Homeಅಂತರಾಷ್ಟ್ರೀಯಭಾರತದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರ ವಿರುದ್ಧ ದಾಳಿ ಹೆಚ್ಚುತ್ತಿವೆ: ಅಮೆರಿಕ ಸರ್ಕಾರದ ಆಯೋಗ

ಭಾರತದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರ ವಿರುದ್ಧ ದಾಳಿ ಹೆಚ್ಚುತ್ತಿವೆ: ಅಮೆರಿಕ ಸರ್ಕಾರದ ಆಯೋಗ

- Advertisement -
- Advertisement -

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯ ಹದಗೆಡುತ್ತಿದೆ ಎಂದು ಅಮೆರಿಕ ಸರ್ಕಾರದ ಆಯೋಗವು  ಆರೋಪಿಸಿದ್ದು, ಭಾರತವನ್ನು “ನಿರ್ದಿಷ್ಟ ಆತಂಕದ ದೇಶ” ಎಂದು ಹೆಸರಿಸಲು ಕರೆ ನೀಡಿದೆ. ‘ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯಕ್ಕಾಗಿ ಅಮೆರಿಕ ಆಯೋಗ’ (USCIRF)ದ ಭಾರತ ವಿಭಾಗ ವರದಿಯಲ್ಲಿ, ಸರ್ಕಾರಿ ಅಧಿಕಾರಿಗಳ ದ್ವೇಷ ಭಾಷಣ ಸೇರಿದಂತೆ, ಭಾರತದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರು ಮತ್ತು ಅವರ ಪೂಜಾ ಸ್ಥಳಗಳ ವಿರುದ್ಧ ಹಿಂಸಾತ್ಮಕ ದಾಳಿಗಳಿಗೆ ನಡೆಸಲು ಸುಳ್ಳು ಮತ್ತು ತಪ್ಪು ಮಾಹಿತಿಯ ಬಳಕೆಯನ್ನು ವಿವರಿಸಿದೆ.ಭಾರತದಲ್ಲಿ ಅಲ್ಪಸಂಖ್ಯಾತರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

USCIRF ತನ್ನ ವಾರ್ಷಿಕ ವರದಿಯಲ್ಲಿ, ಭಾರತವು ಧಾರ್ಮಿಕ ಸ್ವಾತಂತ್ರ್ಯದ ವಿರುದ್ಧ ವ್ಯವಸ್ಥಿತವಾಗಿ ಮತ್ತು ಅತಿರೇಕದ ಉಲ್ಲಂಘನೆಯಲ್ಲಿ ತೊಡಗಿದೆ ಎಂದು ಹೇಳಿದ್ದು, ಅದಕ್ಕಾಗಿ ಭಾರತವನ್ನು “ನಿರ್ದಿಷ್ಟ ಆತಂಕದ ದೇಶ” ಎಂದು ಹೆಸರಿಸುವಂತೆ ಅಮೆರಿಕ ಡಿಪಾರ್ಪೆಂಟ್‌ ಆಫ್‌ ಸ್ಟೇಟ್‌ಗೆ ಶಿಫಾರಸು ಮಾಡಿದೆ. ಆದರೆ ರಾಜ್ಯ ಇಲಾಖೆ ಇದುವರೆಗೆ ಶಿಫಾರಸುಗಳನ್ನು ಸ್ವೀಕರಿಸಿಲ್ಲ.

ಇದನ್ನೂಓದಿ: ‘ನಸ್ರಲ್ಲಾ, ನೆತನ್ಯಾಹು ಇಬ್ಬರೂ ಕದನ ವಿರಾಮಕ್ಕೆ ಒಪ್ಪಿಕೊಂಡಿದ್ದರು..’; ಲೆಬನಾನ್ ಮಂತ್ರಿ ಹೇಳಿಕೆ

“2024 ರ ಉದ್ದಕ್ಕೂ, ದುಷ್ಕರ್ಮಿಗಳ ಗುಂಪುಗಳಿಂದ ಜನರು ಸಾವಿಗೀಡಾದ, ಥಳಿಸಲ್ಪಟ್ಟ ಮತ್ತು ಹತ್ಯೆಯಾಗಿರುವ ಬಗ್ಗೆ ವರದಿ ಹೇಳಿದೆ. ಧಾರ್ಮಿಕ ಮುಖಂಡರನ್ನು ನಿರಂಕುಶವಾಗಿ ಬಂಧಿಸಲಾಗಿದ್ದು, ಅವರ ಮನೆ ಮತ್ತು ಪೂಜಾ ಸ್ಥಳಗಳನ್ನು ಕೆಡವಲಾಗಿದೆ” ಎಂಬುದನ್ನು ಈ ವರದಿಯು ಎತ್ತಿ ತೋರಿಸುತ್ತದೆ. ಈ ಘಟನೆಗಳು ವಿಶೇಷವಾಗಿ ಧಾರ್ಮಿಕ ಸ್ವಾತಂತ್ರ್ಯದ ತೀವ್ರ ಉಲ್ಲಂಘನೆಯಾಗಿದೆ ಎಂದು USCIRF ಹೇಳಿದೆ.

ಹಿಂದಿನ ಮನಮೋಹನ್ ಸಿಂಗ್ ನೇತೃತ್ವದ ಸರ್ಕಾರದಿಂದ ಆರಂಭಗೊಂಡು, ಭಾರತವು ತನ್ನ ಆಂತರಿಕ ವ್ಯವಹಾರಗಳಲ್ಲಿ “ಹಸ್ತಕ್ಷೇಪ” ವನ್ನು ಉಲ್ಲೇಖಿಸಿ, USCIRF ಸದಸ್ಯರಿಗೆ ದೇಶಕ್ಕೆ ಭೇಟಿ ನೀಡಲು ಸತತವಾಗಿ ವೀಸಾಗಳನ್ನು ನಿರಾಕರಿಸಿದೆ ಎಂದು ಅದು ಹೇಳಿದೆ.ಭಾರತದಲ್ಲಿ ಅಲ್ಪಸಂಖ್ಯಾತರ

“ಈ ವರದಿಯು ಪೌರತ್ವ ತಿದ್ದುಪಡಿ ಕಾಯಿದೆ, ಏಕರೂಪದ ನಾಗರಿಕ ಸಂಹಿತೆ ಮತ್ತು ಹಲವಾರು ರಾಜ್ಯ ಮಟ್ಟದ ಮತಾಂತರ ವಿರೋಧಿ ಮತ್ತು ಗೋಹತ್ಯೆ ಕಾನೂನುಗಳು ಸೇರಿದಂತೆ ಧಾರ್ಮಿಕ ಅಲ್ಪಸಂಖ್ಯಾತರನ್ನು ಗುರಿಯಾಗಿಸಲು ಮತ್ತು ಅವರ ಹಕ್ಕು ನಿರಾಕರಣೆ ಮಾಡಲು ಭಾರತದ ಕಾನೂನು ಚೌಕಟ್ಟಿನ ಬದಲಾವಣೆಗಳನ್ನು ಮತ್ತು ಜಾರಿಗೊಳಿಸುವಿಕೆಯನ್ನು ವಿವರಿಸುತ್ತದೆ” ಎಂದು USCIRF ಹೇಳಿದೆ.

ವಿಡಿಯೊ ನೋಡಿ: ‘ಗಾಂಧೀಜಿ ಹಂತಕ ಗೋಡ್ಸೆ ಎಂಬ ವ್ಯಕ್ತಿ ಮತ್ತು ಆತನ ದೃಷ್ಟಿಯ ಭಾರತ’ ಪುಸ್ತಕ ಬಿಡುಗಡೆ: ದಿನೇಶ್ ಗುಂಡೂರಾವ್ ಅವರ ಮಾತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...