Homeಕರ್ನಾಟಕನಿರೀಕ್ಷೆ ಹುಟ್ಟಿಸಿದ ‘ಗಿರ್ಮಿಟ್’ ಟ್ರೇಲರ್: ನಟ, ನಟಿ ಪಾತ್ರದಲ್ಲಿ ಮಕ್ಕಳ ಮಿಂಚು

ನಿರೀಕ್ಷೆ ಹುಟ್ಟಿಸಿದ ‘ಗಿರ್ಮಿಟ್’ ಟ್ರೇಲರ್: ನಟ, ನಟಿ ಪಾತ್ರದಲ್ಲಿ ಮಕ್ಕಳ ಮಿಂಚು

- Advertisement -
- Advertisement -

ಮೊಟ್ಟ ಮೊದಲ ಮಕ್ಕಳ ಕಮರ್ಷಿಯಲ್​ ಚಿತ್ರ ‘ಗಿರ್ಮಿಟ್​’ ಟ್ರೇಲರ್ ​ ರಿಲೀಸ್ ಆಗಿದೆ. ದೊಡ್ಡವರ ಧಿರಿಸಿನಲ್ಲಿ ಮಕ್ಕಳು ಅಭಿನಯದ ಮೂಲಕ ಮನರಂಜನೆ ಉಣಬಡಿಸಿದ್ದಾರೆ. ಮಕ್ಕಳನ್ನೇ ಮೂಲವಾಗಿರಿಸಿಕೊಂಡು, ನಾಯಕ, ನಾಯಕಿಯರ ಪಾತ್ರದಲ್ಲಿ ಮಿಂಚುವಂತೆ ಮಾಡಿದ್ದಾರೆ ಬಸ್ರೂರು. ‘ಗಿರ್ಮಿಟ್’ ಚಿತ್ರದ ಬಗ್ಗೆ ನಿರೀಕ್ಷೆ ಹೆಚ್ಚಿದೆ. ಚಿತ್ರವು ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಏಕಕಾಲದಲ್ಲಿ ರಿಲೀಸ್ ಆಗಲಿದೆ.

ವ್ಯವಹಾರಿಕ ಆಯಾಮ ಮತ್ತು ದೃಷ್ಟಿಕೋನವನ್ನಿಟ್ಟುಕೊಂಡ ಮಕ್ಕಳ ಚಿತ್ರ ‘ಗಿರ್ಮಿಟ್’ ಪ್ರೇಕ್ಷಕರಿಗೆ ಮನರಂಜನೆಯ ರಸದೂಟ ಉಣಿಸಲು ತೆರೆಗೆ ಬರಲು ಸಿದ್ಧವಾಗುತ್ತಿದೆ. ಮಕ್ಕಳೇ ಪ್ರಧಾನಪಾತ್ರದಲ್ಲಿ ನಟಿಸಿರುವ ಚಿತ್ರ ಗಿರ್ಮಿಟ್ ಭಾರತೀಯ ಚಿತ್ರರಂಗದಲ್ಲೇ ಮೊದಲ ಪ್ರಯತ್ನ ಎನ್ನಲಾಗಿದೆ. ಶೀರ್ಷಿಕೆಯ ಮೂಲಕವೇ ಗಮನ ಸೆಳೆದಿರುವ ಚಿತ್ರ ನವೆಂಬರ್​ 8 ರಂದು ಪ್ರಪಂಚದಾದ್ಯಂತ ಬಿಡುಗಡೆಗೊಳ್ಳುತ್ತಿದೆ.

ಚಿತ್ರದ ಟ್ರೇಲರ್‍ ನಲ್ಲಿ ನಾಯಕ, ನಾಯಕಿ ಪಾತ್ರದಲ್ಲಿ ಮಕ್ಕಳು ಗಮನಸೆಳೆದಿದ್ದಾರೆ. ನಾಯಕ ಹೇಳುವ ಡೈಲಾಗ್ಸ್, ಪ್ರೇಮ ಸನ್ನಿವೇಶ, ವಿಭಿನ್ನ ಪಾತ್ರಗಳು, ಕೌಟುಂಬಿಕ ಕಲಹ, ನಾಯಕ, ನಾಯಕಿಯ ಮಾಸ್​ ಗೀತೆ ಹೀಗೆ ಕಮರ್ಷಿಯಲ್​ ಚಿತ್ರದಲ್ಲಿರಬೇಕಾದ ಎಲ್ಲಾ ಅಂಶಗಳೂ ಟ್ರೇಲರ್‍ ನಲ್ಲಿ ಕಾಣಸಿಗುತ್ತವೆ. ನಟ ಯಶ್​, ನಟಿ ರಾಧಿಕಾ ಸೇರಿದಂತೆ ಹಿರಿಯ ಕಲಾವಿದರು ಹಿನ್ನೆಲೆ ಧ್ವನಿ ನೀಡಿದ್ದಾರೆ.

ಚಿತ್ರದ ‘ಆರಂಭವೇ ಆನಂದವೇ’ ಎಂಬ ಲಿರಿಕಲ್ ವಿಡಿಯೋ ಗೀತೆ ಅ.21 ರ ಸಂಜೆ 7 ಕ್ಕೆ ಬಿಡುಗಡೆಯಾಗಿತ್ತು. ಕಿನ್ನಾಳ ರಾಜ್ ಸಾಹಿತ್ಯವಿದ್ದು, ಸಂತೋಷ್ ವೆಂಕಿ ಗೀತೆಗೆ ಧ್ವನಿ ನೀಡಿದ್ದಾರೆ. ಮಕ್ಕಳೇ ಚಿತ್ರವನ್ನು ಚಿತ್ರಿಸಿದ್ದಾರೆ. ನಾಯಕ, ನಾಯಕಿಯ ವಾಗ್ಯುದ್ಧ, ನಾಯಕನ ಖಡಕ್ ಡೈಲಾಗ್, ನಾಯಕ, ನಾಯಕಿಯ ಪ್ರೇಮ ಸಲ್ಲಾಪ ಎಲ್ಲವೂ ಚಿತ್ರದಲ್ಲಿದೆ.

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಓಂಕಾರ್ ಮೂವೀಸ್ ಬ್ಯಾನರ್‍ ಅಡಿ ನಿರ್ಮಾಣವಾಗಿದೆ. ಚಿತ್ರಕ್ಕೆ ಎನ್.ಎಸ್.ರಾಜ್ ಕುಮಾರ್ ಬಂಡವಾಳ ಹೂಡಿದ್ದಾರೆ. ಸೂರಜ್ ಚೌಧರಿ ಮತ್ತು ನರೇನ್ ಚಂದ್ರ ಚೌಧರಿ ಸಹ ನಿರ್ಮಾಪಕರಾಗಿದ್ದಾರೆ. ಪ್ರಮೋದ್ ಮರವಂತೆ, ಕಿನ್ನಲ್ ರಾಜ್, ಸಂದೀಪ್ ಶಿರಸಿ, ಸುಚನ್ ಶೆಟ್ಟಿ ಮತ್ತು ಮಂಜುನಾಥ್ ಚಿತ್ರಕಥೆ ಮತ್ತು ಸಂಭಾಷಣೆ ಬರೆದಿದ್ದಾರೆ. ಚಿತ್ರದಲ್ಲಿ ಅಶ್ಲೇಷ್ ರಾಜ್, ಶ್ಲಾಘಾ ಸಾಲಿಗ್ರಾಮಾ, ಆರಾಧ್ಯ ಶೆಟ್ಟಿ, ತನಿಶಾ ಕೋನಿ, ಜಯೇಂದ್ರ, ನಾಗರಾಜ್ ಜಪ್ತಿ, ಆದಿತ್ಯ ಕುಂದಾಪುರ ಮತ್ತು ಸಿಂಚನಾ ಕೋಟೇಶ್ವರ ಮೊದಲಾದ ಕಲಾವಿದರು ಚಿತ್ರದಲ್ಲಿ ಅಭಿನಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...