Homeಕರ್ನಾಟಕಮುಡಾ ವಿವಾದ: ನಿವೇಶನ ಹಿಂಪಡೆಯುವಂತೆ ಆಯುಕ್ತರಿಗೆ ಪತ್ರ ಬರೆದ ಪಾರ್ವತಿ, ಮೆಚ್ಚುಗೆ ವ್ಯಕ್ತಪಡಿಸಿದ ಸಿದ್ದರಾಮಯ್ಯ

ಮುಡಾ ವಿವಾದ: ನಿವೇಶನ ಹಿಂಪಡೆಯುವಂತೆ ಆಯುಕ್ತರಿಗೆ ಪತ್ರ ಬರೆದ ಪಾರ್ವತಿ, ಮೆಚ್ಚುಗೆ ವ್ಯಕ್ತಪಡಿಸಿದ ಸಿದ್ದರಾಮಯ್ಯ

- Advertisement -
- Advertisement -

ತಮ್ಮ ಜಮೀನಿಗೆ ಪರಿಹಾರವಾಗಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ (ಮುಡಾ) ಬದಲಿ ನಿವೇಶನಗಳನ್ನು ಪಡೆದಿದ್ದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಪತ್ನಿ ಪಾರ್ವತಿ, ವಿವಾದದ ಬಳಿಕ ಎಲ್ಲ ನಿವೇಶಗಳನ್ನು ಹಿಂಪಡೆಯುವಂತರ ಮುಡಾ ಆಯುಕ್ತರಿಗೆ ಪತ್ರ ಬರೆದಿದ್ದಾರೆ. ಪಾರ್ವತಿ ಅವರ ನಿರ್ಧಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಸುದೀರ್ಘ ಪತ್ರ ಬರೆದಿರುವ ಪಾರ್ವತಿಯವರು, “ನನಗೆ ಈ ನಿವೇಶನ, ಮನೆ, ಆಸ್ತಿ, ಸಂಪತ್ತು ಯಾವುದೂ ಕೂಡ ನನ್ನ ಪತಿಯ ಗೌರವ, ಘನತೆ, ಮರ್ಯಾದೆ ಮತ್ತು ಅವರ ನೆಮ್ಮದಿಗಿಂತ ದೊಡ್ಡದಲ್ಲ. ಇಷ್ಟು ವರ್ಷಗಳ ಕಾಲ ಅಧಿಕಾರದಲ್ಲಿದ್ದ ಅವರಿಂದ ಏನನ್ನೂ ನನಗಾಗಲೀ, ನನ್ನ ಕುಟುಂಬಕ್ಕಾಗಲೀ ಬಯಸದೇ ಇದ್ದ ನನಗೆ ಈ ನಿವೇಶನಗಳು ತೃಣಕ್ಕೆ ಸಮ” ಎಂದು ಹೇಳಿದ್ದಾರೆ.

“ನನ್ನ ಪತಿಯಾಗಿರುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ 40 ವರ್ಷದ ಸುದೀರ್ಘ ರಾಜಕಾರಣದಲ್ಲಿ ಯಾವುದೇ ಸಣ್ಣ ಕಳಂಕವೂ ಅಂಟಿಕೊಳ್ಳದಂತಹ ನೈತಿಕತೆಯನ್ನು ವ್ರತದಂತೆ ಪಾಲಿಸಿಕೊಂಡು ಬಂದವರು. ರಾಜಕೀಯವೂ ಸೇರಿದಂತೆ ಸಾರ್ವಜನಿಕ ಜೀವನದಲ್ಲಿ ಕಾಣಿಸಿಕೊಂಡು ಅವರಿಗೆ ಮುಜುಗರ ಉಂಟು ಮಾಡಬಾರದು ಎಂಬ ನಿರ್ಧಾರಕ್ಕೆ ಬದ್ಧಳಾಗಿ ಬದುಕಿದವಳು. ನಾನೆಂದೂ ಮನೆ, ಆಸ್ತಿ, ಚಿನ್ನ, ಸಂಪತ್ತನ್ನು ಬಯಸಿದವಳಲ್ಲ. ಯಾವುದೇ ಕಾರಣಕ್ಕೂ ನನ್ನಿಂದ ಅವರ ರಾಜಕೀಯ ಜೀವನಕ್ಕೆ ಒಂದು ಸಣ್ಣ ಹನಿಯಷ್ಟೂ ಕಳಂಕ ತಟ್ಟಬಾರದೆಂದು ಎಚ್ಚರಿಕೆಯಿಂದ ನಡೆದುಕೊಂಡವಳು. ನನ್ನ ಪತಿಗೆ ರಾಜ್ಯದ ಜನತೆ ಹರಿಸುತ್ತಾ ಬಂದ ಪ್ರೀತಿ ಅಭಿಮಾನಗಳನ್ನು ದೂರದಿಂದಲೇ ಕಂಡು ಸಂತೋಷ ಮತ್ತು ಹೆಮ್ಮೆ ಪಟ್ಟವಳು” ಎಂದು ವಿವರಿಸಿದ್ದಾರೆ.

“ಹೀಗಿದ್ದರೂ ಮೈಸೂರಿನ ಮುಡಾ ನಿವೇಶನಕ್ಕೆ ಸಂಬಂಧಿಸಿದಂತೆ ಕೇಳಿಬಂದ ಆರೋಪಗಳಿಂದ ನಾನು ಘಾಸಿಗೊಂಡಿದ್ದೇನೆ. ನನ್ನ ಸ್ವಂತ ಸೋದರ ಅರಿಶಿನ–ಕುಂಕುಮದ ಭಾಗವಾಗಿ ಕೊಟ್ಟ ಜಮೀನಿಗೆ ಬದಲಿಗೆ ಪಡೆದ ನಿವೇಶನಗಳು ಇಷ್ಟೊಂದು ರಾದ್ಧಾಂತವಾಗುತ್ತದೆ. ಇದರಿಂದ ನನ್ನ ಪತಿಯವರು ಅನ್ಯಾಯವಾಗಿ ಆರೋಪಗಳನ್ನು ಎದುರಿಸುವಂತಾಗಬಹುದು ಎನ್ನುವುದನ್ನು ನಾನು ಊಹಿಸಿದವಳೂ ಅಲ್ಲ. ನನಗೆ ಈ ನಿವೇಶನ, ಮನೆ, ಆಸ್ತಿ, ಸಂಪತ್ತು ಯಾವುದೂ ಕೂಡ ನನ್ನ ಪತಿಯ ಗೌರವ, ಘನತೆ, ಮರ್ಯಾದೆ ಮತ್ತು ಅವರ ನೆಮ್ಮದಿಗಿಂತ ದೊಡ್ಡದಲ್ಲ. ಇಷ್ಟು ವರ್ಷಗಳ ಕಾಲ ಅಧಿಕಾರದಲ್ಲಿದ್ದ ಅವರಿಂದ ಏನನ್ನೂ ನನಗಾಗಲೀ, ನನ್ನ ಕುಟುಂಬಕ್ಕಾಗಲೀ ಬಯಸದೇ ಇದ್ದ ನನಗೆ ಈ ನಿವೇಶನಗಳು ತೃಣಕ್ಕೆ ಸಮ. ಈ ಹಿನ್ನೆಲೆಯಲ್ಲಿ ವಿವಾದಕ್ಕೆ ಕಾರಣವಾಗಿರುವ ಮುಡಾದ 14 ನಿವೇಶನಗಳನ್ನು ವಾಪಸ್ ಮಾಡಲು ನಿರ್ಧರಿಸಿದ್ದೇನೆ” ಎಂದು ಪಾರ್ವತಿ ಅವರು ಘೋಷಿಸಿದ್ದಾರೆ.

“ಈ ಬಗ್ಗೆ ನನ್ನ ಪತಿಯವರ ಅಭಿಪ್ರಾಯ ಏನಿದೆ ಎನ್ನುವುದು ನನಗೆ ತಿಳಿದಿಲ್ಲ. ನನ್ನ ಮಗನ ಬಳಿಯಾಗಲಿ, ನನ್ನ ಕುಟುಂಬದ ಇತರ ಸದಸ್ಯರ ಬಳಿಯಾಗಲಿ ಇದರ ಬಗ್ಗೆ ನಾನು ಚರ್ಚಿಸಿಲ್ಲ. ಇದು ನಾನು ನನ್ನ ಆತ್ಮ ಸಾಕ್ಷಿಯ ಕರೆಗೆ ಓಗೊಟ್ಟು ಪ್ರಜ್ಞಾಪೂರ್ವಕವಾಗಿ ಕೈಗೊಂಡಿರುವ ತೀರ್ಮಾನ. ಈ ಹಂತದಲ್ಲಿ ಇಂತಹ ನಿರ್ಧಾರಕ್ಕೆ ಏಕೆ ಬಂದಿರಿ? ಎಂದು ಯಾರಾದರೂ ಕೇಳಬಹುದು. ಆರೋಪ ಕೇಳಿ ಬಂದ ದಿನವೇ ನಾನು ಈ ನಿರ್ಧಾರ ಮಾಡಿದ್ದೆ. ಆದರೆ, ಈ ಮುಡಾ ನಿವೇಶನ ಹಂಚಿಕೆಯ ಆರೋಪವನ್ನು ರಾಜಕೀಯ ದುರುದ್ದೇಶದಿಂದ ಮಾಡಲಾಗಿದ್ದು, ಈ ಅನ್ಯಾಯದ ವಿರುದ್ಧ ಹೋರಾಡಬೇಕು. ಅವರ ಸಂಚಿಗೆ ನಾವು ಬಲಿಯಾಗಬಾರದು ಎಂದು ಕೆಲವು ಹಿತೈಷಿಗಳು ಹೇಳಿದ ಕಾರಣಕ್ಕೆ ನಿವೇಶನ ವಾಪಸು ಮಾಡಬೇಕೆಂಬ ನಿರ್ಧಾರವನ್ನು ಕೈ ಬಿಟ್ಟಿದ್ದೆ” ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.

“ನನ್ನ ಈ ನಿರ್ಧಾರ ಅಚಲವಾಗಿದ್ದು, ಈ ನಿವೇಶನಗಳನ್ನು ವಾಪಸು ನೀಡುವುದರ ಜೊತೆಗೆ ಮುಡಾಕ್ಕೆ ಸಂಬಂಧಿಸಿದ ಎಲ್ಲ ಆರೋಪಗಳ ಬಗ್ಗೆ ಸಮಗ್ರ ತನಿಖೆ ಮಾಡಬೇಕೆಂದು ಆಗ್ರಹಿಸುತ್ತೇನೆ. ಕೊನೆಯದಾಗಿ, ಎಲ್ಲ ರಾಜಕೀಯ ಪಕ್ಷದ ನಾಯಕರು ಮತ್ತು ಮಾಧ್ಯಮ ಕ್ಷೇತ್ರದ ಬಂಧುಗಳಲ್ಲಿ ನನ್ನ ವಿನಮ್ರ ವಿನಂತಿ. ದಯವಿಟ್ಟು ರಾಜಕೀಯ ಕ್ಷೇತ್ರದಿಂದ ದೂರವಿದ್ದು, ತಮ್ಮ ಪಾಡಿಗೆ ತಾವಿರುವ ರಾಜಕೀಯ ಕುಟುಂಬದ ಹೆಣ್ಣು ಮಕ್ಕಳನ್ನು ರಾಜಕೀಯ ದ್ವೇಷ ಸಾಧನೆಗಾಗಿ ವಿವಾದದ ಕಣಕ್ಕೆ ಎಳೆದು ತಂದು ಅವರ ಘನತೆ, ಗೌರವಗಳಿಗೆ ಹಾನಿ ಮಾಡಬೇಡಿ” ಎಂದು ಅವರು ಮನವಿ ಮಾಡಿದ್ದಾರೆ.

ಪತ್ನಿ ನಿರ್ಧಾರಕ್ಕೆ ಸಿದ್ದರಾಮಯ್ಯ ಮೆಚ್ಚುಗೆ

ನಿವೇಶನ ಹಿಂತಿರುಗಿಸುವ ಪತ್ನಿ ಪಾರ್ವತಿ ನಿರ್ಧಾರಕ್ಕೆ ಮೆಚ್ಚುಗೆ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, “ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ ಜಮೀನಿಗೆ ಪರಿಹಾರ ರೂಪದಲ್ಲಿ ನೀಡಿದ್ದ ನಿವೇಶನಗಳನ್ನು ನನ್ನ ಪತ್ನಿ ಪಾರ್ವತಿ ಹಿಂದಿರುಗಿಸಿದ್ದಾರೆ. ನನ್ನ ವಿರುದ್ದ ರಾಜಕೀಯ ದ್ವೇಷ ಸಾಧನೆಗಾಗಿ ವಿರೋಧ ಪಕ್ಷಗಳು ಸುಳ್ಳು ದೂರನ್ನು ಸೃಷ್ಟಿಸಿ ನನ್ನ ಕುಟುಂಬವನ್ನು ವಿವಾದಕ್ಕೆ ಎಳೆದು ತಂದಿರುವುದು ರಾಜ್ಯದ ಜನತೆಗೂ ತಿಳಿದಿದೆ. ಈ ಅನ್ಯಾಯಕ್ಕೆ ತಲೆಬಾಗದೆ ಹೋರಾಟ ಮಾಡಬೇಕೆಂಬುದು ನನ್ನ ನಿಲುವಾಗಿತ್ತು. ಆದರೆ ನನ್ನ ವಿರುದ್ಧ ನಡೆಯುತ್ತಿರುವ ರಾಜಕೀಯ ಷಡ್ಯಂತ್ರದಿಂದ ನೊಂದಿರುವ ನನ್ನ ಪತ್ನಿ ಈ ನಿವೇಶನಗಳನ್ನು ಹಿಂದಿರುಗಿಸುವ ನಿರ್ಧಾರ ಕೈಗೊಂಡು, ನನಗೂ ಆಶ್ಚರ್ಯ ಉಂಟು ಮಾಡಿದ್ದಾರೆ” ಎಂದು ಹೇಳಿದ್ದಾರೆ.

“ನನ್ನ ನಾಲ್ಕು ದಶಕಗಳ ಸುದೀರ್ಘ ರಾಜಕಾರಣದಲ್ಲಿ ಎಂದೂ ಕೂಡಾ ಮಧ್ಯೆಪ್ರವೇಶಿಸದೆ ಕುಟುಂಬಕ್ಕಷ್ಟೆ ಸೀಮಿತವಾಗಿದ್ದ ನನ್ನ ಪತ್ನಿ ನನ್ನ ವಿರುದ್ಧದ ದ್ವೇಷದ ರಾಜಕಾರಣಕ್ಕೆ ಬಲಿಯಾಗಿ ಮಾನಸಿಕವಾಗಿ ಹಿಂಸೆ ಅನುಭವಿಸುವಂತಾಗಿರುವುದಕ್ಕೆ ನನಗೆ ವಿಷಾದ ಇದೆ. ಹೀಗಿದ್ದರೂ ನಿವೇಶನಗಳನ್ನು ಹಿಂದಿರುಗಿಸಿದ ನನ್ನ ಪತ್ನಿಯ ನಿರ್ಧಾರವನ್ನು ನಾನು ಗೌರವಿಸುತ್ತೇನೆ” ಎಂದಿದ್ದಾರೆ.

ಇದನ್ನೂ ಓದಿ; ಮುಡಾ ಪ್ರಕರಣ : ಸಿಎಂ ಸಿದ್ದರಾಮಯ್ಯ ವಿರುದ್ದ ECIR ದಾಖಲಿಸಿದ ಇಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...