Homeದಲಿತ್ ಫೈಲ್ಸ್ಗ್ರಾಮದ ಮುಖ್ಯ ರಸ್ತೆಯಲ್ಲಿ ದಲಿತ ಮಹಿಳೆಯ ಶವಯಾತ್ರೆಗೆ ಸವರ್ಣೀಯರಿಂದ ಅಡ್ಡಿ : ಜಾತಿ ದೌರ್ಜನ್ಯಕ್ಕೆ ಪೊಲೀಸರ...

ಗ್ರಾಮದ ಮುಖ್ಯ ರಸ್ತೆಯಲ್ಲಿ ದಲಿತ ಮಹಿಳೆಯ ಶವಯಾತ್ರೆಗೆ ಸವರ್ಣೀಯರಿಂದ ಅಡ್ಡಿ : ಜಾತಿ ದೌರ್ಜನ್ಯಕ್ಕೆ ಪೊಲೀಸರ ಬೆಂಬಲ ಆರೋಪ

- Advertisement -
- Advertisement -

ತಮಿಳುನಾಡಿನ ತಿರುವಣ್ಣಾಮಲೈನಿಂದ ಸುಮಾರು 45 ಕಿಲೋಮೀಟರ್ ದೂರದಲ್ಲಿರುವ ಮೋತಕ್ಕಲ್ ಗ್ರಾಮದಲ್ಲಿ ಕಳೆದ ಸೋಮವಾರ (ಸೆ.30) ದಲಿತ ಮಹಿಳೆಯೊಬ್ಬರ ಶವಯಾತ್ರೆಗೆ ಪ್ರಬಲ ಜಾತಿಯ ಗುಂಪು ಆಕ್ಷೇಪ ವ್ಯಕ್ತಪಡಿಸಿದೆ. ತಮ್ಮ ಪ್ರದೇಶದ ಮಾರ್ಗದ ದುಸ್ಥಿತಿಯಿಂದಾಗಿ ಗ್ರಾಮದ ಮುಖ್ಯರಸ್ತೆಯ ಮೂಲಕ ಮೃತದೇಹ ಸಾಗಿಸಲು ದಲಿತ ಕುಟುಂಬ ನಿರ್ಧರಿಸಿತ್ತು ಎಂದು ದಿ ಮೂಕನಾಯಕ ವರದಿ ಮಾಡಿದೆ.

ವರದಿಯ ಪ್ರಕಾರ, 70 ವರ್ಷದ ದಲಿತ ಮಹಿಳೆ ಎಸ್.ಕಿಲಿಯಾಂಬಾಳ್ ಅವರು ವಯೋಸಹಜ ಅನಾರೋಗ್ಯದಿಂದ ಭಾನುವಾರ ಸಂಜೆ ದಲಿತ ಕಾಲೋನಿಯಲ್ಲಿರುವ ತಮ್ಮ ಮಗಳ ಮನೆಯಲ್ಲಿ ಸಾವನ್ನಪ್ಪಿದ್ದರು. ದಲಿತರ ಸ್ಮಶಾನ ಊರ ಹೊರಗೆ ಇರುವುದರಿಂದ ಅಲ್ಲಿಗೆ ಶವ ಕೊಂಡೊಯ್ಯಬೇಕಿತ್ತು. ಗ್ರಾಮದಲ್ಲಿ ದಲಿತರಿಗೆ ಮತ್ತು ಸವರ್ಣಿಯರಿಗೆ ಶವಯಾತ್ರೆ ನಡೆಸಲು ಪ್ರತ್ಯೇಕ ರಸ್ತೆಗಳಿವೆ. ದಲಿತ ಕೇರಿಯ ರಸ್ತೆ ದುಸ್ಥಿಯಿಂದ ಕೂಡಿದೆ. ಹಾಗಾಗಿ, ಸೋಮವಾರ ದಲಿತರು ಗ್ರಾಮದ ಮುಖ್ಯ ರಸ್ತೆಯಲ್ಲಿ ಶವಯಾತ್ರೆ ನಡೆಸಲು ಮುಂದಾಗಿದ್ದರು. ಈ ವೇಳೆ ಪ್ರಬಲ ಜಾತಿಯವರು ಅಡ್ಡಿಪಡಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಸಂಜೆ 4 ಗಂಟೆ ಸುಮಾರಿಗೆ ಗ್ರಾಮದ ಮುಖ್ಯರಸ್ತೆಯಲ್ಲಿ ಶವಯಾತ್ರೆ ನಡೆಸಲು ದಲಿತರು ನಿರ್ಧರಿಸಿದ್ದರು. ಆದರೆ ಪ್ರಬಲ ಜಾತಿಯವರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪಂಚಾಯಿತಿ ಅಧಿಕಾರಿಗಳಿಂದ ಮಾಹಿತಿ ಪಡೆದ ಪೊಲೀಸ್ ತಂಡ ಗ್ರಾಮಕ್ಕೆ ದೌಡಾಯಿಸಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆದಿದೆ ಎಂದು ವರದಿ ವಿವರಿಸಿದೆ.

ತಿರುವಣ್ಣಾಮಲೈನ ಕಂದಾಯ ವಿಭಾಗೀಯ ಅಧಿಕಾರಿ (ಆರ್‌ಡಿಒ) ಆರ್.ಮಂದಾಕಿನಿ ನೇತೃತ್ವದಲ್ಲಿ, ಕಂದಾಯ ಅಧಿಕಾರಿಗಳ ತಂಡವು ಗ್ರಾಮದಲ್ಲಿ ಪ್ರಬಲ ಜಾತಿ ಮತ್ತು ದಲಿತರ ನಡುವೆ ಶಾಂತಿ ಮಾತುಕತೆಗಳನ್ನು ಆಯೋಜಿಸಿತ್ತು. ಸುಮಾರು ಐದು ಗಂಟೆಗಳ ಚರ್ಚೆಯ ನಂತರ, ದಲಿತರು ತಮ್ಮ ಸಾಂಪ್ರದಾಯಿಕ ಮಾರ್ಗವನ್ನು ಬಳಸಲು ಒಪ್ಪಿಕೊಂಡರು. ಸ್ಥಳೀಯ ಆಡಳಿತ ದಲಿತ ಕೇರಿಯ ಮಾರ್ಗವನ್ನು ದುರಸ್ಥಿಗೊಳಿಸಿದ ಬಳಿಕ, ಸೋಮವಾರ ರಾತ್ರಿ ಮಹಿಳೆಯ ಅಂತ್ಯಕ್ರಿಯೆ ನಡೆಸಲಾಗಿದೆ.

ಮೋತಕ್ಕಲ್ ತಿರುವಣ್ಣಾಮಲೈ ಮತ್ತು ಧರ್ಮಪುರಿ ಜಿಲ್ಲೆಗೆ ಸಂಪರ್ಕ ಕಲ್ಪಿಸುವ ಗಡಿ ಗ್ರಾಮವಾಗಿದೆ. ಇದು ತಂಡ್ರಂಪಟ್ಟು ಪಂಚಾಯತ್ ಯೂನಿಯನ್ ವ್ಯಾಪ್ತಿಗೆ ಬರುತ್ತದೆ. ಗ್ರಾಮದ ಪ್ರಬಲ ಜಾತಿಯಲ್ಲಿ ಹೆಚ್ಚಿನವರು ಭೂಮಾಲೀಕರಾಗಿದ್ದಾರೆ. ದಲಿತರು ಅವರ ಜಮೀನುಗಳಲ್ಲಿ ವರ್ಷಗಳಿಂದ ಕೃಷಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದಾರೆ.

ಸಿಪಿಐ(ಎಂ) ಕಾರ್ಯಕರ್ತ ಆರ್.ಅಣ್ಣಾಮಲೈ ಮಾಧ್ಯಮದವರೊಂದಿಗೆ ಮಾತನಾಡಿ, “ಈ ಗ್ರಾಮದಲ್ಲಿ ಜಾತಿ ಆಧಾರಿತ ತಾರತಮ್ಯ ಸಾಮಾನ್ಯವಾಗಿದೆ. ಹಿಂದೆ ದಲಿತರಿಗೆ ಪ್ರಬಲ ಜಾತಿಯವರ ಸಲೂನ್‌ಗಳಲ್ಲಿ ಕ್ಷೌರ ಮಾಡಿಸಿಕೊಳ್ಳಲು ಅವಕಾಶವಿರಲಿಲ್ಲ. ದಲಿತರಿಗೆ ಮತ್ತು ಪ್ರಬಲರಿಗೆ ಪ್ರತ್ಯೇಕ ಟೀ ಕಪ್‌ಗಳನ್ನು ಬಳಸಲಾಗುತ್ತಿತ್ತು” ಎಂದು ತಿಳಿಸಿದ್ದಾರೆ.

ಬಸ್‌ಗಾಗಿ ಕಾಯುವ ದಲಿತರು ಪ್ರಬಲ ಜಾತಿಯವರು ನಡೆಸುತ್ತಿರುವ ಸಣ್ಣ ಅಂಗಡಿಗಳ ಬಳಿಯ ಮರಗಳ ನೆರಳಿನಲ್ಲಿ ಕೂಡ ನಿಲ್ಲುವಂತಿಲ್ಲ. ದಲಿತರು ಬಿಸಿಲಿನಲ್ಲೇ ನಿಲ್ಲುವಂತೆ ಒತ್ತಾಯಿಸಲಾಗುತ್ತಿದೆ ಎಂದು ಗ್ರಾಮದ ನಿವಾಸಿಗಳು ಹೇಳಿರುವುದಾಗಿ ವರದಿಯಾಗಿದೆ.

ಶವಯಾತ್ರೆಗೆ ಅಡ್ಡಿಪಡಿಸಿದ ಘಟನೆಯ ನಂತರ ಜಿಲ್ಲಾಡಳಿತ ಮತ್ತು ಪೊಲೀಸ್ ಅಧಿಕಾರಿಗಳು ಗ್ರಾಮದಲ್ಲಿ ಜಾತಿ ಆಧಾರಿತ ತಾರತಮ್ಯ ಕೊನೆಗೊಳಿಸಲು ಎರಡು ಸಮುದಾಯಗಳ ನಡುವೆ ಸರಣಿ ಮಾತುಕತೆಗಳನ್ನು ಆಯೋಜಿಸಿದ್ದಾರೆ. ಜಿಲ್ಲಾಧಿಕಾರಿ ಡಿ.ಭಾಸ್ಕರ ಪಾಂಡಿಯನ್ ಮಾತನಾಡಿ, ಗ್ರಾಮದಲ್ಲಿ ಜಾತಿ ತಾರತಮ್ಯ ಕುರಿತು ತನಿಖೆ ನಡೆಸಲಾಗುವುದು ಎಂದಿದ್ದಾರೆ.

ಮೊತಕ್ಕಲ್ ಗ್ರಾಮದಲ್ಲಿ ಆದಿ ದ್ರಾವಿಡರ್ ಸಮುದಾಯದ 500ಕ್ಕೂ ಹೆಚ್ಚು ಅರ್ಹ ಮತದಾರರು ಈ ವರ್ಷ ಲೋಕಸಭೆ ಚುನಾವಣೆಯನ್ನು ಬಹಿಷ್ಕರಿಸುವ ಎಚ್ಚರಿಕೆ ನೀಡಿದ್ದರು. ಮೂಲ ಸೌಕರ್ಯಗಳ ಕೊರತೆ ಹಾಗೂ ಜಾತಿ ತಾರತಮ್ಯದಿಂದ ದಲಿತ ಸಮುದಾಯ ಹಲವು ವರ್ಷಗಳಿಂದ ನರಳುತ್ತಿದೆ ಎಂದು ದಲಿತ ಹಕ್ಕುಗಳ ಹೋರಾಟಗಾರ್ತಿ ಮತ್ತು ಲೇಖಕಿ ಶಾಲಿನ್ ಮರಿಯಾ ಲಾರೆನ್ಸ್ ಅವರನ್ನು ಉಲ್ಲೇಖಿಸಿ ಮೂಕನಾಯಕ ವರದಿ ಹೇಳಿದೆ.

ದಲಿತರಿಗೆ ಸ್ಮಶಾನಕ್ಕೆ ತೆರಳಲು ಸರಿಯಾದ ರಸ್ತೆಯೇ ಇಲ್ಲ. ಸಮುದಾಯವು ಅನೇಕ ಪ್ರಬಲ ಜಾತಿ ಮತ್ತು ಪಂಚಾಯತ್ ಅಧ್ಯಕ್ಷರಿಂದ ತಾರತಮ್ಯವನ್ನು ಎದುರಿಸಿದೆ. ಸ್ಮಶಾನಕ್ಕೆ ತೆರಳಲು ಪ್ರತ್ಯೇಕ ಮಾರ್ಗವನ್ನು ಬಳಸಬೇಕಾದ ಅನಿವಾರ್ಯತೆ ಹಲವು ವರ್ಷಗಳಿಂದ ನಮಗೆ ಎದುರಾಗಿದೆ. ಆದರೆ, ಗ್ರಾಮದ ಪ್ರಬಲ ಜಾತಿಯವರು ಮುಖ್ಯ ರಸ್ತೆಯಲ್ಲಿ ಹೋಗಲು ಬಿಡುತ್ತಿಲ್ಲ. ಅವರಿಂದ ಭಯಭೀತರಾಗಿದ್ದೇವೆ” ಎಂದು ಗ್ರಾಮಸ್ಥರೊಬ್ಬರು ತಿಳಿಸಿದ್ದಾರೆ.

ತಮ್ಮ ಸಾಮೂಹಿಕ ಅತೃಪ್ತಿ ವ್ಯಕ್ತಪಡಿಸಲು ಲೋಕಸಭೆ ಚುನಾವಣೆಗೂ ಮುನ್ನ ಗ್ರಾಮಸ್ಥರು ಗ್ರಾಮದ ಪ್ರವೇಶ ದ್ವಾರ ಹಾಗೂ ಸುಮಾರು 200 ಮನೆಗಳ ಮುಂದೆ ಕಪ್ಪು ಬಾವುಟ ಹಾರಿಸಿದ್ದರು. ಗ್ರಾಮಸ್ಥರು ತಮ್ಮ ಬೇಡಿಕೆ ಹಾಗೂ ಕುಂದುಕೊರತೆಗಳ ಕುರಿತು ಜಿಲ್ಲಾಧಿಕಾರಿಗೆ ಮನವಿ ಪತ್ರವನ್ನೂ ಸಲ್ಲಿಸಿದ್ದರು ಎಂದು ಮೂಕನಾಯಕ ತಿಳಿಸಿದೆ.

ಜಾತಿ ದೌರ್ಜನ್ಯಕ್ಕೆ ಪೊಲೀಸರಿಂದ ಬೆಂಬಲ : ಆರೋಪ

ಗ್ರಾಮದ ಮುಖ್ಯ ರಸ್ತೆಯಲ್ಲಿ ದಲಿತ ಮಹಿಳೆಯ ಶವಯಾತ್ರೆಗೆ ಪ್ರಬಲರು ಅಡ್ಡಿಪಡಿಸಿದಾಗ ಸ್ಥಳಕ್ಕೆ ಬಂದ ಪೊಲೀಸರು, ಪ್ರಬಲರ ಮೇಲೆ ಕ್ರಮಕೈಗೊಂಡು ದಲಿತರಿಗೆ ಅವರ ಹಕ್ಕು ನೀಡಬೇಕಾಗಿತ್ತು. ಆದರೆ, ಡೆಪ್ಯುಟಿ ಸೂಪರಿಂಟೆಂಡೆಂಟ್ ಆಫ್ ಪೊಲೀಸ್ (ಡಿಎಸ್ಪಿ) ಮೃತ ಮಹಿಳೆಯ ಕುಟುಂಬಸ್ಥರಿಗೆ ಪರ್ಯಾಯ ಮಾರ್ಗದಲ್ಲಿ ಶವಯಾತ್ರೆ ನಡೆಸುವಂತೆ ಒತ್ತಾಯಿಸಿದ್ದಾರೆ. ಈ ಮೂಲಕ ಜಾತಿ ದೌರ್ಜನ್ಯವನ್ನು ಪೊಲೀಸರು ಬೆಂಬಲಿಸಿದ್ದಾರೆ. ಇದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯ ಸ್ಪಷ್ಟ ಉಲ್ಲಂಘನೆ ಎಂದು ದಲಿತ ಸಮುದಾಯ ಆರೋಪಿಸಿದೆ.

ಆಡಳಿತಾರೂಢ ಡಿಎಂಕೆಯ ಮಿತ್ರಪಕ್ಷವಾದ ವಿಡುತಲೈ ಚಿರುತೈಗಲ್ ಕಚ್ಚಿ (ವಿಸಿಕೆ) ವರದಿ ಕೂಡ ಈ ಆರೋಪವನ್ನು ಪುಷ್ಠೀಕರಿಸಿದೆ. ಘಟನಾ ಸ್ಥಳಕ್ಕೆ ಧಾವಿಸಿದ ವಿಸಿಕೆಯ ಸತ್ಯಶೋಧನಾ ತಂಡ, ತಿರುವಣ್ಣಾಮಲೈ ಶಾಸಕ ಮತ್ತು ಲೋಕೋಪಯೋಗಿ, ಹೆದ್ದಾರಿಗಳು ಮತ್ತು ಸಣ್ಣ ಬಂದರುಗಳ ಸಚಿವ ಎವಿ ವೇಲು ಅವರ ಆಪ್ತ ಎಂದು ಹೇಳಿಕೊಳ್ಳುವ ಸ್ಥಳೀಯ ಡಿಎಂಕೆ ನಾಯಕ ಕೂಡ ಇದಕ್ಕೆ ಸಹಕರಿಸಿದ್ದಾರೆ ಎಂದಿದೆ.

ಇದನ್ನೂ ಓದಿ : ತಮಿಳುನಾಡು : ಜಾತಿ ತಾರತಮ್ಯ ಪ್ರತಿಭಟಿಸಿದ ಬುಡಕಟ್ಟು ಪಂಚಾಯತ್ ಅಧ್ಯಕ್ಷೆ ವಿರುದ್ಧ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...