Homeಅಂತರಾಷ್ಟ್ರೀಯಮಧ್ಯ ಬೈರುತ್‌ನಲ್ಲಿ ಇಸ್ರೇಲ್ ದಾಳಿಗೆ ಕನಿಷ್ಠ ನಾಲ್ವರು ಬಲಿ; ನಗರ ಮಿತಿಯೊಳಗೆ ಮೊದಲ ವೈಮಾನಿಕ ಕಾರ್ಯಾಚರಣೆ

ಮಧ್ಯ ಬೈರುತ್‌ನಲ್ಲಿ ಇಸ್ರೇಲ್ ದಾಳಿಗೆ ಕನಿಷ್ಠ ನಾಲ್ವರು ಬಲಿ; ನಗರ ಮಿತಿಯೊಳಗೆ ಮೊದಲ ವೈಮಾನಿಕ ಕಾರ್ಯಾಚರಣೆ

- Advertisement -
- Advertisement -

ಸುಮಾರು ಒಂದು ವರ್ಷದ ಸಂಘರ್ಷದಲ್ಲಿ ಮಧ್ಯ ಬೈರುತ್‌ ನಗರದಲ್ಲಿ ಮೊದಲ ಇಸ್ರೇಲಿ ವೈಮಾನಿಕ ದಾಳಿ ಸೋಮವಾರ ಮುಂಜಾನೆ ಅಪಾರ್ಟ್‌ಮೆಂಟ್ ಕಟ್ಟಡವನ್ನು ನೆಲಸಮಗೊಳಿಸಿದೆ. ಪರಿಣಾಮ, ಕನಿಷ್ಠ ನಾಲ್ಕು ಜನ ಸಾವನ್ನಪ್ಪಿದ್ದಾರೆ.

ಇಸ್ರೇಲ್ ಲೆಬನಾನ್‌ನಾದ್ಯಂತ ಹಲವು ಪ್ರದೇಶಗಳ ಮೇಲೆ ದಾಳಿ ಮಾಡಿ ಡಜನ್‌ಗಟ್ಟಲೆ ಜನರನ್ನು ಕೊಂದು, ಹಿಜ್ಬುಲ್ಲಾ ನಾಯಕ ಹಸನ್ ನಸ್ರಲ್ಲಾ ಹತ್ಯೆ ಮಾಡಿದೆ. ಇದಾದ ಕೆಲವೇ ಗಂಟೆಗಳ ನಂತರ ಹಿಜ್ಬುಲ್ಲಾ ತನ್ನ ಕಮಾಂಡ್ ರಚನೆಯಲ್ಲಿ ಭಾರೀ ಹೊಡೆತಗಳನ್ನು ಅನುಭವಿಸಿದೆ.

ಘಟನಾ ಸ್ಥಳದಲ್ಲಿದ್ದ ಅಸೋಸಿಯೇಟೆಡ್ ಪ್ರೆಸ್ ಪತ್ರಕರ್ತರ ಪ್ರಕಾರ, “ವೈಮಾನಿಕ ದಾಳಿಯು ಬಹುಮಹಡಿ ವಸತಿ ಕಟ್ಟಡಕ್ಕೆ ಅಪ್ಪಳಿಸಿತು” ಎಂದು ಹೇಳಿದ್ದಾರೆ.

ಪ್ರಮುಖವಾಗಿ ಸುನ್ನಿ ಜಿಲ್ಲೆಯ ಕಟ್ಟಡದ ಬಳಿ ಆಂಬ್ಯುಲೆನ್ಸ್‌ಗಳು ಮತ್ತು ಜನಸಂದಣಿಯು ಜಮಾಯಿಸಿರುವುದನ್ನು ವೀಡಿಯೊಗಳಲ್ಲಿ ಕಾಣಬಹುದು. ಆರಂಭದಲ್ಲಿ ವೈಮಾನಿಕ ದಾಳಿಯು ಕನಿಷ್ಠ ಒಬ್ಬ ವ್ಯಕ್ತಿಯನ್ನು ಕೊಂದಿತು. 16 ಮಂದಿ ಗಾಯಗೊಂಡರು ಎಂದು ಲೆಬನಾನಿನ ಸಿವಿಲ್ ಡಿಫೆನ್ಸ್‌ನ ಅಧಿಕಾರಿಯೊಬ್ಬರು ಹೇಳಿದರು.

ಹತ್ಯೆಗೀಡಾದ ವ್ಯಕ್ತಿ ಅಲ್-ಜಮಾ ಅಲ್-ಇಸ್ಲಾಮಿಯಾ ಅಥವಾ ಇಸ್ಲಾಮಿಕ್ ಗ್ರೂಪ್, ಸುನ್ನಿ ರಾಜಕೀಯ ಮತ್ತು ಉಗ್ರಗಾಮಿ ಗುಂಪು ಹೆಜ್ಬುಲ್ಲಾ ಜೊತೆ ಮೈತ್ರಿ ಮಾಡಿಕೊಂಡಿದ್ದಾನೆ ಎಂದು ಅವರು ಹೇಳಿದರು. ಇಸ್ರೇಲ್ ಮತ್ತು ಹೆಜ್ಬೊಲ್ಲಾ ನಡುವಿನ ಪ್ರಸ್ತುತ ಸಂಘರ್ಷದಲ್ಲಿ ಈ ಗುಂಪು ಯಾವುದೇ ಅರ್ಥಪೂರ್ಣ ಪಾತ್ರವನ್ನು ವಹಿಸಿದೆ ಎಂದು ತಿಳಿದಿಲ್ಲ.

ಲೆಬನಾನ್‌ನಲ್ಲಿರುವ ಪ್ಯಾಲೇಸ್ಟಿನಿಯನ್ ಎಡಪಂಥೀಯ ಬಣವು ತನ್ನ ಮೂವರು ಸದಸ್ಯರು ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಹೇಳಿದೆ. ಪಾಪ್ಯುಲರ್ ಫ್ರಂಟ್ ಫಾರ್ ದಿ ಲಿಬರೇಶನ್ ಆಫ್ ಪ್ಯಾಲೆಸ್ಟೈನ್ ಸೋಮವಾರದ ಮುಂಜಾನೆ ಹೇಳಿಕೆಯಲ್ಲಿ, ಲೆಬನಾನ್‌ನಲ್ಲಿನ ತನ್ನ ಮಿಲಿಟರಿ ಮತ್ತು ಭದ್ರತಾ ಕಮಾಂಡರ್‌ಗಳು ಮೂರನೇ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಹೇಳಿದೆ.

ಕಳೆದ ವಾರದಲ್ಲಿ, ಇಸ್ರೇಲ್ ಆಗಾಗ್ಗೆ ಬೈರುತ್‌ನ ದಕ್ಷಿಣ ಉಪನಗರಗಳನ್ನು ಗುರಿಯಾಗಿಸಿಕೊಂಡಿದೆ. ಅಲ್ಲಿಹಿಜ್ಬುಲ್ಲಾ ಪ್ರಬಲ ಉಪಸ್ಥಿತಿಯನ್ನು ಹೊಂದಿದೆ. ಶುಕ್ರವಾರದ ಪ್ರಮುಖ ದಾಳಿ ಸೇರಿದಂತೆ ಸಂಘಟನೆ ನಾಯಕ ನಸ್ರಲ್ಲಾನನ್ನು ಕೊಂದಿತು. ಆದರೆ, ನಗರ ಕೇಂದ್ರದ ಸಮೀಪವಿರುವ ಸ್ಥಳಗಳ ಮೇಲೆ ಈವರೆಗೆ ದಾಳಿ ಮಾಡಿರಲಿಲ್ಲ.

ದಾಳಿ ಬಗ್ಗೆ ಇಸ್ರೇಲಿ ಅಧಿಕಾರಿಗಳು ತಕ್ಷಣದ ಪ್ರತಿಕ್ರಿಯೆ ನೀಡಿಲ್ಲ. ಈ ಹಿಂದೆ, ಉಗ್ರಗಾಮಿ ಗುಂಪಿನ ಸೆಂಟ್ರಲ್ ಕೌನ್ಸಿಲ್‌ನ ಉಪ ಮುಖ್ಯಸ್ಥ ನಬಿಲ್ ಕೌಕ್ ಅವರು ಶನಿವಾರ ಕೊಲ್ಲಲ್ಪಟ್ಟರು ಎಂದು ಹಿಜ್ಬುಲ್ಲಾ ದೃಢಪಡಿಸಿದೆ. ಒಂದು ವಾರದಲ್ಲಿ ಇಸ್ರೇಲಿ ದಾಳಿಯಲ್ಲಿ ಕೊಲ್ಲಲ್ಪಟ್ಟ ಏಳನೇ ಹಿರಿಯ ಹಿಜ್ಬುಲ್ಲಾ ನಾಯಕನಾಗಿದ್ದಾರೆ. ಅವರು ದಶಕಗಳಿಂದ ಸಾವು ಅಥವಾ ಬಂಧನವನ್ನು ತಪ್ಪಿಸಿಕೊಂಡಿದ್ದ ಸ್ಥಾಪಕ ಸದಸ್ಯರಾಗಿದ್ದರು.

ನಸ್ರಲ್ಲಾನನ್ನು ಕೊಂದ ದಾಳಿಯಲ್ಲಿ ಇನ್ನೊಬ್ಬ ಹಿರಿಯ ಕಮಾಂಡರ್ ಅಲಿ ಕರಾಕಿ ಸಾವನ್ನಪ್ಪಿದ್ದಾನೆ ಎಂದು ಹಿಜ್ಬುಲ್ಲಾ ದೃಢಪಡಿಸಿದರು. ನಸ್ರಲ್ಲಾ ಅವರ ಭದ್ರತಾ ವಿವರಗಳ ಉಸ್ತುವಾರಿ ಸೇರಿದಂತೆ ಕನಿಷ್ಠ 20 ಇತರ ಹಿಜ್ಬುಲ್ಲಾ ಉಗ್ರಗಾಮಿಗಳು ಕೊಲ್ಲಲ್ಪಟ್ಟರು ಎಂದು ಇಸ್ರೇಲ್ ಹೇಳಿದೆ.

ಭಾನುವಾರದ ವಾಯುದಾಳಿಯಲ್ಲಿ ದೇಶದಾದ್ಯಂತ ಕನಿಷ್ಠ 105 ಜನರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಆರೋಗ್ಯ ಸಚಿವಾಲಯ ಹೇಳಿದೆ. ಬೈರುತ್‌ನ ದಕ್ಷಿಣಕ್ಕೆ 45 ಕಿಲೋಮೀಟರ್ (28 ಮೈಲುಗಳು) ದಕ್ಷಿಣದ ಸಿಡಾನ್ ನಗರದ ಬಳಿ ಎರಡು ದಾಳಿಗಳಲ್ಲಿ ಕನಿಷ್ಠ 32 ಜನರನ್ನು ಕೊಲ್ಲಲಾಗಿದೆ. ಪ್ರತ್ಯೇಕವಾಗಿ, ಬಾಲ್ಬೆಕ್ ಹರ್ಮೆಲ್ನ ಉತ್ತರ ಪ್ರಾಂತ್ಯದಲ್ಲಿ ಇಸ್ರೇಲಿ ದಾಳಿಗಳು 21 ಜನರನ್ನು ಕೊಂದಿದ್ದು, ಕನಿಷ್ಠ 47 ಮಂದಿ ಗಾಯಗೊಂಡಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಬೈರುತ್‌ನಲ್ಲಿ ದಾಳಿ ಜೊತೆಗೆ, ಮಧ್ಯ, ಪೂರ್ವ ಮತ್ತು ಪಶ್ಚಿಮ ಬೆಕಾ ಮತ್ತು ದಕ್ಷಿಣದಲ್ಲಿ ಡಜನ್‌ಗಟ್ಟಲೆ ಕಾರ್ಯಾಚರಣೆ ನಡೆಸಿದೆ ಎಂದು ಲೆಬನಾನಿನ ಮಾಧ್ಯಮಗಳು ವರದಿ ಮಾಡಿವೆ. ಈ ದಾಳಿಗಳು ನಾಗರಿಕರು ವಾಸಿಸುತ್ತಿದ್ದ ಕಟ್ಟಡಗಳನ್ನು ಗುರಿಯಾಗಿಸಿಕೊಂಡಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ನಿರೀಕ್ಷೆಯಿದೆ ಎಂದು ವಿಶ್ಲೇಷಿಸಿವೆ.

ಅಸೋಸಿಯೇಟೆಡ್ ಪ್ರೆಸ್ ಪರಿಶೀಲಿಸಿದ ಸಿಡಾನ್‌ ದಾಳಿ ವೀಡಿಯೊದಲ್ಲಿ, ನಿವಾಸಿಗಳು ವಿಡಿಯೊ ಚಿತ್ರೀಕರಿಸುತ್ತಿದ್ದಂತೆ ಕಟ್ಟಡವು ಕುಸಿಯುವ ಮೊದಲು ಅಲುಗಾಡಿದೆ. ರಕ್ಷಣಾ ಪಡೆ ಕಟ್ಟಡದಲ್ಲಿ ಸಿಲುಕಿರುವವರನ್ನು ತಲುಪಲು ವಿಫಲರಾದ ಕಾರಣ, ಅವಶೇಷಗಳಡಿ ಸಿಲುಕಿರುವ ಕುಟುಂಬಗಳು ಪ್ರಾರ್ಥಿಸುತ್ತಿವೆ. ಆ ದೃಶ್ಯಗಳನ್ನು ದೂರದರ್ಶನವೊಂದು ಪೋಸ್ಟ್ ಮಾಡಿದೆ. ದಕ್ಷಿಣದಲ್ಲಿ ಎರಡು ದಿನಗಳಲ್ಲಿ ಕನಿಷ್ಠ 14 ವೈದ್ಯರು ಕೊಲ್ಲಲ್ಪಟ್ಟಿದ್ದಾರೆ ಎಂದು ಲೆಬನಾನಿನ ಆರೋಗ್ಯ ಸಚಿವಾಲಯ ವರದಿ ಮಾಡಿದೆ.

ಲೆಬನಾನ್‌ನಲ್ಲಿ ಇಸ್ರೇಲಿ ದಾಳಿಗಳಲ್ಲಿ ನಾಟಕೀಯ ಉಲ್ಬಣಕ್ಕೆ ಪ್ರತಿಕ್ರಿಯೆಯಾಗಿ, ಹಿಜ್ಬೊಲ್ಲಾ ಕಳೆದ ವಾರದಲ್ಲಿ ತನ್ನ ದಾಳಿಯನ್ನು ಗಮನಾರ್ಹವಾಗಿ ಹೆಚ್ಚಿಸಿದೆ. ಪ್ರತಿದಿನ ಹಲವಾರು ಡಜನ್‌ಗಳಿಂದ ನೂರಾರು ದಾಳಿಗಳಿಗೆ ಹೆಚ್ಚಿದೆ ಎಂದು ಇಸ್ರೇಲಿ ಮಿಲಿಟರಿ ಹೇಳಿದೆ. ದಾಳಿಗಳು ಹಲವಾರು ಜನರನ್ನು ಗಾಯಗೊಳಿಸಿದವು ಮತ್ತು ಹಾನಿಯನ್ನುಂಟುಮಾಡಿದವು. ಆದರೆ, ಹೆಚ್ಚಿನ ರಾಕೆಟ್‌ಗಳು ಮತ್ತು ಡ್ರೋನ್‌ಗಳು ಇಸ್ರೇಲ್‌ನ ವಾಯು ರಕ್ಷಣಾ ವ್ಯವಸ್ಥೆಗಳಿಂದ ತಡೆಹಿಡಿಯಲ್ಪಟ್ಟವು ಅಥವಾ ತೆರೆದ ಪ್ರದೇಶಗಳಲ್ಲಿ ಬಿದ್ದವು ಎಂದು ಹೇಳಿದೆ.

ಲೆಬನಾನ್‌: ಮನೆ ತೊರೆದ ಸಾವಿರಾರು ಜನ

ಲೆಬನಾನ್‌ನ ಆರೋಗ್ಯ ಸಚಿವಾಲಯದ ಪ್ರಕಾರ, ಲೆಬನಾನ್‌ನ ದೊಡ್ಡ ಭಾಗಗಳಲ್ಲಿ ಇಸ್ರೇಲಿ ವೈಮಾನಿಕ ದಾಳಿಯಿಂದ 1,030 ಕ್ಕೂ ಹೆಚ್ಚು ಜನರು ಬಲಿಯಾಗಿದ್ದಾರೆ. ಅದರಲ್ಲಿ 156 ಮಹಿಳೆಯರು ಮತ್ತು 87 ಮಕ್ಕಳು ಸೇರಿದ್ದಾರೆ. ದಾಳಿ ಭಯದಿಂದ ಲಕ್ಷಾಂತರ ಜನ ತಮ್ಮ ಮನೆ ತೊರೆದಿದ್ದಾರೆ. ಸುಮಾರು 250,000 ಜನರು ಪ್ರಭುತ್ವದ ಆಶ್ರಯದಲ್ಲಿದ್ದಾರೆ ಎಂದು ಸರ್ಕಾರ ಅಂದಾಜಿಸಿದೆ. ಮೂರರಿಂದ ನಾಲ್ಕು ಪಟ್ಟು ಹೆಚ್ಚು ಜನರು ಸ್ನೇಹಿತರು ಅಥವಾ ಸಂಬಂಧಿಕರೊಂದಿಗೆ ಇದ್ದಾರೆ. ಕೆಲವರು ಬೀದಿಗಳಲ್ಲಿ ಕ್ಯಾಂಪ್ ಮಾಡುತ್ತಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ; ನೇಪಾಳದಲ್ಲಿ ಭಾರಿ ಪ್ರವಾಹ-ಭೂಕುಸಿತ; ಸಾವಿನ ಸಂಖ್ಯೆ 200ಕ್ಕೆ ಏರಿಕೆ, ಹಲವರು ನಾಪತ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...