Homeಮುಖಪುಟಪರಿಸರವಾದಿ ಸೋನಮ್ ವಾಂಗ್ಚುಕ್ ಬಿಡುಗಡೆ; ಉಪವಾಸ ಅಂತ್ಯ

ಪರಿಸರವಾದಿ ಸೋನಮ್ ವಾಂಗ್ಚುಕ್ ಬಿಡುಗಡೆ; ಉಪವಾಸ ಅಂತ್ಯ

- Advertisement -
- Advertisement -

ಹವಾಮಾನ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಹಾಗೂ ಲಡಾಖ್‌ನ ಹಲವಾರು ಇತರ ಹೋರಾಟಗಾರರು ಬುಧವಾರ ಸಂಜೆ ಮಹಾತ್ಮ ಗಾಂಧಿಯವರ ಸ್ಮಾರಕ ರಾಜ್‌ಘಾಟ್‌ನಲ್ಲಿ ಶ್ರದ್ಧಾಂಜಲಿ ಸಲ್ಲಿಸಿದರು. ನಂತರ, ಅವರನ್ನು ಪೊಲೀಸ್ ಬಂಧನದಿಂದ ಬಿಡುಗಡೆ ಮಾಡಲಾಗಿದೆ. ಬಳಿಕ ಅವರು ತಮ್ಮ ಉಪವಾಸವನ್ನು ಕೊನೆಗೊಳಿಸಲಾಗಿದೆ ಎಂದು ಹೇಳಿದರು.

ಗುಂಪು ತಮ್ಮ ಬೇಡಿಕೆಗಳನ್ನು ಪಟ್ಟಿ ಮಾಡುವ ಜ್ಞಾಪಕ ಪತ್ರವನ್ನು ಸರ್ಕಾರಕ್ಕೆ ನೀಡಿದ್ದು, ಶೀಘ್ರದಲ್ಲೇ ಉನ್ನತ ನಾಯಕತ್ವದೊಂದಿಗೆ ಸಭೆ ನಡೆಸುವುದಾಗಿ ಭರವಸೆ ನೀಡಲಾಗಿದೆ ಎಂದು ವಾಂಗ್ಚುಕ್ ಹೇಳಿದರು.

“ಇಂತಹ ಸಾಂವಿಧಾನಿಕ ನಿಬಂಧನೆಗಳ ಅಡಿಯಲ್ಲಿ ಲಡಾಖ್ ಅನ್ನು ರಕ್ಷಿಸಲು ನಾವು ಸರ್ಕಾರಕ್ಕೆ ಜ್ಞಾಪಕ ಪತ್ರವನ್ನು ನೀಡಿದ್ದೇವೆ. ಇದರಿಂದ ಅಲ್ಲಿನ ಪರಿಸರವನ್ನು ಸಂರಕ್ಷಿಸಬಹುದು, ಸಂವಿಧಾನದ ಆರನೇ ಶೆಡ್ಯೂಲ್ ಸ್ಥಳೀಯರಿಗೆ ಸಂಪನ್ಮೂಲಗಳನ್ನು ನಿರ್ವಹಿಸುವ ಹಕ್ಕನ್ನು ನೀಡುತ್ತದೆ” ಎಂದು ವಾಂಗ್ಚುಕ್ ಮಾಧ್ಯಮಗಳಿಗೆ ತಿಳಿಸಿದರು.

“ಹಿಮಾಲಯದಲ್ಲಿ ಸ್ಥಳೀಯರು ಸಬಲೀಕರಣಗೊಳ್ಳಬೇಕು. ಏಕೆಂದರೆ, ಅವರು ಅದನ್ನು ಉತ್ತಮವಾಗಿ ಸಂರಕ್ಷಿಸಬಹುದು. ಮುಂದಿನ ದಿನಗಳಲ್ಲಿ ನಾವು ಪ್ರಧಾನಿ, ರಾಷ್ಟ್ರಪತಿ ಅಥವಾ ಗೃಹ ಸಚಿವರನ್ನು ಭೇಟಿ ಮಾಡಲಿದ್ದೇವೆ, ಇದು ಗೃಹ ಸಚಿವಾಲಯ ನಮಗೆ ನೀಡಿರುವ ಭರವಸೆಯಾಗಿದೆ” ಎಂದರು.

“ನಾವು ಲಡಾಖ್‌ಗೆ ಪ್ರಜಾಸತ್ತಾತ್ಮಕ ವ್ಯವಸ್ಥೆಗೆ ಬೇಡಿಕೆ ಇಟ್ಟಿದ್ದೇವೆ, ಆರನೇ ಶೆಡ್ಯೂಲ್ ಕೂಡ ಅದರ ಒಂದು ಭಾಗವಾಗಿದೆ. ನಮಗೆ ಉನ್ನತ ನಾಯಕತ್ವವನ್ನು ಭೇಟಿ ಮಾಡಿಸುವ ಭರವಸೆ ನೀಡಲಾಗಿದೆ ಮತ್ತು ಸಭೆಯ ದಿನಾಂಕವನ್ನು ಒಂದೆರಡು ದಿನಗಳಲ್ಲಿ ದೃಢೀಕರಿಸಲಾಗುವುದು” ಎಂದು ವಾಂಗ್ಚುಕ್ ಹೇಳಿದರು.

ವಾಂಗ್ಚುಕ್ ಮತ್ತು ಇತರ ಎಲ್ಲ ಪಾದಯಾತ್ರಿಗಳನ್ನು ಸಂಜೆ ಬಿಡುಗಡೆ ಮಾಡಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಖಚಿತಪಡಿಸಿದ್ದಾರೆ.

“ರಾಷ್ಟ್ರೀಯ ರಾಜಧಾನಿಯ ಕೇಂದ್ರ ಭಾಗಗಳಲ್ಲಿ ಸೆಕ್ಷನ್ 163 ಅನ್ನು ವಿಧಿಸಲಾಗಿರುವುದರಿಂದ ಯಾವುದೇ ಯಾತ್ರೆಯನ್ನು ನಡೆಸುವಂತಿಲ್ಲ ಎಂಬ ಭರವಸೆಯ ನಂತರ ಅವರನ್ನು ಹೋಗಲು ಅನುಮತಿಸಲಾಗಿದೆ” ಎಂದು ಅಧಿಕಾರಿ ಹೇಳಿದರು.

ಸೋನಮ್ ವಾಂಗ್ಚುಕ್ ಅವರನ್ನು ಬವಾನಾ ಪೊಲೀಸ್ ಠಾಣೆಯಲ್ಲಿ ಇರಿಸಲಾಗಿತ್ತು ಮತ್ತು ಇತರ ‘ಪಾದಯಾತ್ರಿಗಳು’ ದೆಹಲಿ-ಹರಿಯಾಣ ಗಡಿಯಲ್ಲಿ ಇತರ ಮೂರು ಪೊಲೀಸ್ ಠಾಣೆಗಳಲ್ಲಿ ಇರಿಸಲಾಗಿತ್ತು.

ರಾತ್ರಿ 9.30 ರ ಸುಮಾರಿಗೆ ರಾಜ್‌ಘಾಟ್‌ವರೆಗೆ ಎಲ್ಲರನ್ನು ಪೊಲೀಸ್ ಸಿಬ್ಬಂದಿ ಬಸ್‌ಗಳಲ್ಲಿ ಕರೆದೊಯ್ಯಲಾಯಿತು. ನಂತರ, ವಾಂಗ್‌ಚುಕ್ ಮತ್ತು ಇತರ ಎಲ್ಲ ಪಾದಯಾತ್ರಿಗಳಿಗೆ ಮನೆಗೆ ಹೋಗಲು ಅನುಮತಿಸಲಾಯಿತು.

ಸರ್ಕಾರವನ್ನು ಭೇಟಿಯಾಗಲು ವಾಂಗ್ಚುಕ್ ಇನ್ನೂ ಕೆಲವು ದಿನಗಳ ಕಾಲ ದೆಹಲಿಯಲ್ಲಿ ಉಳಿಯಬಹುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಲೇಹ್ ಅಪೆಕ್ಸ್ ಬಾಡಿ ಮತ್ತು ಕಾರ್ಗಿಲ್ ಡೆಮಾಕ್ರಟಿಕ್ ಅಲೈಯನ್ಸ್‌ನ ಪ್ರತಿನಿಧಿಗಳೊಂದಿಗೆ 15 ದಿನಗಳಲ್ಲಿ ಮಾತುಕತೆ ಪುನರಾರಂಭವಾಗಲಿದೆ ಎಂದು ಅವರಿಗೆ ಭರವಸೆ ನೀಡಲಾಗಿದೆ ಎಂದು ವಾಂಗ್‌ಚುಕ್ ಹೇಳಿದರು.

ವಾಂಗ್ಚುಕ್ ಅವರು ಒಂದು ತಿಂಗಳ ಹಿಂದೆ ಲೇಹ್‌ನಿಂದ ಪ್ರಾರಂಭವಾದ ‘ದೆಹಲಿ ಚಲೋ ಪಾದಯಾತ್ರೆ’ಯನ್ನು ಮುನ್ನಡೆಸುತ್ತಿದ್ದರು. ಕೇಂದ್ರಾಡಳಿತ ಪ್ರದೇಶಕ್ಕೆ ಸಂವಿಧಾನದ ಆರನೇ ಶೆಡ್ಯೂಲ್ ಅಡಿಯಲ್ಲಿ ರಕ್ಷಣೆ ನೀಡುವಂತೆ ಒತ್ತಾಯಿಸಿ ದೆಹಲಿಗೆ ಮೆರವಣಿಗೆ ನಡೆಸುತ್ತಿದ್ದ ಲಡಾಖ್‌ನಿಂದ ಸುಮಾರು 170 ಜನರನ್ನು ಸೋಮವಾರ ರಾತ್ರಿ ದೆಹಲಿಯ ಸಿಂಘು ಗಡಿಯಲ್ಲಿ ಬಂಧಿಸಲಾಯಿತು. ವಿವಿಧ ಪೊಲೀಸ್ ಠಾಣೆಗಳಿಗೆ ಕರೆದೊಯ್ದ ನಂತರ ಅವರು ಉಪವಾಸ ಮುಷ್ಕರ ಆರಂಭಿಸಿದ್ದರು.

ಕಾರ್ಗಿಲ್ ಡೆಮಾಕ್ರಟಿಕ್ ಅಲೈಯನ್ಸ್ (ಕೆಡಿಎ) ಜೊತೆಗೆ ಕಳೆದ ನಾಲ್ಕು ವರ್ಷಗಳಿಂದ ಲಡಾಖ್‌ಗೆ ರಾಜ್ಯ ಸ್ಥಾನಮಾನಕ್ಕೆ ಒತ್ತಾಯಿಸಿ, ಅದನ್ನು ಸಂವಿಧಾನದ ಆರನೇ ಶೆಡ್ಯೂಲ್ ಅಡಿಯಲ್ಲಿ ಸೇರಿಸಲು ಆಂದೋಲನವನ್ನು ಮುನ್ನಡೆಸುತ್ತಿರುವ ಲೇಹ್ ಅಪೆಕ್ಸ್ ಬಾಡಿ (ಎಲ್‌ಎಬಿ) ಈ ಮೆರವಣಿಗೆಯನ್ನು ಆಯೋಜಿಸಿದೆ. ಲಡಾಖ್‌ಗೆ ಸಾರ್ವಜನಿಕ ಸೇವಾ ಆಯೋಗ ಮತ್ತು ಲೇಹ್ ಮತ್ತು ಕಾರ್ಗಿಲ್ ಜಿಲ್ಲೆಗಳಿಗೆ ಪ್ರತ್ಯೇಕ ಲೋಕಸಭಾ ಸ್ಥಾನಗಳ ಜೊತೆಗೆ ಆರಂಭಿಕ ನೇಮಕಾತಿ ಪ್ರಕ್ರಿಯೆಗೆ ಬೇಡಿಕೆ ಇಟ್ಟಿವೆ.

ಇದನ್ನೂ ಓದಿ; ಕುಕಿ ಬಂಡುಕೋರರಿಂದ ಅಪಹರಣಕ್ಕೊಳಗಾದ ಇಬ್ಬರು ಮೈತೆಯಿ ಯುವಕರ ಬಿಡುಗಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...