Homeಕರ್ನಾಟಕ'ಬ್ರಾಹ್ಮಣರಾಗಿದ್ದರೂ ಸಾವರ್ಕರ್ ಮಾಂಸ ಸೇವಿಸಿದ್ದರು..' ಹೇಳಿಕೆ; ದಿನೇಶ್ ಗುಂಡೂರಾವ್ ವಿರುದ್ಧ ದೂರು ಕೊಟ್ಟ ಬಜರಂಗದಳ ಕಾರ್ಯಕರ್ತ

‘ಬ್ರಾಹ್ಮಣರಾಗಿದ್ದರೂ ಸಾವರ್ಕರ್ ಮಾಂಸ ಸೇವಿಸಿದ್ದರು..’ ಹೇಳಿಕೆ; ದಿನೇಶ್ ಗುಂಡೂರಾವ್ ವಿರುದ್ಧ ದೂರು ಕೊಟ್ಟ ಬಜರಂಗದಳ ಕಾರ್ಯಕರ್ತ

- Advertisement -
- Advertisement -

ವಿಡಿ ಸಾವರ್ಕರ್ ಮಾಂಸಹಾರ ಸೇವಿಸುತ್ತಿದ್ದ ಎಂದು ನೀಡಿದ ಹೇಳಿಕೆಗಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಿರುದ್ಧ ಬಜರಂಗದಳದ ಕಾರ್ಯಕರ್ತರೊಬ್ಬರು ಶಂಕರಪುರ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ದೂರು ದಾಖಲಿಸಿದ್ದಾರೆ. “ಆರೋಗ್ಯ ಸಚಿವರು ಸಾರ್ವಜನಿಕವಾಗಿ ತಮ್ಮ ಭಾಷೆಯ ಬಗ್ಗೆ ಹೆಚ್ಚು ಜಾಗರೂಕರಾಗಿರಬೇಕು” ಎಂದು ದೂರುದಾರ ತೇಜಸ್ ಗೌಡ ಹೇಳಿದ್ದಾರೆ.

“ಅವರು ಆರೋಗ್ಯ ಸಚಿವರಾಗಿ ಜವಾಬ್ದಾರಿಯುತ ಸ್ಥಾನವನ್ನು ಹೊಂದಿದ್ದಾರೆ. ಮಾಧ್ಯಮವನ್ನು ಉದ್ದೇಶಿಸಿ ಮಾತನಾಡುವಾಗ ಅಥವಾ ಸಾರ್ವಜನಿಕವಾಗಿ ಮಾತನಾಡುವಾಗ ಎಚ್ಚರಿಕೆ ವಹಿಸಬೇಕು. ಸಾವರ್ಕರ್ ಕುರಿತ ಅವರ ಇತ್ತೀಚಿನ ಹೇಳಿಕೆ ಅನುಚಿತವಾಗಿದೆ. ಸಾವರ್ಕರ್ ಅವರು ಬ್ರಾಹ್ಮಣರಾಗಿದ್ದರೂ ಮಾಂಸ ಸೇವಿಸಿದ್ದಾರೆ ಎಂದು ಅವರು ಹೇಳಿದ್ದಾರೆ. ದಿನೇಶ್ ಗುಂಡೂರಾವ್ ಅವರನ್ನು ಕೇಳಲು ಬಯಸುತ್ತೇನೆ: ಸಾವರ್ಕರ್ ಅವರು ಗೋಮಾಂಸ ಸೇವಿಸಿದ್ದಾರೆ ಎಂಬುದಕ್ಕೆ ನಿಮ್ಮ ಬಳಿ ಏನಾದರೂ ಪುರಾವೆ ಇದೆಯೇ ಅಥವಾ ನಾನು ನೇರವಾಗಿ ಕೇಳುತ್ತೇನೆ, ನಿಮ್ಮ ಕನಸಿನಲ್ಲಿ ಸಾವರ್ಕರ್ ಕಾಣಿಸಿಕೊಂಡಿದ್ದಾರೆಯೇ” ಎಂದು ಪ್ರಶ್ನಿಸಿದ್ದಾರೆ.

ಸಾವರ್ಕರ್ ಬಗ್ಗೆ ಬಹಿರಂಗ ಚರ್ಚೆಗೆ ಸವಾಲು ಹಾಕಿದ ದೂರುದಾರ, “ಈ ವಿಷಯದ ಬಗ್ಗೆ ಸಾರ್ವಜನಿಕ ಚರ್ಚೆಗೆ ದಿನಾಂಕ, ಸ್ಥಳ ಮತ್ತು ಸಮಯವನ್ನು ನಿಗದಿಪಡಿಸುವಂತೆ ನಾನು ಗುಂಡೂರಾವ್ ಅವರಿಗೆ ಸವಾಲು ಹಾಕುತ್ತೇನೆ, ಸಾವರ್ಕರ್ ಅವರ ಬಗ್ಗೆ ಸುಳ್ಳು ಆರೋಪಗಳು ಮತ್ತು ವದಂತಿಗಳನ್ನು ಹರಡಲು ಅವಕಾಶ ನೀಡುವ ಬದಲು ನಾವು ಈ ಬಗ್ಗೆ ಬಹಿರಂಗವಾಗಿ ಚರ್ಚಿಸಲು ಸಿದ್ಧರಿದ್ದೇವೆ. ನಿಮ್ಮ ಖಾತೆ ಮತ್ತು ಜನರ ಆರೋಗ್ಯದತ್ತ ಗಮನ ಹರಿಸುವಂತೆ ನಾನು ನಿಮ್ಮನ್ನು ಒತ್ತಾಯಿಸುತ್ತೇನೆ” ಎಂದು ಹೇಳಿದ್ದಾರೆ.

ಅಕ್ಟೋಬರ್ 2 ರಂದು, ಗಾಂಧಿ ಹಂತಕ: ದಿ ಮೇಕಿಂಗ್ ಆಫ್ ನಾಥುರಾಮ್ ಗೋಡ್ಸೆ ಮತ್ತು ಅವರ ಐಡಿಯಾ ಆಫ್ ಇಂಡಿಯಾದ ಕನ್ನಡ ಆವೃತ್ತಿಯ ಬಿಡುಗಡೆಯ ಸಂದರ್ಭದಲ್ಲಿ ಮಾತನಾಡಿದ ದಿನೇಶ್ ಗುಂಡೂ ರಾವ್, “ಸಾವರ್ಕರ್ ಗೋಹತ್ಯೆಯನ್ನು ವಿರೋಧಿಸಲಿಲ್ಲ. ಅವರು ಚಿತ್ಪಾವನ ಬ್ರಾಹ್ಮಣರಾಗಿದ್ದರು. ಆದರೆ ಮಾಂಸಾಹಾರಿಯಾಗಿದ್ದರು. ಆ ಅರ್ಥದಲ್ಲಿ, ಅವರು ಆಧುನಿಕತಾವಾದಿಯಾಗಿದ್ದರು. ಅವರು ದನದ ಮಾಂಸವನ್ನೂ ತಿನ್ನುತ್ತಿದ್ದರು ಎಂದು ಕೆಲವರು ಹೇಳುತ್ತಾರೆ” ಎಂದು ಹೇಳಿದ್ದ ಸಚಿವ ದಿನೇಶ್‌ ಗುಂಡೂರಾವ್, ಸಾವರ್ಕರ್ ದನದ ಮಾಂಸ ಸೇವಿಸುತ್ತಿದ್ದರು ಎಂದು ನೇರವಾಗಿ ಹೇಳಿಲ್ಲ.

“ಗಾಂಧಿ ಅವರು ಸಸ್ಯಾಹಾರಿ ಮತ್ತು ಹಿಂದೂ ಧರ್ಮದಲ್ಲಿ ಆಳವಾಗಿ ನಂಬಿದ್ದರು. ಆದರೆ, ಅವರ ಕಾರ್ಯಗಳು ವಿಭಿನ್ನವಾಗಿವೆ. ಅವರು ಪ್ರಜಾಪ್ರಭುತ್ವ ವ್ಯಕ್ತಿಯಾಗಿದ್ದರು.. ಜಿನ್ನಾ ಒಬ್ಬ ಧರ್ಮನಿಷ್ಠ ಇಸ್ಲಾಮಿಸ್ಟ್, ವೈನ್ ಕುಡಿಯುತ್ತಿದ್ದರು ಮತ್ತು ಕೆಲವರ ಪ್ರಕಾರ, ಹಂದಿಮಾಂಸವನ್ನು ತಿನ್ನುತ್ತಿದ್ದರು. ಆದರೂ, ಅವರು ಅವರು ಮೂಲಭೂತವಾದಿಯಾಗಿರಲಿಲ್ಲ. ಆದರೆ, ಸಾವರ್ಕರ್ ಅವರು ರಾಜಕೀಯ ಅಧಿಕಾರಕ್ಕಾಗಿ ತಮ್ಮ ತತ್ವಶಾಸ್ತ್ರವನ್ನು ರಾಜಿ ಮಾಡಿಕೊಂಡರು” ಎಂದು ಹೇಳಿದ್ದರು.

ಇದನ್ನೂ ಓದಿ; ವಿಡಿ ಸಾವರ್ಕರ್ ಕುರಿತ ಹೇಳಿಕೆಗೆ ವಿರೋಧ; ಬಿಜೆಪಿ ಟೀಕೆಗೆ ಸೊಪ್ಪುಹಾಕದ ದಿನೇಶ್ ಗುಂಡೂರಾವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...