Homeಫ್ಯಾಕ್ಟ್‌ಚೆಕ್FACT CHECK : ಬಾಂಗ್ಲಾದೇಶದಲ್ಲಿ ಬುರ್ಖಾ ಧರಿಸಿಲ್ಲ ಎಂಬ ಕಾರಣಕ್ಕೆ ಹಿಂದೂ ಮಹಿಳೆಯರಿಗೆ ಥಳಿಸಲಾಗಿದೆ ಎಂಬುವುದು...

FACT CHECK : ಬಾಂಗ್ಲಾದೇಶದಲ್ಲಿ ಬುರ್ಖಾ ಧರಿಸಿಲ್ಲ ಎಂಬ ಕಾರಣಕ್ಕೆ ಹಿಂದೂ ಮಹಿಳೆಯರಿಗೆ ಥಳಿಸಲಾಗಿದೆ ಎಂಬುವುದು ಸುಳ್ಳು

- Advertisement -
- Advertisement -

ಬಾಂಗ್ಲಾದೇಶದಲ್ಲಿ ಬುರ್ಖಾ ಧರಿಸಿಲ್ಲ ಎಂಬ ಕಾರಣಕ್ಕೆ ಹಿಂದೂ ಮಹಿಳೆಯರನ್ನು ಬೆನ್ನಟ್ಟಿ ಥಳಿಸಲಾಗುತ್ತಿದೆ ಎಂಬ ಹೇಳಿಕೆಯೊಂದಿಗೆ ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋವೊಂದು ವೈರಲ್ ಆಗುತ್ತಿದೆ. ರಸ್ತೆಯಲ್ಲಿ ಕೆಲ ಮಹಿಳೆಯರ ಮೇಲೆ ವ್ಯಕ್ತಿಯೊಬ್ಬ ಹಲ್ಲೆ ನಡೆಸುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು.

“ಬಾಂಗ್ಲಾದೇಶದಲ್ಲಿ ಹೆಣ್ಣು ಮಕ್ಕಳ ಸ್ಥಿತಿ ನೋಡಿ. ಹಿಂದೂ ಹೆಣ್ಣು ಮಕ್ಕಳು ಬುರ್ಕಾ ಹಾಕದೆ ರಸ್ತೆಯಲ್ಲಿ ಹೋಗುತ್ತಾ ಇದ್ದಾರೆ ಎಂದು, ಅವರನ್ನು ಸೂ*ಯರು ಎಂದು ನಡು ರಸ್ತೆಯಲ್ಲಿ ಜರಿದು ಒಬ್ಬ ಮತಾಂಧ ಜಿಹಾದಿ ಮುಸ್ಲಿಂ ಯುವಕ ಹೇಗೆ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ಮಾಡುತ್ತಾ ಇದ್ದಾರೆ ನೋಡಿ, ಮನುಷ್ಯತ್ವ ಇಲ್ಲದವರು’ ಎಂಬ ಬರಹದೊಂದಿಗೆ ಪದ್ಮನಾಭ ಉಪಾಧ್ಯಾಯ ಎಂಬ ಎಕ್ಸ್‌ ಖಾತೆಯಲ್ಲಿ ಸೆಪ್ಟೆಂಬರ್ 12ರಂದು ವಿಡಿಯೋ ಹಂಚಿಕೊಳ್ಳಲಾಗಿದೆ.

“ಬಾಂಗ್ಲಾದೇಶದಲ್ಲಿ ಬುರ್ಖಾ ಹಾಕಿಲ್ಲ ಎಂಬ ಕಾರಣಕ್ಕೆ ಹಿಂದೂ ಹುಡುಗಿಯರನ್ನು ಬೆನ್ನಟ್ಟಿ ಥಳಿಸಲಾಗುತ್ತಿದೆ. ಈ ಭೂಮಿಯನ್ನು ನರಕವನ್ನಾಗಿ ಮಾಡಲು ಮಾತ್ರ ಅವರನ್ನು ಕಳುಹಿಸಲಾಗಿದೆ. ಭವಿಷ್ಯದಲ್ಲಿ ನಿಮ್ಮ ಮುಂದಿನ ಪೀಳಿಗೆಯನ್ನು ನಾವು ನೋಡುತ್ತಿದ್ದೇವೆ. ಇದು ನಿಮಗೆ ಇನ್ನೂ ಅರ್ಥವಾಗುತ್ತಿಲ್ಲವೇ? ಎಂದು 11 ಸೆಪ್ಟೆಂಬರ್ 2024 ರಂದು ಸನಾತನಿ ಹಿಂದೂ ರಾಕೇಶ್ ಎಂಬ ಎಕ್ಸ್ ಖಾತೆಯಲ್ಲಿ ವಿಡಿಯೋ ಪೋಸ್ಟ್ ಮಾಡಲಾಗಿತ್ತು.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ವಿಡಿಯೋ ಕುರಿತು ಸತ್ಯಾಸತ್ಯತೆ ಪರಿಶೀಲಿಸಲು ನಾವು ವಿಡಿಯೋವನ್ನು ಸೂಕ್ಷ್ಮವಾಗಿ ಗಮನಿಸಿದಾಗ, ವಿಡಿಯೋ ಮೇಲೆ ‘ಇಸ್ಲಾಮಿಕ್ ಮೀಡಿಯಾ ಟಿವಿ ತಬಕ್‌ಪುರ್’ ಎಂದು ಬರೆದಿರುವುದು ಕಂಡು ಬಂದಿದೆ. ನಾವು ಈ ಕುರಿತು ಸರ್ಚ್ ಮಾಡಿದಾಗ, 30 ಆಗಸ್ಟ್‌ 2024 ರಂದು ಫೇಸ್​ಬುಕ್​ ಪೇಜ್‌ನಲ್ಲಿ ಹಂಚಿಕೊಂಡ ಪೋಸ್ಟ್ ಲಭ್ಯವಾಗಿದೆ. ಪೋಸ್ಟ್ ಪ್ರಕಾರ, ಈ ಘಟನೆ ಢಾಕಾದ ಶ್ಯಾಮೋಲಿ ಚೌಕದಲ್ಲಿ ನಡೆದಿದೆ.

ವಿಡಿಯೋ ಜೊತೆಗೆ “ದಯವಿಟ್ಟು ಕೊನೆಯವರೆಗೂ ವೀಡಿಯೊ ನೋಡಿ ಅದಕ್ಕು ಮೊದಲು ಕಾಮೆಂಟ್ ಮಾಡಬೇಡಿ. ಈ ವಿಡಿಯೋದಲ್ಲಿರುವುದು ಮುಖ್ಯ ಮಾಲೀಕ ಮಹಿಳೆ. ನೀವು ಅವಳನ್ನು ನೋಡಿದರೆ ಕೊಲ್ಲಿ. ಇದು ನಿಮ್ಮ ಧಾರ್ಮಿಕ ಜವಾಬ್ದಾರಿಯಾಗಿದೆ. ಸೇನಾ ಪೊಲೀಸರು ನಮ್ಮ ಬೆಂಬಲಕ್ಕೆ ಇದ್ದಾರೆ. ದಯವಿಟ್ಟು ನನ್ನನ್ನು ಅಪಾರ್ಥ ಮಾಡಿಕೊಳ್ಳಬೇಡಿ. ವಿಡಿಯೋವನ್ನು ಆದಷ್ಟು ಶೇರ್ ಮಾಡಿ. ಶ್ಯಾಮೋಲಿ ಚೌಕದಲ್ಲಿ ಇದು ನಡೆದಿದೆ. ಎಲ್ಲರೂ ಪ್ರತಿಭಟನೆಯಲ್ಲಿ ಭಾಗವಹಿಸಿ” ಎಂದು ಬರೆಯಲಾಗಿದೆ.

ವಿಡಿಯೋ ಕುರಿತು ಸ್ಪಷ್ಟ ಮಾಹಿತಿ ಸಿಗದ ಕಾರಣ ನಾವು ಈ ಘಟನೆಯ ಕುರಿತು ಹೆಚ್ಚಿನ ವಿವರಣೆಗಾಗಿ ಗೂಗಲ್​ನಲ್ಲಿ ‘dhaka men beaten women’ಎಂದು ಕೀವರ್ಡ್ ಸರ್ಚ್ ಮಾಡಿದ್ದೇವೆ. ಆಗ ಬೆಂಗಾಲಿ ಭಾಷೆಯಲ್ಲಿ ಪ್ರಕಟವಾದ ಕೆಲವು ಲೇಖನ ಲಭ್ಯವಾಗಿದೆ. Our News BD ಎಂಬ ವೆಬ್​ಸೈಟ್​ನಲ್ಲಿ ಇದೇ ವಿಡಿಯೋದ ಸ್ಕ್ರೀನ್ ಶಾಟ್​ನೊಂದಿಗೆ ಸೆ. 2, 2024 ರಂದು ಸುದ್ದಿ ಪ್ರಕಟವಾಗಿದ್ದು ‘ರಾಜಧಾನಿಯಲ್ಲಿ ಲೈಂಗಿಕ ಕಾರ್ಯಕರ್ತೆಯರನ್ನು ಥಳಿಸಿದ ವಿಡಿಯೋ ವೈರಲ್ ಆಗಿದೆ’ ಎಂದ ಶೀರ್ಷಿಕೆ ನೀಡಲಾಗಿದೆ.

ವರದಿಯ ಪ್ರಕಾರ, ಡಾಕಾದ ಹಲವು ಪ್ರದೇಶಗಳಲ್ಲಿ ಲೈಂಗಿಕ ಕಾರ್ಯಕರ್ತೆಯರನ್ನು ಥಳಿಸಿದ ವಿಡಿಯೋ ವೈರಲ್ ಆಗಿದೆ. ಲೈಂಗಿಕ ಕಾರ್ಯಕರ್ತರ ಮೇಲೆ ಯುವಕರ ಗುಂಪು ಹಲ್ಲೆ ನಡೆಸಿದೆ ಎಂದು ಸಂತ್ರಸ್ತ ಲೈಂಗಿಕ ಕಾರ್ಯಕರ್ತರು ದೂರಿದ್ದಾರೆ. ಯುವಕನೋರ್ವ ಹಸಿರು ಬಣ್ಣದ ಪೈಪ್‌ನಿಂದ ಮಹಿಳೆಗೆ ತೀವ್ರವಾಗಿ ಥಳಿಸಿದ್ದಾನೆ.

ಕಲ್ಯಾಣಮಯಿ ನಾರಿ ಸಂಘ ಸಂಸ್ಥೆ ನೀಡಿದ ಮಾಹಿತಿ ಪ್ರಕಾರ, ಕಳೆದ ಆಗಸ್ಟ್ 27 ರಿಂದ ಲೈಂಗಿಕ ಕಾರ್ಯಕರ್ತೆಯರ ಮೇಲೆ ಒಬ್ಬರ ನಂತರ ಒಬ್ಬರು ಹಲ್ಲೆ ನಡೆಸುತ್ತಿದ್ದಾರೆ. ಕನಿಷ್ಠ 60 ಮಹಿಳಾ ಲೈಂಗಿಕ ಕಾರ್ಯಕರ್ತರು ಗಾಯಗೊಂಡಿದ್ದಾರೆ. ಇದು ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ. ಕಾನೂನನ್ನು ಯಾರೂ ಕೈಗೆ ತೆಗೆದುಕೊಳ್ಳಲು ಸಾಧ್ಯವಿಲ್ಲ. ಇಂತಹ ಘಟನೆಗಳಿಗೆ ಕಾರಣರಾದವರಿಗೆ ಶಿಕ್ಷೆಯಾಗಬೇಕು. ಈ ಬಗ್ಗೆ ಸಂಬಂಧಪಟ್ಟ ಪೊಲೀಸ್ ಠಾಣೆಗೆ ಈಗಾಗಲೇ ಮಾತನಾಡಿದ್ದೇವೆ ಎಂದು ಮಹಿಳಾ ಸಂಘ ನೀಡಿದ ಹೇಳಿಕೆ ಈ ವರದಿಯಲ್ಲಿದೆ.

ಹಾಗೆಯೆ ಬಾಂಗ್ಲಾದೇಶದ Kaler Kanthojaijaidinbd ಮಾಧ್ಯಮ ಕೂಡ ಈ ಕುರಿತು ಸುದ್ದಿ ಪ್ರಕಟಿಸಿದ್ದು, ‘ಲೈಂಗಿಕ ಕಾರ್ಯಕರ್ತೆಯರನ್ನು ಥಳಿಸುವ ವಿಡಿಯೋ ವೈರಲ್ ಆಗಿದೆ. ಕೆಲವು ಯುವಕರು ವಿವಿಧ ಪ್ರದೇಶಗಳಲ್ಲಿ ತಮ್ಮ ಮೇಲೆ ಹಲ್ಲೆ ನಡೆಸುತ್ತಿದ್ದಾರೆ ಎಂದು ಸಂತ್ರಸ್ತ ಲೈಂಗಿಕ ಕಾರ್ಯಕರ್ತರು ದೂರಿದ್ದಾರೆ’ ಎಂದು ಬರೆಯಲಾಗಿದೆ.

ಒಟ್ಟಿನಲ್ಲಿ, ಬಾಂಗ್ಲಾದೇಶದ ಢಾಕಾದಲ್ಲಿ ಲೈಂಗಿಕ ಕಾರ್ಯಕರ್ತೆಯರನ್ನು ಥಳಿಸಿರುವ ಘಟನೆಯನ್ನು ಬುರ್ಖಾ ಧರಿಸದ ಕಾರಣಕ್ಕಾಗಿ ಹಿಂದೂ ಮಹಿಳೆಯರನ್ನು ಥಳಿಸಲಾಗಿದೆ ಎಂಬ ಸುಳ್ಳು ಮತ್ತು ಕೋಮು ನಿರೂಪಣೆಯೊಂದಿಗೆ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ : FACT CHECK : ರಾಜ್ಯದ ಹಲವೆಡೆ ರಾತ್ರಿ ಹೊತ್ತು ಸಿಂಹಗಳ ಓಡಾಟ…ವೈರಲ್ ವಿಡಿಯೋಗಳ ಅಸಲಿಯತ್ತೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...