Homeಕರ್ನಾಟಕನಿರೀಕ್ಷೆ ಹುಟ್ಟಿಸಿದ ‘ಗಿರ್ಮಿಟ್’ ಟ್ರೇಲರ್: ನಟ, ನಟಿ ಪಾತ್ರದಲ್ಲಿ ಮಕ್ಕಳ ಮಿಂಚು

ನಿರೀಕ್ಷೆ ಹುಟ್ಟಿಸಿದ ‘ಗಿರ್ಮಿಟ್’ ಟ್ರೇಲರ್: ನಟ, ನಟಿ ಪಾತ್ರದಲ್ಲಿ ಮಕ್ಕಳ ಮಿಂಚು

- Advertisement -
- Advertisement -

ಮೊಟ್ಟ ಮೊದಲ ಮಕ್ಕಳ ಕಮರ್ಷಿಯಲ್​ ಚಿತ್ರ ‘ಗಿರ್ಮಿಟ್​’ ಟ್ರೇಲರ್ ​ ರಿಲೀಸ್ ಆಗಿದೆ. ದೊಡ್ಡವರ ಧಿರಿಸಿನಲ್ಲಿ ಮಕ್ಕಳು ಅಭಿನಯದ ಮೂಲಕ ಮನರಂಜನೆ ಉಣಬಡಿಸಿದ್ದಾರೆ. ಮಕ್ಕಳನ್ನೇ ಮೂಲವಾಗಿರಿಸಿಕೊಂಡು, ನಾಯಕ, ನಾಯಕಿಯರ ಪಾತ್ರದಲ್ಲಿ ಮಿಂಚುವಂತೆ ಮಾಡಿದ್ದಾರೆ ಬಸ್ರೂರು. ‘ಗಿರ್ಮಿಟ್’ ಚಿತ್ರದ ಬಗ್ಗೆ ನಿರೀಕ್ಷೆ ಹೆಚ್ಚಿದೆ. ಚಿತ್ರವು ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಏಕಕಾಲದಲ್ಲಿ ರಿಲೀಸ್ ಆಗಲಿದೆ.

ವ್ಯವಹಾರಿಕ ಆಯಾಮ ಮತ್ತು ದೃಷ್ಟಿಕೋನವನ್ನಿಟ್ಟುಕೊಂಡ ಮಕ್ಕಳ ಚಿತ್ರ ‘ಗಿರ್ಮಿಟ್’ ಪ್ರೇಕ್ಷಕರಿಗೆ ಮನರಂಜನೆಯ ರಸದೂಟ ಉಣಿಸಲು ತೆರೆಗೆ ಬರಲು ಸಿದ್ಧವಾಗುತ್ತಿದೆ. ಮಕ್ಕಳೇ ಪ್ರಧಾನಪಾತ್ರದಲ್ಲಿ ನಟಿಸಿರುವ ಚಿತ್ರ ಗಿರ್ಮಿಟ್ ಭಾರತೀಯ ಚಿತ್ರರಂಗದಲ್ಲೇ ಮೊದಲ ಪ್ರಯತ್ನ ಎನ್ನಲಾಗಿದೆ. ಶೀರ್ಷಿಕೆಯ ಮೂಲಕವೇ ಗಮನ ಸೆಳೆದಿರುವ ಚಿತ್ರ ನವೆಂಬರ್​ 8 ರಂದು ಪ್ರಪಂಚದಾದ್ಯಂತ ಬಿಡುಗಡೆಗೊಳ್ಳುತ್ತಿದೆ.

ಚಿತ್ರದ ಟ್ರೇಲರ್‍ ನಲ್ಲಿ ನಾಯಕ, ನಾಯಕಿ ಪಾತ್ರದಲ್ಲಿ ಮಕ್ಕಳು ಗಮನಸೆಳೆದಿದ್ದಾರೆ. ನಾಯಕ ಹೇಳುವ ಡೈಲಾಗ್ಸ್, ಪ್ರೇಮ ಸನ್ನಿವೇಶ, ವಿಭಿನ್ನ ಪಾತ್ರಗಳು, ಕೌಟುಂಬಿಕ ಕಲಹ, ನಾಯಕ, ನಾಯಕಿಯ ಮಾಸ್​ ಗೀತೆ ಹೀಗೆ ಕಮರ್ಷಿಯಲ್​ ಚಿತ್ರದಲ್ಲಿರಬೇಕಾದ ಎಲ್ಲಾ ಅಂಶಗಳೂ ಟ್ರೇಲರ್‍ ನಲ್ಲಿ ಕಾಣಸಿಗುತ್ತವೆ. ನಟ ಯಶ್​, ನಟಿ ರಾಧಿಕಾ ಸೇರಿದಂತೆ ಹಿರಿಯ ಕಲಾವಿದರು ಹಿನ್ನೆಲೆ ಧ್ವನಿ ನೀಡಿದ್ದಾರೆ.

ಚಿತ್ರದ ‘ಆರಂಭವೇ ಆನಂದವೇ’ ಎಂಬ ಲಿರಿಕಲ್ ವಿಡಿಯೋ ಗೀತೆ ಅ.21 ರ ಸಂಜೆ 7 ಕ್ಕೆ ಬಿಡುಗಡೆಯಾಗಿತ್ತು. ಕಿನ್ನಾಳ ರಾಜ್ ಸಾಹಿತ್ಯವಿದ್ದು, ಸಂತೋಷ್ ವೆಂಕಿ ಗೀತೆಗೆ ಧ್ವನಿ ನೀಡಿದ್ದಾರೆ. ಮಕ್ಕಳೇ ಚಿತ್ರವನ್ನು ಚಿತ್ರಿಸಿದ್ದಾರೆ. ನಾಯಕ, ನಾಯಕಿಯ ವಾಗ್ಯುದ್ಧ, ನಾಯಕನ ಖಡಕ್ ಡೈಲಾಗ್, ನಾಯಕ, ನಾಯಕಿಯ ಪ್ರೇಮ ಸಲ್ಲಾಪ ಎಲ್ಲವೂ ಚಿತ್ರದಲ್ಲಿದೆ.

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಓಂಕಾರ್ ಮೂವೀಸ್ ಬ್ಯಾನರ್‍ ಅಡಿ ನಿರ್ಮಾಣವಾಗಿದೆ. ಚಿತ್ರಕ್ಕೆ ಎನ್.ಎಸ್.ರಾಜ್ ಕುಮಾರ್ ಬಂಡವಾಳ ಹೂಡಿದ್ದಾರೆ. ಸೂರಜ್ ಚೌಧರಿ ಮತ್ತು ನರೇನ್ ಚಂದ್ರ ಚೌಧರಿ ಸಹ ನಿರ್ಮಾಪಕರಾಗಿದ್ದಾರೆ. ಪ್ರಮೋದ್ ಮರವಂತೆ, ಕಿನ್ನಲ್ ರಾಜ್, ಸಂದೀಪ್ ಶಿರಸಿ, ಸುಚನ್ ಶೆಟ್ಟಿ ಮತ್ತು ಮಂಜುನಾಥ್ ಚಿತ್ರಕಥೆ ಮತ್ತು ಸಂಭಾಷಣೆ ಬರೆದಿದ್ದಾರೆ. ಚಿತ್ರದಲ್ಲಿ ಅಶ್ಲೇಷ್ ರಾಜ್, ಶ್ಲಾಘಾ ಸಾಲಿಗ್ರಾಮಾ, ಆರಾಧ್ಯ ಶೆಟ್ಟಿ, ತನಿಶಾ ಕೋನಿ, ಜಯೇಂದ್ರ, ನಾಗರಾಜ್ ಜಪ್ತಿ, ಆದಿತ್ಯ ಕುಂದಾಪುರ ಮತ್ತು ಸಿಂಚನಾ ಕೋಟೇಶ್ವರ ಮೊದಲಾದ ಕಲಾವಿದರು ಚಿತ್ರದಲ್ಲಿ ಅಭಿನಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...