Homeಅಂತರಾಷ್ಟ್ರೀಯಭಾರತದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರ ವಿರುದ್ಧ ದಾಳಿ ಹೆಚ್ಚುತ್ತಿವೆ: ಅಮೆರಿಕ ಸರ್ಕಾರದ ಆಯೋಗ

ಭಾರತದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರ ವಿರುದ್ಧ ದಾಳಿ ಹೆಚ್ಚುತ್ತಿವೆ: ಅಮೆರಿಕ ಸರ್ಕಾರದ ಆಯೋಗ

- Advertisement -
- Advertisement -

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯ ಹದಗೆಡುತ್ತಿದೆ ಎಂದು ಅಮೆರಿಕ ಸರ್ಕಾರದ ಆಯೋಗವು  ಆರೋಪಿಸಿದ್ದು, ಭಾರತವನ್ನು “ನಿರ್ದಿಷ್ಟ ಆತಂಕದ ದೇಶ” ಎಂದು ಹೆಸರಿಸಲು ಕರೆ ನೀಡಿದೆ. ‘ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯಕ್ಕಾಗಿ ಅಮೆರಿಕ ಆಯೋಗ’ (USCIRF)ದ ಭಾರತ ವಿಭಾಗ ವರದಿಯಲ್ಲಿ, ಸರ್ಕಾರಿ ಅಧಿಕಾರಿಗಳ ದ್ವೇಷ ಭಾಷಣ ಸೇರಿದಂತೆ, ಭಾರತದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರು ಮತ್ತು ಅವರ ಪೂಜಾ ಸ್ಥಳಗಳ ವಿರುದ್ಧ ಹಿಂಸಾತ್ಮಕ ದಾಳಿಗಳಿಗೆ ನಡೆಸಲು ಸುಳ್ಳು ಮತ್ತು ತಪ್ಪು ಮಾಹಿತಿಯ ಬಳಕೆಯನ್ನು ವಿವರಿಸಿದೆ.ಭಾರತದಲ್ಲಿ ಅಲ್ಪಸಂಖ್ಯಾತರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

USCIRF ತನ್ನ ವಾರ್ಷಿಕ ವರದಿಯಲ್ಲಿ, ಭಾರತವು ಧಾರ್ಮಿಕ ಸ್ವಾತಂತ್ರ್ಯದ ವಿರುದ್ಧ ವ್ಯವಸ್ಥಿತವಾಗಿ ಮತ್ತು ಅತಿರೇಕದ ಉಲ್ಲಂಘನೆಯಲ್ಲಿ ತೊಡಗಿದೆ ಎಂದು ಹೇಳಿದ್ದು, ಅದಕ್ಕಾಗಿ ಭಾರತವನ್ನು “ನಿರ್ದಿಷ್ಟ ಆತಂಕದ ದೇಶ” ಎಂದು ಹೆಸರಿಸುವಂತೆ ಅಮೆರಿಕ ಡಿಪಾರ್ಪೆಂಟ್‌ ಆಫ್‌ ಸ್ಟೇಟ್‌ಗೆ ಶಿಫಾರಸು ಮಾಡಿದೆ. ಆದರೆ ರಾಜ್ಯ ಇಲಾಖೆ ಇದುವರೆಗೆ ಶಿಫಾರಸುಗಳನ್ನು ಸ್ವೀಕರಿಸಿಲ್ಲ.

ಇದನ್ನೂಓದಿ: ‘ನಸ್ರಲ್ಲಾ, ನೆತನ್ಯಾಹು ಇಬ್ಬರೂ ಕದನ ವಿರಾಮಕ್ಕೆ ಒಪ್ಪಿಕೊಂಡಿದ್ದರು..’; ಲೆಬನಾನ್ ಮಂತ್ರಿ ಹೇಳಿಕೆ

“2024 ರ ಉದ್ದಕ್ಕೂ, ದುಷ್ಕರ್ಮಿಗಳ ಗುಂಪುಗಳಿಂದ ಜನರು ಸಾವಿಗೀಡಾದ, ಥಳಿಸಲ್ಪಟ್ಟ ಮತ್ತು ಹತ್ಯೆಯಾಗಿರುವ ಬಗ್ಗೆ ವರದಿ ಹೇಳಿದೆ. ಧಾರ್ಮಿಕ ಮುಖಂಡರನ್ನು ನಿರಂಕುಶವಾಗಿ ಬಂಧಿಸಲಾಗಿದ್ದು, ಅವರ ಮನೆ ಮತ್ತು ಪೂಜಾ ಸ್ಥಳಗಳನ್ನು ಕೆಡವಲಾಗಿದೆ” ಎಂಬುದನ್ನು ಈ ವರದಿಯು ಎತ್ತಿ ತೋರಿಸುತ್ತದೆ. ಈ ಘಟನೆಗಳು ವಿಶೇಷವಾಗಿ ಧಾರ್ಮಿಕ ಸ್ವಾತಂತ್ರ್ಯದ ತೀವ್ರ ಉಲ್ಲಂಘನೆಯಾಗಿದೆ ಎಂದು USCIRF ಹೇಳಿದೆ.

ಹಿಂದಿನ ಮನಮೋಹನ್ ಸಿಂಗ್ ನೇತೃತ್ವದ ಸರ್ಕಾರದಿಂದ ಆರಂಭಗೊಂಡು, ಭಾರತವು ತನ್ನ ಆಂತರಿಕ ವ್ಯವಹಾರಗಳಲ್ಲಿ “ಹಸ್ತಕ್ಷೇಪ” ವನ್ನು ಉಲ್ಲೇಖಿಸಿ, USCIRF ಸದಸ್ಯರಿಗೆ ದೇಶಕ್ಕೆ ಭೇಟಿ ನೀಡಲು ಸತತವಾಗಿ ವೀಸಾಗಳನ್ನು ನಿರಾಕರಿಸಿದೆ ಎಂದು ಅದು ಹೇಳಿದೆ.ಭಾರತದಲ್ಲಿ ಅಲ್ಪಸಂಖ್ಯಾತರ

“ಈ ವರದಿಯು ಪೌರತ್ವ ತಿದ್ದುಪಡಿ ಕಾಯಿದೆ, ಏಕರೂಪದ ನಾಗರಿಕ ಸಂಹಿತೆ ಮತ್ತು ಹಲವಾರು ರಾಜ್ಯ ಮಟ್ಟದ ಮತಾಂತರ ವಿರೋಧಿ ಮತ್ತು ಗೋಹತ್ಯೆ ಕಾನೂನುಗಳು ಸೇರಿದಂತೆ ಧಾರ್ಮಿಕ ಅಲ್ಪಸಂಖ್ಯಾತರನ್ನು ಗುರಿಯಾಗಿಸಲು ಮತ್ತು ಅವರ ಹಕ್ಕು ನಿರಾಕರಣೆ ಮಾಡಲು ಭಾರತದ ಕಾನೂನು ಚೌಕಟ್ಟಿನ ಬದಲಾವಣೆಗಳನ್ನು ಮತ್ತು ಜಾರಿಗೊಳಿಸುವಿಕೆಯನ್ನು ವಿವರಿಸುತ್ತದೆ” ಎಂದು USCIRF ಹೇಳಿದೆ.

ವಿಡಿಯೊ ನೋಡಿ: ‘ಗಾಂಧೀಜಿ ಹಂತಕ ಗೋಡ್ಸೆ ಎಂಬ ವ್ಯಕ್ತಿ ಮತ್ತು ಆತನ ದೃಷ್ಟಿಯ ಭಾರತ’ ಪುಸ್ತಕ ಬಿಡುಗಡೆ: ದಿನೇಶ್ ಗುಂಡೂರಾವ್ ಅವರ ಮಾತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...