Homeಮುಖಪುಟಪುಣೆ | ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ; ಸ್ನೇಹಿತನಿಗೆ ಮೇಲೆ ಹಲ್ಲೆ

ಪುಣೆ | ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ; ಸ್ನೇಹಿತನಿಗೆ ಮೇಲೆ ಹಲ್ಲೆ

- Advertisement -
- Advertisement -

ಮಹಾರಾಷ್ಟ್ರದ ಪುಣೆಯ ಹೊರವಲಯದಲ್ಲಿ 21 ವರ್ಷದ ಯುವತಿಯ ಮೇಲೆ ಮೂವರು ವ್ಯಕ್ತಿಗಳು ಅತ್ಯಾಚಾರವೆಸಗಿದ್ದು, ಯುವತಿಯ ಸ್ನೇಹಿತವ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಗುರುವಾರ ರಾತ್ರಿ 11 ಗಂಟೆ ಸುಮಾರಿಗೆ ಬೋಪದೇವ್ ಘರ್ ಪ್ರದೇಶದಲ್ಲಿ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ ಎಂದು ಅವರು ಹೇಳಿದ್ದಾರೆ. ಪುಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಯುವತಿಯು ತನ್ನ ಸ್ನೇಹಿತನೊಂದಿಗೆ ಬೋಪದೇವ್ ಘರ್ ಪ್ರದೇಶಕ್ಕೆ ತೆರಳಿದ್ದಾಗ ಘಟನೆ ನಡೆದಿದೆ ಎಂದು ಕೊಂಡ್ವಾ ಪೊಲೀಸರು ಹೇಳಿದ್ದಾರೆ. “ಪ್ರಾಥಮಿಕ ವಿವರಗಳ ಪ್ರಕಾರ, ಯುವತಿ ಮತ್ತು ಆಕೆಯ ಸ್ನೇಹಿತ ಗುರುವಾರ ತಡರಾತ್ರಿ ಬೋಪ್‌ದೇವ್ ಘರ್ ಪ್ರದೇಶಕ್ಕೆ ಹೋಗಿದ್ದರು. ಅಲ್ಲಿ ಮೂವರು ಅಪರಿಚಿತರು ಯುವತಿಯ ಮೇಲೆ ಅತ್ಯಾಚಾರ ಎಸಗಿದ್ದಾರೆ” ಎಂದು ಪುಣೆ ಪೊಲೀಸರ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆಪಾದಿತ ಸಾಮೂಹಿಕ ಅತ್ಯಾಚಾರದ ಹಿಂದೆ ಇರುವವರನ್ನು ಪತ್ತೆಹಚ್ಚಲು ಹತ್ತು ಪೊಲೀಸ್ ತಂಡಗಳನ್ನು ರಚಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಹೊರ ವಲಯದಲ್ಲಿ ಈ ಘಟನೆ ನಡೆದಿದ್ದು ಈ ವೇಳೆ ಮೂವರು ದುಷ್ಕರ್ಮಿಗಳು ಯುವತಿಯ ಸ್ನೇಹಿತನ ಮೇಲೂ ಹಲ್ಲೆ ನಡೆಸಿದ್ದಾರೆ ಎಂದು ಕೊಂಧ್ವಾ ಪೊಲೀಸ್ ಠಾಣೆಯ ಮತ್ತೊಬ್ಬ ಅಧಿಕಾರಿ ತಿಳಿಸಿದ್ದಾರೆ.

ಇದನ್ನೂಓದಿ: ಓಲಾ ಕ್ಯಾಬ್‌ನಲ್ಲಿ ಲೈಂಗಿಕ ಕಿರುಕುಳ ಪ್ರಕರಣ : ಸಂತ್ರಸ್ತೆಗೆ ಪರಿಹಾರ ಪಾವತಿಸುವ ಆದೇಶಕ್ಕೆ ಹೈಕೋರ್ಟ್ ತಡೆ

ಪುಣೆ: ಶಾಲಾ ವ್ಯಾನ್‌ನಲ್ಲಿ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ

ಪುಣೆ ನಗರದಲ್ಲಿ ನಡೆದ ಪ್ರತ್ಯೇಕ ಘಟನೆಯೊಂದರಲ್ಲಿ, ಆರು ವರ್ಷದ ಇಬ್ಬರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಶಾಲಾ ವ್ಯಾನ್‌ನ 45 ವರ್ಷದ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ಸೆಪ್ಟೆಂಬರ್‌ 30ರಂದು ನಗರದ ವನವಾಡಿ ಪ್ರದೇಶದಲ್ಲಿ ಬಾಲಕಿಯರು ಶಾಲೆಗೆ ತೆರಳಿ ಮನೆಗೆ ಮರಳುತ್ತಿದ್ದ ವೇಳೆ ವ್ಯಾನ್‌ನಲ್ಲಿ ಈ ಘಟನೆ ನಡೆದಿದೆ. ಈ ವೇಳೆ ವ್ಯಾನ್‌ನಲ್ಲಿ ಮಹಿಳಾ ಅಟೆಂಡೆಂಟ್ ಇದ್ದರೇ ಎಂಬುದನ್ನು ಪತ್ತೆ ಹಚ್ಚಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಆರೋಪಿಯು ಇಬ್ಬರು ಬಾಲಕಿಯರ ಖಾಸಗಿ ಭಾಗಗಳನ್ನು ಮುಟ್ಟಿದ್ದಾರೆ ಎಂದು ಆರೋಪಿಸಲಾಗಿದ್ದು, ಸಂತ್ರಸ್ತೆ ವಿದ್ಯಾರ್ಥಿನಿಯೊಬ್ಬರು ಈ ಘಟನೆಯನ್ನು ತನ್ನ ತಾಯಿಗೆ ಘಟನೆಯನ್ನು ವಿವರಿಸಿದ್ದಾರೆ. ಇದರ ನಂತರ ಅವರು ಪೊಲೀಸರಿಗೆ ಮಾಹಿತಿ ನೀಡಿ ಪ್ರಕರಣ ದಾಖಲಿಸಿದ್ದಾರೆ ಎಂದು ವಾನ್ವಾಡಿ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ.

ಇದನ್ನೂಓದಿ: ಬಿಜೆಪಿ ಹರಿಯಾಣದಲ್ಲಿ ‘ನಿರುದ್ಯೋಗ ರೋಗ’ ಹರಡಿದೆ | ರಾಹುಲ್ ಗಾಂಧಿ

ಬುಧವಾರ ಪೊಲೀಸ್ ದೂರು ದಾಖಲಾಗಿದ್ದು, ಆರೋಪಿ ಸಂಜಯ್ ರೆಡ್ಡಿ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್‌) ಸೆಕ್ಷನ್ 64 (ಅತ್ಯಾಚಾರಕ್ಕೆ ಶಿಕ್ಷೆ) ಮತ್ತು 65 (2) (ಹನ್ನೆರಡು ವರ್ಷದೊಳಗಿನ ಮಹಿಳೆಯ ಮೇಲಿನ ಅತ್ಯಾಚಾರಕ್ಕೆ ಶಿಕ್ಷೆ) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (POCSO) ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ.

ಸ್ಥಳೀಯ ನ್ಯಾಯಾಲಯವು ರೆಡ್ಡಿ ಅವರನ್ನು ಅಕ್ಟೋಬರ್ 8 ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ನಾಗ್ಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ಪ್ರಕರಣದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದು, ಅತ್ಯಾಚಾರ ಮತ್ತು ಇತರ ಅಪರಾಧಗಳಿಗಾಗಿ BNS ಮತ್ತು POCSO ಅಡಿಯಲ್ಲಿ ಸಂಬಂಧಿತ ಸೆಕ್ಷನ್‌ಗಳನ್ನು ಅನ್ವಯಿಸಲಾಗಿದೆ ಎಂದು ಹೇಳಿದ್ದಾರೆ. ಶಾಲೆಯ ಅಧಿಕಾರಿಗಳನ್ನು ವಿಚಾರಣೆಗೆ ಕರೆಯಲಾಗಿದ್ದು, ಅವರೂ ತಪ್ಪೆಸಗಿದ್ದರೆ ಅದನ್ನು ಪರಿಶೀಲಿಸಲಾಗುವುದು ಎಂದು ಅವರು ಹೇಳಿದ್ದಾರೆ.

ವಿಡಿಯೊ ನೋಡಿ: ‘ಗಾಂಧೀಜಿ ಹಂತಕ ಗೋಡ್ಸೆ ಎಂಬ ವ್ಯಕ್ತಿ ಮತ್ತು ಆತನ ದೃಷ್ಟಿಯ ಭಾರತ’ ಪುಸ್ತಕ ಬಿಡುಗಡೆ: ದಿನೇಶ್ ಗುಂಡೂರಾವ್ ಅವರ ಮಾತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾಕ್‌ನಲ್ಲಿ ಅಪಹರಣಕ್ಕೊಳಗಾಗಿದ್ದ ಅಮೆರಿಕದ ಪತ್ರಕರ್ತೆ ಬಿಡುಗಡೆ

ಇರಾಕಿನ ರಾಜಧಾನಿ ಬಾಗ್ದಾದ್‌ನಲ್ಲಿ ಒಂದು ವಾರದ ಹಿಂದೆ ಅಪಹರಿಸಲ್ಪಟ್ಟಿದ್ದ ಅಮೆರಿಕದ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಬಿಡುಗಡೆ ಮಾಡಲಾಗಿದೆ ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ತಿಳಿಸಿದ್ದಾರೆ. ಮಾರ್ಚ್ 31ರಂದು ಶೆಲ್ಲಿ...

ಅಸ್ಸಾಂನ ನಾಗಾಂವ್‌ನಲ್ಲಿ ದರೋಡೆ ಶಂಕೆಯ ಮೇಲೆ ಗುಂಪು ದಾಳಿ: ಮೂವರು ಮುಸ್ಲಿಂ ಪುರುಷರು ಸಾವು

ದರೋಡೆಯಲ್ಲಿ ಭಾಗಿಯಾಗಿದ್ದಾರೆಂದು ಶಂಕಿಸಿ ಅಸ್ಸಾಂನ ನಾಗಾಂವ್ ಜಿಲ್ಲೆಯಲ್ಲಿ ಸೋಮವಾರ ಮುಂಜಾನೆ ನಡೆದ ಗುಂಪು ದಾಳಿಯಲ್ಲಿ ಮೂವರು ಮುಸ್ಲಿಂ ಪುರುಷರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಸೈಫುಲ್ಲಾ, ಅಜೀಬುರ್ ಅಲಿಯಾಸ್ ಖೈರುಲ್ ಮತ್ತು ಇನಾಮುಲ್...

ಏ.10ರಂದು ಇಸ್ಲಾಮಾಬಾದ್‌ನಲ್ಲಿ ಅಮೆರಿಕ-ಇರಾನ್ ಶಾಂತಿ ಮಾತುಕತೆ : 10 ಷರತ್ತುಗಳನ್ನು ಮುಂದಿಟ್ಟ ಇರಾನ್

ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಪಾಕಿಸ್ತಾನದ ಮಧ್ಯಸ್ಥಿಕೆಯಲ್ಲಿ ಇಸ್ಲಾಮಾಬಾದ್‌ನಲ್ಲಿ ಶಾಂತಿ ಮಾತುಕತೆ ಆಯೋಜಿಸಲಾಗಿದೆ. ಅಮೆರಿಕ ಮತ್ತು ಇರಾನ್ ನಿಯೋಗಗಳ ನಡುವಿನ ಈ ಮಹತ್ವದ ಮಾತುಕತೆಯು 2026ರ ಏಪ್ರಿಲ್ 10ರಂದು (ಶುಕ್ರವಾರ) ಇಸ್ಲಾಮಾಬಾದ್‌ನಲ್ಲಿ ನಡೆಯಲಿದೆ ಎಂದು ಪಾಕಿಸ್ತಾನದ...

ಕದನ ವಿರಾಮ | ಟ್ರಂಪ್ ನಿರ್ಧಾರಕ್ಕೆ ಇಸ್ರೇಲ್ ಬೆಂಬಲ; ಲೆಬನಾನ್‌ಗೆ ಅನ್ವಯಿಸುವುದಿಲ್ಲ ಎಂದ ನೆತನ್ಯಾಹು!

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿರುವ ಎರಡು ವಾರಗಳ ಕದನ ವಿರಾಮಕ್ಕೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಬೆಂಬಲ ಸೂಚಿಸಿದ್ದಾರೆ. ಆದರೆ, ಈ ಕದನ ವಿರಾಮವು ಕೇವಲ ಇರಾನ್‌ಗೆ ಮಾತ್ರ ಸೀಮಿತವಾಗಿದ್ದು, ಲೆಬನಾನ್‌ಗೆ ಅನ್ವಯಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಇರಾನ್ ತಕ್ಷಣವೇ ಹಾರ್ಮುಝ್...

ಹಾರ್ಮುಝ್ ಜಲಸಂಧಿಯ ಮೂಲಕ ಎರಡು ವಾರಗಳ ಸುರಕ್ಷಿತ ಸಂಚಾರಕ್ಕೆ ಅವಕಾಶ : ಇರಾನ್ ಭರವಸೆ

ಅಮೆರಿಕ ಮತ್ತು ಇರಾನ್ ನಡುವೆ ಏರ್ಪಟ್ಟಿರುವ ಎರಡು ವಾರಗಳ ತಾತ್ಕಾಲಿಕ ಕದನ ವಿರಾಮದ ಹಿನ್ನೆಲೆ, ಹಾರ್ಮುಝ್ ಜಲಸಂಧಿ  ಮೂಲಕ ಹಡಗುಗಳ ಸುರಕ್ಷಿತ ಸಂಚಾರಕ್ಕೆ ಅವಕಾಶ ನೀಡುವುದಾಗಿ ಇರಾನ್ ಭರವಸೆ ನೀಡಿದೆ. ವಿಶ್ವದ ಒಟ್ಟು ಪೆಟ್ರೋಲಿಯಂ ರಫ್ತಿನ...

ಇರಾನ್ ಮೇಲಿನ ದಾಳಿ ಸ್ಥಗಿತ : ಎರಡು ವಾರಗಳ ಕದನ ವಿರಾಮ ಘೋಷಿಸಿದ ಟ್ರಂಪ್

ಇರಾನ್ ಮೇಲೆ ನಡೆಸುತ್ತಿರುವ ಬಾಂಬ್ ದಾಳಿ ಹಾಗೂ ಮಿಲಿಟರಿ ಕಾರ್ಯಾಚರಣೆಯನ್ನು ಎರಡು ವಾರಗಳ ಕಾಲ ಸ್ಥಗಿತಗೊಳಿಸುವ ಕದನ ವಿರಾಮಕ್ಕೆ ಒಪ್ಪಿಕೊಂಡಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ (ಭಾರತೀಯ ಕಾಲಮಾನ ಏ.8) ಹೇಳಿದ್ದಾರೆ. ಪಾಕಿಸ್ತಾನ...

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...