಲಾ ಕ್ಯಾನ್ಸರ್ ರೋಗಿಗಳಿಗೆ ಮತ್ತು 12 ವರ್ಷದೊಳಗಿನವರಿಗೆ ಪ್ರತಿ ಕಿ.ಮೀಗೆ 2% ರಿಯಾಯಿತಿಯನ್ನು ನೀಡುತ್ತವೆ ಎಂದು ಸಚಿವರು ಹೇಳಿದ್ದಾರೆ.

ಫೋಟೊ ಕೃಪೆ: TNIE

BPL ಕಾರ್ಡ್ ಹೊಂದಿರುವವರು ಒಟ್ಟು ಪ್ರಯಾಣದ ಬಿಲ್‌ನಲ್ಲಿ 20% ರಿಯಾಯಿತಿಯನ್ನು ಪಡೆಯಲಿದ್ದಾರೆ. ಅಲ್ಲದೆ, ಮೊದಲ ಗಂಟೆಗೆ ಯಾವುದೇ ವೇಟಿಂಗ್ ಚಾರ್ಜ್ ಇರುವುದಿಲ್ಲ. ಆಂಬ್ಯುಲೆನ್ಸ್‌ಗಳ ದುರ್ಬಳಕೆ ತಡೆಯಲು ಸಾರಿಗೆ ಇಲಾಖೆಯು ಆಂಬ್ಯುಲೆನ್ಸ್ ಚಾಲಕರಿಗೆ ಐಡಿ ಕಾರ್ಡ್ ಮತ್ತು ನೇವಿ ಬ್ಲೂ ಶರ್ಟ್ ಮತ್ತು ಕಪ್ಪು ಪ್ಯಾಂಟ್ ಅನ್ನು ಸಮವಸ್ತ್ರವಾಗಿ ಪರಿಚಯಿಸಿದೆ.

ಇದನ್ನೂ ಓದಿ: ವಿಶ್ವಸಂಸ್ಥೆ ಅಧಿವೇಶನ : ಇಸ್ರೇಲ್ ಪ್ರಧಾನಿ ಭಾಷಣ ಆರಂಭಿಸುತ್ತಿದ್ದಂತೆ ಎದ್ದು ಹೊರ ನಡೆದ ವಿವಿಧ ರಾಷ್ಟ್ರಗಳ ಪ್ರತಿನಿಧಿಗಳು

ಜಾರಿ ಅಧಿಕಾರಿಗಳಿಂದ ಯಾದೃಚ್ಛಿಕ ತಪಾಸಣೆಯ ಜೊತೆಗೆ ವಾಹನದ ಚಲನೆಯನ್ನು ಪತ್ತೆಹಚ್ಚಲು ವಾಹನದೊಳಗೆ ಲಾಗ್ ಬುಕ್ ಅನ್ನು ಇರಿಸಲಾಗುತ್ತದೆ. ಈ ಕುರಿತು ಸಾರಿಗೆ ಆಯುಕ್ತರು ಶೀಘ್ರದಲ್ಲೇ ಆದೇಶ ಹೊರಡಿಸಲಿದ್ದಾರೆ ಎಂದು ವರದಿಯಾಗಿದೆ.

ಮೋಟಾರು ವಾಹನ ಇಲಾಖೆಯು ಎರ್ನಾಕುಲಂ, ಎಡಪ್ಪಲ್ ಮತ್ತು ತಿರುವನನ್-ತಪುರಂನಲ್ಲಿರುವ ತನ್ನ ಕೇಂದ್ರಗಳಲ್ಲಿ ಸುರಕ್ಷಿತ ಚಾಲನೆಯ ಕುರಿತು ಆಂಬ್ಯುಲೆನ್ಸ್ ಚಾಲಕರಿಗೆ ತರಬೇತಿ ನೀಡುತ್ತದೆ.

ಸಾರ್ವಜನಿಕರಿಗೆ ಹತ್ತಿರದ ಲಭ್ಯವಿರುವ ಆಂಬ್ಯುಲೆನ್ಸ್ ಅನ್ನು ಪತ್ತೆಹಚ್ಚಲು ಇಲಾಖೆಯು ವ್ಯವಸ್ಥೆಯನ್ನು ಪರಿಚಯಿಸಲಿದ್ದು, ಸಾರ್ವಜನಿಕರ ದೂರುಗಳನ್ನು ದಾಖಲಿಸಲು ಟೋಲ್ ಫ್ರೀ ಸಂಖ್ಯೆ 9188961100 ಯನ್ನು ಪರಿಚಯಿಸಲಾಗಿದೆ. ಆಂಬ್ಯುಲೆನ್ಸ್‌ಗಳಿಗೆ ಸಂಬಂಧಿಸಿದ ದೂರುಗಳನ್ನು ದಾಖಲಿಸಲು ಪ್ರತ್ಯೇಕವಾಗಿ ವಾಟ್ಸಾಪ್ ಸಂಖ್ಯೆಯನ್ನು ಪರಿಚಯಿಸಲು ಇಲಾಖೆ ಯೋಜಿಸಿದೆ.

ಮೊದಲ ಬಾರಿಗೆ ಕೇರಳವು ರಾಜ್ಯದಲ್ಲಿ ಆಂಬ್ಯುಲೆನ್ಸ್ ಸೇವೆಗಳಿಗೆ ಪ್ರಮಾಣಿತ ದರಗಳನ್ನು ಪರಿಚಯಿಸಿದೆ. ಅಪಘಾತಕ್ಕೊಳಗಾದವರನ್ನು ಹತ್ತಿರದ ಆಸ್ಪತ್ರೆಗೆ ಉಚಿತವಾಗಿ ಸಾಗಿಸಲಾಗುತ್ತದೆ ಮತ್ತು ಕ್ಯಾನ್ಸರ್ ರೋಗಿಗಳು, ಮಕ್ಕಳು ಮತ್ತು ಬಿಪಿಎಲ್ ಕುಟುಂಬಗಳಿಗೆ ರಿಯಾಯಿತಿ ನೀಡಲಾಗುತ್ತದೆ. ಸಾರ್ವಜನಿಕ ವ್ಯವಸ್ಥೆಯಲ್ಲಿ ಆಂಬ್ಯುಲೆನ್ಸ್‌ಗಳನ್ನು ಟ್ರ್ಯಾಕ್ ಮಾಡಬಹುದು” ಎಂದು ಮಾಜಿ ಸಚಿವ ಥೋಮಸ್ ಐಸಾಕ್ ಅವರು ಟ್ವಿಟರ್‌ನಲ್ಲಿ ಹೇಳಿದ್ದಾರೆ.ಕೇರಳ

ವಿಡಿಯೊ ನೋಡಿ: ಅಟ್ರಾಸಿಟಿ ಕಾದಂಬರಿ ಚರ್ಚೆಯಲ್ಲಿ ವಿಕಾಸ್ ಮತ್ತು ಗುರುಪ್ರಸಾದ್ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...