Homeಫ್ಯಾಕ್ಟ್‌ಚೆಕ್FACT CHECK : ಮುಸ್ಲಿಂ ವ್ಯಕ್ತಿ ವಂದೇ ಭಾರತ್ ರೈಲಿನ ಗಾಜನ್ನು ಸುತ್ತಿಗೆಯಿಂದ ಒಡೆದ್ದಾನೆ ಎಂಬುವುದು...

FACT CHECK : ಮುಸ್ಲಿಂ ವ್ಯಕ್ತಿ ವಂದೇ ಭಾರತ್ ರೈಲಿನ ಗಾಜನ್ನು ಸುತ್ತಿಗೆಯಿಂದ ಒಡೆದ್ದಾನೆ ಎಂಬುವುದು ನಿಜವೇ?

- Advertisement -
- Advertisement -

ವ್ಯಕ್ತಿಯೊಬ್ಬ ವಂದೇ ಭಾರತ್ ಎಕ್ಸ್‌ಪ್ರೆಸ್ ಕಿಟಕಿಯನ್ನು ಸುತ್ತಿಗೆಯಿಂದ ಹೊಡೆದುಹಾಕುವ ವಿಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ”ಈ ಜಿಹಾದಿಗಳಿಗೆ ಬುದ್ದಿ ಕಲಿಸದಿದ್ದರೇ ಭಾರತಕ್ಕೆ ಅಪಾಯ ತಪ್ಪಿದ್ದಲ್ಲ. ಇವರು ಈಗ ಗಾಜನ್ನು ಒಡೆದಿದ್ದಾರೆ. ಮುಂದೇ ಇಡೀ ರೈಲನ್ನು ಹೊಡೆದು ಹಾಕಬಹುದು. ಇಂತಹ ಮುಸಲ್ಮಾನನನ್ನು ನೀವು ಉಗ್ರಗಾಮಿ, ಜಿಹಾದಿ ಎನ್ನದೆ, ಇನ್ನೇನು ಹೇಳುತ್ತೀರಿ.” ಎಂಬ ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ.

ಅಮಿತ್‌ ಸನಾತನಿ ಎಂಬ ಎಕ್ಸ್‌ ಖಾತೆಯ ಬಳಕೆದಾರರೊಬ್ಬರು ಪೋಸ್ಟ್‌ಅನ್ನು ಹಂಚಿಕೊಂಡಿದ್ದು,  ಮುಸ್ಲಿಂ ಜಿಹಾದಿಗಳು ವಂದೇ ಭಾರತ್‌ ರೈಲಿಗೆ ಹಾನಿಯುಂಟು ಮಾಡುತ್ತಿದ್ದಾರೆ ಎಂದು ಹೇಳಿಕೊಂಡಿದ್ದಾರೆ. ಇದೇ ರೀತಿಯ ಪ್ರತಿಪಾದನೆಯೊಂದಿಗೆ ಹಲವು ಸಾಮಾಜಿಕ ಮಾಧ್ಯಮಗಳ ಬಳಕೆದಾರರು ಪೋಸ್ಟ್‌ಗಳನ್ನು ಹಂಚಿಕೊಂಡಿದ್ದಾರೆ. ಹಾಗಿದ್ದರೆ ವಿಡಿಯೋದಲ್ಲಿ ರೈಲಿನ ಗಾಜು ಹೊಡೆಯುತ್ತಿರುವ ವ್ಯಕ್ತಿ ಮುಸ್ಲಿಂ ಸಮುದಾಯಕ್ಕೆ ಸೇರಿದವನೇ? ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಗೂಗಲ್ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ, ವಂದೇ ಭಾರತ್‌ ರೈಲಿಕ ಕಿಟಕಿ ಗಾಜನ್ನು ಸುತ್ತಿಗೆಯಿಂದ ಹೊಡೆಯುತ್ತಿರುವ ವ್ಯಕ್ತಿ ತಮಿಳುನಾಡಿನ ತಿರುನೆಲ್ವೇಲಿ ಕೋಚಿಂಗ್ ಡಿಪೋದಲ್ಲಿ ಸೆಕ್ಷನ್ ಇಂಜಿನಿಯರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಮಂಥೀರ ಮೂರ್ತಿ ಅವರು ಪೋಸ್ಟ್‌ವೊಂದಕ್ಕೆ ಪ್ರತಿಕ್ರಿಯೆ ನೀಡಿದ್ದ ಕಮೆಂಟ್ ಲಭ್ಯವಾಗಿದೆ.

ಈ ಪೋಸ್ಟ್ ‌ಗಳ ಪ್ರಕಾರ ವಂದೇ ಭಾರತ್‌ ರೈಲಿಗೆ ಹಾನಿ ಮಾಡಲು ಈ ಗಾಜುಗಳನ್ನು ಒಡೆಯಲಾಗಿಲ್ಲ‌, ಬದಲಿಗೆ ಈಗಾಗಲೇ ಒಡೆದು ಹೋಗಿದ್ದ ಕಿಟಕಿ ಗಾಜನ್ನು ಬದಲಾಯಿಸುವ ಪ್ರಕ್ರಿಯೆಯಾಗಿದೆ ಎಂಬುದು ತಿಳಿದು ಬಂದಿದೆ.

ಮತ್ತಷ್ಟು ಮಾಹಿತಿಗಾಗಿ ಸರ್ಚ್ ಮಾಡಿದಾಗ, 10 ಸೆಪ್ಟೆಂಬರ್ 2024  ರಂದು ಅಪ್‌ಲೋಡ್ ಮಾಡಿದ ಇನ್‌ಸ್ಟಾಗ್ರಾಂ ಸ್ಟೋರಿ ಲಭ್ಯವಾಗಿದೆ. ಇದೇ ರೀತಿ ರೈಲಿಗೆ ಸಂಬಂಧ ಪಟ್ಟಂತೆ ಹಲವು ರೀಲ್ಸ್‌ಗಳು ಅವರ ಖಾತೆಯಲ್ಲಿ ಕಂಡು ಬಂದಿದೆ. ಹೀಗಾಗಿ ಹಲವು ಮಾಧ್ಯಮ ಸಂಸ್ಥೆಗಳು ಅವರನ್ನು ಸಂಪರ್ಕಿಸಿದಾಗ ಅವರು ತಮ್ಮ ಹೆಸರು ಮನೀಶ್ ಕುಮಾರ್ ಮತ್ತು ತಾನು ಬಿಹಾರದ ಅರ್ರಾ ನಿವಾಸಿ ಎಂದು ತಿಳಿಸಿದ್ದಾರೆ. ಪ್ರಸ್ತುತ ಅಹಮದಾಬಾದ್‌ನಲ್ಲಿ ಮತ್ತು ರೈಲ್ವೆಯಲ್ಲಿ ಕೆಲಸ ಮಾಡುತ್ತಿರುವ ಬಗ್ಗೆ ಮಾಹಿತಿ ನೀಡಿದ್ದು, ವೈರಲ್ ವಿಡಿಯೋಗಳ ಕುರಿತು ಅಧಿಕಾರಿಗಳು ಮಾಧ್ಯಮಗಳೊಂದಿಗೆ ಮಾತನಾಡದಂತೆ ಸೂಚಿಸಿದ್ದರಿಂದ ಅವರು ಈ ಬಗ್ಗೆ ಯಾವುದೇ ಮಾಹಿತಿಯನ್ನು ನೀಡಿಲ್ಲ‌ ಎಂದು ತಿಳಿದು ಬಂದಿದೆ.

ವಂದೇ ಭಾರತ್ ರೈಲಿನ ಕಿಟಕಿ ಗಾಜನ್ನು ಮುಸ್ಲಿಂ ವ್ಯಕ್ತಿಯೊಬ್ಬ ಸುತ್ತಿಗೆಯಿಂದ ಒಡೆದಿದ್ದಾನೆ ಎನ್ನಲಾದ ವಿಡಿಯೋವನ್ನು ಮತ್ತಷ್ಟು ಪರಿಶೀಲಿಸಿದಾಗ, 10 ಸೆಪ್ಟೆಂಬರ್‌ 2024 ರಂದು ಟ್ರೈನ್ಸ್‌ ಆಫ್‌ ಇಂಡಿಯಾ ಎಂಬ ಎಕ್ಸ್‌ ಖಾತೆಯಿಂದ ಹಂಚಿಕೊಂಡ ಪೋಸ್ಟ್‌ವೊಂದು ಲಭ್ಯವಾಗಿದೆ.

” ವೈರಲ್‌ ವಿಡಿಯೋದಲ್ಲಿರುವ ವ್ಯಕ್ತಿ ಗಾಜನ್ನು ಬದಲಾಯಿಸಲು, ಈಗಿರುವ ಗಾಜನ್ನು ಒಡೆದು ತೆಯುತ್ತಾರೆ. ಇದು ಗಾಜು ಬದಲಾಯಿತು ಪ್ರಕ್ರಿಯೆಯಾಗಿದೆ. ಗಾಜುಗಳು ರೈಲಿಗೆ ಭೀಗಿಯಾಗಿ ಅಳವಡಿಸಿರುವುದರಿಂದ ಅವುಗಳನ್ನು ಹೀಗೆ ಸುತ್ತಿಗೆಯಲ್ಲಿ ಒಡೆದು ತೆಗೆಯಲಾಗುತ್ತದೆ.” ಎಂದು ಮಾಹಿತಿಯನ್ನು ನೀಡಿರುವುದು ಕಂಡು ಬಂದಿದೆ.

ಈಗಾಗಲೇ ಹಾಳಾಗಿದ್ದ ಕಿಟಕಿ ಗಾಜನ್ನು ಬದಲಾಯಿಸಲು ಒಡೆದು ಹಾಕಲಾಗುತ್ತಿದೆ ಎಂಬ ಅಂಶವನ್ನು ರೈಲ್ವೇ ಅಧಿಕಾರಿಯೂ ದೃಢಪಡಿಸಿದ್ದಾರೆ. ವಿಡಿಯೋದಲ್ಲಿ ಕಂಡುಬರುವ ವ್ಯಕ್ತಿ ಮನೀಶ್ ಕುಮಾರ್ ಗುಪ್ತಾ ಎಂದು ದೃಢಪಡಿಸಿದ್ದಾರೆ, ಅವರು ಭಾರತೀಯ ರೈಲ್ವೆಯಲ್ಲಿ ಗುತ್ತಿಗೆ ಆಧಾರಿತ ಕಂಪನಿಯೊಂದಿಗೆ ಕೆಲಸ ಮಾಡುತ್ತಿದ್ದಾರೆ ಎಂದು ವಿವರಿಸಿದ್ದಾರೆ.

ಒಟ್ಟಾರೆಯಾಗಿ ಹೇಳುವುದಾದರೆ, ರೈಲ್ವೆ ಇಲಾಖೆಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಮನೀಶ್ ಕುಮಾರ್ ಗುಪ್ತಾ ಎಂಬುವವರು ಹಾಳಾಗಿದ್ದ ಕಿಟಕಿ ಗಾಜನ್ನು ಬದಲಾಯಿಸಲು ಸುತ್ತಿಗೆಯಿಂದ ಒಡೆಯುತ್ತಿರುವ ವಿಡಿಯೋವನ್ನು, ಸುಳ್ಳು ಮತ್ತು ಕೋಮು ನಿರೂಪಣೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ಇದನ್ನೂ ಓದಿ : FACT CHECK : ರಾಜ್ಯದ ಹಲವೆಡೆ ರಾತ್ರಿ ಹೊತ್ತು ಸಿಂಹಗಳ ಓಡಾಟ…ವೈರಲ್ ವಿಡಿಯೋಗಳ ಅಸಲಿಯತ್ತೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...