HomeUncategorizedFACT CHECK : ನಿರ್ಮಲಾ ಸೀತಾರಾಮನ್ ಕಚೇರಿಗೆ ಹೋಗಲು ದೆಹಲಿ ಮೆಟ್ರೋ ಬಳಸುತ್ತಾರೆ ಎಂಬುವುದು ನಿಜವೇ?

FACT CHECK : ನಿರ್ಮಲಾ ಸೀತಾರಾಮನ್ ಕಚೇರಿಗೆ ಹೋಗಲು ದೆಹಲಿ ಮೆಟ್ರೋ ಬಳಸುತ್ತಾರೆ ಎಂಬುವುದು ನಿಜವೇ?

- Advertisement -
- Advertisement -

“ಭಾರತದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಪ್ರತಿನಿತ್ಯ ತಮ್ಮ ಕಚೇರಿಗೆ ದೆಹಲಿಯ ಮೆಟ್ರೋದಲ್ಲಿ ಓಡಾಡುತ್ತಾರೆ. ಹಾಗೆಯೆ ಅವರು ಈ ದಿನ ದೆಹಲಿಯ ಮೆಟ್ರೋದಲ್ಲಿ ಓಡಾಡುವಾಗ ಈ ವಿಡಿಯೋವನ್ನು ಚಿತ್ರಿಸಲಾಗಿದೆ. ಇದು ಮೋದಿ ಸರ್ಕಾರದಿಂದ ಮಾತ್ರ ಸಾಧ್ಯವಾಗಿದೆ” ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ದೆಹಲಿಯ ಮೆಟ್ರೋದಲ್ಲಿ ಪ್ರಯಾಣಿಸಿದ ವಿಡಿಯೋವೊಂದನ್ನು ಹಂಚಿಕೊಂಡು ಸಾಕಷ್ಟು ಜನ ಮೆಚ್ಚುಗೆಯನ್ನು ವ್ಯಕ್ತ ಪಡಿಸುತ್ತಿದ್ದಾರೆ.

ಹೀಗೆ ಹಂಚಿಕೊಳ್ಳುತ್ತಿರುವ ವಿಡಿಯೋದಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಮೆಟ್ರೋದಲ್ಲಿ ಪ್ರಯಾಣಿಸುತ್ತಿರುವ ವಿಡಿಯೋ ನಿಜವೆಂದು ಕಂಡು ಬಂದಿದೆ. ಆದರೆ ಅವರು ಪ್ರತಿನಿತ್ಯ ತಮ್ಮ ಕಚೇರಿಗೆ ತೆರಳಲು ದೆಹಲಿ ಮೆಟ್ರೋ ಬಳಸುತ್ತಿದ್ದಾರೆ ಎಂಬುದು ಅನುಮಾನ ಎಂದು ಕೆಲವರು ಪ್ರತಿಕ್ರಿಯಿಸಿದ್ದಾರೆ.

ಹಾಗಿದ್ದರೆ ನಿಜವಾಗಿಯೂ ನಿರ್ಮಲ ಸೀತಾರಾಮನ್ ಪ್ರತಿ ದಿನ ತಮ್ಮ ಕಚೇರಿಗೆ ದೆಹಲಿ ಮೆಟ್ರೋ ಮೂಲಕ ಪ್ರಯಾಣಿಸುತ್ತಾರೆಯೇ ಎಂದು ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸೋಣ.


ಫ್ಯಾಕ್ಟ್‌ಚೆಕ್‌ :
ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಪ್ರತಿ ದಿನ ತಮ್ಮ ಕಚೇರಿಗೆ ದೆಹಲಿ ಮೆಟ್ರೋ ಮೂಲಕ ಪ್ರಯಾಣಿಸುತ್ತಾರೆಯೇ ಎಂದು ಪರಿಶೀಲಿಸಲು ಕೀ ವರ್ಡ್ಸ್‌ಗಳನ್ನು ಬಳಸಿ ಗೂಗಲ್ ಸರ್ಚ್ ಮಾಡಿದಾಗ, 17 ಮೇ 2024ರಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ತಮ್ಮ ಎಕ್ಸ್‌ ( ಟ್ವಿಟರ್)ನಲ್ಲಿ ಹಂಚಿಕೊಂಡಿದ್ದ ಪೋಸ್ಟ್‌ವೊಂದು ಲಭ್ಯವಾಗಿದೆ, ಪೋಸ್ಟ್‌ನಲ್ಲಿರುವ ವಿಡಿಯೋಗಳೀಗೂ ವೈರಲ್ ದೃಶ್ಯಾವಳಿಗಳಿಗೂ ಸಾಮ್ಯತೆ ಇರುವುದು ಕಂಡುಬಂದಿದೆ.

ಈ ಬಗ್ಗೆ ಮತ್ತಷ್ಟು ಸರ್ಚ್ ಮಾಡಿದಾಗ, ಮೇ 17ರಂದು ಟೈಮ್ಸ್‌ ಆಫ್‌ ಇಂಡಿಯಾ ಪ್ರಕಟಿಸಿದ ವರದಿಯೊಂದು ಲಭ್ಯವಾಗಿದೆ. ಆ ವರದಿಯಲ್ಲಿ “ಪೂರ್ವ ದೆಹಲಿ ಬಿಜೆಪಿ ಅಭ್ಯರ್ಥಿ ಹರ್ಷ್ ಮಲ್ಹೋತ್ರಾ ಪರ ಪ್ರಚಾರ ಮಾಡಲು ಸೀತಾರಾಮನ್ ಮಂಡಿ ಹೌಸ್‌ನಿಂದ ಮೆಟ್ರೋದಲ್ಲಿ ಸಂಚರಿಸಿದರು ಎಂದು ಉಲ್ಲೇಖಿಸಲಾಗಿದೆ.  ಪ್ರಯಾಣದ ಸಂದರ್ಭದಲ್ಲಿ ಅವರು ಸಹ ಪ್ರಯಾಣಿಕರೊಂದಿಗೆ ಸಂವಾದ ನಡೆಸಿದರು ಎಂದು ಬಿಜೆಪಿ ಪದಾಧಿಕಾರಿಗಳು ಹೇಳಿದ್ದಾರೆ. ಬಳಿಕ ಹಣಕಾಸು ಸಚಿವರು ಸಮೀಪದ ಕೋಚಿಂಗ್ ಸೆಂಟರ್‌ಗೆ ಭೇಟಿ ನೀಡಿದರು, ಅಲ್ಲಿ ಅವರು ಪ್ರಾಥಮಿಕವಾಗಿ ಉದ್ಯೋಗಾವಕಾಶಗಳು, ಆರ್ಥಿಕತೆಯ ಸ್ಥಿತಿ ಮತ್ತು ಭಾರತದಲ್ಲಿ ಚಾರ್ಟರ್ಡ್ ಅಕೌಂಟೆಂಟ್‌ಗಳ ಪಾತ್ರಗಳ ಕುರಿತು ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರಿಸಿದರು” ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಇನ್ನೂ ಹೆಚ್ಚಿನ ಮಾಹಿತಿಗಾಗಿ ನಾವು  ಸಂಬಂಧಿತ ಕೀವರ್ಡ್ಸ್‌ಗಳನ್ನು ಬಳಸಿ ಅಂತರ್ಜಾಲದಲಿ ಹುಡುಕಾಟ ನಡೆಸಿದ್ದೇವೆ. ಈ ವೇಳೆ ಕಾರ್ಪೊರೇಟ್ ವ್ಯವಹಾರಗಳ ರಾಜ್ಯ ಸಚಿವರಾಗಿ ಸೇವೆ ಸಲ್ಲಿಸುತ್ತಿರುವ ಹರ್ಷ್ ಮಲ್ಹೋತ್ರಾ ಅವರು ತಮ್ಮ ಪರಿಶೀಲಿಸಿದ X ಹ್ಯಾಂಡಲ್‌ನಿಂದ ಮೇ 17, 2024 ರಂದು ಲಕ್ಷ್ಮಿ ನಗರ ಮೆಟ್ರೋ ನಿಲ್ದಾಣದಲ್ಲಿ ವಿದ್ಯಾರ್ಥಿ ಸಭೆಯನ್ನು ನಡೆಸಿದ್ದಾರೆ ಎಂಬುದು ಕಂಡುಬಂದಿದೆ. ಈ ವರ್ಷ ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಗೆ ಮಲ್ಹೋತ್ರಾ ಅವರ ಪ್ರಚಾರದಲ್ಲಿ ಭಾಗಿಯಾಗಲು ಸೀತಾರಾಮನ್ ಅವರು ಮೆಟ್ರೋ ನಿಲ್ದಾಣಕ್ಕೆ ಬರಲಿದ್ದಾರೆ ಎಂದು ಹಂಚಿಕೊಂಡ ಪೋಸ್ಟ್ ಲಭ್ಯವಾಗಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ನಿರ್ಮಲಾ ಸೀತಾರಾಮನ್‌ ಅವರು ತಮ್ಮ ಕಚೇರಿ ಕೆಲಸಕ್ಕಾಗಿ ಪ್ರತಿನಿತ್ಯ ದೆಹಲಿ ಮೆಟ್ರೋದಲ್ಲಿ ಪ್ರಯಾಣಿಸುತ್ತಾರೆ ಎಂಬುದು ಸುಳ್ಳು. ಈ ಕುರಿತು ಯಾವುದೇ ವಿಶ್ವಾಸರ್ಹ ವರದಿಗಳು ಇದುವರೆಗೂ ಕಂಡು ಬಂದಿಲ್ಲ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ಇದನ್ನೂ ಓದಿ : FACT CHECK : ಅಮೆರಿಕ ಅಧ್ಯಕ್ಷೀಯ ಚುನಾವಣಾ ಕಣದಿಂದ ಜೋ ಬೈಡನ್ ಹಿಂದೆ ಸರಿದಿದ್ದಾರೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...