Homeಮುಖಪುಟತನ್ನ ಮಗಳಿಗೆ ಮದುವೆ ಮಾಡಿರುವ ಜಗ್ಗಿ ವಾಸುದೇವ್, ಬೇರೆಯವರ ಹೆಣ್ಣು ಮಗಳು ಸನ್ಯಾಸಿನಿಯಾಗಲು ಹುರಿದುಂಬಿಸುವುದು ಏಕೆ?...

ತನ್ನ ಮಗಳಿಗೆ ಮದುವೆ ಮಾಡಿರುವ ಜಗ್ಗಿ ವಾಸುದೇವ್, ಬೇರೆಯವರ ಹೆಣ್ಣು ಮಗಳು ಸನ್ಯಾಸಿನಿಯಾಗಲು ಹುರಿದುಂಬಿಸುವುದು ಏಕೆ? ಮದ್ರಾಸ್ ಹೈಕೋರ್ಟ್

- Advertisement -
- Advertisement -

“ತಮ್ಮ ಮಗಳಿಗೆ ಮದುವೆ ಮಾಡಿಸಿ ಸುಂದರವಾದ ಬದುಕು ಕಟ್ಟಿಕೊಟ್ಟಿರುವ ಜಗ್ಗಿ ವಾಸುದೇವ್ ಅಲಿಯಾಸ್ ಸದ್ಗುರು, ಬೇರೆಯವರ ಹೆಣ್ಣು ಮಕ್ಕಳು ಸನ್ಯಾಸಿನಿಯಂತೆ ಬದುಕಲು ಹುರಿದುಂಬಿಸುವುದು ಏಕೆ?” ಎಂದು ಮದ್ರಾಸ್ ಹೈಕೋರ್ಟ್ ಪ್ರಶ್ನಿಸಿರುವುದಾಗಿ ವರದಿಯಾಗಿದೆ.

ಜಗ್ಗಿ ವಾಸುದೇವ್ ನಡೆಸುತ್ತಿರುವ ಇಶಾ ಫೌಂಡೇಶನ್‌ನಲ್ಲಿ ತನ್ನ ಇಬ್ಬರು ಪುತ್ರಿಯರನ್ನು ಬಂಧಿಯಾಗಿಸಿ, ಅಲ್ಲಿ ಬ್ರೈನ್‌ವಾಶ್ ಮಾಡಲಾಗಿದೆ ಎಂದು ವ್ಯಕ್ತಿಯೊಬ್ಬರು ನ್ಯಾಯಾಲಯದ ಮೆಟ್ಟಿಲೇರಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಸ್‌ಎಂ ಸುಬ್ರಮಣ್ಯಂ ಮತ್ತು ವಿ ಶಿವಜ್ಞಾನಂ ಅವರ ಪೀಠ ಮೇಲಿನಂತೆ ಪ್ರಶ್ನಿಸಿದೆ ಎಂದು ಲೈವ್ ಲಾ ವರದಿ ಮಾಡಿದೆ.

ಇಶಾ ಫೌಂಡೇಶನ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮೊಕದ್ದಮೆಗಳ ವಿವರಗಳನ್ನು ನೀಡುವಂತೆ ಹೆಚ್ಚುವರಿ ಅಡ್ವೊಕೇಟ್ ಜನರಲ್ ಅವರಿಗೆ ನ್ಯಾಯಾಲಯ ಆದೇಶಿಸಿದೆ.

ತಮ್ಮ ಇಬ್ಬರು ಪುತ್ರಿಯರಾದ ಗೀತಾ ಕಾಮರಾಜ್ ಅಲಿಯಾಸ್ ಮಾ ಮತಿ (42) ಮತ್ತು ಲತಾ ಕಾಮರಾಜ್ ಅಲಿಯಾಸ್ ಮಾ ಮಾಯು(39) ಅವರು ಇಶಾ ಸಂಸ್ಥೆಯೊಳಗೆ ಬಂಧಿಯಾಗಿದ್ದಾರೆ ಎಂದು ನಿವೃತ್ತ ಪ್ರಾಧ್ಯಾಪಕ ಎಸ್ ಕಾಮರಾಜ್ ಎಂಬವರು ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದರು.

ಇಶಾ ಯೋಗ ಕೇಂದ್ರದಲ್ಲಿನ ಬೋಧನೆಗಳಿಂದ ಪ್ರಭಾವಿತರಾದ ನನ್ನ ಹೆಣ್ಣುಮಕ್ಕಳು ಬ್ರೈನ್ ವಾಶ್ ಆಗಿದ್ದು, ಸನ್ಯಾಸಿ ಮಾರ್ಗವನ್ನು ಅನುಸರಿಸಿದ್ದಾರೆ. ಅವರ ಹೆಸರನ್ನು ಬದಲಾಯಿಸಲಾಗಿದೆ. ಈಗ ಪೋಷಕರನ್ನೂ ಭೇಟಿ ಮಾಡಲು ಅವರು ನಿರಾಕರಿಸುತ್ತಿದ್ದಾರೆ ಎಂದು ಅರ್ಜಿದಾರ ಕಾಮರಾಜ್ ಆರೋಪಿಸಿದ್ದರು.

ಕಾಮರಾಜ್ ಅವರು 2016ರಲ್ಲಿ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದರು. ಆಗ ನ್ಯಾಯಾಲಯವು ಯೋಗ ಕೇಂದ್ರಕ್ಕೆ ತೆರಳಿ, ಬಂಧಿತರನ್ನು ಭೇಟಿಯಾಗಿ, ಅವರ ಹೇಳಿಕೆಗಳನ್ನು ದಾಖಲಿಸಿ ವಿವರವಾದ ವರದಿ ನೀಡುವಂತೆ ಪ್ರಧಾನ ಜಿಲ್ಲಾ ನ್ಯಾಯಾಧೀಶರಿಗೆ ಸೂಚಿಸಿತ್ತು.

ಸೋಮವಾರ ಅರ್ಜಿ ವಿಚಾರಣೆ ವೇಳೆ ನ್ಯಾಯಾಧೀಶರ ಅವಲೋಕನವು ಇನ್ನಷ್ಟು ಆತಂಕವನ್ನು ಉಂಟು ಮಾಡಿದೆ ಎಂದಿರುವ ಅರ್ಜಿದಾರ ಕಾಮರಾಜ್, ಹೆಣ್ಣು ಮಕ್ಕಳು 5 ವರ್ಷಕ್ಕಿಂತಲೂ ಹೆಚ್ಚು ಕಾಲ ಯೋಗ ಕೇಂದ್ರದಲ್ಲಿ ಇರುವುದರಿಂದ ಅವರ ಮೇಲೆ ಆ ಕೇಂದ್ರದ ಉಪದೇಶ ಪ್ರಭಾವ ಬೀರಿದೆ ಎಂಬುವುದನ್ನು ತಳ್ಳಿ ಹಾಕಲು ಸಾಧ್ಯವಿಲ್ಲ ಎಂದು ನ್ಯಾಯಾಧೀಶರ ವರದಿ ಹೇಳಿದೆ ಎಂದು ಹೈಕೋರ್ಟ್ ಮುಂದೆ ಹೇಳಿದ್ದಾರೆ.

“ನ್ಯಾಯಾಲಯದ ನಿರ್ದೇಶನದ ಮೂಲಕ ನಾನು ನನ್ನ ಮಕ್ಕಳನ್ನು ಭೇಟಿ ಮಾಡಲು ಯೋಗ ಕೇಂದ್ರಕ್ಕೆ ತೆರಳಿದ್ದೆ. ಆಗ ನಿಗದಿತ ಸ್ಥಳದಲ್ಲಿ ಯೋಗ ಕೇಂದ್ರದ ಪುರುಷರ ಸಮಕ್ಷಮದಲ್ಲಿ ನನಗೆ ಮಗಳೊಬ್ಬಳ ಜೊತೆ ಮಾತನಾಡಲು ಅವಕಾಶ ನೀಡಲಾಯಿತು. ಸ್ವಲ್ಪ ಸಮಯದ ನಂತರ ನನ್ನ ಹಿರಿಯ ಮಗಳು ನನಗೆ ಕರೆ ಮಾಡಿ, ನಾನು ಯೋಗ ಕೇಂದ್ರದ ವಿರುದ್ದ ದಾಖಲಿಸಿರುವ ದೂರನ್ನು ಹಿಂಪಡೆಯಬೇಕೆಂದು ಕಿರಿಯ ಮಗಳು ಅಮರಣಾಂತ ಉಪವಾಸ ಕೈಗೊಂಡಿದ್ದಾಳೆ ಎಂದು ತಿಳಿಸಿದಳು. ನನಗೆ ಕರೆ ಮಾಡಲು ಯೋಗ ಕೇಂದ್ರದವರೇ ಸೂಚಿಸಿದ್ದಾಗಿ ಹೇಳಿದಳು” ಎಂದು ಕಾಮರಾಜ್ ಹೈಕೋರ್ಟ್‌ಗೆ ತಿಳಿಸಿದ್ದಾರೆ.

“ಯೋಗ ಕೇಂದ್ರದ ಆಡಳಿತ ಮಂಡಳಿಯ ಪ್ರಭಾವ ಮತ್ತು ಅಕ್ರಮ ಬಂಧನದಿಂದ ನನ್ನ ಮಕ್ಕಳ ಜೀವಕ್ಕೆ ಅಪಾಯವಿದೆ ಎಂದಿರುವ ಕಾಮರಾಜ್, ಸ್ಥಳೀಯ ಪೊಲೀಸರು ವಾರಕೊಮ್ಮೆ ಅಥವಾ ಎರಡು ವಾರಕ್ಕೊಮ್ಮೆ ಯೋಗ ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿ ಬಂಧಿತರಾಗಿರುವ ಎಲ್ಲರ ಯೋಗ ಕ್ಷೇಮ ವಿಚಾರಿಸಲು ಆದೇಶಿಸಬೇಕು ಮತ್ತು ಯಾವುದೇ ಬೆದರಿಕೆಗೆ ಒಳಗಾದ ಸಂದರ್ಭದಲ್ಲಿ ಹೊರಜಗತ್ತನ್ನು ಸಂಪರ್ಕಿಸಲು ಅವರಿಗೆ ಅವಕಾಶ ಕಲ್ಪಿಸಬೇಕು” ಎಂದು ನ್ಯಾಯಾಲಯವನ್ನು ಕೋರಿದ್ದಾರೆ.

ಕಾಮರಾಜ್ ಅವರ ಇಬ್ಬರು ಪುತ್ರಿಯರು ಹೈಕೋರ್ಟ್ ಮುಂದೆ ಹಾಜರಾಗಿ, ನಮ್ಮನ್ನು ಬಂಧಿಸಿಟ್ಟಿಲ್ಲ, ಸ್ವಇಚ್ಚೆಯಿಂದ ಯೋಗ ಕೇಂದ್ರದಲ್ಲಿ ಇದ್ದೇವೆ ಎಂದು ಹೇಳಿದ್ದಾರೆ. ಆದರೂ, ಸತ್ಯ ತಿಳಿಯಲು ಈ ವಿಷಯದಲ್ಲಿ ಕೆಲ ಪರಿಶೀಲನೆಯ, ಚರ್ಚೆಯ ಅಗತ್ಯವಿದೆ ಎಂದಿರುವ ನ್ಯಾಯಾಲಯ, ಇಶಾ ಯೋಗ ಕೇಂದ್ರದ ವಿರುದ್ಧ ದಾಖಲಾಗಿರುವ ಪ್ರಕರಣಗಳ ವಿವರಗಳನ್ನು ಸಲ್ಲಿಸುವಂತೆ ಅರ್ಜಿದಾರರಿಗೆ ಮತ್ತು ಹೆಚ್ಚುವರಿ ಅಡ್ವೊಕೇಟ್ ಜನರಲ್‌ಗೆ ಸೂಚಿಸಿದೆ.

ಸೌಜನ್ಯ : ಲೈವ್ ಲಾ

ಇದನ್ನೂ ಓದಿ : ‘ಬಾಲಕಿ ಆಘಾತಗೊಂಡಿಲ್ಲ’ ಎಂದು ಅತ್ಯಾಚಾರ ಆರೋಪಿಯನ್ನು ಖುಲಾಸೆಗೊಳಿಸಿದ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...