Homeಮುಖಪುಟ'ಬಾಲಕಿ ಆಘಾತಗೊಂಡಿಲ್ಲ' ಎಂದು ಅತ್ಯಾಚಾರ ಆರೋಪಿಯನ್ನು ಖುಲಾಸೆಗೊಳಿಸಿದ ಕೋರ್ಟ್

‘ಬಾಲಕಿ ಆಘಾತಗೊಂಡಿಲ್ಲ’ ಎಂದು ಅತ್ಯಾಚಾರ ಆರೋಪಿಯನ್ನು ಖುಲಾಸೆಗೊಳಿಸಿದ ಕೋರ್ಟ್

"ದೌರ್ಜನ್ಯ ನಡೆದಿದ್ದರೆ ಬಾಲಕಿ ಭಯಭೀತಳಾಗಬೇಕಿತ್ತು, ಸಹಜವಾಗಿ ವರ್ತಿಸುತ್ತಿರಲಿಲ್ಲ" ಎಂದ ನ್ಯಾಯಾಲಯ

- Advertisement -
- Advertisement -

“ಬಾಲಕಿ ಮೇಲೆ ಅತ್ಯಾಚಾರ ನಡೆದಿದ್ದರೆ, ಆಕೆ ಭಯಭೀತಳಾಗಬೇಕಿತ್ತು. ಸಹಜವಾಗಿ ವರ್ತಿಸುತ್ತಿರಲಿಲ್ಲ ಮತ್ತು ಆಟವಾಡುತ್ತಿರಲಿಲ್ಲ” ಎಂದಿರುವ ಬಾಂಬೆ ಹೈಕೋರ್ಟ್‌ನ ನಾಗ್ಪುರ ಪೀಠ, ಅಪ್ರಾಪ್ತ ಬಾಲಕಿಯ ಅತ್ಯಾಚಾರ ಆರೋಪಿಯನ್ನು ಇತ್ತೀಚೆಗೆ ದೋಷಮುಕ್ತಗೊಳಿಸಿದೆ ಎಂದು ಲೈವ್ ಲಾ ವರದಿ ಮಾಡಿದೆ.

ನ್ಯಾಯಮೂರ್ತಿ ಗೋವಿಂದ್ ಸನಪ್ ಅವರ ಏಕ ಸದಸ್ಯ ಪೀಠ ಬಾಲಕಿಯ ತಾಯಿಯ ಆರೋಪವನ್ನು ಗಮನಿಸಿದೆ. ಆಕೆ (ತಾಯಿ) ಹೇಳಿದಂತೆ ಸಮಾಜ ಮಂದಿರದಲ್ಲಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ. ಆಕೆ (ತಾಯಿ) ಘಟನಾ ಸ್ಥಳಕ್ಕೆ ಹೋದಾಗ ಬಾಲಕಿ ಆಟವಾಡುತ್ತಿದ್ದಳು.

“ತಾನು ಘಟನಾ ಸ್ಥಳಕ್ಕೆ ಹೋದಾಗ ಸಂತ್ರಸ್ಥೆ ಆಟವಾಡುತ್ತಿದ್ದಳು ಎಂದು ಬಾಲಕಿಯ ತಾಯಿ ಹೇಳಿದ್ದಾರೆ. ಒಂದು ವೇಳೆ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದ್ದರೆ, ಅದು ಗಂಭೀರ ವಿಷಯವಾಗಿದೆ. ಅಂತಹ ಕೃತ್ಯ ನಿಸ್ಸಂಶಯವಾಗಿ ಆಕೆಯನ್ನು ಭಯಭೀತಗೊಳಿಸಬೇಕಿತ್ತು. ಅಲ್ಲದೆ, ಭಾರೀ ನೋವು, ಸಂಕಟ ಮತ್ತು ಆಘಾತ ಉಂಟುಮಾಡಬೇಕಿತ್ತು” ಎಂದು ಆಗಸ್ಟ್ 14 ರಂದು ನೀಡಿದ ಆದೇಶದಲ್ಲಿ ನ್ಯಾಯಾಧೀಶರು ಹೇಳಿದ್ದಾರೆ. ಈ ಆದೇಶ ಪ್ರತಿ ಕಳೆದ ಗುರುವಾರ ಲಭ್ಯವಾಗಿದೆ ಎಂದು ಲೈವ್ ಲಾ ವರದಿ ಹೇಳಿದೆ.

ಸಾಮಾನ್ಯವಾಗಿ, ಇಂತಹ ಕೃತ್ಯದ (ಲೈಂಗಿಕ ದೌರ್ಜನ್ಯ) ನಂತರ ಸಂತ್ರಸ್ತೆ ಘಟನಾ ಸ್ಥಳದಿಂದ ಮನೆಗೆ ಓಡಿ ಹೋಗಿ ತನ್ನ ತಾಯಿಗೆ ಘಟನೆಯನ್ನು ವಿವರಿಸುತ್ತಾಳೆ ಎಂದೂ ನ್ಯಾಯಾಧೀಶರು ಹೇಳಿದ್ದಾರೆ.

2019ರ ಮಾರ್ಚ್‍ನಲ್ಲಿ ನಡೆದ ಪ್ರಕರಣದಲ್ಲಿ ಎಂಟು ವರ್ಷ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಅಮರಾವತಿ ಜಿಲ್ಲೆಯ ಅಚಲಪುರ ನಿವಾಸಿ ವಿಜಯ್ ಜವಾಂಜಲ್ ಮೇಲಿತ್ತು. ಪೋಕ್ಸೊ ಕಾಯ್ದೆ ಹಾಗೂ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376ಎಬಿ ಅಡಿಯಲ್ಲಿ ವಿಚಾರಣಾ ನ್ಯಾಯಾಲಯ, ಆರೋಪಿಗೆ 20 ವರ್ಷಗಳ ಕಠಿಣ ಜೈಲುಶಿಕ್ಷೆ ವಿಧಿಸಿತ್ತು.

ಪ್ರಾಸಿಕ್ಯೂಷನ್ ಪ್ರಕಾರ, 3ನೇ ತರಗತಿ ವಿದ್ಯಾರ್ಥಿನಿ ಮನೆ ಪಕ್ಕದ ಸಮುದಾಯದ ಮಂದಿರದ ಬಳಿಗೆ ಆಟವಾಡಲು ಹೋಗಿದ್ದಳು. ದೂರು ನೀಡಿದ ತಾಯಿಗೆ ಮಗಳು ಪತ್ತೆಯಾಗಿರಲಿಲ್ಲ. ಸ್ವಲ್ಪಹೊತ್ತಿನ ಬಳಿಕ, ಬಾಲಕಿ ಅದೇ ಆವರಣದಲ್ಲಿ ಆಟವಾಡುವುದು ಕಂಡುಬಂದಿತ್ತು. ತಾಯಿ ಆಕೆಯನ್ನು ಶಾಲೆಗೆ ಬಿಟ್ಟು ಬಂದಿದ್ದರು. ಶಾಲೆಯಿಂದ ಮರಳಿದ ಬಳಿಕ ಬಾಲಕಿ ಮಂಕು ಕವಿದಂತಿದ್ದಳು ಹಾಗೂ ಸಹಜವಾಗಿರಲಿಲ್ಲ. ಆರೋಪಿ ಸಿಹಿತಿಂಡಿ ನೀಡುವ ನೆಪದಲ್ಲಿ ಕರೆದೊಯ್ದು ಗುಪ್ತಾಂಗವನ್ನು ಸ್ಪರ್ಶಿಸಿದ ಹಾಗೂ ಆಗ ಅತೀವ ನೋವು ಆಗಿತ್ತು ಎಂದು ಬಾಲಕಿ ತಾಯಿಗೆ ಹೇಳಿದ್ದಳು. ತಾಯಿ ಅಸೇಗಾಂವ್ ಠಾಣೆಯಲ್ಲಿ ಈ ಬಗ್ಗೆ ದೂರು ನೀಡಿದ್ದರು.

“ಆರೋಪಿ ನನ್ನ ಮಗಳು ಆಟವಾಡುತ್ತಿದ್ದಾಗ ಪಕ್ಕದಲ್ಲೇ ಕುಳಿತಿದ್ದ” ಎಂದು ತಾಯಿ ಸಾಕ್ಷ್ಯ ನುಡಿದಿದ್ದರು. ಆದರೆ ಈ ಬಗ್ಗೆ ಎಚ್ಚರಿಕೆಯಿಂದ ಪರಿಶೀಲನೆ ನಡೆಸಿ ಮಗುವಿಗೆ ಯಾವುದೇ ಬಗೆಯ ಕಿರುಕುಳ ನೀಡಿಲ್ಲ ಎನ್ನುವ ನಿರ್ಧಾರಕ್ಕೆ ಕೋರ್ಟ್ ಬಂದಿದೆ. ಏಕೆಂದರೆ, ಆರೋಪಿಯ ಹೆಸರನ್ನು ಹೇಳುವಂತೆ ತಾಯಿ ತನಗೆ ಕಿರುಕುಳ ನೀಡಿದ್ದಾಗಿ ಬಾಲಕಿ ಸಾಕ್ಷ್ಯ ನುಡಿದಿರುವುದೇ ತಾಯಿಯ ಸಾಕ್ಷ್ಯವನ್ನು ನಾಶಪಡಿಸಿದಂತಾಗಿದೆ” ಎಂದು ನ್ಯಾಯಮೂರ್ತಿ ಸನಪ್ ಹೇಳಿದ್ದಾರೆ.

ತಮ್ಮ ಜಮೀನಿನಲ್ಲಿ ಹುಲ್ಲು ಕಟಾವು ಮಾಡಿದ್ದಕ್ಕಾಗಿ ಬಾಲಕಿಯ ತಂದೆಗೆ ಕಪಾಳಮೋಕ್ಷ ಮಾಡಿದ್ದೆ. ಆ ಕಾರಣಕ್ಕೆ ನನ್ನನ್ನು ಪ್ರಕರಣದಲ್ಲಿ ಸಿಲುಕಿಸಲಾಗಿದೆ ಎಂಬ ಮೇಲ್ಮನವಿದಾರ ಅಥವಾ ಆರೋಪಿಯ ಪ್ರತಿವಾದವನ್ನು ಪೀಠವು ಪರಿಗಣಿಸಿದೆ. ವಿಚಾರಣಾ ನ್ಯಾಯಾಲಯವು ಪ್ರಮುಖ ಸಂಗತಿಗಳನ್ನು ಪರಿಗಣಿಸಲು ವಿಫಲವಾಗಿದೆ ಎಂದು ನ್ಯಾಯಾಧೀಶರು ಹೇಳಿದ್ದಾರೆ.

ಕೃಪೆ : ಲೈವ್ ಲಾ

ಇದನ್ನೂ ಓದಿ : ನಗರಗಳಲ್ಲಿ ಒಳಚರಂಡಿ, ಸೆಪ್ಟಿಕ್ ಟ್ಯಾಂಕ್‌ಗಳನ್ನು ಸ್ವಚ್ಛಗೊಳಿಸುವ ಶೇ.92ರಷ್ಟು ಕಾರ್ಮಿಕರು ಎಸ್‌ಸಿ, ಎಸ್‌ಟಿ, ಒಬಿಸಿ ವರ್ಗದವರು : ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...