Homeಫ್ಯಾಕ್ಟ್‌ಚೆಕ್FACT CHECK : ಮುಸ್ಲಿಂ ವ್ಯಕ್ತಿ ವಂದೇ ಭಾರತ್ ರೈಲಿನ ಗಾಜನ್ನು ಸುತ್ತಿಗೆಯಿಂದ ಒಡೆದ್ದಾನೆ ಎಂಬುವುದು...

FACT CHECK : ಮುಸ್ಲಿಂ ವ್ಯಕ್ತಿ ವಂದೇ ಭಾರತ್ ರೈಲಿನ ಗಾಜನ್ನು ಸುತ್ತಿಗೆಯಿಂದ ಒಡೆದ್ದಾನೆ ಎಂಬುವುದು ನಿಜವೇ?

- Advertisement -
- Advertisement -

ವ್ಯಕ್ತಿಯೊಬ್ಬ ವಂದೇ ಭಾರತ್ ಎಕ್ಸ್‌ಪ್ರೆಸ್ ಕಿಟಕಿಯನ್ನು ಸುತ್ತಿಗೆಯಿಂದ ಹೊಡೆದುಹಾಕುವ ವಿಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ”ಈ ಜಿಹಾದಿಗಳಿಗೆ ಬುದ್ದಿ ಕಲಿಸದಿದ್ದರೇ ಭಾರತಕ್ಕೆ ಅಪಾಯ ತಪ್ಪಿದ್ದಲ್ಲ. ಇವರು ಈಗ ಗಾಜನ್ನು ಒಡೆದಿದ್ದಾರೆ. ಮುಂದೇ ಇಡೀ ರೈಲನ್ನು ಹೊಡೆದು ಹಾಕಬಹುದು. ಇಂತಹ ಮುಸಲ್ಮಾನನನ್ನು ನೀವು ಉಗ್ರಗಾಮಿ, ಜಿಹಾದಿ ಎನ್ನದೆ, ಇನ್ನೇನು ಹೇಳುತ್ತೀರಿ.” ಎಂಬ ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ.

ಅಮಿತ್‌ ಸನಾತನಿ ಎಂಬ ಎಕ್ಸ್‌ ಖಾತೆಯ ಬಳಕೆದಾರರೊಬ್ಬರು ಪೋಸ್ಟ್‌ಅನ್ನು ಹಂಚಿಕೊಂಡಿದ್ದು,  ಮುಸ್ಲಿಂ ಜಿಹಾದಿಗಳು ವಂದೇ ಭಾರತ್‌ ರೈಲಿಗೆ ಹಾನಿಯುಂಟು ಮಾಡುತ್ತಿದ್ದಾರೆ ಎಂದು ಹೇಳಿಕೊಂಡಿದ್ದಾರೆ. ಇದೇ ರೀತಿಯ ಪ್ರತಿಪಾದನೆಯೊಂದಿಗೆ ಹಲವು ಸಾಮಾಜಿಕ ಮಾಧ್ಯಮಗಳ ಬಳಕೆದಾರರು ಪೋಸ್ಟ್‌ಗಳನ್ನು ಹಂಚಿಕೊಂಡಿದ್ದಾರೆ. ಹಾಗಿದ್ದರೆ ವಿಡಿಯೋದಲ್ಲಿ ರೈಲಿನ ಗಾಜು ಹೊಡೆಯುತ್ತಿರುವ ವ್ಯಕ್ತಿ ಮುಸ್ಲಿಂ ಸಮುದಾಯಕ್ಕೆ ಸೇರಿದವನೇ? ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಗೂಗಲ್ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ, ವಂದೇ ಭಾರತ್‌ ರೈಲಿಕ ಕಿಟಕಿ ಗಾಜನ್ನು ಸುತ್ತಿಗೆಯಿಂದ ಹೊಡೆಯುತ್ತಿರುವ ವ್ಯಕ್ತಿ ತಮಿಳುನಾಡಿನ ತಿರುನೆಲ್ವೇಲಿ ಕೋಚಿಂಗ್ ಡಿಪೋದಲ್ಲಿ ಸೆಕ್ಷನ್ ಇಂಜಿನಿಯರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಮಂಥೀರ ಮೂರ್ತಿ ಅವರು ಪೋಸ್ಟ್‌ವೊಂದಕ್ಕೆ ಪ್ರತಿಕ್ರಿಯೆ ನೀಡಿದ್ದ ಕಮೆಂಟ್ ಲಭ್ಯವಾಗಿದೆ.

ಈ ಪೋಸ್ಟ್ ‌ಗಳ ಪ್ರಕಾರ ವಂದೇ ಭಾರತ್‌ ರೈಲಿಗೆ ಹಾನಿ ಮಾಡಲು ಈ ಗಾಜುಗಳನ್ನು ಒಡೆಯಲಾಗಿಲ್ಲ‌, ಬದಲಿಗೆ ಈಗಾಗಲೇ ಒಡೆದು ಹೋಗಿದ್ದ ಕಿಟಕಿ ಗಾಜನ್ನು ಬದಲಾಯಿಸುವ ಪ್ರಕ್ರಿಯೆಯಾಗಿದೆ ಎಂಬುದು ತಿಳಿದು ಬಂದಿದೆ.

ಮತ್ತಷ್ಟು ಮಾಹಿತಿಗಾಗಿ ಸರ್ಚ್ ಮಾಡಿದಾಗ, 10 ಸೆಪ್ಟೆಂಬರ್ 2024  ರಂದು ಅಪ್‌ಲೋಡ್ ಮಾಡಿದ ಇನ್‌ಸ್ಟಾಗ್ರಾಂ ಸ್ಟೋರಿ ಲಭ್ಯವಾಗಿದೆ. ಇದೇ ರೀತಿ ರೈಲಿಗೆ ಸಂಬಂಧ ಪಟ್ಟಂತೆ ಹಲವು ರೀಲ್ಸ್‌ಗಳು ಅವರ ಖಾತೆಯಲ್ಲಿ ಕಂಡು ಬಂದಿದೆ. ಹೀಗಾಗಿ ಹಲವು ಮಾಧ್ಯಮ ಸಂಸ್ಥೆಗಳು ಅವರನ್ನು ಸಂಪರ್ಕಿಸಿದಾಗ ಅವರು ತಮ್ಮ ಹೆಸರು ಮನೀಶ್ ಕುಮಾರ್ ಮತ್ತು ತಾನು ಬಿಹಾರದ ಅರ್ರಾ ನಿವಾಸಿ ಎಂದು ತಿಳಿಸಿದ್ದಾರೆ. ಪ್ರಸ್ತುತ ಅಹಮದಾಬಾದ್‌ನಲ್ಲಿ ಮತ್ತು ರೈಲ್ವೆಯಲ್ಲಿ ಕೆಲಸ ಮಾಡುತ್ತಿರುವ ಬಗ್ಗೆ ಮಾಹಿತಿ ನೀಡಿದ್ದು, ವೈರಲ್ ವಿಡಿಯೋಗಳ ಕುರಿತು ಅಧಿಕಾರಿಗಳು ಮಾಧ್ಯಮಗಳೊಂದಿಗೆ ಮಾತನಾಡದಂತೆ ಸೂಚಿಸಿದ್ದರಿಂದ ಅವರು ಈ ಬಗ್ಗೆ ಯಾವುದೇ ಮಾಹಿತಿಯನ್ನು ನೀಡಿಲ್ಲ‌ ಎಂದು ತಿಳಿದು ಬಂದಿದೆ.

ವಂದೇ ಭಾರತ್ ರೈಲಿನ ಕಿಟಕಿ ಗಾಜನ್ನು ಮುಸ್ಲಿಂ ವ್ಯಕ್ತಿಯೊಬ್ಬ ಸುತ್ತಿಗೆಯಿಂದ ಒಡೆದಿದ್ದಾನೆ ಎನ್ನಲಾದ ವಿಡಿಯೋವನ್ನು ಮತ್ತಷ್ಟು ಪರಿಶೀಲಿಸಿದಾಗ, 10 ಸೆಪ್ಟೆಂಬರ್‌ 2024 ರಂದು ಟ್ರೈನ್ಸ್‌ ಆಫ್‌ ಇಂಡಿಯಾ ಎಂಬ ಎಕ್ಸ್‌ ಖಾತೆಯಿಂದ ಹಂಚಿಕೊಂಡ ಪೋಸ್ಟ್‌ವೊಂದು ಲಭ್ಯವಾಗಿದೆ.

” ವೈರಲ್‌ ವಿಡಿಯೋದಲ್ಲಿರುವ ವ್ಯಕ್ತಿ ಗಾಜನ್ನು ಬದಲಾಯಿಸಲು, ಈಗಿರುವ ಗಾಜನ್ನು ಒಡೆದು ತೆಯುತ್ತಾರೆ. ಇದು ಗಾಜು ಬದಲಾಯಿತು ಪ್ರಕ್ರಿಯೆಯಾಗಿದೆ. ಗಾಜುಗಳು ರೈಲಿಗೆ ಭೀಗಿಯಾಗಿ ಅಳವಡಿಸಿರುವುದರಿಂದ ಅವುಗಳನ್ನು ಹೀಗೆ ಸುತ್ತಿಗೆಯಲ್ಲಿ ಒಡೆದು ತೆಗೆಯಲಾಗುತ್ತದೆ.” ಎಂದು ಮಾಹಿತಿಯನ್ನು ನೀಡಿರುವುದು ಕಂಡು ಬಂದಿದೆ.

ಈಗಾಗಲೇ ಹಾಳಾಗಿದ್ದ ಕಿಟಕಿ ಗಾಜನ್ನು ಬದಲಾಯಿಸಲು ಒಡೆದು ಹಾಕಲಾಗುತ್ತಿದೆ ಎಂಬ ಅಂಶವನ್ನು ರೈಲ್ವೇ ಅಧಿಕಾರಿಯೂ ದೃಢಪಡಿಸಿದ್ದಾರೆ. ವಿಡಿಯೋದಲ್ಲಿ ಕಂಡುಬರುವ ವ್ಯಕ್ತಿ ಮನೀಶ್ ಕುಮಾರ್ ಗುಪ್ತಾ ಎಂದು ದೃಢಪಡಿಸಿದ್ದಾರೆ, ಅವರು ಭಾರತೀಯ ರೈಲ್ವೆಯಲ್ಲಿ ಗುತ್ತಿಗೆ ಆಧಾರಿತ ಕಂಪನಿಯೊಂದಿಗೆ ಕೆಲಸ ಮಾಡುತ್ತಿದ್ದಾರೆ ಎಂದು ವಿವರಿಸಿದ್ದಾರೆ.

ಒಟ್ಟಾರೆಯಾಗಿ ಹೇಳುವುದಾದರೆ, ರೈಲ್ವೆ ಇಲಾಖೆಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಮನೀಶ್ ಕುಮಾರ್ ಗುಪ್ತಾ ಎಂಬುವವರು ಹಾಳಾಗಿದ್ದ ಕಿಟಕಿ ಗಾಜನ್ನು ಬದಲಾಯಿಸಲು ಸುತ್ತಿಗೆಯಿಂದ ಒಡೆಯುತ್ತಿರುವ ವಿಡಿಯೋವನ್ನು, ಸುಳ್ಳು ಮತ್ತು ಕೋಮು ನಿರೂಪಣೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ಇದನ್ನೂ ಓದಿ : FACT CHECK : ರಾಜ್ಯದ ಹಲವೆಡೆ ರಾತ್ರಿ ಹೊತ್ತು ಸಿಂಹಗಳ ಓಡಾಟ…ವೈರಲ್ ವಿಡಿಯೋಗಳ ಅಸಲಿಯತ್ತೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...