Homeಮುಖಪುಟಉತ್ತರ ಪ್ರದೇಶ | ಲೈಂಗಿಕ ದೌರ್ಜನ್ಯದ ಅಪರಾಧಿಗೆ ಜೀವಾವಧಿ ಶಿಕ್ಷೆ : 'ಲವ್ ಜಿಹಾದ್' ಎಂದ...

ಉತ್ತರ ಪ್ರದೇಶ | ಲೈಂಗಿಕ ದೌರ್ಜನ್ಯದ ಅಪರಾಧಿಗೆ ಜೀವಾವಧಿ ಶಿಕ್ಷೆ : ‘ಲವ್ ಜಿಹಾದ್’ ಎಂದ ನ್ಯಾಯಾಧೀಶ

- Advertisement -
- Advertisement -

“ಹಿಂದುತ್ವ ಗುಂಪುಗಳು ಮತ್ತು ಪೋಷಕರ ಒತ್ತಡದಿಂದ ನಾನು ದೂರು ಕೊಟ್ಟಿದ್ದೆ” ಎಂದು ವಿದ್ಯಾರ್ಥಿನಿ ಹೇಳಿದ ಹೊರತಾಗಿಯೂ, ಆಕೆಗೆ ಲೈಂಗಿಕ ದೌರ್ಜನ್ಯ ನೀಡಿದ ಪ್ರಕರಣದಲ್ಲಿ 26 ವರ್ಷದ ಮುಸ್ಲಿಂ ಯುವಕನಿಗೆ ಉತ್ತರ ಪ್ರದೇಶದ ಬರೇಲಿಯ ಜಿಲ್ಲಾ ನ್ಯಾಯಾಲಯ ಸೋಮವಾರ ಜೀವಾವಧಿ ಶಿಕ್ಷೆ ಮತ್ತು 1 ಲಕ್ಷ ರೂಪಾಯಿ ದಂಡ ವಿಧಿಸಿದೆ ಎಂದು scroll.in ವರದಿ ಮಾಡಿದೆ.

ತೀರ್ಪು ಪ್ರಕಟಿಸುವ ವೇಳೆ ನ್ಯಾಯಾಧೀಶ ರವಿ ಕುಮಾರ್ ದಿವಾಕರ್ ಅವರು ಪ್ರಕರಣವನ್ನು ‘ಲವ್ ಜಿಹಾದ್’ ನ ಉದಾಹರಣೆಯಾಗಿ ಉಲ್ಲೇಖಿಸಿದ್ದಾರೆ. ಆದರೆ, ಈ ಪ್ರಕರಣ ಉತ್ತರ ಪ್ರದೇಶ ಮತಾಂತರ ನಿಷೇಧ ಕಾಯ್ದೆ-2020ರ ಅಡಿಯಲ್ಲಿ ದಾಖಲಿಸಲಾಗಿರಲಿಲ್ಲ ಎಂದು ವರದಿ ತಿಳಿಸಿದೆ.

“ಅಕ್ರಮ ಮತಾಂತರಕ್ಕೆ ಮತ್ತು ಪಾಕಿಸ್ತಾನ, ಬಾಂಗ್ಲಾದೇಶದಲ್ಲಿ ಇರುವಂತಹ ಪರಿಸ್ಥಿತಿಯನ್ನು ಭಾರತದಲ್ಲಿಯೂ ಸೃಷ್ಟಿಸುವ ಉದ್ದೇಶದಿಂದ ಹಿಂದೂ ಹುಡುಗಿಯರಿಗೆ ‘ಪ್ರೀತಿ’ಯ ಆಮಿಷವೊಡ್ಡಲಾಗುತ್ತಿದೆ ಎಂದು ನ್ಯಾಯಾಧೀಶ ರವಿ ಕುಮಾರ್ ಹೇಳಿದ್ದಾರೆ. ಅಕ್ರಮ ಮತಾಂತರವು ದೇಶದ ಗಣನೀಯ ಭದ್ರತೆ, ಸಾರ್ವಭೌಮತ್ವಕ್ಕೆ ಬೆದರಿಕೆ ಒಡ್ಡುತ್ತದೆ” ಎಂದಿದ್ದಾರೆ.

ಆದರೆ, ಈ ಹಿಂದೆ ‘ಲವ್ ಜಿಹಾದ್’ ಕುರಿತಂತೆ ಸಂಸತ್ತಿಗೆ ಮಾಹಿತಿ ನೀಡಿದ್ದ ಕೇಂದ್ರ ಸರ್ಕಾರ, ಭಾರತೀಯ ಕಾನೂನಿನಲ್ಲಿ ಅಂತಹ ಪದವನ್ನು ವ್ಯಾಖ್ಯಾನಿಸುವ ಯಾವುದೇ ಅವಕಾಶವಿಲ್ಲ ಎಂದು ತಿಳಿಸಿತ್ತು.

25 ವರ್ಷದ ಮೊಹಮ್ಮದ್ ಆಲಿಂ ಎನ್ನುವವರಿಗೆ ಜೀವಾವಧಿ ಶಿಕ್ಷೆ ಮತ್ತು ದಂಡ ವಿಧಿಸಲಾಗಿದೆ. ಅಪರಾಧಕ್ಕೆ ನೆರವಾದ ಕಾರಣ ನೀಡಿ ಆಲಿಂ ಅವರ ತಂದೆಗೆ ಕೂಡ ಎರಡು ವರ್ಷಗಳ ಜೈಲು ಶಿಕ್ಷೆ ನೀಡಲಾಗಿದೆ.

“ಆಲಿಂ ಅವರು ತಮ್ಮ ಹೆಸರನ್ನು ‘ಆನಂದ್’ ಎಂದು ಹೇಳಿ ವಿದ್ಯಾರ್ಥಿನಿಯನ್ನು ವಂಚಿಸಿದ್ದಾರೆ. ಆತ ಆನಂದ್ ಎಂದು ಗೊತ್ತಾದ ನಂತರ ವಿದ್ಯಾರ್ಥಿನಿ ದೂರು ದಾಖಲಿಸಿದ್ದರು. ಕೋಚಿಂಗ್ ಕೇಂದ್ರವೊಂದರಲ್ಲಿ ಆಲಿಂ ಅವರು ವಿದ್ಯಾರ್ಥಿನಿಯನ್ನು ಭೇಟಿ ಮಾಡಿದ್ದರು. ನಂತರ ದೇವಸ್ಥಾನವೊಂದರಲ್ಲಿ ಮದುವೆಯಾಗಿದ್ದರು. ಆಕೆ ಗರ್ಭಿಣಿಯಾದ ಬಳಿಕ ಗರ್ಭಪಾತಕ್ಕೆ ಕಾರಣವಾಗುವ ವಸ್ತುವನ್ನು ಬೆರೆಸಿದ ರಸವನ್ನು ಕುಡಿಸಿದ್ದರು” ಎಂದು ಪ್ರಾಸಿಕ್ಯೂಷನ್ ವಾದಿಸಿತ್ತು.

ವಿದ್ಯಾರ್ಥಿನಿ 2023ರಲ್ಲಿ ಆಲಿಂ ವಿರುದ್ದ ಪ್ರಕರಣ ದಾಖಲಿಸಿದ್ದಳು. ಆದರೆ, ವಿಚಾರಣೆಯ ವೇಳೆ ತನ್ನ ಆರೋಪಗಳನ್ನು ವಾಪಸ್ ಪಡೆದಿದ್ದಳು. ಆದರೆ, ಆಕೆಯ ವಾದವನ್ನು ನ್ಯಾಯಾಧೀಶ ದಿವಾಕರ್ ತಿರಸ್ಕರಿಸಿದ್ದು, ಆಕೆ ಆಲಿಂನ ಒತ್ತಡಕ್ಕೆ ಮಣಿದು ಈ ಹೇಳಿಕೆ ನೀಡಿದ್ದಾಳೆ ಎಂದಿರುವುದಾಗಿ ವರದಿಗಳು ಹೇಳಿದೆ.

ಜ್ಞಾನವಾಪಿ ಪ್ರಕರಣದಲ್ಲಿ ಆದೇಶ ನೀಡಿದ್ದರು ನ್ಯಾ.ದಿವಾಕರ್ 

ನ್ಯಾಯಾಧೀಶ ದಿವಾಕರ್ ಅವರು ವಾರಣಾಸಿಯಲ್ಲಿ ಹೆಚ್ಚುವರಿ ನ್ಯಾಯಾಧೀಶರಾಗಿದ್ದಾಗ, ಜ್ಞಾನವಾಪಿ ಮಸೀದಿ ಸಂಕೀರ್ಣದ ವಿಡಿಯೋ ಚಿತ್ರೀಕರಣಕ್ಕೆ ಹಾಗೂ ವಜುಖಾನಾ ಪ್ರದೇಶ ಮುಚ್ಚಲು ಆದೇಶಿಸಿದ್ದರು.

ಇದನ್ನೂ ಓದಿ : ಕೈದಿಗಳಿಗೆ ಜಾತಿ ಆಧಾರಿತ ಕೆಲಸ ಹಂಚಿಕೆ ನಿಲ್ಲಿಸಿ, ಜೈಲು ನೋಂದಣಿಯಿಂದ ಜಾತಿ ಕಾಲಂ ಅಳಿಸಿ : ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...

ಸಿಜೆ ರಾಯ್ ಸಾವು| ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ; ಸಾಕ್ಷ್ಯಗಳು ಆತ್ಮಹತ್ಯೆಯನ್ನು ಸೂಚಿಸುತ್ತವೆ: ಎಸ್‌ಐಟಿ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಸಾವಿನ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ಅಪರಾಧ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ, ಮತ್ತು ಪ್ರಾಥಮಿಕ...

ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ’ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೇಂದ್ರ ಬಜೆಟ್ ಅನ್ನು 'ಹಂಪ್ಟಿ ಡಂಪ್ಟಿ ಬಜೆಟ್' ಎಂದು ಮುಖ್ಯಮಂತ್ರಿ ಎಂದಿರುವ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರ 'ದಿಕ್ಕು ತೋಚದ' ಬಜೆಟ್ ಮಂಡಿಸಿದೆ ಎಂದು ಭಾನುವಾರ ಟೀಕಿಸಿದರು. ರಾಷ್ಟ್ರ ರಾಜಧಾನಿಗೆ ಹೊರಡುವ ಮುನ್ನ, ಮುಂಬರುವ...

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...