HomeಮುಖಪುಟBride in the Hills | ಕುವೆಂಪು ಕಾದಂಬರಿ 'ಮಲೆಗಳಲ್ಲಿ ಮದುಮಗಳು' ಮತ್ತೆ ಇಂಗ್ಲಿಷ್‌ಗೆ ಅನುವಾದ

Bride in the Hills | ಕುವೆಂಪು ಕಾದಂಬರಿ ‘ಮಲೆಗಳಲ್ಲಿ ಮದುಮಗಳು’ ಮತ್ತೆ ಇಂಗ್ಲಿಷ್‌ಗೆ ಅನುವಾದ

- Advertisement -
- Advertisement -

ರಾಷ್ಟ್ರಕವಿ ಕುವೆಂಪು ಅವರ ಶ್ರೇಷ್ಠ ಕೃತಿಗಳಲ್ಲಿ ಒಂದಾದ ‘ಮಲೆಗಳಲ್ಲಿ ಮದುಮಗಳು’ ಕಾದಂಬರಿ ಮತ್ತೊಮ್ಮೆ ಇಂಗ್ಲಿಷ್‌ಗೆ ಅನುವಾದಗೊಂಡಿದೆ. ಈ ಬಾರಿ ಖ್ಯಾತ ಪ್ರಕಾಶನ ಸಂಸ್ಥೆಯಾದ ‘ಪೆಂಗ್ವಿನ್ ರಾಂಡೋಕ್‌ ಹೌಸ್ ಇಂಡಿಯಾ’ ಪ್ರಕಟಿಸಿದ್ದು, ಸಾಹಿತಿ, ಪ್ರಾಧ್ಯಾಪಕಿ ವನಮಾಲಾ ವಿಶ್ವನಾಥ ಅವರು ಈ ಬೃಹತ್ ಕಾದಂಬರಿಯನ್ನು ‘ಬ್ರೈಡ್ ಇನ್‌ ದಿ ಹಿಲ್ಸ್‌’ (Bride in the Hills) ಎಂಬ ಶೀರ್ಷಿಕೆಯಲ್ಲಿ ಇಂಗ್ಲಿಷ್‌ಗೆ ಅನುವಾದ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಇಂಗ್ಲಿಷ್ ಅಧ್ಯಯನ ವಿಭಾಗದ ಪ್ರಾಧ್ಯಾಪಕರಾದ ಅನುವಾದಕಿ ವನಮಾಲಾ ವಿಶ್ವನಾಥ ಅವರು ನಾಲ್ಕು ದಶಕಗಳಿಂದ ಬೆಂಗಳೂರಿನ ಗಣ್ಯ ಸಂಸ್ಥೆಗಳಲ್ಲಿ ಇಂಗ್ಲಿಷ್ ಕಲಿಸಿದ್ದಾರೆ. ದ್ವಿಭಾಷಾ ವಿದ್ವಾಂಸರಾಗಿರುವ ಅವರು ಕಥಾ, ಸಾಹಿತ್ಯ ಅಕಾಡೆಮಿ ಮತ್ತು ರಾಷ್ಟ್ರೀಯ ಅನುವಾದ ಮಿಷನ್‌ನ ಸಹಯೋಗದೊಂದಿಗೆ ಇಂಗ್ಲಿಷ್ ಭಾಷಾಂತರದಲ್ಲಿ ಭಾರತೀಯ ಸಾಹಿತ್ಯವನ್ನು ಕಲಿಸಿದ್ದಾರೆ, ಪ್ರಕಟಿಸಿದ್ದಾರೆ ಮತ್ತು ಪ್ರಚಾರ ಮಾಡಿದ್ದಾರೆ.

ಇದನ್ನೂಓದಿ: ಸಂದರ್ಶನ; ರಿಚರ್ಡ್ ಈಟನ್: ಸವೆದ ಹಾದಿಯಲ್ಲಿ ನಡೆಯದ ಇತಿಹಾಸಕಾರ

ಪ್ರಶಸ್ತಿ ವಿಜೇತ ಅನುವಾದಕಿ ಆಗಿರುವ ವನಮಾಲ ಅವರು ಆಧುನಿಕ ಕನ್ನಡ ಲೇಖಕರಾದ ತೇಜಸ್ವಿ (1994), ವೈದೇಹಿ (1998), ಸಾರಾ ಅಬೂಬಕರ್ (1999), ಯು.ಆರ್. ಅನಂತಮೂರ್ತಿ (2001), ಲಂಕೇಶ್ (2003), ಮತ್ತು ಗುಲ್ವಾಡಿ ವೆಂಕಟ ರಾವ್ (2019) ಅವರ ಕೃತಿಗಳನ್ನು ಅನುವಾದ ಮಾಡಿದ್ದಾರೆ. ಅಷ್ಟೆ ಅಲ್ಲದೆ, ವಚನ (2012); ದಿ ಲೈಫ್ ಆಫ್ ಹರಿಶ್ಚಂದ್ರ (ಹಾರ್ವರ್ಡ್ ಯೂನಿವರ್ಸಿಟಿ ಪ್ರೆಸ್, 2017); ಮತ್ತು ವಡ್ಡಾರಾಧನೆಯನ್ನು ಕೂಡಾ ಅವರು ಅನುವಾದ ಮಾಡಿದ್ದಾರೆ. ಅಶೋಕ ವಿಶ್ವವಿದ್ಯಾನಿಲಯದಲ್ಲಿ ಭಾಷಾಂತರ ಫೆಲೋ ಆಗಿರುವ ಅವರು ಪ್ರಸ್ತುತ ಎಲ್. ತೋಲ್ಪಾಡಿಯವರ ಪ್ರಬಂಧ ಸಂಗ್ರಹ, ‘ಮ್ಯೂಸಿಂಗ್ಸ್ ಆನ್ ದಿ ಮಹಾಭಾರತ’ವನ್ನು ಅನುವಾದಿಸುತ್ತಿದ್ದಾರೆ.

Bride in the Hills,ಕುವೆಂಪು ಕಾದಂಬರಿ,ಮಲೆಗಳಲ್ಲಿ ಮದುಮಗಳು, ಇಂಗ್ಲಿಷ್‌,ಅನುವಾದ, Novel, English, Translation,

ತಮ್ಮ ಅನುವಾದಿತ ಕೃತಿ ‘ಬ್ರೈಡ್ ಇನ್‌ ದಿ ಹಿಲ್ಸ್‌’ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ವನಮಾಲ ಅವರು, ”ಕನ್ನಡ ಕಾದಂಬರಿ ಲೋಕದ ಉತ್ತುಂಗ ಶಿಖರ ಎನಿಸಿಕೊಂಡಿರುವ ‘ಮಲೆಗಲಲ್ಲಿ ಮದುಮಗಳು’ ಕೃತಿಯನ್ನು ಸುಮಾರು 30 ವರ್ಷಗಳ ಹಿಂದೆ ಮೊದಲ ಬಾರಿಗೆ ಓದಿದಾಗಲೆ ಅದರ ಆಳ ಅಗಲಗಳನ್ನು ನೋಡಿ ದಂಗಾಗಿ ಬಿಟ್ಟಿದ್ದೆ. ಕಾದಂಬರಿಯ ವಿಸ್ತಾವರವಾದ ಬಿತ್ತಿ ಯಾವುದನ್ನೂ ಯಾರನ್ನೂ ಬಿಡದೆ ಒಳಗೊಳ್ಳುವ ರೀತಿ ಕೆವಿ ಸುಬ್ಬಣ್ಣ ಅವರು ಹೇಳಿದಂತೆ ‘ಮಲೆನಾಡ ಮಹಾಭಾರತ’ ಎನ್ನಿಸುವಂತಹ ಸಂಕೀರ್ಣತೆ ನಮ್ಮ ಮುಂದೆ ಚೈತನ್ಯದಿಂದ ಮಿಡಿಯುತ್ತಿರುವ ಬದುಕನ್ನೆ ಅನಾವರಣ ಮಾಡುತ್ತವೆ. ಇಂತಹ ಮಹಾನ್ ಕೃತಿಯನ್ನು ಅನುವಾದ ಮಾಡಬಹುದು, ನಾನೇ ಮಾಡಿದರೂ ಮಾಡಬಹುದು ಎಂಬ ಕನಸು ಕೂಡಾ ಆಗ ಇರಲಿಲ್ಲ” ಎಂದು ಹೇಳಿದರು.

ಅದಾಗ್ಯೂ, 2017ರಲ್ಲಿ ಹಾರ್ವರ್ಡ್ ಯುನಿವರ್ಸಿಟಿ ಪ್ರೆಸ್‌ಗೆ ‘ಹರಿಶ್ಚಂದ್ರ ಕಾವ್ಯ’ವನ್ನು, 2019ರಲ್ಲಿ ಆಕ್ಸ್‌ಫರ್ಡ್‌ ಯುನಿವರ್ಸಿಟಿ ಪ್ರೆಸ್‌ಗೆ ‘ಇಂದಿರಾ ಬಾಯಿ’ಯಂತಹ ಬಹು ಭಾಷೆಗಳನ್ನು ಬಳಸಿರುವ ಕೃತಿಯನ್ನು ಇಂಗ್ಲಿಷ್‌ಗೆ ಅನುವಾದ ಮಾಡಿದ ನಂತರ ಈ ಸಾಹಸಕ್ಕೆ ಕೈ ಹಾಕುವ ಧೈರ್ಯ ಬಂತು ಎಂದು ವನಮಾಲ ನಾನುಗೌರಿ.ಕಾಂಗೆ ಹೇಳಿದರು.

ಇದನ್ನೂಓದಿ: ದೇವಿದಯಾಳ್ ಅವರ ’ಡಾ. ಬಾಬಾಸಾಹೇಬ್ ಅಂಬೇಡ್ಕರ್ ದಿನಚರಿ’ ಪುಸ್ತಕದ ಕನ್ನಡಾನುವಾದದಿಂದ ಆಯ್ದ ಅಧ್ಯಾಯ

“ಇಂತಹ ಕಷ್ಟಸಾಧ್ಯವಾದ ಕೃತಿಯನ್ನು ಅನುವಾದ ಮಾಡುವುದು ಒಂದು ಮಾತಾದರೆ, ಅದನ್ನು ಕನ್ನಡೇತರರಿಗೆ ದೊರಕುವಂತೆ ಮಾಡುವುದು ಬೇರೆಯದೆ ಮಾತು. ಹೀಗಾಗಿ Penguin Random House India ನಂತಹ ಪ್ರತಿಷ್ಠಿತ ಸಂಸ್ಥೆ ಕೃತಿ ಅನುವಾದ ಪ್ರಕಟಿಸಲು ಮುಂದಾದಾಗ ನನಗೆ ಈ ಹಿಮಾಲಯವನ್ನು ಏರುವುದಕ್ಕೆ ಬೇಕಾದ ಶಕ್ತಿ ಮತ್ತು ಹುರುಪು ಬಂತು” ಎಂದು ತಿಳಿಸಿದರು. ನಮ್ಮ ಅರಿವನ್ನು ಹಿಗ್ಗಿಸಿ ನಮ್ಮ ವರ್ಣ ವರ್ಗಗಳ ಮಿತಿಗಳನ್ನು ವಿಸ್ತರಿಸಿ, ನಮ್ಮ ಅಸ್ಮಿತೆಗಳ ಎಲ್ಲೆಗಳ ಮಾರುವಂತೆ ನಮ್ಮನ್ನು ಬೆಳೆಸುವ ‘ಎಪಿಕ್ ನೋವೆಲ್’ ಇದು. ಇಂತಹ ಮೇರು ಕೃತಿಯನ್ನು ಅನುವಾದ ಮಾಡುವ ಅವಕಾಶ, ಸವಾಲು, ಸಂತೋಷ ನನ್ನಗಾಗಿದ್ದು, ಇದಕ್ಕಾಗಿ, ನಾನು ಚಿರಋಣಿ ಎಂದು ವನಮಾಲ ಹೇಳಿದರು.

Bride in the Hills,ಕುವೆಂಪು ಕಾದಂಬರಿ,ಮಲೆಗಳಲ್ಲಿ ಮದುಮಗಳು, ಇಂಗ್ಲಿಷ್‌,ಅನುವಾದ, Novel, English, Translation,

 

1967ರಲ್ಲಿ ಕನ್ನಡದಲ್ಲಿ ಪ್ರಕಟವಾದ “ಮಲೆಗಳಲ್ಲಿ ಮದುಮಗಳು” ಕಾದಂಬರಿಯನ್ನು ಈ ಹಿಂದೆ 2020ರಲ್ಲಿ ‘ಕುವೆಂಪು ಪ್ರತಿಷ್ಠಾನ’ವು ದಿ ಬ್ರೈಡ್ ಇನ್ ದಿ ರೈನಿ ಮೌಂಟೈನ್ಸ್‌ (The Bride in the Rainy Mountains) ಎಂಬ ಶೀರ್ಷಿಕೆಯಲ್ಲಿ ಪ್ರಕಟಿಸಿತ್ತು. ಅದನ್ನು ಡಾ. ಕೆ.ಎಂ. ಶ್ರೀನಿವಾಸ ಗೌಡ ಮತ್ತು ಜಿ.ಎಸ್ ಶ್ರೀಕಾಂತ ಮೂರ್ತಿ ಇಂಗ್ಲಿಷ್‌ಗೆ ಅನುವಾದಿಸಿದ್ದರು. ಪೆಂಗ್ವಿನ್ ಪ್ರಕಟಿಸಿರುವ, ವನಮಾಲ ವಿಶ್ವನಾಥ್ ಅನುವಾದಿಸಿರುವ ‘ಬ್ರೈಡ್ ಇನ್‌ ದಿ ಹಿಲ್ಸ್‌’ (Bride in the Hills) ಇಂಗ್ಲಿಷ್ ಆವೃತ್ತಿಯ ಬೆಲೆ 799/- ಆಗಿದ್ದು ಪುಸ್ತಕದ ಅಂಗಡಿಗಳನ್ನು ದೊರೆಯುತ್ತದೆ.

ವಿಡಿಯೊ ನೋಡಿ: ‘ಗಾಂಧೀಜಿ ಹಂತಕ ಗೋಡ್ಸೆ ಎಂಬ ವ್ಯಕ್ತಿ ಮತ್ತು ಆತನ ದೃಷ್ಟಿಯ ಭಾರತ’ ಪುಸ್ತಕ ಬಿಡುಗಡೆ: ದಿನೇಶ್ ಗುಂಡೂರಾವ್ ಅವರ ಮಾತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...

ಎಸ್‌ಐಆರ್‌ನ ನಿಜವಾದ ಉದ್ದೇಶ ಎನ್‌ಆರ್‌ಸಿ : ಮಮತಾ ಬ್ಯಾನರ್ಜಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಹಿಂದಿನ ಕೇಂದ್ರ ಸರ್ಕಾರದ ನಿಜವಾದ ಉದ್ದೇಶ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮಾಡುವುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ನವೆಂಬರ್...

ಬೆಂಗಳೂರು ಚಲೋ: ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಸಚಿವ ಮಹದೇವಪ್ಪ: ಸಿಎಂ ಜೊತೆ ಚರ್ಚಿಸುವ ಭರವಸೆ 

ಕೇಂದ್ರ ಸರ್ಕಾರದ ರೈತ, ಕಾರ್ಮಿಕ, ಜನವಿರೋಧಿ ನೀತಿಗಳು ಹಾಗೂ ರಾಜ್ಯ ಸರ್ಕಾರದ ನಿರ್ಲಕ್ಷ್ಯ, ನಿರ್ಲಜ್ಜ ಧೋರಣೆಯ ವಿರುದ್ಧ ಸಂಯುಕ್ತ ಹೋರಾಟ ಕರ್ನಾಟಕದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ‘ಬೆಂಗಳೂರು ಚಲೋ’...