Homeಮುಖಪುಟದೇಶದ ಗೂಢಚಾರಿ ಸಂಸ್ಥೆಯ ಅಧಿಕಾರಿಯೆ ಇಸ್ರೇಲಿ ಗೂಢಚಾರರಾಗಿದ್ದರು: ಇರಾನ್‌ ಮಾಜಿ ಅಧ್ಯಕ್ಷ

ದೇಶದ ಗೂಢಚಾರಿ ಸಂಸ್ಥೆಯ ಅಧಿಕಾರಿಯೆ ಇಸ್ರೇಲಿ ಗೂಢಚಾರರಾಗಿದ್ದರು: ಇರಾನ್‌ ಮಾಜಿ ಅಧ್ಯಕ್ಷ

- Advertisement -
- Advertisement -

ಇರಾನಿನ ಉನ್ನತ ರಹಸ್ಯ ಸೇವಾ ಅಧಿಕಾರಿ ಇಸ್ರೇಲಿ ಗೂಢಚಾರರಾಗಿದ್ದರು ಎಂದು ಇರಾನ್ ಮಾಜಿ ಅಧ್ಯಕ್ಷ ಮಹಮೂದ್ ಅಹ್ಮದಿನೆಜಾದ್ ಗಂಭೀರ ಆರೋಪ ಮಾಡಿದ್ದಾರೆ. ಇರಾನ್‌ನಲ್ಲಿ ಇಸ್ರೇಲಿ ಬೇಹುಗಾರಿಕೆಯನ್ನು ಎದುರಿಸುವ ರಹಸ್ಯ ಸೇವಾ ಘಟಕದ ಮುಖ್ಯಸ್ಥರೇ ಇಸ್ರೇಲಿ ಗೂಢಚಾರಿ ಎಂದು ಅವರು ಹೇಳಿದ್ದಾರೆ.ಇರಾನ್‌ ಗೂಢಚಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಇಸ್ರೇಲ್ ಇರಾನ್‌ನಲ್ಲಿ ಸಂಕೀರ್ಣ ಕಾರ್ಯಾಚರಣೆಗಳನ್ನು ಆಯೋಜಿಸಿತು. ಅವರು ಸುಲಭವಾಗಿ ಮಾಹಿತಿಯನ್ನು ಪಡೆಯಬಹುದಾಗಿತ್ತು.ಆದರೆ ಇರಾನ್‌ನಲ್ಲಿ ಅವರು ಇನ್ನೂ ಈ ಬಗ್ಗೆ ಮೌನವಾಗಿದ್ದಾರೆ. ಇಸ್ರೇಲ್ ವಿರುದ್ಧ ಕಾರ್ಯಾಚರಿಸುವ ಇರಾನ್‌ನ ಘಟಕದ ಉಸ್ತುವಾರಿ ವಹಿಸಿದ್ದ ವ್ಯಕ್ತಿಯೆ ಇಸ್ರೇಲಿ ಏಜೆಂಟ್” ಎಂದು ಅಹ್ಮದಿನೆಜಾದ್ ಸಿಎನ್‌ಎನ್ ಟರ್ಕ್‌ಗೆ ನೀಡಿದ್ದ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇರಾನ್‌ ಗೂಢಚಾರಿ

ಇದನ್ನೂಓದಿ: ‘ಬಾಲಕಿ ಆಘಾತಗೊಂಡಿಲ್ಲ’ ಎಂದು ಅತ್ಯಾಚಾರ ಆರೋಪಿಯನ್ನು ಖುಲಾಸೆಗೊಳಿಸಿದ ಕೋರ್ಟ್

ಇಸ್ರೇಲಿ ಗುಪ್ತಚರ ಚಟುವಟಿಕೆಗಳ ಮೇಲೆ ನಿಗಾ ಇಡುವ ಇರಾನಿನ ಗುಪ್ತಚರ ತಂಡದೊಳಗೆ ಹೆಚ್ಚುವರಿ 20 ಏಜೆಂಟ್‌ಗಳು ಮೊಸ್ಸಾದ್‌ಗಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಅಹ್ಮದಿನೆಜಾದ್ ಹೇಳಿದ್ದು, ಇದು ಪ್ರತ್ಯೇಕ ಘಟನೆಯಲ್ಲ ಎಂದು ಹೇಳಿದ್ದಾರೆ.

ಇರಾನ್‌ನ ಪರಮಾಣು ಕಾರ್ಯಕ್ರಮದ ಕುರಿತು ಸೂಕ್ಷ್ಮ ಮಾಹಿತಿಯನ್ನು ಇಸ್ರೇಲ್‌ಗೆ ಒದಗಿಸಲು ಈ ಡಬಲ್ ಏಜೆಂಟ್‌ಗಳು ಜವಾಬ್ದಾರರಾಗಿದ್ದರು. ಅವರು 2018 ರಲ್ಲಿ ಇರಾನ್ ಪರಮಾಣು ದಾಖಲೆಗಳ ಕಳ್ಳತನದಲ್ಲಿ ಭಾಗಿಯಾಗಿದ್ದಾರೆ ಮತ್ತು ಹಲವಾರು ಇರಾನ್ ಪರಮಾಣು ವಿಜ್ಞಾನಿಗಳನ್ನು ಕೊಂದಿದ್ದಾರೆ ಎಂದು ಅಹ್ಮದಿನೆಜಾದ್ ಆರೋಪಿಸಿದ್ದಾರೆ.

ಇರಾನ್‌ನ ಗೂಢಚಾರರೊಬ್ಬರು ಹಿಜ್ಬುಲ್ಲಾ ನಾಯಕ ಹಸನ್ ನಸ್ರಲ್ಲಾ ಅವರ ಸ್ಥಳದ ಬಗ್ಗೆ ಇಸ್ರೇಲ್‌ಗೆ ಸುಳಿವು ನೀಡಿದ್ದಾರೆ ಎಂಬ ವರದಿಗಳ ಹಿನ್ನಲೆ ಇರಾನ್‌ನ ಮಾಜಿ ಅಧ್ಯಕ್ಷರ ಹೇಳಿಕೆಗೆ ಮಹತ್ವ ಬಂದಿದೆ. ಇಸ್ರೇಲ್‌ ಬೈರುತ್‌ನ ಹೆಜ್ಬುಲ್ಲಾ ಪ್ರಧಾನ ಕಚೇರಿಯ ಮೇಲೆ ವೈಮಾನಿಕ ದಾಳಿ ಮಾಡಿ ಸಂಘಟನೆಯ ಪ್ರಮುಖ ನಾಯಕರನ್ನು ಕೊಂದು ಹಾಕಿತ್ತು.

ಇದನ್ನೂ ಓದಿ: ಬೆಂಗಳೂರಿನಲ್ಲಿ ವಾಸಿಸುತ್ತಿದ್ದ ಪಾಕ್ ಮೂಲದ ನಾಲ್ವರ ಬಂಧನ; ‘ಶರ್ಮಾ’ ಹೆಸರಿನಲ್ಲಿ ಆಧಾರ್ ಪಡೆದಿದ್ದ ಶಂಕಿತ ಆರೋಪಿಗಳು

ಅಹ್ಮದಿನೆಜಾದ್ ಅವರು ಪ್ರಸ್ತುತ ಇರಾನ್ ಸರ್ಕಾರದ ತೀವ್ರ ಟೀಕಾಕಾರರಾಗಿದ್ದಾರೆ. ಈ ಹಿಂದೆ ಇರಾನಿನ ಮಾಜಿ ಗುಪ್ತಚರ ಸಚಿವ ಅಲಿ ಯೂನೆಸಿ ಅವರು ಕೂಡಾ ಇಂತದ್ದೆ ಹೇಳಿಕೆಗಳನ್ನು ನೀಡಿದ್ದರು. ಇಸ್ರೇಲಿ ಗೂಢಚಾರರು ಇರಾನ್‌ ಸರ್ಕಾರದ ಉನ್ನತ ಶ್ರೇಣಿಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ ಎಂದು ಅವರು ಹೇಳಿದ್ದರು.

“ಕಳೆದ 10 ವರ್ಷಗಳಲ್ಲಿ ದೇಶದ ಎಲ್ಲಾ ಉನ್ನತ ಅಧಿಕಾರಿಗಳು ತಮ್ಮ ಜೀವಕ್ಕೆ ಭಯಪಡುವ ಮಟ್ಟಕ್ಕೆ ಮೊಸಾದ್ ಅನೇಕ ಸರ್ಕಾರಿ ಇಲಾಖೆಗಳಿಗೆ ನುಸುಳಿದೆ” ಎಂದು ಯೂನೇಸಿ 2021 ರಲ್ಲಿ ಸಂದರ್ಶನವೊಂದರಲ್ಲಿ ಹೇಳಿದ್ದರು.

ಇಸ್ರೇಲ್ ಸೆಪ್ಟೆಂಬರ್ 23 ರಿಂದ ಲೆಬನಾನ್‌ನಲ್ಲಿ ಹೆಜ್ಬೊಲ್ಲಾ ಸಂಘಟನೆಗಳನ್ನು ಗುರಿಯಾಗಿಸಿ ವ್ಯಾಪಕವಾದ ವಾಯುದಾಳಿಗಳನ್ನು ನಡೆಸುತ್ತಿದೆ. ಇದರ ಪರಿಣಾಮವಾಗಿ 960 ಕ್ಕೂ ಹೆಚ್ಚು ಸಾವುಗಳು ಮತ್ತು 2,770 ಕ್ಕೂ ಹೆಚ್ಚು ಗಾಯಗಳಾಗಿವೆ ಎಂದು ಲೆಬನಾನಿನ ಆರೋಗ್ಯ ಸಚಿವಾಲಯ ತಿಳಿಸಿದೆ.

ವಿಡಿಯೊ ನೋಡಿ: ಕೇರಳ ಸಿನಿಮಾ ರಂಗದಲ್ಲಿ ಲೈಂಗಿಕ ದೌರ್ಜನ್ಯದ ಭಯಾನಕ ಕಥೆಗಳನ್ನು ಬಿಚ್ಚಿಟ್ಟ ಹೇಮಾ ಸಮಿತಿ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

ರಾಜಕೀಯ ನಾಯಕರು ತಮಗೆ ಸಿಕ್ಕ ಹಾರ, ತುರಾಯಿ ಅಥವಾ ಹಣ್ಣುಗಳನ್ನು ಅಭಿಮಾನಿಗಳಿಗೆ ಹಂಚುವುದು ಹೊಸದೇನಲ್ಲ. ಆದರೆ, ತಾನು ಕಚ್ಚಿದ ಹಣ್ಣನ್ನು ಸಾರ್ವಜನಿಕವಾಗಿ ಜನರತ್ತ ಎಸೆಯುವುದು ಯಾವ ರೀತಿಯ ಸಂಸ್ಕೃತಿ ಎಂಬ ಪ್ರಶ್ನೆ ಮೂಡುತ್ತದೆ....

ವೈಜಾಗ್ ಸ್ಟೀಲ್ ಅಪಘಾತಕ್ಕೆ 8 ಮಂದಿ ಬಲಿ: ಸಿಬ್ಬಂದಿ ಕೊರತೆಯ ಬಗ್ಗೆ ಕಾರ್ಮಿಕ ಸಂಘಗಳ ಆರೋಪ: ಸಾವಿನ ಅಂಚಿನಲ್ಲೂ ಕುಟುಂಬಕ್ಕಾಗಿ ಮಿಡಿದ ಕಾರ್ಮಿಕ

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿರುವ ಪ್ರಸಿದ್ಧ ರಾಷ್ಟ್ರೀಯ ಇಸ್ಪತ್ ನಿಗಮ್ ಲಿಮಿಟೆಡ್ (RINL) ಉಕ್ಕು ಸ್ಥಾವರದಲ್ಲಿ ಸೋಮವಾರ (ಜೂನ್ 8, 2026) ಸಂಜೆ ಭೀಕರ ಕೈಗಾರಿಕಾ ದುರಂತವೊಂದು ಸಂಭವಿಸಿದೆ. ಸ್ಥಾವರದ ಸ್ಟೀಲ್ ಮೆಲ್ಟ್ ಶಾಪ್-1 (SMS-1)...

ಅಂದು ಪಿಣರಾಯಿ ಮನೆ ಮೇಲೆ ದಾಳಿ; ಈಗ ವೀಣಾ ವಿಜಯನ್‌ಗೆ ಸಮನ್ಸ್‌: ಹಿರಿಯ ಕಮ್ಯುನಿಸ್ಟ್‌ ನಾಯಕನ ಕುಟುಂಬದ ಮೇಲೆ ಇಡಿ ಕಣ್ಣು

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಮನೆ ಮೇಲೆ ಕಳೆದ ತಿಂಗಳು ಜಾರಿ ನಿರ್ದೇಶನಾಲಯ ದಾಳಿ ಮಾಡಿತ್ತು. ಕೊನೆಗೆ ಅಲ್ಲಿ ಏನೂ ಸಿಗದೆ ಬರಿಗೈನಲ್ಲಿ ಅಧಿಕಾರಿಗಳು...

ಮೋದಿ ಸರ್ಕಾರಕ್ಕೆ 12 ವರ್ಷ : 12 ರಿಂದ 4ಕ್ಕೆ ಇಳಿದ ಉಜ್ವಲ ಯೋಜನೆ ಸಿಲಿಂಡರ್

ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಎನ್‌ಡಿಎ ಸರ್ಕಾರ 12 ವರ್ಷಗಳ ಆಡಳಿತಾವಧಿಯನ್ನು ಪೂರ್ಣಗೊಳಿಸಿದೆ ಅಥವಾ ಮೋದಿ ಅವರು ಮೂರನೇ ಅವಧಿಗೆ ಪ್ರಧಾನಿಯಾಗಿ 2026ರ ಜೂನ್ 9ಕ್ಕೆ ಎರಡು ವರ್ಷಗಳು ಪೂರ್ಣಗೊಂಡಿವೆ....

ಬಿರ್ಸಾ ಮುಂಡಾ 150ನೇ ಜಯಂತಿ ಹೆಸರಿನಲ್ಲಿ ಆದಿವಾಸಿ ಹಕ್ಕುಗಳ ಮೇಲೆ ಸಂಘ ಪರಿವಾರದ ಕಣ್ಣು?

ಮೇ 24 ರಂದು ನವದೆಹಲಿಯ ಕೆಂಪುಕೋಟೆಯಲ್ಲಿ (Red Fort) ಭಾರತದಾದ್ಯಂತದ ಲಕ್ಷಾಂತರ ಪರಿಶಿಷ್ಟ ಪಂಗಡದ (ST) ಸಮುದಾಯಗಳ ಜನರು ಒಟ್ಟಿಗೆ ಸೇರಿದ್ದರು. ‘ಜಂಜಾತಿ ಸುರಕ್ಷಾ ಮಂಚ್’ (ಬುಡಕಟ್ಟು ರಕ್ಷಣಾ ವೇದಿಕೆ) ಆಯೋಜಿಸಿದ್ದ ಈ...

ಆಪರೇಷನ್ ಕಮಲ ಭೀತಿ: ರಾಜ್ಯಸಭಾ ಚುನಾವಣೆಗೂ ಮುನ್ನ ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕರು ಕರ್ನಾಟಕಕ್ಕೆ ಶಿಫ್ಟ್‌?

ಜೂನ್ 18 ರ ರಾಜ್ಯಸಭಾ ಚುನಾವಣೆಗೆ ಮುನ್ನ ಬಿಜೆಪಿಯಿಂದ ಅಕ್ರಮವಾಗಿ ಹಣ ವರ್ಗಾವಣೆ ಪ್ರಯತ್ನಗಳು ನಡೆಯುತ್ತಿವೆ ಎಂದು ಮಧ್ಯಪ್ರದೇಶ ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ. ಅಡ್ಡ ಮತದಾನ ತಡೆಗಟ್ಟುವ ಜೊತೆಗೆ ತನ್ನ ಶಿಬಿರದ ಒಗ್ಗಟ್ಟು...

ವೀರಪ್ಪನ್ ಹೇಳಿದ ಕಥೆಗೆ 30 ವರ್ಷಗಳ ಬಳಿಕ ಕ್ಲೈಮ್ಯಾಕ್ಸ್ : ಸನ್ ಟಿವಿ ವಿರುದ್ಧ ಕಾನೂನು ಸಮರದಲ್ಲಿ ಗೆದ್ದ ನಟಿ ಸುಕನ್ಯಾ​

ತೊಂಬತ್ತರ ದಶಕದಲ್ಲಿ ತಮಿಳು ಮತ್ತು ಮಲಯಾಳಂ ಚಿತ್ರರಂಗದಲ್ಲಿ ಪ್ರಮುಖ ನಟರೊಂದಿಗೆ ನಟಿಸಿ, ಅಪಾರ ಜನಪ್ರಿಯತೆ ಗಳಿಸಿದ್ದ ನಟಿ ಸುಕನ್ಯಾ ರಮೇಶ್, ಪ್ರಸ್ತುತ ಕೆಲವು ಅಪರೂಪದ ಪಾತ್ರಗಳನ್ನು ಹೊರತುಪಡಿಸಿದರೆ ಚಿತ್ರರಂಗದಲ್ಲಿ ಅಷ್ಟಾಗಿ ಸಕ್ರಿಯರಾಗಿಲ್ಲ. ಈ ನಡುವೆ 2024ರಲ್ಲಿ...

“ರಾಜೀನಾಮೆ ನೀಡಿ, ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿ”: ಟಿಎಂಸಿ ಬಂಡುಕೋರರಿಗೆ ಮಹುವಾ ಮೊಯಿತ್ರಾ ನೇರ ಸವಾಲು

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (TMC) ಪಕ್ಷದೊಳಗೆ ತೀವ್ರ ಭಿನ್ನಾಭಿಪ್ರಾಯ ಸ್ಫೋಟಗೊಂಡಿದೆ. ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ (NDA) ಮೈತ್ರಿಕೂಟಕ್ಕೆ ಬೆಂಬಲ ನೀಡಲು ಮುಂದಾಗಿರುವ ಸ್ವಪಕ್ಷದ ಬಂಡಾಯ ಸಂಸದರ ವಿರುದ್ಧ ಟಿಎಂಸಿ ಸಂಸದೆ...

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...