Homeಮುಖಪುಟ'ಬಾಲಕಿ ಆಘಾತಗೊಂಡಿಲ್ಲ' ಎಂದು ಅತ್ಯಾಚಾರ ಆರೋಪಿಯನ್ನು ಖುಲಾಸೆಗೊಳಿಸಿದ ಕೋರ್ಟ್

‘ಬಾಲಕಿ ಆಘಾತಗೊಂಡಿಲ್ಲ’ ಎಂದು ಅತ್ಯಾಚಾರ ಆರೋಪಿಯನ್ನು ಖುಲಾಸೆಗೊಳಿಸಿದ ಕೋರ್ಟ್

"ದೌರ್ಜನ್ಯ ನಡೆದಿದ್ದರೆ ಬಾಲಕಿ ಭಯಭೀತಳಾಗಬೇಕಿತ್ತು, ಸಹಜವಾಗಿ ವರ್ತಿಸುತ್ತಿರಲಿಲ್ಲ" ಎಂದ ನ್ಯಾಯಾಲಯ

- Advertisement -
- Advertisement -

“ಬಾಲಕಿ ಮೇಲೆ ಅತ್ಯಾಚಾರ ನಡೆದಿದ್ದರೆ, ಆಕೆ ಭಯಭೀತಳಾಗಬೇಕಿತ್ತು. ಸಹಜವಾಗಿ ವರ್ತಿಸುತ್ತಿರಲಿಲ್ಲ ಮತ್ತು ಆಟವಾಡುತ್ತಿರಲಿಲ್ಲ” ಎಂದಿರುವ ಬಾಂಬೆ ಹೈಕೋರ್ಟ್‌ನ ನಾಗ್ಪುರ ಪೀಠ, ಅಪ್ರಾಪ್ತ ಬಾಲಕಿಯ ಅತ್ಯಾಚಾರ ಆರೋಪಿಯನ್ನು ಇತ್ತೀಚೆಗೆ ದೋಷಮುಕ್ತಗೊಳಿಸಿದೆ ಎಂದು ಲೈವ್ ಲಾ ವರದಿ ಮಾಡಿದೆ.

ನ್ಯಾಯಮೂರ್ತಿ ಗೋವಿಂದ್ ಸನಪ್ ಅವರ ಏಕ ಸದಸ್ಯ ಪೀಠ ಬಾಲಕಿಯ ತಾಯಿಯ ಆರೋಪವನ್ನು ಗಮನಿಸಿದೆ. ಆಕೆ (ತಾಯಿ) ಹೇಳಿದಂತೆ ಸಮಾಜ ಮಂದಿರದಲ್ಲಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ. ಆಕೆ (ತಾಯಿ) ಘಟನಾ ಸ್ಥಳಕ್ಕೆ ಹೋದಾಗ ಬಾಲಕಿ ಆಟವಾಡುತ್ತಿದ್ದಳು.

“ತಾನು ಘಟನಾ ಸ್ಥಳಕ್ಕೆ ಹೋದಾಗ ಸಂತ್ರಸ್ಥೆ ಆಟವಾಡುತ್ತಿದ್ದಳು ಎಂದು ಬಾಲಕಿಯ ತಾಯಿ ಹೇಳಿದ್ದಾರೆ. ಒಂದು ವೇಳೆ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದ್ದರೆ, ಅದು ಗಂಭೀರ ವಿಷಯವಾಗಿದೆ. ಅಂತಹ ಕೃತ್ಯ ನಿಸ್ಸಂಶಯವಾಗಿ ಆಕೆಯನ್ನು ಭಯಭೀತಗೊಳಿಸಬೇಕಿತ್ತು. ಅಲ್ಲದೆ, ಭಾರೀ ನೋವು, ಸಂಕಟ ಮತ್ತು ಆಘಾತ ಉಂಟುಮಾಡಬೇಕಿತ್ತು” ಎಂದು ಆಗಸ್ಟ್ 14 ರಂದು ನೀಡಿದ ಆದೇಶದಲ್ಲಿ ನ್ಯಾಯಾಧೀಶರು ಹೇಳಿದ್ದಾರೆ. ಈ ಆದೇಶ ಪ್ರತಿ ಕಳೆದ ಗುರುವಾರ ಲಭ್ಯವಾಗಿದೆ ಎಂದು ಲೈವ್ ಲಾ ವರದಿ ಹೇಳಿದೆ.

ಸಾಮಾನ್ಯವಾಗಿ, ಇಂತಹ ಕೃತ್ಯದ (ಲೈಂಗಿಕ ದೌರ್ಜನ್ಯ) ನಂತರ ಸಂತ್ರಸ್ತೆ ಘಟನಾ ಸ್ಥಳದಿಂದ ಮನೆಗೆ ಓಡಿ ಹೋಗಿ ತನ್ನ ತಾಯಿಗೆ ಘಟನೆಯನ್ನು ವಿವರಿಸುತ್ತಾಳೆ ಎಂದೂ ನ್ಯಾಯಾಧೀಶರು ಹೇಳಿದ್ದಾರೆ.

2019ರ ಮಾರ್ಚ್‍ನಲ್ಲಿ ನಡೆದ ಪ್ರಕರಣದಲ್ಲಿ ಎಂಟು ವರ್ಷ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಅಮರಾವತಿ ಜಿಲ್ಲೆಯ ಅಚಲಪುರ ನಿವಾಸಿ ವಿಜಯ್ ಜವಾಂಜಲ್ ಮೇಲಿತ್ತು. ಪೋಕ್ಸೊ ಕಾಯ್ದೆ ಹಾಗೂ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376ಎಬಿ ಅಡಿಯಲ್ಲಿ ವಿಚಾರಣಾ ನ್ಯಾಯಾಲಯ, ಆರೋಪಿಗೆ 20 ವರ್ಷಗಳ ಕಠಿಣ ಜೈಲುಶಿಕ್ಷೆ ವಿಧಿಸಿತ್ತು.

ಪ್ರಾಸಿಕ್ಯೂಷನ್ ಪ್ರಕಾರ, 3ನೇ ತರಗತಿ ವಿದ್ಯಾರ್ಥಿನಿ ಮನೆ ಪಕ್ಕದ ಸಮುದಾಯದ ಮಂದಿರದ ಬಳಿಗೆ ಆಟವಾಡಲು ಹೋಗಿದ್ದಳು. ದೂರು ನೀಡಿದ ತಾಯಿಗೆ ಮಗಳು ಪತ್ತೆಯಾಗಿರಲಿಲ್ಲ. ಸ್ವಲ್ಪಹೊತ್ತಿನ ಬಳಿಕ, ಬಾಲಕಿ ಅದೇ ಆವರಣದಲ್ಲಿ ಆಟವಾಡುವುದು ಕಂಡುಬಂದಿತ್ತು. ತಾಯಿ ಆಕೆಯನ್ನು ಶಾಲೆಗೆ ಬಿಟ್ಟು ಬಂದಿದ್ದರು. ಶಾಲೆಯಿಂದ ಮರಳಿದ ಬಳಿಕ ಬಾಲಕಿ ಮಂಕು ಕವಿದಂತಿದ್ದಳು ಹಾಗೂ ಸಹಜವಾಗಿರಲಿಲ್ಲ. ಆರೋಪಿ ಸಿಹಿತಿಂಡಿ ನೀಡುವ ನೆಪದಲ್ಲಿ ಕರೆದೊಯ್ದು ಗುಪ್ತಾಂಗವನ್ನು ಸ್ಪರ್ಶಿಸಿದ ಹಾಗೂ ಆಗ ಅತೀವ ನೋವು ಆಗಿತ್ತು ಎಂದು ಬಾಲಕಿ ತಾಯಿಗೆ ಹೇಳಿದ್ದಳು. ತಾಯಿ ಅಸೇಗಾಂವ್ ಠಾಣೆಯಲ್ಲಿ ಈ ಬಗ್ಗೆ ದೂರು ನೀಡಿದ್ದರು.

“ಆರೋಪಿ ನನ್ನ ಮಗಳು ಆಟವಾಡುತ್ತಿದ್ದಾಗ ಪಕ್ಕದಲ್ಲೇ ಕುಳಿತಿದ್ದ” ಎಂದು ತಾಯಿ ಸಾಕ್ಷ್ಯ ನುಡಿದಿದ್ದರು. ಆದರೆ ಈ ಬಗ್ಗೆ ಎಚ್ಚರಿಕೆಯಿಂದ ಪರಿಶೀಲನೆ ನಡೆಸಿ ಮಗುವಿಗೆ ಯಾವುದೇ ಬಗೆಯ ಕಿರುಕುಳ ನೀಡಿಲ್ಲ ಎನ್ನುವ ನಿರ್ಧಾರಕ್ಕೆ ಕೋರ್ಟ್ ಬಂದಿದೆ. ಏಕೆಂದರೆ, ಆರೋಪಿಯ ಹೆಸರನ್ನು ಹೇಳುವಂತೆ ತಾಯಿ ತನಗೆ ಕಿರುಕುಳ ನೀಡಿದ್ದಾಗಿ ಬಾಲಕಿ ಸಾಕ್ಷ್ಯ ನುಡಿದಿರುವುದೇ ತಾಯಿಯ ಸಾಕ್ಷ್ಯವನ್ನು ನಾಶಪಡಿಸಿದಂತಾಗಿದೆ” ಎಂದು ನ್ಯಾಯಮೂರ್ತಿ ಸನಪ್ ಹೇಳಿದ್ದಾರೆ.

ತಮ್ಮ ಜಮೀನಿನಲ್ಲಿ ಹುಲ್ಲು ಕಟಾವು ಮಾಡಿದ್ದಕ್ಕಾಗಿ ಬಾಲಕಿಯ ತಂದೆಗೆ ಕಪಾಳಮೋಕ್ಷ ಮಾಡಿದ್ದೆ. ಆ ಕಾರಣಕ್ಕೆ ನನ್ನನ್ನು ಪ್ರಕರಣದಲ್ಲಿ ಸಿಲುಕಿಸಲಾಗಿದೆ ಎಂಬ ಮೇಲ್ಮನವಿದಾರ ಅಥವಾ ಆರೋಪಿಯ ಪ್ರತಿವಾದವನ್ನು ಪೀಠವು ಪರಿಗಣಿಸಿದೆ. ವಿಚಾರಣಾ ನ್ಯಾಯಾಲಯವು ಪ್ರಮುಖ ಸಂಗತಿಗಳನ್ನು ಪರಿಗಣಿಸಲು ವಿಫಲವಾಗಿದೆ ಎಂದು ನ್ಯಾಯಾಧೀಶರು ಹೇಳಿದ್ದಾರೆ.

ಕೃಪೆ : ಲೈವ್ ಲಾ

ಇದನ್ನೂ ಓದಿ : ನಗರಗಳಲ್ಲಿ ಒಳಚರಂಡಿ, ಸೆಪ್ಟಿಕ್ ಟ್ಯಾಂಕ್‌ಗಳನ್ನು ಸ್ವಚ್ಛಗೊಳಿಸುವ ಶೇ.92ರಷ್ಟು ಕಾರ್ಮಿಕರು ಎಸ್‌ಸಿ, ಎಸ್‌ಟಿ, ಒಬಿಸಿ ವರ್ಗದವರು : ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...