Homeಮುಖಪುಟನಗರಗಳಲ್ಲಿ ಒಳಚರಂಡಿ, ಸೆಪ್ಟಿಕ್ ಟ್ಯಾಂಕ್‌ಗಳನ್ನು ಸ್ವಚ್ಛಗೊಳಿಸುವ ಶೇ.92ರಷ್ಟು ಕಾರ್ಮಿಕರು ಎಸ್‌ಸಿ, ಎಸ್‌ಟಿ, ಒಬಿಸಿ ವರ್ಗದವರು :...

ನಗರಗಳಲ್ಲಿ ಒಳಚರಂಡಿ, ಸೆಪ್ಟಿಕ್ ಟ್ಯಾಂಕ್‌ಗಳನ್ನು ಸ್ವಚ್ಛಗೊಳಿಸುವ ಶೇ.92ರಷ್ಟು ಕಾರ್ಮಿಕರು ಎಸ್‌ಸಿ, ಎಸ್‌ಟಿ, ಒಬಿಸಿ ವರ್ಗದವರು : ವರದಿ

- Advertisement -
- Advertisement -

ಭಾರತದ 29 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 3 ಸಾವಿರ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಗಳಲ್ಲಿ ಒಳಚರಂಡಿ ಮತ್ತು ಸೆಪ್ಟಿಕ್ ಟ್ಯಾಂಕ್‌ಗಳನ್ನು ಸ್ವಚ್ಚಗೊಳಿಸುವ ಅಪಾಯಕಾರಿ ಕೆಲಸಗಳಲ್ಲಿ ತೊಡಗಿರುವ, 38,000 ಕಾರ್ಮಿಕರಲ್ಲಿ ಶೇ. 91.9ರಷ್ಟು ಜನರು ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ವರ್ಗದವರು ಎಂದು ಕೇಂದ್ರ ಸರ್ಕಾರದ ವರದಿಯಿಂದ ತಿಳಿದು ಬಂದಿದೆ.

ಒಟ್ಟು ಶೇ. 91.9ರಷ್ಟು ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ಕಾರ್ಮಿಕರ ಪೈಕಿ, ಶೇ. 68.9ರಷ್ಟು ಪರಿಶಿಷ್ಟ ಜಾತಿ (ಎಸ್‌ಸಿ), ಶೇ. 14.7 ಇತರ ಹಿಂದುಳಿದ ವರ್ಗಗಳು (ಒಬಿಸಿ) ಮತ್ತು ಶೇ.8.3ರಷ್ಟು ಪರಿಶಿಷ್ಟ ವರ್ಗ (ಎಸ್‌ಟಿ) ಕಾರ್ಮಿಕರಿದ್ದಾರೆ. ಸಾಮಾನ್ಯ ವರ್ಗದವರು ಶೇ.8ಕ್ಕಿಂತ ಕಡಿಮೆ ಇದ್ದಾರೆ.

ಎಲ್ಲಾ ಒಳಚರಂಡಿ ಕೆಲಸಗಳನ್ನು ಯಾಂತ್ರೀಕರಿಸಲು ಮತ್ತು ಈ ಅಪಾಯಕಾರಿ ಕೆಲಸದಿಂದಾಗಿ ಸಾವುಗಳನ್ನು ತಡೆಯಲು ಹಮ್ಮಿಕೊಂಡಿರುವ ‘ನಮಸ್ತೆ’ ಕಾರ್ಯಕ್ರಮದ ಅಂಗವಾಗಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯವು ಒಳಚರಂಡಿ ಮತ್ತು ಸೆಪ್ಟಿಕ್ ಟ್ಯಾಂಕ್ ಕಾರ್ಮಿಕರ ಎಣಿಕೆ ಕಾರ್ಯವನ್ನು ನಡೆಸುತ್ತಿದೆ.

2023-24ರಲ್ಲಿ ಮ್ಯಾನ್ಯುವಲ್ ಸ್ಕ್ಯಾವೆಂಜರ್‌ಗಳ ಪುನರ್ವಸತಿಗಾಗಿ ಸ್ವಯಂ ಉದ್ಯೋಗ ಯೋಜನೆ(ಎಸ್‌ಆರ್‌ಎಂಎಸ್)ಯ ಬದಲು ಈ ಯೋಜನೆಯನ್ನು ತರಲಾಗಿದೆ.

ಸರ್ಕಾರ ಸಂಸತ್ತಿನಲ್ಲಿ ಮಂಡಿಸಿದ ದತ್ತಾಂಶಗಳಂತೆ 2019 ಮತ್ತು 2023ರ ನಡುವೆ ಒಳಚರಂಡಿಗಳು ಮತ್ತು ಸೆಪ್ಟಿಕ್ ಟ್ಯಾಂಕ್‌ಗಳನ್ನು ಸ್ವಚ್ಛಗೊಳಿಸುವ ಅಪಾಯಕಾರಿ ಕೆಲಸದಿಂದ ದೇಶಾದ್ಯಂತ ಕನಿಷ್ಠ 377 ಜನರು ಮೃತಪಟ್ಟಿದ್ದಾರೆ.

ಮಲ ಹೊರುವುದು ಒಂದು ಪದ್ಧತಿಯಾಗಿ ದೇಶದಾದ್ಯಂತ ಅಂತ್ಯಗೊಂಡಿದೆ. ಒಳಚರಂಡಿ ಹಾಗೂ ಸೆಪ್ಟಿಕ್ ಟ್ಯಾಂಕ್‌ಗಳ ಅಪಾಯಕಾರಿ ಶುಚಿತ್ವವನ್ನು ನಿಲ್ಲಿಸುವುದು ಈಗಿನ ಅಗತ್ಯವಾಗಿದೆ ಎನ್ನುವುದು ಕೇಂದ್ರ ಸರ್ಕಾರದ ವಾದ.

ಮಲಗುಂಡಿಗಳನ್ನು ಸ್ವಚ್ಛಗೊಳಿಸುವ ವಾಹನಗಳ ಚಾಲಕರು, ಸಹಾಯಕರು,ಯಂತ್ರ ನಿರ್ವಾಹಕರು ಮತ್ತು ಕ್ಲೀನರ್‌ಗಳು ಸೇರಿದಂತೆ ಒಳಚರಂಡಿ ಮತ್ತು ಸೆಪ್ಟಿಕ್ ಟ್ಯಾಂಕ್‌ಗಳ ಸ್ವಚ್ಛತೆಯೊಂದಿಗೆ ನೇರವಾಗಿ ಗುರುತಿಸಿಕೊಂಡಿರುವ ಕಾರ್ಮಿಕರನ್ನು ನಮಸ್ತೆ ಕಾರ್ಯಕ್ರಮವು ಗುರಿಯಾಗಿಸಿಕೊಂಡಿದೆ ಎಂದು ಸಚಿವಾಲಯವು ಹೇಳಿದೆ.

ರಾಷ್ಟ್ರೀಯ ಮಟ್ಟದಲ್ಲಿ ಇಂತಹ ಕಾರ್ಮಿಕರ ಎಣಿಕೆ, ಅವರಿಗೆ ಸುರಕ್ಷತಾ ತರಬೇತಿ ಮತ್ತು ಸಲಕರಣೆಗಳ ಒದಗಿಸುವಿಕೆ ಹಾಗೂ ಒಳಚರಂಡಿ ಮತ್ತು ಸೆಪ್ಟಿಕ್ ಟ್ಯಾಂಕ್ ಕಾರ್ಮಿಕರನ್ನು ‘ಸ್ಯಾನಿಪ್ರಿನಿಯರ್ಸ್’ ಅಥವಾ ನೈರ್ಮಲ್ಯ ಉದ್ಯಮಿಗಳನ್ನಾಗಿ ಪರಿವರ್ತಿಸಲು ಬಂಡವಾಳ ಸಬ್ಸಿಡಿಗಳನ್ನು ನೀಡುವುದು ಅದರ ಗುರಿಯಾಗಿದೆ.

ಜಾತಿ ಗಣತಿಗೆ ಆಗ್ರಹಿಸಿದ ಕಾಂಗ್ರೆಸ್

ಸರ್ಕಾರದ ವರದಿಯ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಕಾಂಗ್ರೆಸ್, “ದೇಶದಲ್ಲಿ ಒಳಚರಂಡಿ ಮತ್ತು ಸೆಪ್ಟಿಕ್ ಟ್ಯಾಂಕ್‌ಗಳನ್ನು ಸ್ವಚ್ಛಗೊಳಿಸುವ 92% ಜನರು ಎಸ್‌ಸಿ, ಎಸ್‌ಟಿ, ಒಬಿಸಿ ವರ್ಗಗಳಿಂದ ಬಂದವರು. ಈ ಡೇಟಾವು ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ವರ್ಗದ ಜನರ ಜೀವನವು ಬಲವಂತದ ಪರಿಸ್ಥಿತಿಗಳಿಗೆ ತಳ್ಳಲ್ಪಟ್ಟಿದೆ ಎಂಬುವುದನ್ನು ತೋರಿಸುತ್ತದೆ. ಇಂದು ಜಾತಿ ಗಣತಿ ಅಗತ್ಯವಾಗಿದ್ದು, ಅದರಿಂದ ಸರ್ಕಾರದ ಯೋಜನೆಗಳಲ್ಲಿ ಈ ವರ್ಗಗಳ ಸಹಭಾಗಿತ್ವವನ್ನು ಖಚಿತಪಡಿಸಿಕೊಳ್ಳಬಹುದಾಗಿದೆ. ಕಾಂಗ್ರೆಸ್ ಯಾವುದೇ ಬೆಲೆ ತೆತ್ತಾದರೂ ಜಾತಿ ಗಣತಿಯ ಆಗ್ರಹವನ್ನು ಮುಂದುವರಿಸಲಿದೆ. ದೇಶದ 90% ಜನರು ತಮ್ಮ ಹಕ್ಕುಗಳನ್ನು ಪಡೆಯುವುದನ್ನು ಖಚಿತಪಡಿಸಲಿದೆ” ಎಂದು ಹೇಳಿದೆ.

ಇದನ್ನೂ ಓದಿ : ‘ಪ್ರತಿಭೆ ವ್ಯರ್ಥವಾಗಲು ಬಿಡುವುದಿಲ್ಲ..’; ದಲಿತ ವಿದ್ಯಾರ್ಥಿ ಪರವಾಗಿ ಐಐಟಿಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...