Homeಕರ್ನಾಟಕಬಿಜೆಪಿ ವಿರುದ್ದ ಮಹಿಳಾ ಆಯೋಗಕ್ಕೆ ದೂರು ಸಲ್ಲಿಸಿದ ದಿನೇಶ್ ಗುಂಡೂರಾವ್ ಪತ್ನಿ

ಬಿಜೆಪಿ ವಿರುದ್ದ ಮಹಿಳಾ ಆಯೋಗಕ್ಕೆ ದೂರು ಸಲ್ಲಿಸಿದ ದಿನೇಶ್ ಗುಂಡೂರಾವ್ ಪತ್ನಿ

- Advertisement -
- Advertisement -

ಸಚಿವ ದಿನೇಶ್ ಗುಂಡೂರಾವ್ ಹೇಳಿಕೆಯನ್ನು ಟೀಕಿಸುವಾಗ ಅವರ ಪತ್ನಿಯ ಹೆಸರನ್ನು ಎಳೆದು ತಂದ ಕರ್ನಾಟಕ ಬಿಜೆಪಿಯ ಎಕ್ಸ್‌ ಹ್ಯಾಂಡಲ್ ವಿರುದ್ದ ಮಹಿಳಾ ಆಯೋಗಕ್ಕೆ ದೂರು ಸಲ್ಲಿಕೆಯಾಗಿದೆ.

ಈ ಕುರಿತು ದಿನೇಶ್ ಗುಂಡೂರಾವ್ ಅವರ ಪತ್ನಿ ತಬು ರಾವ್ (ತಬಸ್ಸುಮ್ ರಾವ್) ಎಕ್ಸ್‌ನಲ್ಲಿ ಮಾಹಿತಿ ನೀಡಿದ್ದು, ” ಸಕ್ರಿಯ ರಾಜಕಾರಣದಲ್ಲಿ ಇಲ್ಲದಿದ್ದರೂ ನನ್ನ ವಿರುದ್ಧ ನಿರಂತರ ಅವಹೇಳನಕಾರಿ ಹಾಗೂ ಕೋಮುವಾದಿ ಹೇಳಿಕೆ ನೀಡುತ್ತಿರುವ ಬಿಜೆಪಿ ವಿರುದ್ಧ ಕರ್ನಾಟಕ ಮಹಿಳಾ ಆಯೋಗಕ್ಕೆ ದೂರು ಸಲ್ಲಿಸಿದ್ದೇನೆ. ಮಹಿಳೆಯ ಮೇಲೆ ದಾಳಿ ಮಾಡುವುದು ಸಣ್ಣತನ. ಮಹಿಳೆಯರು ಗೌರವಕ್ಕೆ ಅರ್ಹರೇ ಹೊರತು, ನಿಂದನೆಗಲ್ಲ” ಎಂದು ಬರೆದುಕೊಂಡಿದ್ದಾರೆ.

ಏನಿದು ಪ್ರಕರಣ ? ಸಾವರ್ಕರ್ ಗೋಮಾಂಸ ಸೇವಿಸುತ್ತಿದ್ದರು ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ ನೀಡಿರುವುದು ವಿವಾದಕ್ಕೆ ಕಾರಣವಾಗಿದೆ. ಸಚಿವರ ಹೇಳಿಕೆಯನ್ನು ಟೀಕಿಸಿ ಪೋಸ್ಟ್ ಹಾಕಿದ್ದ ಬಿಜೆಪಿ “ಬ್ರಾಹ್ಮಣ ಸಮಾಜದ ವೀರ ಸಾವರ್ಕರ್ ಅವರು ಗೋಮಾಂಸ ಸೇವಿಸುತ್ತಿದ್ದರು ಎಂದು ನಿಮಗೆ ನಿಮಗೆ ಬ್ರಾಹ್ಮಣ ಸಮಾಜದ ನಿಮ್ಮ ತಂದೆ ಗುಂಡೂರಾವ್ ಹೇಳಿದ್ದರೋ ಅಥವಾ ಮುಸ್ಲಿಂ ಸಮಾಜದ ನಿಮ್ಮ ಪತ್ನಿ ತಬಸ್ಸುಮ್ ಅವರು ಹೇಳಿದ್ದರೋ?” ಎಂದು ಬರೆದುಕೊಂಡಿತ್ತು.

ಬಿಜೆಪಿಯ ಈ ಪೋಸ್ಟ್ ವಿರುದ್ದ ಸಾಮಾಜಿಕ ಜಾಲತಾಣಗಳಲ್ಲಿ ಅನೇಕರು ಖಂಡನೆ ವ್ಯಕ್ತಪಡಿಸಿದ್ದಾರೆ. ತಬಸ್ಸುಮ್ ಅವರು ಮಹಿಳಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ.

ಯತ್ನಾಳ್‌ಗೆ ಕೋರ್ಟ್ ಛೀಮಾರಿ ಹಾಕಿತ್ತು

ಕೆಲ ತಿಂಗಳ ಹಿಂದೆ ಕೂಡ ದಿನೇಶ್ ಗುಂಡೂರಾವ್ ಅವರನ್ನು ಟೀಕಿಸುವಾಗ ಅವರ ಪತ್ನಿಯನ್ನು ಎಳೆದು ತಂದಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಕರ್ನಾಟಕ ಹೈಕೋರ್ಟ್ ಛೀಮಾರಿ ಹಾಕಿತ್ತು.

“ದಿನೇಶ್ ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನ” ಇದೆ ಎಂದು ಪರೋಕ್ಷವಾಗಿ ತಬಸ್ಸುಮ್ ಅವರನ್ನು ಉಲ್ಲೇಖಿಸಿ ಯತ್ನಾಳ್ ಕೋಮುವಾದಿ ಹೇಳಿಕೆ ಕೊಟ್ಟಿದ್ದರು. ಇದರ ವಿರುದ್ದ ತಬಸ್ಸುಮ್ ಪೊಲೀಸ್ ದೂರು ದಾಖಲಿಸಿದ್ದರು.

ಇದನ್ನೂ ಓದಿ : ‘ಬ್ರಾಹ್ಮಣರಾಗಿದ್ದರೂ ಸಾವರ್ಕರ್ ಮಾಂಸ ಸೇವಿಸಿದ್ದರು..’ ಹೇಳಿಕೆ; ದಿನೇಶ್ ಗುಂಡೂರಾವ್ ವಿರುದ್ಧ ದೂರು ಕೊಟ್ಟ ಬಜರಂಗದಳ ಕಾರ್ಯಕರ್ತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...