Homeಮುಖಪುಟಉತ್ತರ ಪ್ರದೇಶ | ಲೈಂಗಿಕ ದೌರ್ಜನ್ಯದ ಅಪರಾಧಿಗೆ ಜೀವಾವಧಿ ಶಿಕ್ಷೆ : 'ಲವ್ ಜಿಹಾದ್' ಎಂದ...

ಉತ್ತರ ಪ್ರದೇಶ | ಲೈಂಗಿಕ ದೌರ್ಜನ್ಯದ ಅಪರಾಧಿಗೆ ಜೀವಾವಧಿ ಶಿಕ್ಷೆ : ‘ಲವ್ ಜಿಹಾದ್’ ಎಂದ ನ್ಯಾಯಾಧೀಶ

- Advertisement -
- Advertisement -

“ಹಿಂದುತ್ವ ಗುಂಪುಗಳು ಮತ್ತು ಪೋಷಕರ ಒತ್ತಡದಿಂದ ನಾನು ದೂರು ಕೊಟ್ಟಿದ್ದೆ” ಎಂದು ವಿದ್ಯಾರ್ಥಿನಿ ಹೇಳಿದ ಹೊರತಾಗಿಯೂ, ಆಕೆಗೆ ಲೈಂಗಿಕ ದೌರ್ಜನ್ಯ ನೀಡಿದ ಪ್ರಕರಣದಲ್ಲಿ 26 ವರ್ಷದ ಮುಸ್ಲಿಂ ಯುವಕನಿಗೆ ಉತ್ತರ ಪ್ರದೇಶದ ಬರೇಲಿಯ ಜಿಲ್ಲಾ ನ್ಯಾಯಾಲಯ ಸೋಮವಾರ ಜೀವಾವಧಿ ಶಿಕ್ಷೆ ಮತ್ತು 1 ಲಕ್ಷ ರೂಪಾಯಿ ದಂಡ ವಿಧಿಸಿದೆ ಎಂದು scroll.in ವರದಿ ಮಾಡಿದೆ.

ತೀರ್ಪು ಪ್ರಕಟಿಸುವ ವೇಳೆ ನ್ಯಾಯಾಧೀಶ ರವಿ ಕುಮಾರ್ ದಿವಾಕರ್ ಅವರು ಪ್ರಕರಣವನ್ನು ‘ಲವ್ ಜಿಹಾದ್’ ನ ಉದಾಹರಣೆಯಾಗಿ ಉಲ್ಲೇಖಿಸಿದ್ದಾರೆ. ಆದರೆ, ಈ ಪ್ರಕರಣ ಉತ್ತರ ಪ್ರದೇಶ ಮತಾಂತರ ನಿಷೇಧ ಕಾಯ್ದೆ-2020ರ ಅಡಿಯಲ್ಲಿ ದಾಖಲಿಸಲಾಗಿರಲಿಲ್ಲ ಎಂದು ವರದಿ ತಿಳಿಸಿದೆ.

“ಅಕ್ರಮ ಮತಾಂತರಕ್ಕೆ ಮತ್ತು ಪಾಕಿಸ್ತಾನ, ಬಾಂಗ್ಲಾದೇಶದಲ್ಲಿ ಇರುವಂತಹ ಪರಿಸ್ಥಿತಿಯನ್ನು ಭಾರತದಲ್ಲಿಯೂ ಸೃಷ್ಟಿಸುವ ಉದ್ದೇಶದಿಂದ ಹಿಂದೂ ಹುಡುಗಿಯರಿಗೆ ‘ಪ್ರೀತಿ’ಯ ಆಮಿಷವೊಡ್ಡಲಾಗುತ್ತಿದೆ ಎಂದು ನ್ಯಾಯಾಧೀಶ ರವಿ ಕುಮಾರ್ ಹೇಳಿದ್ದಾರೆ. ಅಕ್ರಮ ಮತಾಂತರವು ದೇಶದ ಗಣನೀಯ ಭದ್ರತೆ, ಸಾರ್ವಭೌಮತ್ವಕ್ಕೆ ಬೆದರಿಕೆ ಒಡ್ಡುತ್ತದೆ” ಎಂದಿದ್ದಾರೆ.

ಆದರೆ, ಈ ಹಿಂದೆ ‘ಲವ್ ಜಿಹಾದ್’ ಕುರಿತಂತೆ ಸಂಸತ್ತಿಗೆ ಮಾಹಿತಿ ನೀಡಿದ್ದ ಕೇಂದ್ರ ಸರ್ಕಾರ, ಭಾರತೀಯ ಕಾನೂನಿನಲ್ಲಿ ಅಂತಹ ಪದವನ್ನು ವ್ಯಾಖ್ಯಾನಿಸುವ ಯಾವುದೇ ಅವಕಾಶವಿಲ್ಲ ಎಂದು ತಿಳಿಸಿತ್ತು.

25 ವರ್ಷದ ಮೊಹಮ್ಮದ್ ಆಲಿಂ ಎನ್ನುವವರಿಗೆ ಜೀವಾವಧಿ ಶಿಕ್ಷೆ ಮತ್ತು ದಂಡ ವಿಧಿಸಲಾಗಿದೆ. ಅಪರಾಧಕ್ಕೆ ನೆರವಾದ ಕಾರಣ ನೀಡಿ ಆಲಿಂ ಅವರ ತಂದೆಗೆ ಕೂಡ ಎರಡು ವರ್ಷಗಳ ಜೈಲು ಶಿಕ್ಷೆ ನೀಡಲಾಗಿದೆ.

“ಆಲಿಂ ಅವರು ತಮ್ಮ ಹೆಸರನ್ನು ‘ಆನಂದ್’ ಎಂದು ಹೇಳಿ ವಿದ್ಯಾರ್ಥಿನಿಯನ್ನು ವಂಚಿಸಿದ್ದಾರೆ. ಆತ ಆನಂದ್ ಎಂದು ಗೊತ್ತಾದ ನಂತರ ವಿದ್ಯಾರ್ಥಿನಿ ದೂರು ದಾಖಲಿಸಿದ್ದರು. ಕೋಚಿಂಗ್ ಕೇಂದ್ರವೊಂದರಲ್ಲಿ ಆಲಿಂ ಅವರು ವಿದ್ಯಾರ್ಥಿನಿಯನ್ನು ಭೇಟಿ ಮಾಡಿದ್ದರು. ನಂತರ ದೇವಸ್ಥಾನವೊಂದರಲ್ಲಿ ಮದುವೆಯಾಗಿದ್ದರು. ಆಕೆ ಗರ್ಭಿಣಿಯಾದ ಬಳಿಕ ಗರ್ಭಪಾತಕ್ಕೆ ಕಾರಣವಾಗುವ ವಸ್ತುವನ್ನು ಬೆರೆಸಿದ ರಸವನ್ನು ಕುಡಿಸಿದ್ದರು” ಎಂದು ಪ್ರಾಸಿಕ್ಯೂಷನ್ ವಾದಿಸಿತ್ತು.

ವಿದ್ಯಾರ್ಥಿನಿ 2023ರಲ್ಲಿ ಆಲಿಂ ವಿರುದ್ದ ಪ್ರಕರಣ ದಾಖಲಿಸಿದ್ದಳು. ಆದರೆ, ವಿಚಾರಣೆಯ ವೇಳೆ ತನ್ನ ಆರೋಪಗಳನ್ನು ವಾಪಸ್ ಪಡೆದಿದ್ದಳು. ಆದರೆ, ಆಕೆಯ ವಾದವನ್ನು ನ್ಯಾಯಾಧೀಶ ದಿವಾಕರ್ ತಿರಸ್ಕರಿಸಿದ್ದು, ಆಕೆ ಆಲಿಂನ ಒತ್ತಡಕ್ಕೆ ಮಣಿದು ಈ ಹೇಳಿಕೆ ನೀಡಿದ್ದಾಳೆ ಎಂದಿರುವುದಾಗಿ ವರದಿಗಳು ಹೇಳಿದೆ.

ಜ್ಞಾನವಾಪಿ ಪ್ರಕರಣದಲ್ಲಿ ಆದೇಶ ನೀಡಿದ್ದರು ನ್ಯಾ.ದಿವಾಕರ್ 

ನ್ಯಾಯಾಧೀಶ ದಿವಾಕರ್ ಅವರು ವಾರಣಾಸಿಯಲ್ಲಿ ಹೆಚ್ಚುವರಿ ನ್ಯಾಯಾಧೀಶರಾಗಿದ್ದಾಗ, ಜ್ಞಾನವಾಪಿ ಮಸೀದಿ ಸಂಕೀರ್ಣದ ವಿಡಿಯೋ ಚಿತ್ರೀಕರಣಕ್ಕೆ ಹಾಗೂ ವಜುಖಾನಾ ಪ್ರದೇಶ ಮುಚ್ಚಲು ಆದೇಶಿಸಿದ್ದರು.

ಇದನ್ನೂ ಓದಿ : ಕೈದಿಗಳಿಗೆ ಜಾತಿ ಆಧಾರಿತ ಕೆಲಸ ಹಂಚಿಕೆ ನಿಲ್ಲಿಸಿ, ಜೈಲು ನೋಂದಣಿಯಿಂದ ಜಾತಿ ಕಾಲಂ ಅಳಿಸಿ : ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

ರಾಜಕೀಯ ನಾಯಕರು ತಮಗೆ ಸಿಕ್ಕ ಹಾರ, ತುರಾಯಿ ಅಥವಾ ಹಣ್ಣುಗಳನ್ನು ಅಭಿಮಾನಿಗಳಿಗೆ ಹಂಚುವುದು ಹೊಸದೇನಲ್ಲ. ಆದರೆ, ತಾನು ಕಚ್ಚಿದ ಹಣ್ಣನ್ನು ಸಾರ್ವಜನಿಕವಾಗಿ ಜನರತ್ತ ಎಸೆಯುವುದು ಯಾವ ರೀತಿಯ ಸಂಸ್ಕೃತಿ ಎಂಬ ಪ್ರಶ್ನೆ ಮೂಡುತ್ತದೆ....

ವೈಜಾಗ್ ಸ್ಟೀಲ್ ಅಪಘಾತಕ್ಕೆ 8 ಮಂದಿ ಬಲಿ: ಸಿಬ್ಬಂದಿ ಕೊರತೆಯ ಬಗ್ಗೆ ಕಾರ್ಮಿಕ ಸಂಘಗಳ ಆರೋಪ: ಸಾವಿನ ಅಂಚಿನಲ್ಲೂ ಕುಟುಂಬಕ್ಕಾಗಿ ಮಿಡಿದ ಕಾರ್ಮಿಕ

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿರುವ ಪ್ರಸಿದ್ಧ ರಾಷ್ಟ್ರೀಯ ಇಸ್ಪತ್ ನಿಗಮ್ ಲಿಮಿಟೆಡ್ (RINL) ಉಕ್ಕು ಸ್ಥಾವರದಲ್ಲಿ ಸೋಮವಾರ (ಜೂನ್ 8, 2026) ಸಂಜೆ ಭೀಕರ ಕೈಗಾರಿಕಾ ದುರಂತವೊಂದು ಸಂಭವಿಸಿದೆ. ಸ್ಥಾವರದ ಸ್ಟೀಲ್ ಮೆಲ್ಟ್ ಶಾಪ್-1 (SMS-1)...

ಅಂದು ಪಿಣರಾಯಿ ಮನೆ ಮೇಲೆ ದಾಳಿ; ಈಗ ವೀಣಾ ವಿಜಯನ್‌ಗೆ ಸಮನ್ಸ್‌: ಹಿರಿಯ ಕಮ್ಯುನಿಸ್ಟ್‌ ನಾಯಕನ ಕುಟುಂಬದ ಮೇಲೆ ಇಡಿ ಕಣ್ಣು

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಮನೆ ಮೇಲೆ ಕಳೆದ ತಿಂಗಳು ಜಾರಿ ನಿರ್ದೇಶನಾಲಯ ದಾಳಿ ಮಾಡಿತ್ತು. ಕೊನೆಗೆ ಅಲ್ಲಿ ಏನೂ ಸಿಗದೆ ಬರಿಗೈನಲ್ಲಿ ಅಧಿಕಾರಿಗಳು...

ಮೋದಿ ಸರ್ಕಾರಕ್ಕೆ 12 ವರ್ಷ : 12 ರಿಂದ 4ಕ್ಕೆ ಇಳಿದ ಉಜ್ವಲ ಯೋಜನೆ ಸಿಲಿಂಡರ್

ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಎನ್‌ಡಿಎ ಸರ್ಕಾರ 12 ವರ್ಷಗಳ ಆಡಳಿತಾವಧಿಯನ್ನು ಪೂರ್ಣಗೊಳಿಸಿದೆ ಅಥವಾ ಮೋದಿ ಅವರು ಮೂರನೇ ಅವಧಿಗೆ ಪ್ರಧಾನಿಯಾಗಿ 2026ರ ಜೂನ್ 9ಕ್ಕೆ ಎರಡು ವರ್ಷಗಳು ಪೂರ್ಣಗೊಂಡಿವೆ....

ಬಿರ್ಸಾ ಮುಂಡಾ 150ನೇ ಜಯಂತಿ ಹೆಸರಿನಲ್ಲಿ ಆದಿವಾಸಿ ಹಕ್ಕುಗಳ ಮೇಲೆ ಸಂಘ ಪರಿವಾರದ ಕಣ್ಣು?

ಮೇ 24 ರಂದು ನವದೆಹಲಿಯ ಕೆಂಪುಕೋಟೆಯಲ್ಲಿ (Red Fort) ಭಾರತದಾದ್ಯಂತದ ಲಕ್ಷಾಂತರ ಪರಿಶಿಷ್ಟ ಪಂಗಡದ (ST) ಸಮುದಾಯಗಳ ಜನರು ಒಟ್ಟಿಗೆ ಸೇರಿದ್ದರು. ‘ಜಂಜಾತಿ ಸುರಕ್ಷಾ ಮಂಚ್’ (ಬುಡಕಟ್ಟು ರಕ್ಷಣಾ ವೇದಿಕೆ) ಆಯೋಜಿಸಿದ್ದ ಈ...

ಆಪರೇಷನ್ ಕಮಲ ಭೀತಿ: ರಾಜ್ಯಸಭಾ ಚುನಾವಣೆಗೂ ಮುನ್ನ ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕರು ಕರ್ನಾಟಕಕ್ಕೆ ಶಿಫ್ಟ್‌?

ಜೂನ್ 18 ರ ರಾಜ್ಯಸಭಾ ಚುನಾವಣೆಗೆ ಮುನ್ನ ಬಿಜೆಪಿಯಿಂದ ಅಕ್ರಮವಾಗಿ ಹಣ ವರ್ಗಾವಣೆ ಪ್ರಯತ್ನಗಳು ನಡೆಯುತ್ತಿವೆ ಎಂದು ಮಧ್ಯಪ್ರದೇಶ ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ. ಅಡ್ಡ ಮತದಾನ ತಡೆಗಟ್ಟುವ ಜೊತೆಗೆ ತನ್ನ ಶಿಬಿರದ ಒಗ್ಗಟ್ಟು...

ವೀರಪ್ಪನ್ ಹೇಳಿದ ಕಥೆಗೆ 30 ವರ್ಷಗಳ ಬಳಿಕ ಕ್ಲೈಮ್ಯಾಕ್ಸ್ : ಸನ್ ಟಿವಿ ವಿರುದ್ಧ ಕಾನೂನು ಸಮರದಲ್ಲಿ ಗೆದ್ದ ನಟಿ ಸುಕನ್ಯಾ​

ತೊಂಬತ್ತರ ದಶಕದಲ್ಲಿ ತಮಿಳು ಮತ್ತು ಮಲಯಾಳಂ ಚಿತ್ರರಂಗದಲ್ಲಿ ಪ್ರಮುಖ ನಟರೊಂದಿಗೆ ನಟಿಸಿ, ಅಪಾರ ಜನಪ್ರಿಯತೆ ಗಳಿಸಿದ್ದ ನಟಿ ಸುಕನ್ಯಾ ರಮೇಶ್, ಪ್ರಸ್ತುತ ಕೆಲವು ಅಪರೂಪದ ಪಾತ್ರಗಳನ್ನು ಹೊರತುಪಡಿಸಿದರೆ ಚಿತ್ರರಂಗದಲ್ಲಿ ಅಷ್ಟಾಗಿ ಸಕ್ರಿಯರಾಗಿಲ್ಲ. ಈ ನಡುವೆ 2024ರಲ್ಲಿ...

“ರಾಜೀನಾಮೆ ನೀಡಿ, ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿ”: ಟಿಎಂಸಿ ಬಂಡುಕೋರರಿಗೆ ಮಹುವಾ ಮೊಯಿತ್ರಾ ನೇರ ಸವಾಲು

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (TMC) ಪಕ್ಷದೊಳಗೆ ತೀವ್ರ ಭಿನ್ನಾಭಿಪ್ರಾಯ ಸ್ಫೋಟಗೊಂಡಿದೆ. ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ (NDA) ಮೈತ್ರಿಕೂಟಕ್ಕೆ ಬೆಂಬಲ ನೀಡಲು ಮುಂದಾಗಿರುವ ಸ್ವಪಕ್ಷದ ಬಂಡಾಯ ಸಂಸದರ ವಿರುದ್ಧ ಟಿಎಂಸಿ ಸಂಸದೆ...

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...