Homeಅಂಕಣಗಳುಮನ್ ಕಿ ಬಾತ್ ಬಿಟ್ಟು, ದಯವಿಟ್ಟು ಆಲಿಸಿ - ದೇವನೂರ ಮಹಾದೇವ

ಮನ್ ಕಿ ಬಾತ್ ಬಿಟ್ಟು, ದಯವಿಟ್ಟು ಆಲಿಸಿ – ದೇವನೂರ ಮಹಾದೇವ

ರಾಷ್ಟ್ರ ಎಂದರೆ- ಅಹಂ, ಪ್ರತಿಷ್ಠೆ. ದೇಶವೆಂದರೆ- ಜನರು. ಇನ್ನೂ ಸ್ಪಷ್ಟಪಡಿಸಬೇಕು ಎಂದರೆ, ರಾಷ್ಟ್ರವು ಪ್ರತಿಷ್ಠೆಯನ್ನು ಹಿಂಬಾಲಿಸುತ್ತದೆ. ಆದರೆ ದೇಶವು ಜನರ ಹಿತ, ಕಲ್ಯಾಣವನ್ನು ಹಿಂಬಾಲಿಸುತ್ತದೆ.

- Advertisement -
- Advertisement -

‘ವ್ಯಾಪಾರಂ ದ್ರೋಹ ಚಿಂತನಂ’ ಎಂಬ ಮಾತಿದೆ. ಇದು ಒಂದು ಸೂಕ್ತಿಯೊ ಅಥವಾ ಜನ ಸಾಮಾನ್ಯರು ವ್ಯಾಪಾರದ ಚಹರೆ ನೋಡಿ ಈ ನುಡಿಗಟ್ಟನ್ನು ಚಾಲ್ತಿ ಮಾಡಿದರೋ ನನಗೆ ಗೊತ್ತಿಲ್ಲ. ಜಾಗತೀಕರಣದ ಅನಂತರ ವ್ಯಾಪಾರವು ದ್ರೋಹವೇ ಆಗಿ ಕುಪ್ಪಳಿಸುತ್ತಿದೆ. ವ್ಯಾಪಾರಕ್ಕೆ ಈಗ ಬುದ್ಧಿಯೂ ಕೂಡಿಕೊಂಡು ಇದೇ ಜ್ಞಾನ ಅನ್ನಿಸಿಕೊಂಡುಬಿಟ್ಟಿದೆ. ಈ ಎರಡೂ ಸೇರಿ ಭೂಮಿಗೇನೆ ಸುಲಿಗೆ ಬಲೆ ಹೆಣೆಯುತ್ತಿವೆ. ಕುತಂತ್ರವೇ ತಂತ್ರಗಾರಿಕೆಯಾಗಿದೆ. ಇದನ್ನು ನಿರ್ವಹಿಸುವವರು ಚಾಣಾಕ್ಷ ಅನ್ನಿಸಿಕೊಳ್ಳುತ್ತಿದ್ದಾರೆ. ಇದು ಘೋರ ದುರಂತ. ಹಾಗಾಗೇ ಇಂದು ಆಳ್ವಿಕೆಯೇ ವ್ಯಾಪಾರದ ಕೈಯಲ್ಲಿದೆ. ದ್ರೋಹ ಮತ್ತು ಕುತಂತ್ರಗಳು ಆಳ್ವಿಕೆ ನಡೆಸುತ್ತಿವೆ. ಜಾಗತೀಕರಣದ ಜಗತ್ತಿನಲ್ಲಿ ವ್ಯಾಪಾರವೇ ಯುದ್ಧವಾಗಿದೆ.

ಇಂಥ ವಿಷಮ ಪರಿಸ್ಥಿತಿಯಲ್ಲಿ- ಭಾರತವೂ 16 ದೇಶಗಳ ಮುಕ್ತ ವ್ಯಾಪಾರಕ್ಕೆ ಸಹಿ ಮಾಡಲು ಹೊರಟಿದೆ. ಇದು ವಿವೇಕ ವಿವೇಚನೆ ಇಲ್ಲದವರು ಮಾಡುವ ಕೆಲಸ. ಯಾಕೆಂದರೆ ಇದರಿಂದಾಗಿ ಈಗಾಗಲೇ ಕುಸಿಯುತ್ತಿರುವ ಉದ್ಯೋಗಗಳು ಮತ್ತೂ ಕುಸಿದು ಹೋಗುತ್ತವೆ. ದಯವಿಟ್ಟು ಪ್ರಧಾನಮಂತ್ರಿಗಳೇ, ದಡ್ಡನಿಗೆ ಧೈರ್ಯ ಜಾಸ್ತಿ ಎಂಬಂತೆ ದುಡುಕಿ ಸಹಿ ಮಾಡಬೇಡಿ. ನಮ್ಮ ಮಾತು ನೀವು ಕೇಳದಿದ್ದರೂ ಪರವಾಗಿಲ್ಲ. ಕನಿಷ್ಠ ಆರ್‌ಎಸ್‍ಎಸ್‍ನ ಸೋದರ ಸಂಘಟನೆಯಾದ ಸ್ವದೇಶಿ ಜಾಗರಣಾ ಮಂಚ್ ಸಂಘಟನೆಯು, ಹೈನುಗಾರಿಕೆ ಉಲ್ಲೇಖಿಸಿ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಭಾರತ ರುಜು ಮಾಡುವ ಬಗ್ಗೆ ಹೇಳುವ ಮಾತುಗಳನ್ನಾದರೂ, ನಿಮ್ಮ ಮನ್ ಕಿ ಬಾತ್ ಬಿಟ್ಟು, ಆಲಿಸಿ.

ಸ್ವದೇಶಿ ಜಾಗರಣಾ ಮಂಚ್ ಹೇಳುತ್ತದೆ- “ಇದು ಕೇಂದ್ರ ಸರ್ಕಾರದ ಅತ್ಯಂತ ಆತ್ಮಹತ್ಯಾತ್ಮಕ ನಡೆ, ಸ್ವಾತಂತ್ರ್ಯ ಬಂದಾಗಲಿಂದಲೂ ಇಂಥದೊಂದು ಆತ್ಮಹತ್ಯಾತ್ಮಕ ನಡೆ ಸಂಭವಿಸಿರಲಿಲ್ಲ” ಎಂದು. ಇದೇ ಮಾತುಗಳನ್ನು ಬೇರೆಯವರು ಹೇಳಿದ್ದರೆ ನೀವು ಮತ್ತು ನಿಮ್ಮ ಹಿಂಬಾಲಕರು ಹೇಳುವವರನ್ನು ದೇಶದ್ರೋಹಿಗಳೆಂದು ಹಣೆಪಟ್ಟಿ ಕಟ್ಟಿ ಥರಾವರಿ ಹಿಂಸೆ ಮಾಡುತ್ತಿದ್ದಿರಿ. ಈಗ? ಆರ್‌ಎಸ್‍ಎಸ್‍ನ ಸೋದರ ಸಂಘಟನೆ ಸ್ವದೇಶಿ ಜಾಗರಣಾ ಮಂಚ್ ಹೇಳುತ್ತಿದೆ. ಅವರನ್ನು ದೇಶದ್ರೋಹಿಗಳೆಂದು ಕರೆಯುವ ಧೈರ್ಯವನ್ನು ನೀವು ಮಾಡಲಾರಿರಿ ಎಂಬ ನಂಬಿಕೆ ನನಗಿದೆ. ನೆನಪಿಟ್ಟುಕೊಳ್ಳಿ, ಬಡತನ ನಿರ್ಮೂಲನೆ ಎಂದರೆ ಬಡವರನ್ನು ಸಾವಿನ ದವಡೆಗೆ ನೂಕುವುದಲ್ಲ. ಇಂದು ದುಡಿಯುವ ವರ್ಗ ಎಂದರೆ ಉಂಡು ಎಸೆಯುವ ಬಾಳೆ ಎಲೆ ಆಗಿಬಿಟ್ಟಿದ್ದಾರೆ.

ಕೊನೆಗೊಂದು ಮಾತು. ರಾಷ್ಟ್ರಕ್ಕೂ ದೇಶಕ್ಕೂ ಏನು ವ್ಯತ್ಯಾಸ ಎಂದು ಯಾರೋ ಕೇಳಿದರು. ಏನು ಹೇಳುವುದು? ಸರಳವಾಗಿ, ರಾಷ್ಟ್ರ ಎಂದರೆ- ಅಹಂ, ಪ್ರತಿಷ್ಠೆ. ದೇಶವೆಂದರೆ- ಜನರು. ಇನ್ನೂ ಸ್ಪಷ್ಟಪಡಿಸಬೇಕು ಎಂದರೆ, ರಾಷ್ಟ್ರವು ಪ್ರತಿಷ್ಠೆಯನ್ನು ಹಿಂಬಾಲಿಸುತ್ತದೆ. ಆದರೆ ದೇಶವು ಜನರ ಹಿತ, ಕಲ್ಯಾಣವನ್ನು ಹಿಂಬಾಲಿಸುತ್ತದೆ. ಅಥವಾ ಹೀಗೂ ಹೇಳಬಹುದು. ರಾಷ್ಟ್ರ ಎಂದರೆ- ಜುಟ್ಟಿಗೆ ಮಲ್ಲಿಗೆ ಹೂ. ದೇಶ ಎಂದರೆ ಹೊಟ್ಟೆಗೆ ಹಿಟ್ಟು. ಇದುವರೆಗೂ ಜುಟ್ಟಿಗೆ ಮಲ್ಲಿಗೆ ಹೂ ಸಿಕ್ಕಿಸಿಕೊಂಡು ಓಡಾಡಿದ್ದು ಸಾಕು ಎಂದು ತಮ್ಮಲ್ಲಿ ವಿನಂತಿಸುವೆ.

ಭಾರತದ ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ವಿದೇಶಿ ವಸ್ತ್ರ ಸುಡುವ ಆಂದೋಲನದಿಂದಾಗಿ ಇಂಗ್ಲೆಂಡಿನ ಲ್ಯಾಂಕಾಶೈರ್‍ನ ಗಿರಣಿ ಮುಚ್ಚುವಂತಾಗಿ ಅಲ್ಲಿನ ನಿರುದ್ಯೋಗಿ ಕಾರ್ಮಿಕರು ಗಾಂಧಿಯೊಡನೆ ಅವರ ಬವಣೆ ಹೇಳಿಕೊಂಡಾಗ ಗಾಂಧಿ ಹೇಳುತ್ತಾರೆ- “ಭಾರತದಲ್ಲಿ ಉದ್ಯೋಗವಿಲ್ಲದ ಲಕ್ಷಾಂತರ ಅರೆಹೊಟ್ಟೆಯ ಜನರ ಜೀವ (ಹಸಿವಿನಿಂದ) ಕೊನೆಗೊಂಡರೆ ಉಳಿದವರು ಬದುಕಬಹುದು ಅನ್ನುವ ಗುಂಪೂ ಇದೆ”. ಈ ಗುಂಪಿಗೆ ನೀವು, ನಿಮ್ಮ ಪಕ್ಷ, ನಿಮ್ಮ ಸಂಘ ಮತ್ತು ಅದರ ಪರಿವಾರ ಸೇರ್ಪಡೆಯಾಗದಿರಲಿ ಎಂದು ಆಶಿಸುತ್ತೇನೆ. ಈಗ ಭಾರತಕ್ಕೆ ಬೇಕಾಗಿರುವುದು- ಗೌರವಯುತ ಉದ್ಯೋಗ ಮತ್ತು ಸ್ವಾವಲಂಬನೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...