Homeಚಳವಳಿತಮಿಳುನಾಡು | ಸ್ಯಾಮ್‌ಸಂಗ್ ವಿರುದ್ಧ ಪ್ರತಿಭಟನೆ: 600 ಕಾರ್ಮಿಕರು ವಶಕ್ಕೆ ಪಡೆದ ಪೊಲೀಸರು

ತಮಿಳುನಾಡು | ಸ್ಯಾಮ್‌ಸಂಗ್ ವಿರುದ್ಧ ಪ್ರತಿಭಟನೆ: 600 ಕಾರ್ಮಿಕರು ವಶಕ್ಕೆ ಪಡೆದ ಪೊಲೀಸರು

- Advertisement -
- Advertisement -

ತಮಿಳುನಾಡಿನ ಸ್ಯಾಮ್‌ಸಂಗ್ ಕಾರ್ಖಾನೆಯಲ್ಲಿ ನಡೆಯುತ್ತಿರುವ ಕಾರ್ಮಿಕರ ಮುಷ್ಕರ 4ನೇ ವಾರಕ್ಕೆ ಕಾಲಿಟ್ಟಿದೆ. ಮಂಗಳವಾರ ಕಾರ್ಮಿಕರ ಸಂಘಟನೆ ಬೀದಿ ಪ್ರತಿಭಟನೆಗಳನ್ನು ಆಯೋಜಿಸಿದ್ದಕ್ಕಾಗಿ ಸುಮಾರು 600 ಕಾರ್ಮಿಕರು ಮತ್ತು ಸಂಘಟನೆಯ ಸದಸ್ಯರನ್ನು ರಾಜ್ಯದ ಪೊಲೀಸರು ಬಂಧಿಸಿದ್ದಾರೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸೆಪ್ಟೆಂಬರ್ 9 ರಿಂದ ಚೆನ್ನೈ ನಗರದ ಸಮೀಪವಿರುವ ಸ್ಯಾಮ್‌ಸಂಗ್ ಕಾರ್ಖಾನೆಯ 1,000 ಕ್ಕೂ ಹೆಚ್ಚು ಕಾರ್ಮಿಕರು ಕಾರ್ಯಾಚರಣೆ ನಿಲ್ಲಿಸಿ ಮುಷ್ಕರ ಹೂಡಿದ್ದು, ಕಾರ್ಖಾನೆ ಬಳಿಯ ತಾತ್ಕಾಲಿಕ ಟೆಂಟ್‌ನಲ್ಲಿ ಪ್ರತಿಭಟಿಸುತ್ತಿದ್ದಾರೆ.

ದಕ್ಷಿಣ ಕೊರಿಯಾ ಮೂಲದ ಸ್ಯಾಮ್‌ಸಂಗ್‌ ಕಂಪೆನಿಯ ಭಾರತೀಯ ಆದಾಯ ಸರಿ ಸುಮಾರು ವಾರ್ಷಿಕವಾಗಿ 12 ಬಿಲಿಯನ್ ಡಾಲರ್‌ ಆದಾಯ ಹೊಂದಿದ್ದು, ಇದು ಕಂಪೆನಿಯ ಆದಾಯದ ಮೂರನೇ ಒಂದು ಭಾಗವಾಗಿದೆ. ಮುಷ್ಕರ ನಿರತ ಕಾರ್ಮಿಕರು ಕಂಪೆನಿಯು ತಮಗೆ ಹೆಚ್ಚಿನ ವೇತನ ಮತ್ತು ತಮ್ಮ ಯೂನಿಯನ್‌ಗೆ ಮಾನ್ಯತೆ ನೀಡುವಂತೆ ಒತ್ತಾಯಿಸಿ ಪ್ರತಿಭಟನ ನಡೆಯುತ್ತಿದ್ದಾರೆ.

ಪ್ರತಿಭಟನೆಯ ನೇತೃತ್ವವನ್ನು ಕಾರ್ಮಿಕ ಸಂಘಟನೆಯಾದ ಸಿಐಟಿಯು ವಹಿಸಿದೆ. ಸಿಐಟಿಯು ಸಂಯೋಜಿತ ಸ್ಯಾಮ್‌ಸಂಗ್ ಕಾರ್ಮಿಕರ ಸಂಘಟನೆ ನಡೆಸಿದ ಪ್ರತಿಭಟನಾ ಮೆರವಣಿಗೆಯು ಸಾರ್ವಜನಿಕರಿಗೆ ಅನಾನುಕೂಲವಾಗಿರುವುದರಿಂದ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂದು ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿ ಚಾರ್ಲ್ಸ್ ಸ್ಯಾಮ್ ರಾಜದೊರೈ ಹೇಳಿದ್ದಾರೆ.

ಇದನ್ನೂಓದಿ: ಬ್ಯಾಂಕಾಕ್‌: ರಸ್ತೆ ಮಧ್ಯೆ ಹೊತ್ತಿ ಉರಿದ ಶಾಲಾ ಬಸ್‌, 25 ವಿದ್ಯಾರ್ಥಿಗಳು ಸಜೀವ ದಹನ

‘ನಾಲ್ಕು ಮದುವೆ ಮಂಟಪಗಳಲ್ಲಿ ಅವರನ್ನು ಬಂಧಿಸಿಡಲಾಗಿದೆ’ ಎಂದು ಅವರು ಹೇಳಿದ್ದಾರೆ. ಸೆಪ್ಟೆಂಬರ್ 16 ರಂದು ಕೂಡಾ ಪೊಲೀಸರು ಮುಷ್ಕರ ನಡೆಸುತ್ತಿರುವ 104 ಸ್ಯಾಮ್‌ಸಂಗ್ ಕಾರ್ಮಿಕರನ್ನು ಸುಮಾರು ಒಂದು ದಿನದವರೆಗೆ ಬಂಧಿಸಿದ್ದರು.

ತಮಿಳುನಾಡಿನ ಸ್ಯಾಮ್‌ಸಂಗ್ ಕಾರ್ಖಾನೆಯಲ್ಲಿ ಕಾರ್ಮಿಕರು ನಡೆಸುತ್ತಿರುವ ಮುಷ್ಕರವು ಇತ್ತೀಚಿನ ವರ್ಷಗಳಲ್ಲಿ ಭಾರತದಲ್ಲಿ ನಡೆಯುತ್ತಿರುವ ಅತಿದೊಡ್ಡ ಮುಷ್ಕರವಾಗಿದೆ. ಮುಷ್ಕರ ನಿರತ ಕಾರ್ಮಿಕರು ಉದ್ಯೋಗ ಕಳೆದುಕೊಳ್ಳುವ ಅಪಾಯವಿದೆ ಎಂದು ಸ್ಯಾಮ್‌ಸಂಗ್ ಎಚ್ಚರಿಕೆ ನೀಡಿದೆ.

ಕಡಿಮೆ ಕೆಲಸದ ಸಮಯ ಮತ್ತು ಪರಿಷ್ಕೃತ ವೇತನ ಸೇರಿದಂತೆ ಹಲವಾರು ಬೇಡಿಕೆಗಳನ್ನು ಕಾರ್ಮಿಕರು ಕಂಪೆನಿಯ ಮುಂದಿಟ್ಟಿದ್ದಾರೆ. ಸಿಐಟಿಯು ಬೆಂಬಲಿತ ಒಕ್ಕೂಟದ ಮಾನ್ಯತೆ ಪ್ರಮುಖ ಒತ್ತಾಯವಾಗಿದ್ದು, ಕಾರ್ಖಾನೆಯೊಳಗೆ ಕಂಪನಿಯ ಅಧಿಕಾರಿಗಳು ಗೌರವದಿಂದ ವರ್ತಿಸುತ್ತಿಲ್ಲ ಎಂದು ಕಾರ್ಮಿಕರು ಆರೋಪಿಸಿದ್ದಾರೆ.

ಇದನ್ನೂ ಓದಿ: ಲೈಂಗಿಕ ಕಿರುಕುಳ ಆರೋಪ: ಮಲಯಾಳಂ ನಟ ನಿವಿನ್ ಪೌಲಿ ವಿಚಾರಣೆ ನಡೆಸಿದ ಎಸ್‌ಐಟಿ

ನಡೆಯುತ್ತಿರುವ ಪ್ರತಿಭಟನೆಯಿಂದ ಕಾರ್ಖಾನೆಯ ಶೇ.80 ರಷ್ಟು ಉತ್ಪಾದನೆಗೆ ಹೊಡೆತ ಬಿದ್ದಿದೆ ಎಂದು ಕಾರ್ಮಿಕರು ಹೇಳಿದ್ದಾರೆ. ಜುಲೈ 25, 2024 ರಂದು, ಇ ಮುತ್ತುಕುಮಾರ್ ನೇತೃತ್ವದ CITU ಸದಸ್ಯರು ‘Samsung India Workers Union (SIWU)’ ನೋಂದಣಿಯನ್ನು ಪ್ರಾರಂಭಿಸಿದರು. ನೋಂದಣಿಗಾಗಿ ಅರ್ಜಿ ಸಲ್ಲಿಸುವ ಸಮಯದಲ್ಲಿ 1455 ಕಾರ್ಮಿಕರನ್ನು ಸದಸ್ಯರನ್ನಾಗಿ ಪಟ್ಟಿಮಾಡಲಾಗಿತ್ತು. ನೋಂದಣಿಗೆ ಇನ್ನಷ್ಟೆ ಅನುಮೋದನೆ ದೊರೆಯಬೇಕಿದೆ. ಈ ಸಂಘಟನೆಗೆ ಆಗಸ್ಟ್ 20 ರಂದು ಲೇಬರ್ ಕಮಿಷನರ್‌ಗೆ Samsung India Electronics ನಿಂದ ಕಾನೂನು ಆಕ್ಷೇಪಣೆ ಸಲ್ಲಿಸಲಾಗಿದೆ ಎಂದು ವರದಿಯಾಗಿದೆ.

ಮತ್ತೊಂದೆಡೆ ದಕ್ಷಿಣ ಕೊರಿಯಾದಲ್ಲಿ ನ್ಯಾಷನಲ್ ಸ್ಯಾಮ್‌ಸಂಗ್ ಎಲೆಕ್ಟ್ರಾನಿಕ್ಸ್ ಯೂನಿಯನ್(NSEU) ಈ ವರ್ಷದ ಜುಲೈನಲ್ಲಿ ಅನಿರ್ದಿಷ್ಟ ಮುಷ್ಕರವನ್ನು ನಡೆಸಿತು. ಈ ಮುಷ್ಕರದ ವೇಳೆ ಸುಧಾರಿತ ವೇತನ, ಹೆಚ್ಚು ಪಾರದರ್ಶಕ ಬೋನಸ್ ವ್ಯವಸ್ಥೆ ಮತ್ತು ವರ್ಷಕ್ಕೆ ಹೆಚ್ಚುವರಿ ದಿನ ರಜೆಯನ್ನು ಕೋರಲಾಗಿತ್ತು. NSEU ಭಾರತದ ಮುಷ್ಕರವನ್ನು ಬೆಂಬಲಿಸಿ ಹೇಳಿಕೆ ನೀಡಿದ್ದು, ಭಾರತೀಯ ಸ್ಥಾವರದಲ್ಲಿ ಕಾರ್ಮಿಕರಿಗೆ ನ್ಯಾಯಯುತ ವೇತನ ಮತ್ತು ಸಮಂಜಸವಾದ ಕೆಲಸದ ಪರಿಸ್ಥಿತಿಗಳನ್ನು ಒದಗಿಸದಿರುವುದು ತೀವ್ರ ವಿಷಾದನೀಯ ಎಂದು ಹೇಳಿದೆ.

ದಕ್ಷಿಣ ಕೊರಿಯಾದಲ್ಲಿ ಸರಾಸರಿ ವೇತನವು ಸುಮಾರು 4.5 ಲಕ್ಷ ರೂ.ಗಳಷ್ಟಿದ್ದರೆ ಭಾರತದಲ್ಲಿ ಸರಾಸರಿ ವೇತನವು ಸುಮಾರು 30,000 ರೂ. ಆಗಿದೆ. ಸ್ಯಾಮ್‌ಸಂಗ್ ಇಂಡಿಯಾ ಪ್ಲಾಂಟ್‌ನಲ್ಲಿನ ಕಾರ್ಮಿಕ ವೆಚ್ಚವು ಅದರ ವಾರ್ಷಿಕ ಉತ್ಪಾದನಾ ಮೌಲ್ಯದ 0.3% ಕ್ಕಿಂತ ಕಡಿಮೆ ಎಂದು CITU ಹೇಳಿದೆ.

ವಿಡಿಯೊ ನೋಡಿ: ಕೇರಳ ಸಿನಿಮಾ ರಂಗದಲ್ಲಿ ಲೈಂಗಿಕ ದೌರ್ಜನ್ಯದ ಭಯಾನಕ ಕಥೆಗಳನ್ನು ಬಿಚ್ಚಿಟ್ಟ ಹೇಮಾ ಸಮಿತಿ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...