Homeಮುಖಪುಟಲೆಬನಾನ್ ಮೇಲೆ ದಾಳಿ ಮುಂದುವರೆಸಿದ ಇಸ್ರೇಲ್ : ಮತ್ತೆ 37 ಮಂದಿ ಸಾವು, ಹಲವರಿಗೆ ಗಾಯ

ಲೆಬನಾನ್ ಮೇಲೆ ದಾಳಿ ಮುಂದುವರೆಸಿದ ಇಸ್ರೇಲ್ : ಮತ್ತೆ 37 ಮಂದಿ ಸಾವು, ಹಲವರಿಗೆ ಗಾಯ

ಕಳೆದ 24 ಗಂಟೆಯಲ್ಲಿ ಬೈರುತ್, ಗಾಝಾ, ಪಶ್ಚಿಮ ದಂಡೆ ಮೇಲೆ ಆಕ್ರಮಣ

- Advertisement -
- Advertisement -

ಲೆಬನಾನ್, ಗಾಝಾ ಮತ್ತು ಆಕ್ರಮಿತ ಪಶ್ಚಿಮ ದಂಡೆಯಲ್ಲಿ ಇಸ್ರೇಲಿ ಪಡೆಗಳ ಆಕ್ರಮಣ ಮುಂದುವರೆದಿದೆ.

ಕಳೆದ 24 ಗಂಟೆಗಳಲ್ಲಿ ಲೆಬನಾನ್ ಮೇಲೆ ಇಸ್ರೇಲ್ ನಡೆಸಿದ ದಾಳಿಗಳಲ್ಲಿ 37 ಮಂದಿ ಸಾವನ್ನಪ್ಪಿದ್ದು, 151 ಮಂದಿ ಗಾಯಗೊಂಡಿದ್ದಾರೆ ಎಂದು ಲೆಬನಾನಿನ ಆರೋಗ್ಯ ಸಚಿವಾಲಯ ತಿಳಿಸಿದೆ.

ಲೆಬಾನಾನ್ ರಾಜಧಾನಿ ಬೈರುತ್‌ನ ಜನನಿಬಿಡ ಧೈಯಾ ಪ್ರದೇಶದಲ್ಲಿ ಶುಕ್ರವಾರ ತಡರಾತ್ರಿ ಇಸ್ರೇಲ್ ಸರಣಿ ಬಾಂಬ್ ದಾಳಿ ನಡೆಸಿದೆ. ಕಳೆದ ವರ್ಷದ ಅಕ್ಟೋಬರ್‌ನಲ್ಲಿ ಹೆಜ್ಬುಲ್ಲಾ-ಇಸ್ರೇಲ್ ಸಂಘರ್ಷ ಪ್ರಾರಂಭಗೊಂಡ ಬಳಿಕ ನಡೆದ ಅತೀ ದೊಡ್ಡ ದಾಳಿ ಇದು ಎನ್ನಲಾಗಿದೆ.

ಇತ್ತೀಚೆಗೆ ಹತ್ಯೆಗೀಡಾದ ಹೆಜ್ಬುಲ್ಲಾ ನಾಯಕ ಹಸನ್ ನಸ್ರಲ್ಲಾ ಅವರ ಸೋಧರ ಸಂಬಂಧಿ ಹಾಗೂ ನಸ್ರಲಾ ಅವರ ಉತ್ತರಾಧಿಕಾರಿ ಎಂದು ಹೇಳಲಾಗುತ್ತಿರುವ ಸೈಫುದ್ದೀನ್ ಗುರಿಯಾಗಿಸಿಕೊಂಡು ಬೈರುತ್‌ನ ಭೂಗತ ಬಂಕರ್ ಮೇಲೆ ಇಸ್ರೇಲ್ ದಾಳಿ ನಡೆಸಿದೆ.

ಮತ್ತೊಂದೆಡೆ ಆಕ್ರಮಿತ ಪಶ್ಚಿಮ ದಂಡೆಯಲ್ಲಿರುವ ತುಲ್ಕರೆಮ್ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲಿ ಜೆಟ್ ಫೈಟರ್ ನಡೆಸಿದ ದಾಳಿಯಲ್ಲಿ ಕನಿಷ್ಠ 18 ಪ್ಯಾಲೆಸ್ತೀನಿಯರು ಸಾವನ್ನಪ್ಪಿದ್ದಾರೆ.

ಎರಡು ದಿನಗಳಲ್ಲಿ ಗಾಝಾ ಪಟ್ಟಿಯಲ್ಲಿ ಇಸ್ರೇಲಿ ಪಡೆಗಳು ಮೂರು ಯುಎನ್ ನಡೆಸುವ ಶಾಲಾ ಆಶ್ರಯಗಳ ಮೇಲೆ ದಾಳಿ ನಡೆಸಿದ್ದರಿಂದ ಕನಿಷ್ಠ 21 ಪ್ಯಾಲೆಸ್ತೀನಿಯರು ಸಾವನ್ನಪ್ಪಿದ್ದಾರೆ ಪ್ಯಾಲೆಸ್ತೀನ್ ನಿರಾಶ್ರಿತರಿಗಾಗಿ ಕೆಲಸ ಮಾಡುವ ವಿಶ್ವ ಸಂಸ್ಥೆಯ ಏಜೆನ್ಸಿ ಯುಎನ್‌ಆರ್‌ಡಬ್ಲ್ಯೂಎನ ಮುಖ್ಯಸ್ಥರು ತಿಳಿಸಿದ್ದಾರೆ.

ಇರಾನ್ ಪ್ರಾದೇಶಿಕ ಯುದ್ಧವನ್ನು ಬಯಸುವುದಿಲ್ಲ ಎಂದು ಕತಾರ್ ಮೂಲಕ ವಾಷಿಂಗ್ಟನ್‌ಗೆ ಸಂದೇಶವನ್ನು ರವಾನಿಸಿದೆ. ಆದರೆ ‘ಏಕಪಕ್ಷೀಯ ಸ್ವಯಂ ಸಂಯಮದ ಹಂತವು ಕೊನೆಗೊಂಡಿದೆ’ ಎಂದು ತಿಳಿಸಿದೆ ಅಲ್ ಜಝೀರಾ ವರದಿ ಮಾಡಿದೆ.

ಕಳೆದ ವರ್ಷ ಅಕ್ಟೋಬರ್‌ನಿಂದ ಗಾಝಾದಲ್ಲಿ ಇಸ್ರೇಲ್ ನಡೆಸುತ್ತಿರುವ ಆಕ್ರಮಣದಲ್ಲಿ ಇದುವರೆಗೆ 41,788 ಜನರು ಸಾವನ್ನಪ್ಪಿದ್ದಾರೆ ಮತ್ತು 96,794 ಜನರು ಗಾಯಗೊಂಡಿದ್ದಾರೆ. ಇದಕ್ಕೂ ಮುನ್ನ ಇಸ್ರೇಲ್‌ ರಾಜಧಾನಿ ಟೆಲ್‌ ಅವೀವ್ ಮೇಲೆ ಹಮಾಸ್ ನಡೆಸಿದ ದಾಳಿಯಲ್ಲಿ 1,139 ಜನರು ಸಾವನ್ನಪ್ಪಿದ್ದರು ಮತ್ತು 200ಕ್ಕೂ ಹೆಚ್ಚು ಜನರನ್ನು ಹಮಾಸ್ ಒತ್ತೆಯಾಳಾಗಿಟ್ಟುಕೊಂಡಿತ್ತು.

ಇದನ್ನೂ ಓದಿ : ಉತ್ತರ ಪ್ರದೇಶ: ಮಿರ್ಜಾಪುರದಲ್ಲಿ ಟ್ರಕ್-ಟ್ರಾಕ್ಟರ್ ಡಿಕ್ಕಿಯಿಂದ 10 ಮಂದಿ ಕಾರ್ಮಿಕರು ಸಾವು, ಮೂವರಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...