Homeಮುಖಪುಟಪ್ರತಿ ಗರ್ಬಾ ಪೆಂಡಾಲ್ ಪ್ರವೇಶದಲ್ಲಿ ದನದ ಮೂತ್ರ ನೀಡಿ | ಇಂದೋರ್ ಬಿಜೆಪಿ ಅಧ್ಯಕ್ಷನ ವಿಲಕ್ಷಣ...

ಪ್ರತಿ ಗರ್ಬಾ ಪೆಂಡಾಲ್ ಪ್ರವೇಶದಲ್ಲಿ ದನದ ಮೂತ್ರ ನೀಡಿ | ಇಂದೋರ್ ಬಿಜೆಪಿ ಅಧ್ಯಕ್ಷನ ವಿಲಕ್ಷಣ ಸಲಹೆ

- Advertisement -
- Advertisement -

ಮಧ್ಯಪ್ರದೇಶದ ಅತಿ ಹೆಚ್ಚು ಜನನಿಬಿಡ ನಗರವಾದ ಇಂದೋರ್‌ನಲ್ಲಿ ಮುಂಬರುವ ನವರಾತ್ರಿ ಆಚರಣೆಯ ವೇಳೆ ಆಗಮಿಸುವ ಜನರನ್ನು ಶುದ್ಧೀಕರಿಸಲು ಮತ್ತು ಬೇರೆ ಸಮುದಾಯಗಳ ಜನರ ಅನಗತ್ಯ ಪ್ರವೇಶವನ್ನು ಪರೀಕ್ಷಿಸಲು ದನದ ಮೂತ್ರ ಬಳಸುವಂತೆ ಆಡಳಿತಾರೂಢ ಬಿಜೆಪಿ ನಾಯಕರೊಬ್ಬರು ವಿಲಕ್ಷಣ ಸಲಹೆಯನ್ನು ನೀಡಿದ್ದಾರೆ.ಗರ್ಬಾ ಪೆಂಡಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಗರ್ಬಾ ಪೆಂಡಾಲ್‌ಗಳಿಗೆ ಪ್ರವೇಶಿಸುವವರು ಪ್ರವೇಶದ್ವಾರದಲ್ಲಿ ದನದ ಮೂತ್ರವನ್ನು ನೀಡಬೇಖು. ಗರ್ಬಾ ಸ್ಥಳಗಳಿಗೆ ಪ್ರವೇಶಿಸುವ ಮೊದಲು ದನದ ಮೂತ್ರವನ್ನು ಹೀರುವುದನ್ನು ಯಾವುದೇ ಹಿಂದೂಗಳು ವಿರೋಧಿಸುವುದಿಲ್ಲ” ಎಂದು ಇಂದೋರ್ ಜಿಲ್ಲಾ ಬಿಜೆಪಿ ಮುಖ್ಯಸ್ಥ ಚಿಂಟು ವರ್ಮಾ ಹೇಳಿದ್ದಾರೆ.

“ದನದ ಮೂತ್ರವು ನಮಗೆ ಗೋಮಾತೆಯಷ್ಟೇ ಪವಿತ್ರ. ​​ಅನಾದಿ ಕಾಲದಿಂದಲೂ ಇದನ್ನು ನಮ್ಮ ಋಷಿಮುನಿಗಳು ಶುದ್ಧೀಕರಣಕ್ಕಾಗಿ ಬಳಸುತ್ತಿದ್ದರು. ಆದ್ದರಿಂದ ಇದನ್ನು ಪ್ರತಿ ಗರ್ಬಾ ಪೆಂಡಾಲ್‌ ಹೊರಗೆ ಇರಿಸಿ, ಗರ್ಬಾ ಆಚರಣೆ ನೋಡಲು ಬರುವವರಿಗೆ ನೀಡಬೇಕು. ಅದನ್ನು ಪ್ರಸಾದವಾಗಿ ಸೇವಿಸಲು ಯಾವುದೇ ಹಿಂದೂಗಳು ಆಕ್ಷೇಪಿಸುವುದಿಲ್ಲ ಎಂದು ನಾನು ಭಾವಿಸುತ್ತೇನೆ” ಎಂದು ವರ್ಮಾ ಹೇಳಿದ್ದಾರೆ.

ಇದನ್ನೂಓದಿ: ಬ್ಯಾಂಕಾಕ್‌: ರಸ್ತೆ ಮಧ್ಯೆ ಹೊತ್ತಿ ಉರಿದ ಶಾಲಾ ಬಸ್‌, 25 ವಿದ್ಯಾರ್ಥಿಗಳು ಸಜೀವ ದಹನ

“ಗರ್ಬಾ ಪೆಂಡಾಲ್‌ಗೆ ಬೇರೆ ಸಮುದಾಯದ ಜನರ ಅನಗತ್ಯ ಪ್ರವೇಶವನ್ನು ಪರಿಶೀಲಿಸಲು ಇದು ಸಹಾಯ ಮಾಡುತ್ತದೆ ಎಂದು ಬಿಜೆಪಿ ನಾಯಕ ಹೇಳಿದ್ದಾರೆ. ಆಧಾರ್ ಕಾರ್ಡ್‌ಗಳನ್ನು ನಕಲಿ ಮಾಡಬಹುದು ಮತ್ತು ಎಡಿಟ್‌ ಮಾಡಿ ತರಬಹುದು. ಆದ್ದರಿಂದ ಗರ್ಬಾ ಪ್ರವೇಶದಲ್ಲಿ ಪ್ರಸಾದವಾಗಿ ಗೌಮುತ್ರವನ್ನು ಬಳಸುವುದು ಕಾರ್ಯಸಾಧ್ಯವಾದ ಆಯ್ಕೆಯಾಗಿದೆ. ಇದು ಹಿಂದೂ ಧರ್ಮಕ್ಕೆ ಅನುಗುಣವಾಗಿರುತ್ತದೆ” ಎಂದು ಅವರು ಹೇಳಿದ್ದಾರೆ.

ಇಂದೋರ್ ಜಿಲ್ಲಾ ಬಿಜೆಪಿ ಮುಖ್ಯಸ್ಥ ಚಿಂಟು ವರ್ಮಾ ಅವರ ವಿಲಕ್ಷಣ ಸಲಹೆಯನ್ನು ಲೇವಡಿ ಮಾಡಿದ ಪ್ರತಿಪಕ್ಷ ಕಾಂಗ್ರೆಸ್‌ನ ರಾಜ್ಯ ಘಟಕದ ವಕ್ತಾರ ನೀಲಭ್ ಶುಕ್ಲಾ, ಬಿಜೆಪಿ ನಾಯಕರು ಗೋವಿನ ಮೇಲೆ ರಾಜಕೀಯ ಮಾಡಲು ಮಾತ್ರ ಆಸಕ್ತಿ ಹೊಂದಿದ್ದಾರೆ ಎಂದು ಹೇಳಿದ್ದಾರೆ.

ಇಂತಹ ಸಲಹೆಗಳು ಮತ್ತು ಬೇಡಿಕೆಗಳನ್ನು ಮುಂದಿಡುವ ಬಿಜೆಪಿ ನಾಯಕರು ಗೋಶಾಲೆಗಳಲ್ಲಿನ ಗೋವುಗಳ ದುಸ್ಥಿತಿಯ ವಿಚಾರದಲ್ಲಿ ಏಕೆ ಮೌನವಾಗಿದ್ದಾರೆ? ಇದು ಬಿಜೆಪಿಯ ಕೋಮು ಧ್ರುವೀಕರಣ ರಾಜಕೀಯಕ್ಕೆ ಮತ್ತೊಂದು ಉದಾಹರಣೆಯಾಗಿದೆ ಎಂದು ಶುಕ್ಲಾ ಹೇಳಿದ್ದಾರೆ.

ಈ ಸಲಹೆ ನೀಡುವ ನಾಯಕರು ಗರ್ಬಾ ಪೆಂಡಾಲ್‌ಗಳಿಗೆ ಪ್ರವೇಶಿಸುವ ಮೊದಲು ಮೂತ್ರವನ್ನು ಕುಡಿಯಬೇಕು ಮತ್ತು ಸಾಮಾಜಿಕ ಮಾಧ್ಯಮದಲ್ಲಿ ಈ ವೀಡಿಯೊಗಳನ್ನು ಪೋಸ್ಟ್ ಮಾಡಬೇಕು ಎಂದು ಅವರು ಹೇಳಿದ್ದಾರೆ.

ಇದನ್ನೂಓದಿ: ಲೈಂಗಿಕ ಕಿರುಕುಳ ಆರೋಪ: ಮಲಯಾಳಂ ನಟ ನಿವಿನ್ ಪೌಲಿ ವಿಚಾರಣೆ ನಡೆಸಿದ ಎಸ್‌ಐಟಿ

2013 ರಲ್ಲಿ, ಆಗಿನ ಬಿಜೆಪಿ ಶಾಸಕಿ ಉಷಾ ಠಾಕೂರ್ ಅವರು ಹಿಂದೂಯೇತರ ವಿಶೇಷವಾಗಿ ಮುಸ್ಲಿಂ ಯುವಕರ ಪ್ರವೇಶವನ್ನು ತಡೆಯಲು ಗರ್ಬಾ ಸ್ಥಳಗಳಿಗೆ ಪ್ರವೇಶಿಸಲು ಆಧಾರ್ ಮತ್ತು ಇತರ ಐಡಿ ಪುರಾವೆಗಳನ್ನು ಕಡ್ಡಾಯವಾಗಿ ಮಾಡಲು ಸಲಹೆ ನೀಡಿದ್ದರು. ಅದಾಗಿ ಒಂಬತ್ತು ವರ್ಷಗಳ ನಂತರ, ಅವರು ರಾಜ್ಯದ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಸಚಿವರಾದಾಗ ಸರಿಯಾದ ಗುರುತಿನ ಪುರಾವೆಗಳಿಲ್ಲದೆ ಸಂದರ್ಶಕರಿಗೆ ಸ್ಥಳಗಳಿಗೆ ಪ್ರವೇಶವನ್ನು ಅನುಮತಿಸದಂತೆ ಗರ್ಬಾ ಪೆಂಡಾಲ್ ಮುಖ್ಯಸ್ಥರನ್ನು ಕೇಳಿದ್ದರು.

ಐದು ವರ್ಷಗಳ ಹಿಂದೆ 2017 ರಲ್ಲಿ, ಭೋಪಾಲ್‌ನಲ್ಲಿ ಹಿಂದೂ ಉತ್ಸವ ಸಮಿತಿ ಕೂಡ ರಾಜ್ಯ ರಾಜಧಾನಿಯಲ್ಲಿ ಜಿಲ್ಲಾಡಳಿತದಿಂದ ನಡೆಸುವ ಗರ್ಬಾ ಪೆಂಡಾಲ್‌ಗಳಿಗೆ ಪ್ರವೇಶಿಸಲು ಐಡಿ ಪುರಾವೆಯಾಗಿ ಆಧಾರ್ ದಾಖಲೆಯನ್ನು ಹೊಂದುವಂತೆ ಒತ್ತಾಯಿಸಿತ್ತು.

ನವರಾತ್ರಿಯ ಸಮಯದಲ್ಲಿ ಗರ್ಬಾ ಆಚರಣೆಯನ್ನು ಮಧ್ಯಮಪ್ರದೇಶದಾದ್ಯಂತ ಅದರಲ್ಲೂ ವಿಶೇಷವಾಗಿ ಇಂದೋರ್ ಮತ್ತು ಉಜ್ಜಯಿನಿ ಪ್ರದೇಶ ಸೇರಿದಂತೆ ರಾಜ್ಯದ ಪಶ್ಚಿಮ ಮತ್ತು ನೈಋತ್ಯ ಭಾಗಗಳಲ್ಲಿ ಬಹಳ ಜನಪ್ರಿಯವಾಗಿ ಅಚರಿಸಲಾಗುತ್ತದೆ.

ವಿಡಿಯೊ ನೋಡಿ: ಕೇರಳ ಸಿನಿಮಾ ರಂಗದಲ್ಲಿ ಲೈಂಗಿಕ ದೌರ್ಜನ್ಯದ ಭಯಾನಕ ಕಥೆಗಳನ್ನು ಬಿಚ್ಚಿಟ್ಟ ಹೇಮಾ ಸಮಿತಿ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...