Homeಮುಖಪುಟಮೀಸಲಾತಿ ಮೇಲಿನ 50% ಮಿತಿ ತೆಗೆದುಹಾಕಿ: ಕೇಂದ್ರ ಸರ್ಕಾರಕ್ಕೆ ಶರದ್ ಪವಾರ್ ಆಗ್ರಹ

ಮೀಸಲಾತಿ ಮೇಲಿನ 50% ಮಿತಿ ತೆಗೆದುಹಾಕಿ: ಕೇಂದ್ರ ಸರ್ಕಾರಕ್ಕೆ ಶರದ್ ಪವಾರ್ ಆಗ್ರಹ

- Advertisement -
- Advertisement -

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳ ಮೀಸಲಾತಿಯಲ್ಲಿ ಅಸ್ತಿತ್ವದಲ್ಲಿರುವ 50% ಮಿತಿಯನ್ನು ಹೆಚ್ಚಿಸಲು ಸಾಂವಿಧಾನಿಕ ತಿದ್ದುಪಡಿಯನ್ನು ತರಬೇಕು ಎಂದು ಎನ್‌ಸಿಪಿ (ಎಸ್‌ಪಿ) ಅಧ್ಯಕ್ಷ ಶರದ್ ಪವಾರ್ ಶುಕ್ರವಾರ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಶರದ್, ಮೀಸಲಾತಿ ಆಂದೋಲನ ನಡೆಸುತ್ತಿರುವ ಮರಾಠರಿಗೆ ಮೀಸಲಾತಿ ನೀಡುವಾಗ, ಇತರ ಸಮುದಾಯಗಳಿಗೆ ಇರುವಂತಹ ಮಿತಿಗಳಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.ಮೀಸಲಾತಿಯ 50% ಮಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಪ್ರಸ್ತುತ, ಮೀಸಲಾತಿಯ ಮಿತಿ 50% ಆಗಿದ್ದು, ಆದರೆ ತಮಿಳುನಾಡಿನಲ್ಲಿ 78% ಮೀಸಲಾತಿಯಿದೆ. ಅವರಿಗೆ ಅದು ಸಾಧ್ಯವಾಗುವುದಾದರೆ ಮಹಾರಾಷ್ಟ್ರದಲ್ಲಿ 75% ದಷ್ಟು ಮೀಸಲಾತಿ ಏಕೆ ಸಾಧ್ಯವಿಲ್ಲ” ಎಂದು ಶರದ್‌ ಅವರು ಹೇಳಿದ್ದಾರೆ. ಕೇಂದ್ರ ಸರ್ಕಾರವೆ ಮುಂದಾಳತ್ವ ವಹಿಸಿ ಮೀಸಲಾತಿಯ ಮಿತಿ ಹೆಚ್ಚಿಸಲು ಸಂವಿಧಾನಿಕ ತಿದ್ದುಪಡಿ ತರಬೇಕು ಎಂದು ಅವರು ಹೇಳಿದ್ದು, ಈ ತಿದ್ದುಪಡಿಗೆ ಬೆಂಬಲ ನೀಡುತ್ತೇವೆ ಎಂದು ತಿಳಿಸಿದ್ದಾರೆ.

ಈ ವೇಳೆ ಮಾತನಾಡಿದ ಅವರು ಮಹಾರಾಷ್ಟ್ರ ವಿರೋಧ ಪಕ್ಷದ ಮಹಾ ವಿಕಾಸ್ ಅಘಾಡಿ (ಎಂವಿಎ) ನಾಯಕರ ನಡುವೆ ಸೀಟು ಹಂಚಿಕೆ ಮಾತುಕತೆ ಮುಂದಿನ ವಾರ ಮುಂದುವರಿಯಲಿದೆ ಎಂದು ಹೇಳಿದ್ದಾರೆ. “ಮಾತುಕತೆಗಳನ್ನು ಆದಷ್ಟು ಬೇಗ ಮುಗಿಸಲು ನಾನು ನಾಯಕರಿಗೆ ಸಲಹೆ ನೀಡುತ್ತೇನೆ. ಇದರಿಂದ ನಾವು ಬದಲಾವಣೆಯನ್ನು ಬಯಸುತ್ತಿರುವ ಜನರ ಬಳಿಗೆ ಬೇಗನೆ ಹೋಗಬಹುದು” ಎಂದು ಅವರು ಹೇಳಿದ್ದಾರೆ.

ಇದನ್ನೂಓದಿ: ‘ಇಸ್ರೇಲಿ ಟೈಮ್ ಮೆಷಿನ್’ ಬಳಿಸಿ ಯುವಕರನ್ನಾಗಿ ಮಾಡುತ್ತೇವೆ ಎಂದು ₹35 ಕೋಟಿ ವಂಚನೆ: ಉತ್ತರ ಪ್ರದೇಶದಲ್ಲಿ ಘಟನೆ!

ಎಂವಿಎ ಮೈತ್ರಿ ಪಕ್ಷವಾದ ಎನ್‌ಸಿಪಿ (ಎಸ್‌ಪಿ), ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ) ಮತ್ತು ಕಾಂಗ್ರೆಸ್ ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಒಗ್ಗಟ್ಟಾಗಿ ಹೋರಾಡಿ ಉತ್ತಮ ಫಲಿತಾಂಶ ಕಂಡುಕೊಂಡಿತ್ತು. ರಾಜ್ಯದ 48 ಸ್ಥಾನಗಳಲ್ಲಿ 30 ಸ್ಥಾನಗಳನ್ನು ಈ ಮೈತ್ರಿ ಗೆದ್ದಿವೆ. ನವೆಂಬರ್‌ನಲ್ಲಿ ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ನಡೆಯಲಿದೆ.ಮೀಸಲಾತಿಯ 50% ಮಿತಿ

ಸರ್ಕಾರದಲ್ಲಿ ಬದಲಾವಣೆ ಆಗಬೇಕು ಎಂದು ಜನರು ಸಕಾರಾತ್ಮಕ ಮಾತನಾಡುತ್ತಿದ್ದಾರೆ. ಎಂವಿಎ ಮೈತ್ರಿ ಅವರ ಭಾವನೆಗಳನ್ನು ಗೌರವಿಸಬೇಕು ಎಂದು ಶರದ್ ಹೇಳಿದ್ದಾರೆ. ಮರಾಠಿಗೆ ‘ಶಾಸ್ತ್ರೀಯ ಭಾಷೆ’ ಸ್ಥಾನಮಾನ ನೀಡುವ ನಿರ್ಧಾರವನ್ನು ಸ್ವಾಗತಿಸಿರುವ ಅವರು, ಇದಕ್ಕಾಗಿ ಕೇಂದ್ರ ಸರ್ಕಾರವನ್ನು ಅಭಿನಂದಿಸಿದ್ದಾರೆ.

ಆದಾಗ್ಯೂ, ಮರಾಠಿ ಕಲಿಯಲು ಆಯ್ಕೆ ಮಾಡುವ ವಿದ್ಯಾರ್ಥಿಗಳ ಸಂಖ್ಯೆ ಕ್ಷೀಣಿಸುತ್ತಿರುವ ಬಗ್ಗೆ ಮತ್ತು ರಾಜ್ಯದಲ್ಲಿ ಮರಾಠಿ ಭಾಷಾ ಶಾಲೆಗಳನ್ನು ಮುಚ್ಚುವ ಬಗ್ಗೆ ಮಹಾರಾಷ್ಟ್ರ ಸರ್ಕಾರವು ಕಾಳಜಿ ವಹಿಸಬೇಕು ಎಂದು ಪವಾರ್ ಹೇಳಿದ್ದಾರೆ. ಈ ಅಂಶಗಳ ಕುರಿತು ಚರ್ಚೆಗಳ ಅಗತ್ಯವಿದ್ದು, ಸಮಸ್ಯೆ ಪರಿಹಾರಕ್ಕೆ ಮಾರ್ಗೋಪಾಯ ಕಂಡುಕೊಳ್ಳಬೇಕಿದೆ ಎಂದು ಹೇಳಿದ್ದಾರೆ.

ಬದ್ಲಾಪುರ್ ಪ್ರಕರಣದಂತಹ ಘಟನೆಗಳ ಬಗ್ಗೆ ಮಹಾರಾಷ್ಟ್ರದಲ್ಲಿ ಆಕ್ರೋಶವಿದೆ. ಈ ಘಟನೆಯಲ್ಲಿ ಅರೋಪಿಯಾಗಿದ್ದ ಗುತ್ತಿಗೆ ಸ್ವೀಪರ್ ಅನ್ನು ಪೊಲೀಸರು ಶೂಟೌಟ್‌ ಮಾಡಿ ಹತ್ಯೆ ಮಾಡಿದ್ದರು. ಆರೋಪಿಯು ಶಾಲೆಯ ಆವರಣದಲ್ಲಿ ಇಬ್ಬರು ಶಿಶುವಿಹಾರದ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಅರೋಪಿಸಲಾಗಿತ್ತು. “ಮಹಿಳೆಯರಿಗೆ ಆರ್ಥಿಕ ನೆರವು ನೀಡಿದರೂ ಅವರ ಸುರಕ್ಷತೆ ಮತ್ತು ಭದ್ರತೆಯನ್ನು ಕಡೆಗಣಿಸಲಾಗುತ್ತಿದೆ ಎಂದು ಜನರು ಭಾವಿಸುತ್ತಿದ್ದಾರೆ” ಎಂದು ಶರದ್ ಹೇಳಿದ್ದಾರೆ.

ವಿಡಿಯೊ ನೋಡಿ: ‘ಅಂಬೇಡ್ಕರ್ ರಚಿಸಲಿದ್ದ ಸಂವಿಧಾನವನ್ನು ಗುರಿಯಾಗಿಸಿಕೊಂಡಿದ್ದವರ ಮೊದಲ ಗುಂಡು ಬಿದ್ದಿದ್ದು ಗಾಂಧಿ ಎದೆಗೆ’: ಎ ನಾರಾಯಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...