Homeಮುಖಪುಟ'45 ದಿನ ನಿದ್ದೆಯಿಲ್ಲ' | ಬಜಾಜ್ ಫೈನಾನ್ಸ್‌ ಕಂಪೆನಿಯ ಒತ್ತಡ; ಸಿಬ್ಬಂದಿ ಸಾವಿಗೆ ಶರಣು

’45 ದಿನ ನಿದ್ದೆಯಿಲ್ಲ’ | ಬಜಾಜ್ ಫೈನಾನ್ಸ್‌ ಕಂಪೆನಿಯ ಒತ್ತಡ; ಸಿಬ್ಬಂದಿ ಸಾವಿಗೆ ಶರಣು

- Advertisement -
- Advertisement -

ಬಜಾಜ್ ಫೈನಾನ್ಸ್‌ ಕಂಪೆನಿಯ ಏರಿಯಾ ಮ್ಯಾನೇಜರ್ ಆಗಿದ್ದ 42 ವರ್ಷದ ತರುಣ್ ಸಕ್ಸೇನಾ ಎಂಬ ವ್ಯಕ್ತಿ ಕಂಪೆನಿಯ ತೀವ್ರ ಕೆಲಸದ ಒತ್ತಡದ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಝಾನ್ಸಿಯಲ್ಲಿ ನಡೆದಿದೆ. ಸಕ್ಸೇನಾ ಅವರು ತಮ್ಮ ಪತ್ನಿ ಮೇಘಾ ಅವರನ್ನು ಉದ್ದೇಶಿಸಿ ಐದು ಪುಟಗಳ ಡೆತ್‌ನೋಟ್‌ಗಳನ್ನು ಬರೆದಿದ್ದು, ಅದರಲ್ಲಿ ಅವರು ಕಂಪೆನಿಯ ಅಧಿಕಾರಿಗಳು ಅವಾಸ್ತವಿಕ ಗುರಿಗಳನ್ನು ಸಾಧಿಸಲು ತನ್ನ ಮೇಲೆ ಒತ್ತಡ ಹೇರುತ್ತಿದ್ದಾರೆಂದು ಆರೋಪಿಸಿದ್ದಾರೆ ಎಂದು ವರದಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ತನಗೆ ವೇತನ ಕಡಿತ ಮತ್ತು ಉದ್ಯೋಗ ಕಳೆದುಕೊಳ್ಳುವ ಬೆದರಿಕೆಗಳನ್ನೂ ಮಾಡಲಾಗಿದೆ ಡೆತ್‌ನೋಟ್‌ನಲ್ಲಿ ಸಾವಿಗೀಡಾದ ತರುಣ್ ಸಕ್ಸೇನಾ ಅವರು ಉಲ್ಲೇಖಿಸಿದ್ದಾರೆ. ಮೃತ ತರುಣ್ ಅವರು ತಮ್ಮ ಪ್ರದೇಶದಲ್ಲಿ ಬಜಾಜ್ ಫೈನಾನ್ಸ್‌ ಲೋನ್‌ಗಳ ಮೇಲೆ EMI ಗಳನ್ನು ಸಂಗ್ರಹಿಸುವ ಜವಾಬ್ದಾರಿಯನ್ನು ಹೊಂದಿದ್ದರು.

ಇದನ್ನೂ ಓದಿ: ‘ಬಾಲಕಿ ಆಘಾತಗೊಂಡಿಲ್ಲ’ ಎಂದು ಅತ್ಯಾಚಾರ ಆರೋಪಿಯನ್ನು ಖುಲಾಸೆಗೊಳಿಸಿದ ಕೋರ್ಟ್

ಹಿರಿಯ ಮ್ಯಾನೇಜ್‌ಮೆಂಟ್‌ಗೆ ಈ ಬಗ್ಗೆ ಕಳವಳ ವ್ಯಕ್ತಪಡಿಸಿದ ಹೊರತಾಗಿಯೂ, ತರುಣ್ ಮತ್ತು ಅವರ ಸಹೋದ್ಯೋಗಿಗಳು ಸಂಗ್ರಹಿಸದ EMI ಗಳನ್ನು ಸರಿದೂಗಿಸಲು ಒತ್ತಾಯಿಸಲಾಗುತ್ತಿದೆ ಎಂದು ಪತ್ರದಲ್ಲಿ ಬಹಿರಂಗಪಡಿಸಿದ್ದಾರೆ.

ತರುಣ್ ಅವರ ಡೆತ್‌ನೋಟ್‌ ತನ್ನ ಮೇಲೆ ಆದ ಮಾನಸಿಕ ಮತ್ತು ದೈಹಿಕ ಹಿಂಸೆಯನ್ನು ವಿವರಿಸುತ್ತದೆ. “ತಾನು 45 ದಿನಗಳವರೆಗೆ ಸರಿಯಾಗಿ ನಿದ್ದೆ ಮಾಡಿಲ್ಲ. ಹಸಿವನ್ನು ಕಳೆದುಕೊಂಡಿದ್ದು, ತೀವ್ರ ಆತಂಕದಿಂದ ಮುಳುಗಿದ್ದೆ” ಎಂದು ಪತ್ರದಲ್ಲಿ ಬರೆದಿದ್ದಾರೆ.

ಸಾಯುವ ದಿನದಂದು ನಡೆದ ವೀಡಿಯೊ ಕಾನ್ಫರೆನ್ಸ್‌ನಲ್ಲಿ ಕೂಡಾ ತನ್ನ ಮೇಲಿನ ಒತ್ತಡಗಳನ್ನು ವಿವರಿಸಿದ್ದರು, ಆದರೆ ಅಲ್ಲಿ ಅವರ ಮೇಲಧಿಕಾರಿಗಳು ಅವರನ್ನು ವಜಾಗೊಳಿಸುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ವರದಿಯಾಗಿದೆ.

ಇದನ್ನೂಓದಿ: ‘ಇತರರು ಇನ್ನೂ ಅನಿಶ್ಚಿತತೆಯ ಜೀವನದಲ್ಲಿ ಬಳಲುತ್ತಿದ್ದಾರೆ’: ಬಿಡುಗಡೆ ಬಳಿಕ ದುಃಖ ವ್ಯಕ್ತಪಡಿಸಿದ ಗೌತಮ್ ನವಲಾಖಾ

ಪತ್ರದಲ್ಲಿ ಅವರು ತಮ್ಮ ಕಂಪೆನಿಯ ಹಿರಿಯ ಮ್ಯಾನೇಜರ್‌ಗಳ ವಿರುದ್ಧ ಪೊಲೀಸ್ ದೂರು ದಾಖಲಿಸಲು ಕುಟುಂಬಿಕರಿಗೆ ಸೂಚಿಸಿದ್ದು, ತನ್ನ ಆತ್ಮಹತ್ಯೆಗೆ ಅವರೆ ಕಾರಣ ಎಂದು ದೂಷಿಸಿದ್ದಾರೆ.

ಜೀವ ಅಮೂಲ್ಯವಾಗಿದೆ. ಮಾನಸಿಕ ಒತ್ತಡಗಳಿದ್ದರೆ ಇಲ್ಲಿ ಸಂಪರ್ಕಿಸಿ:

ಬೆಂಗಳೂರು ಸಹಾಯವಾಣಿ – 080-25497777, ಬೆಳಿಗ್ಗೆ 10 ರಿಂದ ಸಂಜೆ 8 ರವರೆಗೆ

ಕರ್ನಾಟಕ ಆರೋಗ್ಯ ಸಹಾಯವಾಣಿ – 104

ವಿಡಿಯೊ ನೋಡಿ: ಅಟ್ರಾಸಿಟಿ’ ಕಾದಂಬರಿ; ಮನುಷ್ಯ ಲೋಕದ ರೂಪಾಂತರವನ್ನ ಕಟ್ಟುತಿದೆಯಾ? ಡಾ. ಗೀತಾ ವಸಂತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...

ಪ್ರಧಾನಿ ನರೇಂದ್ರ ಮೋದಿಯ 12 ವರ್ಷದ ಸಾಧನೆ ಏನು? ಅವರು ಮುರಿದ ದಾಖಲೆಯಾದರೂ ಯಾವುದು?

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ ಸತತ 12ವರ್ಷಗಳು (4,399 ದಿನಗಳು) ಪ್ರಧಾನಿ ಹುದ್ದೆ ಅಲಂಕರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ ತುಂಬಿದ ಹಿನ್ನೆಲೆ ಬಿಜೆಪಿ...