Homeಮುಖಪುಟಉತ್ತರ ಪ್ರದೇಶ | ಲೈಂಗಿಕ ದೌರ್ಜನ್ಯದ ಅಪರಾಧಿಗೆ ಜೀವಾವಧಿ ಶಿಕ್ಷೆ : 'ಲವ್ ಜಿಹಾದ್' ಎಂದ...

ಉತ್ತರ ಪ್ರದೇಶ | ಲೈಂಗಿಕ ದೌರ್ಜನ್ಯದ ಅಪರಾಧಿಗೆ ಜೀವಾವಧಿ ಶಿಕ್ಷೆ : ‘ಲವ್ ಜಿಹಾದ್’ ಎಂದ ನ್ಯಾಯಾಧೀಶ

- Advertisement -
- Advertisement -

“ಹಿಂದುತ್ವ ಗುಂಪುಗಳು ಮತ್ತು ಪೋಷಕರ ಒತ್ತಡದಿಂದ ನಾನು ದೂರು ಕೊಟ್ಟಿದ್ದೆ” ಎಂದು ವಿದ್ಯಾರ್ಥಿನಿ ಹೇಳಿದ ಹೊರತಾಗಿಯೂ, ಆಕೆಗೆ ಲೈಂಗಿಕ ದೌರ್ಜನ್ಯ ನೀಡಿದ ಪ್ರಕರಣದಲ್ಲಿ 26 ವರ್ಷದ ಮುಸ್ಲಿಂ ಯುವಕನಿಗೆ ಉತ್ತರ ಪ್ರದೇಶದ ಬರೇಲಿಯ ಜಿಲ್ಲಾ ನ್ಯಾಯಾಲಯ ಸೋಮವಾರ ಜೀವಾವಧಿ ಶಿಕ್ಷೆ ಮತ್ತು 1 ಲಕ್ಷ ರೂಪಾಯಿ ದಂಡ ವಿಧಿಸಿದೆ ಎಂದು scroll.in ವರದಿ ಮಾಡಿದೆ.

ತೀರ್ಪು ಪ್ರಕಟಿಸುವ ವೇಳೆ ನ್ಯಾಯಾಧೀಶ ರವಿ ಕುಮಾರ್ ದಿವಾಕರ್ ಅವರು ಪ್ರಕರಣವನ್ನು ‘ಲವ್ ಜಿಹಾದ್’ ನ ಉದಾಹರಣೆಯಾಗಿ ಉಲ್ಲೇಖಿಸಿದ್ದಾರೆ. ಆದರೆ, ಈ ಪ್ರಕರಣ ಉತ್ತರ ಪ್ರದೇಶ ಮತಾಂತರ ನಿಷೇಧ ಕಾಯ್ದೆ-2020ರ ಅಡಿಯಲ್ಲಿ ದಾಖಲಿಸಲಾಗಿರಲಿಲ್ಲ ಎಂದು ವರದಿ ತಿಳಿಸಿದೆ.

“ಅಕ್ರಮ ಮತಾಂತರಕ್ಕೆ ಮತ್ತು ಪಾಕಿಸ್ತಾನ, ಬಾಂಗ್ಲಾದೇಶದಲ್ಲಿ ಇರುವಂತಹ ಪರಿಸ್ಥಿತಿಯನ್ನು ಭಾರತದಲ್ಲಿಯೂ ಸೃಷ್ಟಿಸುವ ಉದ್ದೇಶದಿಂದ ಹಿಂದೂ ಹುಡುಗಿಯರಿಗೆ ‘ಪ್ರೀತಿ’ಯ ಆಮಿಷವೊಡ್ಡಲಾಗುತ್ತಿದೆ ಎಂದು ನ್ಯಾಯಾಧೀಶ ರವಿ ಕುಮಾರ್ ಹೇಳಿದ್ದಾರೆ. ಅಕ್ರಮ ಮತಾಂತರವು ದೇಶದ ಗಣನೀಯ ಭದ್ರತೆ, ಸಾರ್ವಭೌಮತ್ವಕ್ಕೆ ಬೆದರಿಕೆ ಒಡ್ಡುತ್ತದೆ” ಎಂದಿದ್ದಾರೆ.

ಆದರೆ, ಈ ಹಿಂದೆ ‘ಲವ್ ಜಿಹಾದ್’ ಕುರಿತಂತೆ ಸಂಸತ್ತಿಗೆ ಮಾಹಿತಿ ನೀಡಿದ್ದ ಕೇಂದ್ರ ಸರ್ಕಾರ, ಭಾರತೀಯ ಕಾನೂನಿನಲ್ಲಿ ಅಂತಹ ಪದವನ್ನು ವ್ಯಾಖ್ಯಾನಿಸುವ ಯಾವುದೇ ಅವಕಾಶವಿಲ್ಲ ಎಂದು ತಿಳಿಸಿತ್ತು.

25 ವರ್ಷದ ಮೊಹಮ್ಮದ್ ಆಲಿಂ ಎನ್ನುವವರಿಗೆ ಜೀವಾವಧಿ ಶಿಕ್ಷೆ ಮತ್ತು ದಂಡ ವಿಧಿಸಲಾಗಿದೆ. ಅಪರಾಧಕ್ಕೆ ನೆರವಾದ ಕಾರಣ ನೀಡಿ ಆಲಿಂ ಅವರ ತಂದೆಗೆ ಕೂಡ ಎರಡು ವರ್ಷಗಳ ಜೈಲು ಶಿಕ್ಷೆ ನೀಡಲಾಗಿದೆ.

“ಆಲಿಂ ಅವರು ತಮ್ಮ ಹೆಸರನ್ನು ‘ಆನಂದ್’ ಎಂದು ಹೇಳಿ ವಿದ್ಯಾರ್ಥಿನಿಯನ್ನು ವಂಚಿಸಿದ್ದಾರೆ. ಆತ ಆನಂದ್ ಎಂದು ಗೊತ್ತಾದ ನಂತರ ವಿದ್ಯಾರ್ಥಿನಿ ದೂರು ದಾಖಲಿಸಿದ್ದರು. ಕೋಚಿಂಗ್ ಕೇಂದ್ರವೊಂದರಲ್ಲಿ ಆಲಿಂ ಅವರು ವಿದ್ಯಾರ್ಥಿನಿಯನ್ನು ಭೇಟಿ ಮಾಡಿದ್ದರು. ನಂತರ ದೇವಸ್ಥಾನವೊಂದರಲ್ಲಿ ಮದುವೆಯಾಗಿದ್ದರು. ಆಕೆ ಗರ್ಭಿಣಿಯಾದ ಬಳಿಕ ಗರ್ಭಪಾತಕ್ಕೆ ಕಾರಣವಾಗುವ ವಸ್ತುವನ್ನು ಬೆರೆಸಿದ ರಸವನ್ನು ಕುಡಿಸಿದ್ದರು” ಎಂದು ಪ್ರಾಸಿಕ್ಯೂಷನ್ ವಾದಿಸಿತ್ತು.

ವಿದ್ಯಾರ್ಥಿನಿ 2023ರಲ್ಲಿ ಆಲಿಂ ವಿರುದ್ದ ಪ್ರಕರಣ ದಾಖಲಿಸಿದ್ದಳು. ಆದರೆ, ವಿಚಾರಣೆಯ ವೇಳೆ ತನ್ನ ಆರೋಪಗಳನ್ನು ವಾಪಸ್ ಪಡೆದಿದ್ದಳು. ಆದರೆ, ಆಕೆಯ ವಾದವನ್ನು ನ್ಯಾಯಾಧೀಶ ದಿವಾಕರ್ ತಿರಸ್ಕರಿಸಿದ್ದು, ಆಕೆ ಆಲಿಂನ ಒತ್ತಡಕ್ಕೆ ಮಣಿದು ಈ ಹೇಳಿಕೆ ನೀಡಿದ್ದಾಳೆ ಎಂದಿರುವುದಾಗಿ ವರದಿಗಳು ಹೇಳಿದೆ.

ಜ್ಞಾನವಾಪಿ ಪ್ರಕರಣದಲ್ಲಿ ಆದೇಶ ನೀಡಿದ್ದರು ನ್ಯಾ.ದಿವಾಕರ್ 

ನ್ಯಾಯಾಧೀಶ ದಿವಾಕರ್ ಅವರು ವಾರಣಾಸಿಯಲ್ಲಿ ಹೆಚ್ಚುವರಿ ನ್ಯಾಯಾಧೀಶರಾಗಿದ್ದಾಗ, ಜ್ಞಾನವಾಪಿ ಮಸೀದಿ ಸಂಕೀರ್ಣದ ವಿಡಿಯೋ ಚಿತ್ರೀಕರಣಕ್ಕೆ ಹಾಗೂ ವಜುಖಾನಾ ಪ್ರದೇಶ ಮುಚ್ಚಲು ಆದೇಶಿಸಿದ್ದರು.

ಇದನ್ನೂ ಓದಿ : ಕೈದಿಗಳಿಗೆ ಜಾತಿ ಆಧಾರಿತ ಕೆಲಸ ಹಂಚಿಕೆ ನಿಲ್ಲಿಸಿ, ಜೈಲು ನೋಂದಣಿಯಿಂದ ಜಾತಿ ಕಾಲಂ ಅಳಿಸಿ : ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...