Homeಮುಖಪುಟತನ್ನ ಮಗಳಿಗೆ ಮದುವೆ ಮಾಡಿರುವ ಜಗ್ಗಿ ವಾಸುದೇವ್, ಬೇರೆಯವರ ಹೆಣ್ಣು ಮಗಳು ಸನ್ಯಾಸಿನಿಯಾಗಲು ಹುರಿದುಂಬಿಸುವುದು ಏಕೆ?...

ತನ್ನ ಮಗಳಿಗೆ ಮದುವೆ ಮಾಡಿರುವ ಜಗ್ಗಿ ವಾಸುದೇವ್, ಬೇರೆಯವರ ಹೆಣ್ಣು ಮಗಳು ಸನ್ಯಾಸಿನಿಯಾಗಲು ಹುರಿದುಂಬಿಸುವುದು ಏಕೆ? ಮದ್ರಾಸ್ ಹೈಕೋರ್ಟ್

- Advertisement -
- Advertisement -

“ತಮ್ಮ ಮಗಳಿಗೆ ಮದುವೆ ಮಾಡಿಸಿ ಸುಂದರವಾದ ಬದುಕು ಕಟ್ಟಿಕೊಟ್ಟಿರುವ ಜಗ್ಗಿ ವಾಸುದೇವ್ ಅಲಿಯಾಸ್ ಸದ್ಗುರು, ಬೇರೆಯವರ ಹೆಣ್ಣು ಮಕ್ಕಳು ಸನ್ಯಾಸಿನಿಯಂತೆ ಬದುಕಲು ಹುರಿದುಂಬಿಸುವುದು ಏಕೆ?” ಎಂದು ಮದ್ರಾಸ್ ಹೈಕೋರ್ಟ್ ಪ್ರಶ್ನಿಸಿರುವುದಾಗಿ ವರದಿಯಾಗಿದೆ.

ಜಗ್ಗಿ ವಾಸುದೇವ್ ನಡೆಸುತ್ತಿರುವ ಇಶಾ ಫೌಂಡೇಶನ್‌ನಲ್ಲಿ ತನ್ನ ಇಬ್ಬರು ಪುತ್ರಿಯರನ್ನು ಬಂಧಿಯಾಗಿಸಿ, ಅಲ್ಲಿ ಬ್ರೈನ್‌ವಾಶ್ ಮಾಡಲಾಗಿದೆ ಎಂದು ವ್ಯಕ್ತಿಯೊಬ್ಬರು ನ್ಯಾಯಾಲಯದ ಮೆಟ್ಟಿಲೇರಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಸ್‌ಎಂ ಸುಬ್ರಮಣ್ಯಂ ಮತ್ತು ವಿ ಶಿವಜ್ಞಾನಂ ಅವರ ಪೀಠ ಮೇಲಿನಂತೆ ಪ್ರಶ್ನಿಸಿದೆ ಎಂದು ಲೈವ್ ಲಾ ವರದಿ ಮಾಡಿದೆ.

ಇಶಾ ಫೌಂಡೇಶನ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮೊಕದ್ದಮೆಗಳ ವಿವರಗಳನ್ನು ನೀಡುವಂತೆ ಹೆಚ್ಚುವರಿ ಅಡ್ವೊಕೇಟ್ ಜನರಲ್ ಅವರಿಗೆ ನ್ಯಾಯಾಲಯ ಆದೇಶಿಸಿದೆ.

ತಮ್ಮ ಇಬ್ಬರು ಪುತ್ರಿಯರಾದ ಗೀತಾ ಕಾಮರಾಜ್ ಅಲಿಯಾಸ್ ಮಾ ಮತಿ (42) ಮತ್ತು ಲತಾ ಕಾಮರಾಜ್ ಅಲಿಯಾಸ್ ಮಾ ಮಾಯು(39) ಅವರು ಇಶಾ ಸಂಸ್ಥೆಯೊಳಗೆ ಬಂಧಿಯಾಗಿದ್ದಾರೆ ಎಂದು ನಿವೃತ್ತ ಪ್ರಾಧ್ಯಾಪಕ ಎಸ್ ಕಾಮರಾಜ್ ಎಂಬವರು ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದರು.

ಇಶಾ ಯೋಗ ಕೇಂದ್ರದಲ್ಲಿನ ಬೋಧನೆಗಳಿಂದ ಪ್ರಭಾವಿತರಾದ ನನ್ನ ಹೆಣ್ಣುಮಕ್ಕಳು ಬ್ರೈನ್ ವಾಶ್ ಆಗಿದ್ದು, ಸನ್ಯಾಸಿ ಮಾರ್ಗವನ್ನು ಅನುಸರಿಸಿದ್ದಾರೆ. ಅವರ ಹೆಸರನ್ನು ಬದಲಾಯಿಸಲಾಗಿದೆ. ಈಗ ಪೋಷಕರನ್ನೂ ಭೇಟಿ ಮಾಡಲು ಅವರು ನಿರಾಕರಿಸುತ್ತಿದ್ದಾರೆ ಎಂದು ಅರ್ಜಿದಾರ ಕಾಮರಾಜ್ ಆರೋಪಿಸಿದ್ದರು.

ಕಾಮರಾಜ್ ಅವರು 2016ರಲ್ಲಿ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದರು. ಆಗ ನ್ಯಾಯಾಲಯವು ಯೋಗ ಕೇಂದ್ರಕ್ಕೆ ತೆರಳಿ, ಬಂಧಿತರನ್ನು ಭೇಟಿಯಾಗಿ, ಅವರ ಹೇಳಿಕೆಗಳನ್ನು ದಾಖಲಿಸಿ ವಿವರವಾದ ವರದಿ ನೀಡುವಂತೆ ಪ್ರಧಾನ ಜಿಲ್ಲಾ ನ್ಯಾಯಾಧೀಶರಿಗೆ ಸೂಚಿಸಿತ್ತು.

ಸೋಮವಾರ ಅರ್ಜಿ ವಿಚಾರಣೆ ವೇಳೆ ನ್ಯಾಯಾಧೀಶರ ಅವಲೋಕನವು ಇನ್ನಷ್ಟು ಆತಂಕವನ್ನು ಉಂಟು ಮಾಡಿದೆ ಎಂದಿರುವ ಅರ್ಜಿದಾರ ಕಾಮರಾಜ್, ಹೆಣ್ಣು ಮಕ್ಕಳು 5 ವರ್ಷಕ್ಕಿಂತಲೂ ಹೆಚ್ಚು ಕಾಲ ಯೋಗ ಕೇಂದ್ರದಲ್ಲಿ ಇರುವುದರಿಂದ ಅವರ ಮೇಲೆ ಆ ಕೇಂದ್ರದ ಉಪದೇಶ ಪ್ರಭಾವ ಬೀರಿದೆ ಎಂಬುವುದನ್ನು ತಳ್ಳಿ ಹಾಕಲು ಸಾಧ್ಯವಿಲ್ಲ ಎಂದು ನ್ಯಾಯಾಧೀಶರ ವರದಿ ಹೇಳಿದೆ ಎಂದು ಹೈಕೋರ್ಟ್ ಮುಂದೆ ಹೇಳಿದ್ದಾರೆ.

“ನ್ಯಾಯಾಲಯದ ನಿರ್ದೇಶನದ ಮೂಲಕ ನಾನು ನನ್ನ ಮಕ್ಕಳನ್ನು ಭೇಟಿ ಮಾಡಲು ಯೋಗ ಕೇಂದ್ರಕ್ಕೆ ತೆರಳಿದ್ದೆ. ಆಗ ನಿಗದಿತ ಸ್ಥಳದಲ್ಲಿ ಯೋಗ ಕೇಂದ್ರದ ಪುರುಷರ ಸಮಕ್ಷಮದಲ್ಲಿ ನನಗೆ ಮಗಳೊಬ್ಬಳ ಜೊತೆ ಮಾತನಾಡಲು ಅವಕಾಶ ನೀಡಲಾಯಿತು. ಸ್ವಲ್ಪ ಸಮಯದ ನಂತರ ನನ್ನ ಹಿರಿಯ ಮಗಳು ನನಗೆ ಕರೆ ಮಾಡಿ, ನಾನು ಯೋಗ ಕೇಂದ್ರದ ವಿರುದ್ದ ದಾಖಲಿಸಿರುವ ದೂರನ್ನು ಹಿಂಪಡೆಯಬೇಕೆಂದು ಕಿರಿಯ ಮಗಳು ಅಮರಣಾಂತ ಉಪವಾಸ ಕೈಗೊಂಡಿದ್ದಾಳೆ ಎಂದು ತಿಳಿಸಿದಳು. ನನಗೆ ಕರೆ ಮಾಡಲು ಯೋಗ ಕೇಂದ್ರದವರೇ ಸೂಚಿಸಿದ್ದಾಗಿ ಹೇಳಿದಳು” ಎಂದು ಕಾಮರಾಜ್ ಹೈಕೋರ್ಟ್‌ಗೆ ತಿಳಿಸಿದ್ದಾರೆ.

“ಯೋಗ ಕೇಂದ್ರದ ಆಡಳಿತ ಮಂಡಳಿಯ ಪ್ರಭಾವ ಮತ್ತು ಅಕ್ರಮ ಬಂಧನದಿಂದ ನನ್ನ ಮಕ್ಕಳ ಜೀವಕ್ಕೆ ಅಪಾಯವಿದೆ ಎಂದಿರುವ ಕಾಮರಾಜ್, ಸ್ಥಳೀಯ ಪೊಲೀಸರು ವಾರಕೊಮ್ಮೆ ಅಥವಾ ಎರಡು ವಾರಕ್ಕೊಮ್ಮೆ ಯೋಗ ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿ ಬಂಧಿತರಾಗಿರುವ ಎಲ್ಲರ ಯೋಗ ಕ್ಷೇಮ ವಿಚಾರಿಸಲು ಆದೇಶಿಸಬೇಕು ಮತ್ತು ಯಾವುದೇ ಬೆದರಿಕೆಗೆ ಒಳಗಾದ ಸಂದರ್ಭದಲ್ಲಿ ಹೊರಜಗತ್ತನ್ನು ಸಂಪರ್ಕಿಸಲು ಅವರಿಗೆ ಅವಕಾಶ ಕಲ್ಪಿಸಬೇಕು” ಎಂದು ನ್ಯಾಯಾಲಯವನ್ನು ಕೋರಿದ್ದಾರೆ.

ಕಾಮರಾಜ್ ಅವರ ಇಬ್ಬರು ಪುತ್ರಿಯರು ಹೈಕೋರ್ಟ್ ಮುಂದೆ ಹಾಜರಾಗಿ, ನಮ್ಮನ್ನು ಬಂಧಿಸಿಟ್ಟಿಲ್ಲ, ಸ್ವಇಚ್ಚೆಯಿಂದ ಯೋಗ ಕೇಂದ್ರದಲ್ಲಿ ಇದ್ದೇವೆ ಎಂದು ಹೇಳಿದ್ದಾರೆ. ಆದರೂ, ಸತ್ಯ ತಿಳಿಯಲು ಈ ವಿಷಯದಲ್ಲಿ ಕೆಲ ಪರಿಶೀಲನೆಯ, ಚರ್ಚೆಯ ಅಗತ್ಯವಿದೆ ಎಂದಿರುವ ನ್ಯಾಯಾಲಯ, ಇಶಾ ಯೋಗ ಕೇಂದ್ರದ ವಿರುದ್ಧ ದಾಖಲಾಗಿರುವ ಪ್ರಕರಣಗಳ ವಿವರಗಳನ್ನು ಸಲ್ಲಿಸುವಂತೆ ಅರ್ಜಿದಾರರಿಗೆ ಮತ್ತು ಹೆಚ್ಚುವರಿ ಅಡ್ವೊಕೇಟ್ ಜನರಲ್‌ಗೆ ಸೂಚಿಸಿದೆ.

ಸೌಜನ್ಯ : ಲೈವ್ ಲಾ

ಇದನ್ನೂ ಓದಿ : ‘ಬಾಲಕಿ ಆಘಾತಗೊಂಡಿಲ್ಲ’ ಎಂದು ಅತ್ಯಾಚಾರ ಆರೋಪಿಯನ್ನು ಖುಲಾಸೆಗೊಳಿಸಿದ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...