Homeಫ್ಯಾಕ್ಟ್‌ಚೆಕ್FACT CHECK : ಸಾವರ್ಕರ್ ಸಿನಿಮಾ ಆಸ್ಕರ್‌ಗೆ ಪ್ರವೇಶ ಪಡೆದಿಲ್ವಾ? ನಿರ್ಮಾಪಕರು ಸುಳ್ಳು ಹೇಳಿದ್ರಾ?

FACT CHECK : ಸಾವರ್ಕರ್ ಸಿನಿಮಾ ಆಸ್ಕರ್‌ಗೆ ಪ್ರವೇಶ ಪಡೆದಿಲ್ವಾ? ನಿರ್ಮಾಪಕರು ಸುಳ್ಳು ಹೇಳಿದ್ರಾ?

- Advertisement -
- Advertisement -

ಸಾವರ್ಕರ್ ಕುರಿತ ಸಿನಿಮಾ ‘ಸ್ವಾತಂತ್ರ್ಯ ವೀರ ಸಾವರ್ಕರ್’ ಆಸ್ಕರ್‌ಗೆ ಪ್ರವೇಶ ಪಡೆದಿದೆ ಎಂದು ಕಳೆದ ಸೆಪ್ಟೆಂಬರ್ 24ರಂದು ಎಲ್ಲೆಡೆ ಸುದ್ದಿಯಾಗಿತ್ತು. ಭಾರತದಿಂದ ‘ಲಾಪತಾ ಲೇಡಿಸ್’ ಸಿನಿಮಾ ಆಸ್ಕರ್‌ಗೆ ಸಲ್ಲಿಕೆಯಾಗಿದೆ ಎಂದ ಮರುದಿನವೇ ಸಾರ್ವಕರ್ ಸಿನಿಮಾ ಕೂಡ ಪ್ರವೇಶ ಪಡೆದಿದೆ ಎಂದು ವರದಿಯಾಗಿತ್ತು.

ಸಾವರ್ಕರ್ ಸಿನಿಮಾದ ನಿರ್ಮಾಪಕರಲ್ಲಿ ಒಬ್ಬರಾದ ಸಂದೀಪ್ ಸಿಂಗ್ ಸ್ವತಃ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್ ಹಾಕಿ “ನಮ್ಮ ಸಿನಿಮಾ ‘ಸ್ವಾತಂತ್ರ್ಯ ವೀರ ಸಾವರ್ಕರ್’ ಅನ್ನು ಅಧಿಕೃತವಾಗಿ ಆಸ್ಕರ್‌ಗೆ ಸಲ್ಲಿಕೆಯಾಗಿರುವುದಕ್ಕೆ ಹೆಮ್ಮೆಯಾಗುತ್ತಿದೆ. ಫಿಲ್ಮ್‌ ಫೆಡರೇಶನ್ ಆಫ್ ಇಂಡಿಯಾ (ಎಫ್‌ಎಫ್ಐ) ನಿಮ್ಮ ಪ್ರೋತ್ಸಾಹಕ್ಕೆ ಧನ್ಯವಾದಗಳು. ಇದೊಂದು ಅಧ್ಯತ್ಭುತ ಪಯಣ. ನಮ್ಮನ್ನು ಪ್ರೋತ್ಸಾಹಿಸಿದ ಸರ್ವರಿಗೂ ಅಭಾರಿಯಾಗಿದ್ದೇವೆ” ಎಂದು ಬರೆದುಕೊಂಡಿದ್ದರು.

ಸಂದೀಪ್ ಸಿಂಗ್ ಅವರ ಪೋಸ್ಟ್ ಆಧರಿಸಿ ನೂರಾರು ಮಾಧ್ಯಮಗಳು ಸಾವರ್ಕರ್ ಸಿನಿಮಾ ಆಸ್ಕರ್‌ಗೆ ಪ್ರವೇಶ ಪಡೆದಿದೆ ಎಂದು ಸುದ್ದಿ ಪ್ರಕಟಿಸಿತ್ತು. ಇನ್‌ಸ್ಟಾಗ್ರಾಂ, ಫೇಸ್‌ಬುಕ್, ಟ್ವಿಟ್ಟರ್‌ ಸೇರಿದಂತೆ ಸಾಮಾಜಿಕ ಮಾಧ್ಯಮಗಳಲ್ಲಿ ಅನೇಕ ಮಂದಿ ಸಾವರ್ಕರ್ ಚಿತ್ರಂಡಕ್ಕೆ ಅಭಿನಂದನೆ ಹೇಳಿ ಪೋಸ್ಟ್ ಹಾಕಿದ್ದರು.

ಆದರೆ, ಮರುದಿನ ಸಾರ್ವಕರ್ ಸಿನಿಮಾ ಆಸ್ಕರ್‌ಗೆ ಪ್ರವೇಶ ಪಡೆದಿಲ್ಲ. ಸಿನಿಮಾ ತಂಡ ಸುಳ್ಳು ಹೇಳಿಕೆ ಕೊಟ್ಟು ನಗೆಪಾಟಲಿಗೀಡಾಗಿದೆ ಎಂದು ವರದಿಯಾಗಿತ್ತು. ಈ ವಿಚಾರ ಸಾಮಾಜಿಕ ಮಾಧ್ಯಮಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು.

ಹಾಗಾದರೆ, ಸಾರ್ವಕರ್ ಕುರಿತ ಸಿನಿಮಾ ಆಸ್ಕರ್‌ಗೆ ಪ್ರವೇಶ ಪಡೆದಿದೆ ಎಂಬುವುದು ಸುಳ್ಳಾ? ಚಿತ್ರತಂಡ ಇಡೀ ದೇಶದ ಜನತೆಗೆ ಸುಳ್ಳು ಹೇಳಿತಾ? ಎಂಬವುದನ್ನು ನೋಡೋಣ.

ಫ್ಯಾಕ್ಟ್‌ಚೆಕ್ : ಅಸಲಿಗೆ ಸಾವರ್ಕರ್ ಕುರಿತ ಸಿನಿಮಾ ಅಧಿಕೃತವಾಗಿ ಭಾರತದಿಂದ ಆಸ್ಕರ್‌ಗೆ ಸಲ್ಲಿಕೆಯಾಗಿಲ್ಲ. ಒಂದು ದೇಶವನ್ನು ಪ್ರತಿನಿಧಿಸಿ ಆಸ್ಕರ್‌ಗೆ ಸಿನಿಮಾ ಕಳಿಸಬೇಕಾದರೆ, ಅದನ್ನು ಆಯಾ ದೇಶದ ಉನ್ನತ ಮಟ್ಟದ ಸಮಿತಿ ಆಯ್ಕೆ ಮಾಡುತ್ತದೆ. ಭಾರತದಲ್ಲಿ ಫಿಲ್ಮ್ ಫೆಡರೇಷನ್ ಆಫ್ ಇಂಡಿಯಾ ಆಸ್ಕರ್‌ಗೆ ಕಳಿಸುವ ಸಿನಿಮಾವನ್ನು ಆಯ್ಕೆ ಮಾಡುತ್ತದೆ. ಒಂದು ದೇಶದಿಂದ ಅಧಿಕೃತ ಪ್ರವೇಶಕ್ಕೆ ಒಂದು ಸಿನಿಮಾಗೆ ಮಾತ್ರ ಅವಕಾಶವಿರುತ್ತದೆ. ಈ ಬಾರಿ ಭಾರತದಿಂದ ‘ಲಾಪತಾ ಲೇಡಿಸ್‌’ ಸಿನಿಮಾವನ್ನು ಕಳಿಸಿಕೊಡಲಾಗಿದೆ.

ವೈಯಕ್ತಿಕವಾಗಿ ಅಥವಾ ಸ್ವತಂತ್ರವಾಗಿ ಯಾವುದೇ ಸಿನಿಮಾ ನಿರ್ಮಾಪಕರು ತಮ್ಮ ಸಿನಿಮಾಗಳನ್ನು ಆಸ್ಕರ್‌ಗೆ ಸಲ್ಲಿಕೆ ಮಾಡಬಹುದು. ಈ ರೀತಿ ಸಾವರ್ಕರ್ ಸಿನಿಮಾವನ್ನು ಸಲ್ಲಿಕೆ ಮಾಡಲಾಗಿದೆಯೇ? ಎಂಬುವುದರ ಬಗ್ಗೆ ಮಾಹಿತಿಯಿಲ್ಲ.

ಸಾವರ್ಕರ್ ಸಿನಿಮಾ ಆಸ್ಕರ್‌ಗೆ ಪ್ರವೇಶ ಪಡೆದಿದೆಯೇ? ಎಂಬ ಪ್ರಶ್ನೆಗೆ ಉತ್ತರಿಸಿರುವ ಫಿಲ್ಮ್‌ ಫೆಡರೇಷನ್ ಆಫ್ ಇಂಡಿಯಾದ ಅಧ್ಯಕ್ಷ ರವಿ ಕೋಟ್ಟಕ್ಕರ “ಎಫ್‌ಫ್‌ಐ ಸಾವರ್ಕರ್ ಕುರಿತ ಸಿನಿಮಾವನ್ನು ಆಸ್ಕರ್‌ಗೆ ಕಳಿಸಿಲ್ಲ. ಸಾವರ್ಕರ್ ಸಿನಿಮಾ ನಿರ್ಮಾಪಕರು ತಪ್ಪು ಹೇಳಿಕೆ ನೀಡಿದ್ದಾರೆ. ಈ ಸಂಬಂಧ ಸ್ಪಷ್ಟನೆ ನೀಡಿ ಹೇಳಿಕೆ ಬಿಡುಗಡೆ ಮಾಡುತ್ತೇವೆ.. ಸ್ವತಂತ್ರವಾಗಿ ಕಳಿಸಿಕೊಡುವ ಸಿನಿಮಾಗಳಿಗೂ ಎಫ್‌ಎಫ್‌ಐಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ.

ಸಾವರ್ಕರ್ ಸಿನಿಮಾ ನಿರ್ಮಾಪಕ ಸಂದೀಪ್ ಸಿಂಗ್ ತನ್ನ ಪೋಸ್ಟ್‌ನಲ್ಲಿ ತಮ್ಮ ಸಿನಿಮಾವನ್ನು ಆಸ್ಕರ್‌ಗೆ ಕಳಿಸಿಕೊಡಲು ಆಯ್ಕೆ ಮಾಡಿದ್ದಕ್ಕೆ ಎಫ್‌ಎಫ್‌ಐಗೆ ಧನ್ಯವಾದ ಎಂಬಂತೆ ಬರೆದುಕೊಂಡಿದ್ದಾರೆ. ಇದು ದಾರಿ ತಪ್ಪಿಸುವ ಹೇಳಿಕೆಯಾಗಿದೆ.

29 ಸಿನಿಮಾಗಳಲ್ಲಿ ‘ಲಾಪತಾ ಲೇಡಿಸ್’ ಆಯ್ಕೆ 

ಭಾರತದಿಂದ ಆಸ್ಕರ್‌ಗೆ ಕಳಿಸುವ ಸಿನಿಮಾವನ್ನು ಎಫ್‌ಎಫ್‌ಐ ಆಯ್ಕೆ ಮಾಡುತ್ತದೆ. ಈ ಆಯ್ಕೆಗೆ ದೇಶದಲ್ಲಿ ಯಾರು ಬೇಕಾದರೂ ನಿಯಮಗಳಿಗೆ ಅನುಸಾರವಾಗಿರುವ ಯಾವುದೇ ಸಿನಿಮಾಗಳನ್ನು ಕಳಿಸಿಕೊಡಬಹುದು. ಈ ವರ್ಷ ಒಟ್ಟು 29 ಸಿನಿಮಾಗಳು ಎಫ್‌ಎಫ್‌ಐಗೆ ಸಲ್ಲಿಕೆಯಾಗಿತ್ತು.

ಅವುಗಳಲ್ಲಿ ಪಾಯಲ್ ಕಪಾಡಿಯಾ ಅವರ ಕೇನ್ಸ್ ಪ್ರಶಸ್ತಿ ವಿಜೇತ ಆಲ್ ವಿ ಇಮ್ಯಾಜಿನ್ ಆಸ್ ಲೈಟ್, ಆನಂದ್ ಎಕ್ರಾಶಿ ಅವರ ರಾಷ್ಟ್ರೀಯ ಪ್ರಶಸ್ತಿ ವಿಜೇತ ಆಟಂ, ಕ್ರೀಡಾ ಡ್ರಾಮ ಮೈದಾನ್, ಚಂದು ಚಾಂಪಿಯನ್, ಆರ್ಟಿಕಲ್ 370, ಶ್ರೀಕಾಂತ್, ಸ್ಯಾಮ್ ಬಹದ್ದೂರ್, ಕಿಲ್, ಗುಡ್ ಲಕ್, ಅನಿಮಲ್, ಕಲ್ಕಿ 2898 ಎಡಿ, ತಂಗಲಾನ್, ವಾಝೈ, ಲಾಪತಾ ಲೇಡೀಸ್, ಸ್ವಾತಂತ್ರ್ಯ ವೀರ್ ಸಾವರ್ಕರ್. ಕೊಟ್ಟುಕ್ಕಲಿ, ಜಮಾ, ಜಿಗರ್ತಂಡ ಡಬಲ್ ಎಕ್ಸ್, ಉಲ್ಲೋಝುಕ್ಕು, ಅಭಾ, ಘರತ್ ಗಣಪತಿ, ಸ್ವರ್ಗಂಧರ್ವ ಸುಧೀರ್ ಫಡ್ಕೆ, ಮಹಾರಾಜ, ಮಂಗಳವಾರಂ ಮತ್ತು ಹನು-ಮಾನ್ ಒಳಗೊಂಡಿತ್ತು. ಈ ಪೈಕಿ ಲಾಪತಾ ಲೇಡಿಸ್ ಅನ್ನು ಎಫ್‌ಎಫ್‌ಐ ಆಯ್ಕೆ ಮಾಡಿದೆ.

ಮುಂದಿನ ಆಸ್ಕರ್ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಮಾರ್ಚ್ 2, 2025ರಂದು ಭಾನುವಾರ ಸಂಜೆ 5:30ರಿಂದ ರಾತ್ರಿ 8:30ರ ನಡುವೆ ಯುಎಸ್‌ನ ಕ್ಯಾಲಿಫೋರ್ನಿಯಾದ ಲಾಸ್ ಏಂಜಲೀಸ್‌ ನಗರದ ಹಾಲಿವುಡ್ ಡಾಲ್ಬಿ ಥಿಯೇಟರ್‌ನಲ್ಲಿ ನಡೆಯಲಿದೆ.

ಇದನ್ನೂ ಓದಿ : FACT CHECK : ಉತ್ತರ ಪ್ರದೇಶದಲ್ಲಿ ವೃದ್ದನ ಮುಖಕ್ಕೆ ಸ್ಪ್ರೇ ಮಾಡಿದವರು ಮುಸ್ಲಿಮರು ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...