Homeಫ್ಯಾಕ್ಟ್‌ಚೆಕ್FACT CHECK : ಬಾಹ್ಯಾಕಾಶದಿಂದ ಜಿಗಿದು ಭೂಮಿ ತಲುಪಿದ ವಿಜ್ಞಾನಿ ಆಸ್ಟ್ರೇಲಿಯಾದವರಲ್ಲ!

FACT CHECK : ಬಾಹ್ಯಾಕಾಶದಿಂದ ಜಿಗಿದು ಭೂಮಿ ತಲುಪಿದ ವಿಜ್ಞಾನಿ ಆಸ್ಟ್ರೇಲಿಯಾದವರಲ್ಲ!

- Advertisement -
- Advertisement -

ಆಸ್ಟ್ರೇಲಿಯಾದ ಖಗೋಳ ವಿಜ್ಞಾನಿಯೊಬ್ಬರು ಬಾಹ್ಯಾಕಾಶದಿಂದ ಜಿಗಿದು ಭೂಮಿಯನ್ನು ತಲುಪಿದ್ದಾರೆ ಎಂದು ವಿಡಿಯೋವೊಂದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗಿದೆ.

ಎಕ್ಸ್‌ನಲ್ಲಿ ಕಂಡು ಬಂದಿರುವ  ಪೋಸ್ಟ್‌ನಲ್ಲಿ “ಆಸ್ಟ್ರೇಲಿಯಾದ ಖಗೋಳಶಾಸ್ತ್ರಜ್ಞ 1,28,000 ಅಡಿಗಳಷ್ಟು ಬಾಹ್ಯಾಕಾಶದಿಂದ ಜಿಗಿದು ಭೂಮಿಯನ್ನು ತಲುಪುತ್ತಾನೆ … 1236 ಕಿ.ಮೀ. 4 ನಿಮಿಷ 5 ಸೆಕೆಂಡ್‌ಗಳಲ್ಲಿ ಪ್ರಯಾಣ ಮುಗಿಸಿದೆ… ಭೂಮಿ ಚಲಿಸುತ್ತಿರುವುದನ್ನು ಅವರು ಸ್ಪಷ್ಟವಾಗಿ ನೋಡಿದ್ದಾರೆ… ಅದ್ಭುತವಾದ ವಿಡಿಯೋ, ಇದನ್ನು ನೋಡಿ ಮತ್ತು ದಯವಿಟ್ಟು ನಿಮ್ಮ ಮಕ್ಕಳಿಗೆ ತೋರಿಸಿ” ಎಂದಿದೆ. ಹಲವು ಎಕ್ಸ್‌ ಖಾತೆ ಬಳಕೆದಾರರು ಇದೇ ಪ್ರತಿಪಾದನೆಯೊಂದಿಗೆ ಪೋಸ್ಟ್‌  ಹಂಚಿಕೊಂಡಿದ್ದಾರೆ.

ಫೇಸ್‌ಬುಕ್‌ನ ಹಲವು ಬಳಕೆದಾರರು ಇದೇ ಹೇಳಿಕೆಯೊಂದಿಗೆ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಹಾಗಿದ್ದರೆ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ? ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ವಿಡಿಯೋದ ಕೀ ಫ್ರೇಮ್‌ಗಳನ್ನು ತೆಗೆದು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಸರ್ಚ್ ಮಾಡಿದಾಗ, ವೈರಲ್ ವಿಡಿಯೋಗೆ ಸಂಬಂಧಿಸಿದಂತೆ ಕೆಲವು ವರದಿಗಳು ಲಭ್ಯವಾಗಿವೆ.

ಅಕ್ಟೋಬರ್ 15, 2012 ಆನ್‌ ಡಿಮ್ಯಾಂಡ್ ನ್ಯೂಸ್‌ ಯೂಟ್ಯೂಬ್‌ ಚಾನೆಲ್ ಪ್ರಕಟಿಸಿದ ವಿಡಿಯೋದಲ್ಲಿ “Space jump: Felix Baumgartner describes his record-breaking skydive” ಶೀರ್ಷಿಕೆಯಡಿಯಲ್ಲಿ ಫೆಲಿಕ್ಸ್ ಬಾಮ್‌ಗಾರ್ಟ್ನರ್ ಎಂಬವರು ಬಾಹ್ಯಾಕಾಶದಿಂದ ಸ್ಕೈಡೈವಿಂಗ್‌ ಮಾಡಿದ್ದ ಬಗ್ಗೆ ಹೇಳಲಾಗಿದೆ. ಈ ವಿಡಿಯೋವನ್ನು ಕೂಲಂಕಷವಾಗಿ ಪರಿಶೀಲಿಸಿದಾಗ ಇದು ವೈರಲ್‌ ವಿಡಿಯೋಗೆ ಸಾಮ್ಯತೆ ಇರುವಂತೆ ಕಂಡು ಬಂದಿದೆ. ಇದನ್ನು ಆಧಾರವಾಗಿಟ್ಟುಕೊಂಡು ಮತ್ತಷ್ಟು ಪರಿಶೀಲಿಸಿದಾಗ ಮಾಹಿತಿ ಲಭ್ಯವಾಗಿದೆ.

ಅಕ್ಟೋಬರ್ 14, 2022ರಂದು ರೆಡ್ ಬುಲ್‌ ಯೂಟ್ಯೂಬ್‌ ಚಾನೆಲ್ ಪ್ರಕಟಿಸಿದ ವಿಡಿಯೋದಲ್ಲಿ “I Jumped From Space (World Record Supersonic Freefall)” ಶೀರ್ಷಿಕೆಯಿದ್ದು ಫೆಲಿಕ್ಸ್ ಬಾಮ್‌ಗಾರ್ಟ್ನರ್ ಅವರು ಬಾಹ್ಯಾಕಾಶದಿಂದ ನೆಗೆದ ಬಗ್ಗೆ ಮಾಹಿತಿ ಇದೆ. ಈ ವಿಡಿಯೋದ ವಿವರಣೆಯಲ್ಲಿ, “ಬಾಹ್ಯಾಕಾಶದಿಂದ ಜಿಗಿಯಲು *ನಿಜವಾಗಿ* ಏನನಿಸುತ್ತದೆ? 2012 ರಲ್ಲಿ ಫೆಲಿಕ್ಸ್ ಬೌಮ್ಗಗರ್ಟ್ನರ್ ಅವರು ಹೀಲಿಯಂ ಬಲೂನ್ ಅನ್ನು ವಾಯುಮಂಡಲಕ್ಕೆ ತೆಗೆದುಕೊಂಡು ವಿಶೇಷವಾಗಿ ತಯಾರಿಸಿದ ಬಾಹ್ಯಾಕಾಶ ಸೂಟ್‌ನಲ್ಲಿ ಭೂಮಿಗೆ ವಾಪಾಸಾದರು. ಫ್ರೀ ಫಾಲ್‌ನಲ್ಲಿ ಅವರು ಶಬ್ದದ ವೇಗವನ್ನು ಬೇದಿಸಿ ಭೂಮಿಗೆ ಪ್ರವೇಶಿಸಿದರು. ಈ ವೇಳೆ ಅವರು ತಿರುಗಿದ್ದು ಇಡೀ ರೆಡ್ ಬುಲ್ ಸ್ಟ್ರಾಟೋಸ್ ಮಿಷನ್‌ಗೆ ಬೆದರಿಕೆ ಹಾಕಿತು… ಫೆಲಿಕ್ಸ್ ಅವರು ಸಾಧನೆಯನ್ನು ಪ್ರತಿಬಿಂಬಿಸುತ್ತಾರೆ ಮತ್ತು ಬಾಹ್ಯಾಕಾಶದಿಂದ ಜಿಗಿಯಲು ಏನ್ನಿಸಿತು ಎಂಬುದನ್ನು ನಿಜವಾಗಿ ಹಂಚಿಕೊಳ್ಳುತ್ತಾರೆ” ಎಂದಿದೆ.

ಫೆಲಿಕ್ಸ್ ಬಾಮ್‌ಗಾರ್ಟ್ನರ್ ಅವರ ಐತಿಹಾಸಿಕ ನೆಗೆತಕ್ಕೆ 10ವರ್ಷ ಆದ ಬಗ್ಗೆ ಸಿಎನ್‌ಎನ್‌ ಅಕ್ಟೋಬರ್ 14, 2022ರಂದು ವರದಿಯನ್ನು ಪ್ರಕಟಿಸಿದ್ದು, ಅವರ ಬಾಹ್ಯಾಕಾಶ ನೆಗೆತದ ಬಗ್ಗೆ ಮೆಲುಕು ಹಾಕಿದೆ.

ಗಿನ್ನಿಸ್ ವರ್ಲ್ಡ್ ರೆಕಾರ್ಡ್ ತನ್ನ ವೆಬ್‌ ಸೈಟ್ ನಲ್ಲಿ ನೀಡಿದ ಲೇಖನದಲ್ಲಿ, “ಆಸ್ಟ್ರಿಯಾದ ಸ್ಕೈಡೈವರ್ ಫೆಲಿಕ್ಸ್ ಬಾಮ್‌ಗಾರ್ಟ್ನರ್ 38,969.4 ಮೀಟರ್ ಎತ್ತರದಿಂದ ಪ್ಯಾರಾಚೂಟ್ ಜಿಗಿತವನ್ನು ಪೂರ್ಣಗೊಳಿಸಿದ ಮಹತ್ವದ ಕ್ಷಣವನ್ನು ವೀಕ್ಷಿಸಲು ಅಭೂತಪೂರ್ವ ಎಂಟು ಮಿಲಿಯನ್ ಜನರು 14 ಅಕ್ಟೋಬರ್ 2012 ರಂದು ಯೂಟ್ಯೂಬ್‌ ವೀಕ್ಷಣೆ ಮಾಡಿದ್ದಾರೆ. ಈ ಮೂಲಕ ಎಂಟು ವಿಶ್ವ ದಾಖಲೆಗಳನ್ನು ಮತ್ತು ಕೇವಲ ಮೂರು ಗಂಟೆಗಳ ಅಂತರದಲ್ಲಿ ಬಾಹ್ಯಾಕಾಶದ ಧ್ವನಿ ತಡೆಗೋಡೆಯನ್ನು ಮುರಿದಿದ್ದಾರೆ” ಎಂದಿದೆ.

ಇದರೊಂದಿಗೆ ಫೆಲಿಕ್ಸ್ ಬಾಮ್‌ಗಾರ್ಟ್ನರ್ ರಾಷ್ಟ್ರೀಯತೆಯನ್ನು ಪರಿಶೀಲಿಸಲು ಅವರ ವೆಬ್‌ ಸೈಟ್ ವೀಕ್ಷಿಸಿದ್ದೇವೆ. ಇದರಲ್ಲಿ ಅವರ ವಿವರಗಳನ್ನು ನೀಡಲಾಗಿದ್ದು, ಅವರು ಆಸ್ಟ್ರಿಯನ್‌ ಪ್ರಜೆ ಎಂದು ಉಲ್ಲೇಖಿಸಿರುವುದನ್ನು ನೋಡಬಹುದು.

ಒಟ್ಟಾರೆಯಾಗಿ ಹೇಳುವುದಾದರೆ, ಆಸ್ಟ್ರೇಲಿಯಾದ ಖಗೋಳ ವಿಜ್ಞಾನಿಯೊಬ್ಬರು ಬಾಹ್ಯಾಕಾಶದಿಂದ ಜಿಗಿದು ಭೂಮಿಯನ್ನು ತಲುಪಿದ್ದಾರೆ ಎಂಬ ವಿಡಿಯೋ 2012ರದ್ದಾಗಿದ್ದು, ಅವರು ಆಸ್ಟ್ರೇಲಿಯಾದವರಲ್ಲ ಮತ್ತು ಆಸ್ಟ್ರಿಯನ್ ಪ್ರಜೆ ಫೆಲಿಕ್ಸ್ ಬಾಮ್‌ಗಾರ್ಟ್ನರ್ ಎಂಬವರಾಗಿದ್ದಾರೆ ಎಂದು ಗೊತ್ತಾಗಿದೆ.

ಇದನ್ನೂ ಓದಿ : FACT CHECK : ಕೋಲ್ಕತ್ತಾದಲ್ಲಿ ಪ್ರತಿಭಟನೆಯಿಂದ ಹಿಂದಿರುಗುತ್ತಿದ್ದ ಯುವತಿಯನ್ನು ಅತ್ಯಾಚಾರವೆಸಗಿ ಕೊಲೆ ಮಾಡಲಾಗಿದೆ ಎನ್ನುವುದು ಕಟ್ಟುಕಥೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...