Homeಫ್ಯಾಕ್ಟ್‌ಚೆಕ್FACT CHECK : CARIPILL ಮಾತ್ರೆ ಸೇವನೆಯಿಂದ ಡೆಂಘೀ ಸೋಂಕು ನಿವಾರಿಸಬಹುದು ಎಂಬುವುದು ಸುಳ್ಳು

FACT CHECK : CARIPILL ಮಾತ್ರೆ ಸೇವನೆಯಿಂದ ಡೆಂಘೀ ಸೋಂಕು ನಿವಾರಿಸಬಹುದು ಎಂಬುವುದು ಸುಳ್ಳು

- Advertisement -
- Advertisement -

ರಾಜ್ಯದಲ್ಲಿ ಇತ್ತೀಚೆಗೆ ಮಳೆ ಹೆಚ್ಚಾಗುತ್ತಿದ್ದಂತೆ ಡೆಂಗಿ ಸೋಂಕು ಕೂಡ ಎಲ್ಲಡೆ ಹಬ್ಬಲು ಪ್ರಾರಂಭವಾಗಿದೆ. ಇದರ ಮಧ್ಯೆ ” ಡೆಂಗ್ಯು ಕಾಯಿಲೆಯನ್ನು 48 ಗಂಟೆಗಳಲ್ಲಿ ಗುಣಪಡಿಸುವ ಔಷಧವೊಂದು ಮಾರುಕಟ್ಟೆಯಲ್ಲಿ ಲಭ್ಯವಿದೆ, ಈಗಲೆ ಖರೀದಿಸಿ, ಪಪ್ಪಾಯ ಎಲೆಯ ಸಾರವನ್ನು ಒಳಗೊಂಡಿರುವ ‘CARIPILL’ ಮಾತ್ರೆಯು ಡೆಂಗಿವನ್ನು ಕೆಲವೇ ಗಂಟೆಗಳಲ್ಲಿ ಗುಣಪಡಿಸುವ ಶಕ್ತಿ ಹೊಂದಿದೆ. ‘ಅಂತಃಕರಣ’ ಇದನ್ನು ಉಚಿತವಾಗಿ ನೀಡುತ್ತಿದೆ. ಈ ಸಂದೇಶವನ್ನು ಯಾವುದೇ ಕಾರಣಕ್ಕೂ ಅಳಿಸಬೇಡಿ ಎಲ್ಲರಿಗೂ ತಲುಪುವವರೆಗೂ ಶೇರ್‌ ಮಾಡಿ”ಎಂಬ ಪೋಸ್ಟ್‌ವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಪ್ರಸಾರವಾಗುತ್ತಿದೆ.

ಈ ಸುದ್ದಿಯನ್ನು ಓದಿದ ಹಲವು ಮಂದಿ ಪಪಾಯಿ ಸಾರವನ್ನು ಹೊಂದಿರುವ ಕ್ಯಾರಿಪಿಲ್‌ ನಿಜಕ್ಕೂ ಡೆಂಗಿ ಖಾಯಿಲೆಯಿಂದ ತಮ್ಮನ್ನು ಮುಕ್ತಗೊಳಿಸುತ್ತದೆ ಎಂದು ಭಾವಿಸಿದ್ದಾರೆ. ಹೀಗಾಗಿ ಕೆಲವರು ಯಾವುದೇ ವೈದ್ಯರ ಸಲಹೆಯನ್ನು ಪಡೆಯದೆ ಈ CARIPILL ಸೇವಿಸುತ್ತಿದ್ದಾರೆ ಎಂಬ ಮಾಹಿತಿ ಕೂಡ ಲಭ್ಯವಾಗುತ್ತದೆ.

ವಾಟ್ಸ್‌ಆಪ್‌ ಸೇರಿದಂತೆ ವಿವಿಧ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿರುವ ಈ CARIPILL ನಿಜಕ್ಕೂ ಡೆಂಗಿ ಖಾಯಿಲೆಯನ್ನು ನಿವಾರಣೆ ಮಾಡುತ್ತದೆಯೇ ಎಂದು ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ

ಫ್ಯಾಕ್ಟ್‌ಚೆಕ್‌ : ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ವೈರಲ್‌ ಆಗುತ್ತಿರುವ ಈ ಮಾತ್ರೆಯ ಕುರಿತು ಪರಿಶೀಲನೆ ನಡೆಸಲು  ಕೆಲವೊಂದು ಕೀ ವರ್ಡ್ಸ್‌ಗಳನ್ನು ಬಳಸಿ ಗೂಗಲ್ ಸರ್ಚ್ ಮಾಡಿದಾಗ, 12 ಆಗಸ್ಟ್‌ 2016ರಂದು ದ ಹೆಲ್ತ್‌ ಸೈಟ್‌.ಕಾಮ್ ಎಂಬ ವೆಬ್‌ಸೈಟ್‌ ಪ್ರಕಟಿಸಿದ ವರದಿಯೊಂದು ಲಭ್ಯವಾಗಿದೆ. ಈ ವರದಿಯಲ್ಲಿ ‌ಈ ಸಂಸ್ಥೆಯು ಜಾಹಿರಾತಿನಲ್ಲಿ ನೀಡಲಾದ ನಂಬರ್‌ಗೆ ಕರೆ ಮಾಡಿ ವಿಚಾರಣೆ ನಡೆಸಿದಾಗ ಈ ಮಾತ್ರೆಗೂ ಅಂತಃಕರಣ ಕ್ಲಿನಿಕ್‌ಗೂ ಯಾವುದೇ ರೀತಿಯಾದ ಸಂಬಂಧವಿಲ್ಲ ಎಂಬುದು ಖಚಿತ ಪಡಿಸಿಕೊಂಡಿದೆ.

ಬಳಿಕ ಈ ಕ್ಯಾರಿಪಿಲ್ ಮಾತ್ರೆಯನ್ನು  ಬೆಂಗಳೂರಿನ ಮೈಕ್ರೋ ಲ್ಯಾಬ್ಸ್ ಎಂಬ ಫಾರ್ಮಾಸ್ಯುಟಿಕಲ್ಸ್ ಕಂಪನಿಯಿಂದ ತಯಾರಿಸಲ್ಪಟ್ಟಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಮಾತ್ರೆಗಳು ಸಸ್ಯಶಾಸ್ತ್ರೀಯಕ್ಕೆ ಸಂಬಂಧಪಟ್ಟಿದೆ  ಎಂಬುದನ್ನು ಖಚಿತ ಪಡಿಸಿಕೊಂಡ ಈ ತಂಡ, ಬಳಿಕ ಮೈಕ್ರೋ ಲ್ಯಾಬ್ಸ್ ಲಿಮಿಟೆಡ್‌ನ ವೈದ್ಯಕೀಯ ವ್ಯವಹಾರಗಳ ವಿಪಿ ಡಾ ಮಂಜುಳಾ ಸುರೇಶ್  ಅವರನ್ನು ಸಂಪರ್ಕಿಸಿ ಮಾತನಾಡಿದೆ. ಇದಕ್ಕೆ ಅವರು  “ಈ ಸಂದೇಶವನ್ನು ವಾಟ್ಸಾಪ್‌ನಲ್ಲಿ ಪ್ರಸಾರ ಮಾಡುವ ಬಗ್ಗೆ ನಮಗೆ ತಿಳಿದಿಲ್ಲ. ಕ್ಯಾರಿಪಿಲ್ ಒಂದು ಪ್ರಿಸ್ಕ್ರಿಪ್ಷನ್ ಔಷಧವಾಗಿದೆ ಮತ್ತು ನಾವು ಅದನ್ನು ವೈದ್ಯರಿಗೆ ಮಾತ್ರ ಮಾರಾಟ ಮಾಡುತ್ತೇವೆ. ಡೆಂಗ್ಯೂವನ್ನು 48 ಗಂಟೆಗಳಲ್ಲಿ ಗುಣಪಡಿಸಬಹುದು ಎಂದು ನಾವು ಹೇಳುವುದಿಲ್ಲ. ವಾಸ್ತವವಾಗಿ, ಔಷಧವನ್ನು ಐದು ದಿನಗಳವರೆಗೆ ತೆಗೆದುಕೊಳ್ಳಬೇಕು.” ಎಂದು ದ ಹೆಲ್ತ್‌ ಸೈಟ್‌.ಕಾಮ್‌ಗೆ ಸ್ಪಷ್ಟ ಪಡಿಸಿದೆ.

ಒಟ್ಟಾರೆಯಾಗಿ ಹೇಳುವುದಾದರೆ , CARIPILL ಮಾತ್ರೆ ಸೇವನೆಯಿಂದ ಡೆಂಗಿ ಸೋಂಕಿನಿಂದ ಕೇವಲ 48 ಗಂಟೆಗಳಲ್ಲಿ ಮುಕ್ತಿ ಪಡೆಯಬಹುದು ಎಂಬ ಪ್ರತಿಪಾದನೆ ಸುಳ್ಳಾಗಿದೆ. ಹಾಗೂ ಈ ಸಂದೇಶ 2016ರಿಂದಲೂ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿರುವುದರಿಂದ ಇದು ಹಳೆಯ ಮತ್ತು ಸುಳ್ಳು ಸುದ್ದಿಯಾಗಿದೆ.

ಇದನ್ನೂ ಓದಿ : FACT CHECK : ನಟ ದರ್ಶನ್ ಪತ್ನಿ ದೇವರ ಮೊರೆ ಎಂದು ಒಂದು ವರ್ಷದ ಹಿಂದಿನ ಹಳೆಯ ಫೋಟೊ ಹಂಚಿಕೊಳ್ಳಲಾಗ್ತಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...