Homeಫ್ಯಾಕ್ಟ್‌ಚೆಕ್FACT CHECK : ಬಾಹ್ಯಾಕಾಶದಿಂದ ಜಿಗಿದು ಭೂಮಿ ತಲುಪಿದ ವಿಜ್ಞಾನಿ ಆಸ್ಟ್ರೇಲಿಯಾದವರಲ್ಲ!

FACT CHECK : ಬಾಹ್ಯಾಕಾಶದಿಂದ ಜಿಗಿದು ಭೂಮಿ ತಲುಪಿದ ವಿಜ್ಞಾನಿ ಆಸ್ಟ್ರೇಲಿಯಾದವರಲ್ಲ!

- Advertisement -
- Advertisement -

ಆಸ್ಟ್ರೇಲಿಯಾದ ಖಗೋಳ ವಿಜ್ಞಾನಿಯೊಬ್ಬರು ಬಾಹ್ಯಾಕಾಶದಿಂದ ಜಿಗಿದು ಭೂಮಿಯನ್ನು ತಲುಪಿದ್ದಾರೆ ಎಂದು ವಿಡಿಯೋವೊಂದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗಿದೆ.

ಎಕ್ಸ್‌ನಲ್ಲಿ ಕಂಡು ಬಂದಿರುವ  ಪೋಸ್ಟ್‌ನಲ್ಲಿ “ಆಸ್ಟ್ರೇಲಿಯಾದ ಖಗೋಳಶಾಸ್ತ್ರಜ್ಞ 1,28,000 ಅಡಿಗಳಷ್ಟು ಬಾಹ್ಯಾಕಾಶದಿಂದ ಜಿಗಿದು ಭೂಮಿಯನ್ನು ತಲುಪುತ್ತಾನೆ … 1236 ಕಿ.ಮೀ. 4 ನಿಮಿಷ 5 ಸೆಕೆಂಡ್‌ಗಳಲ್ಲಿ ಪ್ರಯಾಣ ಮುಗಿಸಿದೆ… ಭೂಮಿ ಚಲಿಸುತ್ತಿರುವುದನ್ನು ಅವರು ಸ್ಪಷ್ಟವಾಗಿ ನೋಡಿದ್ದಾರೆ… ಅದ್ಭುತವಾದ ವಿಡಿಯೋ, ಇದನ್ನು ನೋಡಿ ಮತ್ತು ದಯವಿಟ್ಟು ನಿಮ್ಮ ಮಕ್ಕಳಿಗೆ ತೋರಿಸಿ” ಎಂದಿದೆ. ಹಲವು ಎಕ್ಸ್‌ ಖಾತೆ ಬಳಕೆದಾರರು ಇದೇ ಪ್ರತಿಪಾದನೆಯೊಂದಿಗೆ ಪೋಸ್ಟ್‌  ಹಂಚಿಕೊಂಡಿದ್ದಾರೆ.

ಫೇಸ್‌ಬುಕ್‌ನ ಹಲವು ಬಳಕೆದಾರರು ಇದೇ ಹೇಳಿಕೆಯೊಂದಿಗೆ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಹಾಗಿದ್ದರೆ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ? ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ವಿಡಿಯೋದ ಕೀ ಫ್ರೇಮ್‌ಗಳನ್ನು ತೆಗೆದು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಸರ್ಚ್ ಮಾಡಿದಾಗ, ವೈರಲ್ ವಿಡಿಯೋಗೆ ಸಂಬಂಧಿಸಿದಂತೆ ಕೆಲವು ವರದಿಗಳು ಲಭ್ಯವಾಗಿವೆ.

ಅಕ್ಟೋಬರ್ 15, 2012 ಆನ್‌ ಡಿಮ್ಯಾಂಡ್ ನ್ಯೂಸ್‌ ಯೂಟ್ಯೂಬ್‌ ಚಾನೆಲ್ ಪ್ರಕಟಿಸಿದ ವಿಡಿಯೋದಲ್ಲಿ “Space jump: Felix Baumgartner describes his record-breaking skydive” ಶೀರ್ಷಿಕೆಯಡಿಯಲ್ಲಿ ಫೆಲಿಕ್ಸ್ ಬಾಮ್‌ಗಾರ್ಟ್ನರ್ ಎಂಬವರು ಬಾಹ್ಯಾಕಾಶದಿಂದ ಸ್ಕೈಡೈವಿಂಗ್‌ ಮಾಡಿದ್ದ ಬಗ್ಗೆ ಹೇಳಲಾಗಿದೆ. ಈ ವಿಡಿಯೋವನ್ನು ಕೂಲಂಕಷವಾಗಿ ಪರಿಶೀಲಿಸಿದಾಗ ಇದು ವೈರಲ್‌ ವಿಡಿಯೋಗೆ ಸಾಮ್ಯತೆ ಇರುವಂತೆ ಕಂಡು ಬಂದಿದೆ. ಇದನ್ನು ಆಧಾರವಾಗಿಟ್ಟುಕೊಂಡು ಮತ್ತಷ್ಟು ಪರಿಶೀಲಿಸಿದಾಗ ಮಾಹಿತಿ ಲಭ್ಯವಾಗಿದೆ.

ಅಕ್ಟೋಬರ್ 14, 2022ರಂದು ರೆಡ್ ಬುಲ್‌ ಯೂಟ್ಯೂಬ್‌ ಚಾನೆಲ್ ಪ್ರಕಟಿಸಿದ ವಿಡಿಯೋದಲ್ಲಿ “I Jumped From Space (World Record Supersonic Freefall)” ಶೀರ್ಷಿಕೆಯಿದ್ದು ಫೆಲಿಕ್ಸ್ ಬಾಮ್‌ಗಾರ್ಟ್ನರ್ ಅವರು ಬಾಹ್ಯಾಕಾಶದಿಂದ ನೆಗೆದ ಬಗ್ಗೆ ಮಾಹಿತಿ ಇದೆ. ಈ ವಿಡಿಯೋದ ವಿವರಣೆಯಲ್ಲಿ, “ಬಾಹ್ಯಾಕಾಶದಿಂದ ಜಿಗಿಯಲು *ನಿಜವಾಗಿ* ಏನನಿಸುತ್ತದೆ? 2012 ರಲ್ಲಿ ಫೆಲಿಕ್ಸ್ ಬೌಮ್ಗಗರ್ಟ್ನರ್ ಅವರು ಹೀಲಿಯಂ ಬಲೂನ್ ಅನ್ನು ವಾಯುಮಂಡಲಕ್ಕೆ ತೆಗೆದುಕೊಂಡು ವಿಶೇಷವಾಗಿ ತಯಾರಿಸಿದ ಬಾಹ್ಯಾಕಾಶ ಸೂಟ್‌ನಲ್ಲಿ ಭೂಮಿಗೆ ವಾಪಾಸಾದರು. ಫ್ರೀ ಫಾಲ್‌ನಲ್ಲಿ ಅವರು ಶಬ್ದದ ವೇಗವನ್ನು ಬೇದಿಸಿ ಭೂಮಿಗೆ ಪ್ರವೇಶಿಸಿದರು. ಈ ವೇಳೆ ಅವರು ತಿರುಗಿದ್ದು ಇಡೀ ರೆಡ್ ಬುಲ್ ಸ್ಟ್ರಾಟೋಸ್ ಮಿಷನ್‌ಗೆ ಬೆದರಿಕೆ ಹಾಕಿತು… ಫೆಲಿಕ್ಸ್ ಅವರು ಸಾಧನೆಯನ್ನು ಪ್ರತಿಬಿಂಬಿಸುತ್ತಾರೆ ಮತ್ತು ಬಾಹ್ಯಾಕಾಶದಿಂದ ಜಿಗಿಯಲು ಏನ್ನಿಸಿತು ಎಂಬುದನ್ನು ನಿಜವಾಗಿ ಹಂಚಿಕೊಳ್ಳುತ್ತಾರೆ” ಎಂದಿದೆ.

ಫೆಲಿಕ್ಸ್ ಬಾಮ್‌ಗಾರ್ಟ್ನರ್ ಅವರ ಐತಿಹಾಸಿಕ ನೆಗೆತಕ್ಕೆ 10ವರ್ಷ ಆದ ಬಗ್ಗೆ ಸಿಎನ್‌ಎನ್‌ ಅಕ್ಟೋಬರ್ 14, 2022ರಂದು ವರದಿಯನ್ನು ಪ್ರಕಟಿಸಿದ್ದು, ಅವರ ಬಾಹ್ಯಾಕಾಶ ನೆಗೆತದ ಬಗ್ಗೆ ಮೆಲುಕು ಹಾಕಿದೆ.

ಗಿನ್ನಿಸ್ ವರ್ಲ್ಡ್ ರೆಕಾರ್ಡ್ ತನ್ನ ವೆಬ್‌ ಸೈಟ್ ನಲ್ಲಿ ನೀಡಿದ ಲೇಖನದಲ್ಲಿ, “ಆಸ್ಟ್ರಿಯಾದ ಸ್ಕೈಡೈವರ್ ಫೆಲಿಕ್ಸ್ ಬಾಮ್‌ಗಾರ್ಟ್ನರ್ 38,969.4 ಮೀಟರ್ ಎತ್ತರದಿಂದ ಪ್ಯಾರಾಚೂಟ್ ಜಿಗಿತವನ್ನು ಪೂರ್ಣಗೊಳಿಸಿದ ಮಹತ್ವದ ಕ್ಷಣವನ್ನು ವೀಕ್ಷಿಸಲು ಅಭೂತಪೂರ್ವ ಎಂಟು ಮಿಲಿಯನ್ ಜನರು 14 ಅಕ್ಟೋಬರ್ 2012 ರಂದು ಯೂಟ್ಯೂಬ್‌ ವೀಕ್ಷಣೆ ಮಾಡಿದ್ದಾರೆ. ಈ ಮೂಲಕ ಎಂಟು ವಿಶ್ವ ದಾಖಲೆಗಳನ್ನು ಮತ್ತು ಕೇವಲ ಮೂರು ಗಂಟೆಗಳ ಅಂತರದಲ್ಲಿ ಬಾಹ್ಯಾಕಾಶದ ಧ್ವನಿ ತಡೆಗೋಡೆಯನ್ನು ಮುರಿದಿದ್ದಾರೆ” ಎಂದಿದೆ.

ಇದರೊಂದಿಗೆ ಫೆಲಿಕ್ಸ್ ಬಾಮ್‌ಗಾರ್ಟ್ನರ್ ರಾಷ್ಟ್ರೀಯತೆಯನ್ನು ಪರಿಶೀಲಿಸಲು ಅವರ ವೆಬ್‌ ಸೈಟ್ ವೀಕ್ಷಿಸಿದ್ದೇವೆ. ಇದರಲ್ಲಿ ಅವರ ವಿವರಗಳನ್ನು ನೀಡಲಾಗಿದ್ದು, ಅವರು ಆಸ್ಟ್ರಿಯನ್‌ ಪ್ರಜೆ ಎಂದು ಉಲ್ಲೇಖಿಸಿರುವುದನ್ನು ನೋಡಬಹುದು.

ಒಟ್ಟಾರೆಯಾಗಿ ಹೇಳುವುದಾದರೆ, ಆಸ್ಟ್ರೇಲಿಯಾದ ಖಗೋಳ ವಿಜ್ಞಾನಿಯೊಬ್ಬರು ಬಾಹ್ಯಾಕಾಶದಿಂದ ಜಿಗಿದು ಭೂಮಿಯನ್ನು ತಲುಪಿದ್ದಾರೆ ಎಂಬ ವಿಡಿಯೋ 2012ರದ್ದಾಗಿದ್ದು, ಅವರು ಆಸ್ಟ್ರೇಲಿಯಾದವರಲ್ಲ ಮತ್ತು ಆಸ್ಟ್ರಿಯನ್ ಪ್ರಜೆ ಫೆಲಿಕ್ಸ್ ಬಾಮ್‌ಗಾರ್ಟ್ನರ್ ಎಂಬವರಾಗಿದ್ದಾರೆ ಎಂದು ಗೊತ್ತಾಗಿದೆ.

ಇದನ್ನೂ ಓದಿ : FACT CHECK : ಕೋಲ್ಕತ್ತಾದಲ್ಲಿ ಪ್ರತಿಭಟನೆಯಿಂದ ಹಿಂದಿರುಗುತ್ತಿದ್ದ ಯುವತಿಯನ್ನು ಅತ್ಯಾಚಾರವೆಸಗಿ ಕೊಲೆ ಮಾಡಲಾಗಿದೆ ಎನ್ನುವುದು ಕಟ್ಟುಕಥೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...