Homeಅಂತರಾಷ್ಟ್ರೀಯಶ್ರೀಲಂಕಾ ನೂತನ ಅಧ್ಯಕ್ಷ, ಪ್ರಧಾನಿ ಮತ್ತು ಸಚಿವರನ್ನು ಭೇಟಿಯಾದ ಕೇಂದ್ರ ವಿದೇಶಾಂಗ ಸಚಿವ ಜೈಶಂಕರ್!

ಶ್ರೀಲಂಕಾ ನೂತನ ಅಧ್ಯಕ್ಷ, ಪ್ರಧಾನಿ ಮತ್ತು ಸಚಿವರನ್ನು ಭೇಟಿಯಾದ ಕೇಂದ್ರ ವಿದೇಶಾಂಗ ಸಚಿವ ಜೈಶಂಕರ್!

- Advertisement -
- Advertisement -

ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರು ಶುಕ್ರವಾರ ಶ್ರೀಲಂಕಾ ಅಧ್ಯಕ್ಷ ಅನುರಾ ಕುಮಾರ ಡಿಸಾನಾಯಕೆ ಅವರನ್ನು ಭೇಟಿ ಮಾಡಿದ್ದು, ಉಭಯ ದೇಶಗಳ ನಡುವೆ ನಡೆಯುತ್ತಿರುವ ಸಹಕಾರವನ್ನು ಗಾಢಗೊಳಿಸುವ ಮತ್ತು ಸಂಬಂಧಗಳನ್ನು ಬಲಪಡಿಸುವ ಮಾರ್ಗಗಳ ಕುರಿತು ಚರ್ಚಿಸಿದ್ದಾರೆ. ಅಲ್ಲದೆ, ಶ್ರೀಲಂಕಾದ ಆರ್ಥಿಕ ಪುನರ್ನಿರ್ಮಾಣಕ್ಕೆ ಭಾರತ ನಿರಂತರ ಬೆಂಬಲ ನೀಡಲಿದೆ ಎಂದು ಭರವಸೆ ನೀಡಿದ್ದಾರೆ.ಶ್ರೀಲಂಕಾ ನೂತನ ಅಧ್ಯಕ್ಷರನ್ನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಅಧ್ಯಕ್ಷ ದಿಸ್ಸಾನಾಯಕ ಅವರು ಪ್ರಮಾಣ ವಚನ ಸ್ವೀಕರಿಸಿದ ಹದಿನೈದು ದಿನಗಳ ನಂತರ ಒಂದು ದಿನದ ಭೇಟಿಗಾಗಿ ಕೊಲಂಬೊ ತೆರಳಿದ್ದ ಜೈಶಂಕರ್ ಅವರು ಪ್ರಧಾನಿ ಹರಿಣಿ ಅಮರಸೂರ್ಯ ಮತ್ತು ಶ್ರೀಲಂಕಾದ ವಿದೇಶಾಂಗ ಮಂತ್ರಿ ವಿಜಿತಾ ಹೆರಾತ್ ಅವರನ್ನು ಭೇಟಿ ಮಾಡಿದರು.

ದಿಸಾನಾಯಕೆ ನೇತೃತ್ವದ ನ್ಯಾಷನಲ್ ಪೀಪಲ್ಸ್ ಪವರ್ (ಎನ್‌ಪಿಪಿ) ಸರ್ಕಾರ ಸೆಪ್ಟೆಂಬರ್ 23 ರಂದು ಅಧಿಕಾರಕ್ಕೆ ಬಂದ ನಂತರ ಜೈಶಂಕರ್ ಶ್ರೀಲಂಕಾಕ್ಕೆ ಭೇಟಿ ನೀಡಿದ ಮೊದಲ ವಿದೇಶಿ ಗಣ್ಯರಾಗಿದ್ದಾರೆ.

ಇದನ್ನೂಓದಿ: ಓಲಾ ಕ್ಯಾಬ್‌ನಲ್ಲಿ ಲೈಂಗಿಕ ಕಿರುಕುಳ ಪ್ರಕರಣ : ಸಂತ್ರಸ್ತೆಗೆ ಪರಿಹಾರ ಪಾವತಿಸುವ ಆದೇಶಕ್ಕೆ ಹೈಕೋರ್ಟ್ ತಡೆ

“ಅಧ್ಯಕ್ಷ ಅನುರಾ ಕುಮಾರ ಡಿಸಾನಾಯಕೆ ಅವರನ್ನು ಇಂದು ಕೊಲಂಬೊದಲ್ಲಿ ಭೇಟಿ ಮಾಡಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದೇನೆ” ಎಂದು ಜೈಶಂಕರ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ ಶ್ರೀಲಂಕಾ ನೂತನ ಅಧ್ಯಕ್ಷರನ್ನು 

“ಭಾರತ-ಶ್ರೀಲಂಕಾ ಸಂಬಂಧಗಳಿಗೆ ಅವರ ಆತ್ಮೀಯ ಭಾವನೆಗಳು ಮತ್ತು ಮಾರ್ಗದರ್ಶನವನ್ನು ಶ್ಲಾಘಿಸಿದ್ದು, ಎರಡು ದೇಶಗಳು ಮತ್ತು ಪ್ರದೇಶದ ಜನರ ಅನುಕೂಲಕ್ಕಾಗಿ ನಡೆಯುತ್ತಿರುವ ಸಹಕಾರವನ್ನು ಗಾಢಗೊಳಿಸುವ ಮತ್ತು ಸಂಬಂಧಗಳನ್ನು ಬಲಪಡಿಸುವ ಮಾರ್ಗಗಳನ್ನು ಚರ್ಚಿಸಲಾಗಿದೆ” ಎಂದು ಅವರು ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಶ್ರೀಲಂಕಾ ಅಧ್ಯಕ್ಷ ಡಿಸಾನಾಯಕೆ ಅವರು ಕೂಡಾ ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, ಉಭಯ ದೇಶಗಳ ನಡುವಿನ ಚರ್ಚೆಗಳು ಪ್ರವಾಸೋದ್ಯಮ, ಇಂಧನ ಮತ್ತು ಹೂಡಿಕೆಯಲ್ಲಿ ಸಹಕಾರವನ್ನು ಹೆಚ್ಚಿಸುವುದರ ಮೇಲೆ ಮತ್ತು ಮೀನುಗಾರಿಕೆ, ಭದ್ರತೆ ಮತ್ತು ರಾಷ್ಟ್ರೀಯ ಏಕತೆಯ ನಿರಂತರ ಸಹಯೋಗದ ಮೇಲೆ ಕೇಂದ್ರೀಕೃತವಾಗಿವೆ ಎಂದು ಹೇಳಿದ್ದಾರೆ.

ವಿಡಿಯೊ ನೋಡಿ: ‘ಅಂಬೇಡ್ಕರ್ ರಚಿಸಲಿದ್ದ ಸಂವಿಧಾನವನ್ನು ಗುರಿಯಾಗಿಸಿಕೊಂಡಿದ್ದವರ ಮೊದಲ ಗುಂಡು ಬಿದ್ದಿದ್ದು ಗಾಂಧಿ ಎದೆಗೆ’: ಎ ನಾರಾಯಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...